<p><strong>ಚಿಕ್ಕಬಳ್ಳಾಪುರ:</strong> ‘ಕೆಟ್ಟ ಮನಸ್ಥಿತಿಯ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಇನ್ನು ಮುಂದೆ ಅಧಿಕೃತವಾದ ಯಾವುದೇ ಕಾರ್ಯಕ್ರಮಗಳಲ್ಲಿಯೂ ವೇದಿಕೆ ಹಂಚಿಕೊಳ್ಳುವುದಿಲ್ಲ’ ಎಂದು ಸಂಸದ ಡಾ.ಕೆ.ಸುಧಾಕರ್ ಪ್ರಕಟಿಸಿದ್ದಾರೆ.</p><p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮಕ್ಕೆ ನನ್ನ ಹೆಸರು ಹಾಕಲಿ, ಹಾಕದೆಯೇ ಇರಲಿ, ಕರೆಯಲಿ, ಬಿಡಲಿ ನನಗೆ 8.50 ಲಕ್ಷ ಜನರು ಆಶೀರ್ವಾದ ಮಾಡಿದ್ದಾರೆ. ಜಿಲ್ಲೆಯ ಜನರಿಗೆ ಒಳ್ಳೆಯದಾಗಬೇಕು ಅಷ್ಟೇ ಎಂದರು.</p><p>ನಾನು ಸಚಿವನಾಗಿದ್ದ ವೇಳೆ ಜಿಲ್ಲೆಯ ಆರೋಗ್ಯ ಕೇಂದ್ರಗಳ ಅಭಿವೃದ್ಧಿಗೆ ಕ್ರಮವಹಿಸಿದ್ದೆ. ಆರೋಗ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಅವುಗಳನ್ನು ಉದ್ಘಾಟಿಸಿದ್ದಾರೆ. ನಾನು ಏನು ಅಭಿವೃದ್ಧಿ ಮಾಡಿದ್ದೆ ಎನ್ನುವುದನ್ನು ಕಣ್ಣು ಬಿಟ್ಟು ನೋಡಲಿ ಎಂದರು.</p><p>ಅಲ್ಪಸಂಖ್ಯಾತರು ಬಿಜೆಪಿಗೆ ವಿರುದ್ಧ ಎನ್ನುತ್ತಾರೆ. ಆದರೆ ಚಿಂತಾಮಣಿಯ ಮುರುಗಮಲ್ಲದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿಯೇ ಮಾನಸಿಕ ಆರೋಗ್ಯ ಕೇಂದ್ರ ಮಾಡಿಸಿದೆ ಎಂದು ಹೇಳಿದರು.</p>.ಸುಧಾಕರ್– ಪ್ರದೀಪ್ ನಡುವೆ ಜಿದ್ದು: ಶಿಷ್ಟಾಚಾರದ ಅಡಕತ್ತರಿಯಲ್ಲಿ ಅಧಿಕಾರಿಗಳು.ಚಿಕ್ಕಬಳ್ಳಾಪುರ: ಸಂಸದ ಸುಧಾಕರ್ಗಿಲ್ಲ ಆಹ್ವಾನ; ‘ನಂದಿ’ಯಲ್ಲಿ ಆಕ್ರೋಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ‘ಕೆಟ್ಟ ಮನಸ್ಥಿತಿಯ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಇನ್ನು ಮುಂದೆ ಅಧಿಕೃತವಾದ ಯಾವುದೇ ಕಾರ್ಯಕ್ರಮಗಳಲ್ಲಿಯೂ ವೇದಿಕೆ ಹಂಚಿಕೊಳ್ಳುವುದಿಲ್ಲ’ ಎಂದು ಸಂಸದ ಡಾ.ಕೆ.ಸುಧಾಕರ್ ಪ್ರಕಟಿಸಿದ್ದಾರೆ.</p><p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮಕ್ಕೆ ನನ್ನ ಹೆಸರು ಹಾಕಲಿ, ಹಾಕದೆಯೇ ಇರಲಿ, ಕರೆಯಲಿ, ಬಿಡಲಿ ನನಗೆ 8.50 ಲಕ್ಷ ಜನರು ಆಶೀರ್ವಾದ ಮಾಡಿದ್ದಾರೆ. ಜಿಲ್ಲೆಯ ಜನರಿಗೆ ಒಳ್ಳೆಯದಾಗಬೇಕು ಅಷ್ಟೇ ಎಂದರು.</p><p>ನಾನು ಸಚಿವನಾಗಿದ್ದ ವೇಳೆ ಜಿಲ್ಲೆಯ ಆರೋಗ್ಯ ಕೇಂದ್ರಗಳ ಅಭಿವೃದ್ಧಿಗೆ ಕ್ರಮವಹಿಸಿದ್ದೆ. ಆರೋಗ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಅವುಗಳನ್ನು ಉದ್ಘಾಟಿಸಿದ್ದಾರೆ. ನಾನು ಏನು ಅಭಿವೃದ್ಧಿ ಮಾಡಿದ್ದೆ ಎನ್ನುವುದನ್ನು ಕಣ್ಣು ಬಿಟ್ಟು ನೋಡಲಿ ಎಂದರು.</p><p>ಅಲ್ಪಸಂಖ್ಯಾತರು ಬಿಜೆಪಿಗೆ ವಿರುದ್ಧ ಎನ್ನುತ್ತಾರೆ. ಆದರೆ ಚಿಂತಾಮಣಿಯ ಮುರುಗಮಲ್ಲದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿಯೇ ಮಾನಸಿಕ ಆರೋಗ್ಯ ಕೇಂದ್ರ ಮಾಡಿಸಿದೆ ಎಂದು ಹೇಳಿದರು.</p>.ಸುಧಾಕರ್– ಪ್ರದೀಪ್ ನಡುವೆ ಜಿದ್ದು: ಶಿಷ್ಟಾಚಾರದ ಅಡಕತ್ತರಿಯಲ್ಲಿ ಅಧಿಕಾರಿಗಳು.ಚಿಕ್ಕಬಳ್ಳಾಪುರ: ಸಂಸದ ಸುಧಾಕರ್ಗಿಲ್ಲ ಆಹ್ವಾನ; ‘ನಂದಿ’ಯಲ್ಲಿ ಆಕ್ರೋಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>