<p><strong>ಚಿಕ್ಕಬಳ್ಳಾಪುರ</strong>: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆಯ <span class="css-901oao css-16my406 r-poiln3 r-bcqeeo r-qvutc0"> ಹಿರೇನಾಗವಲ್ಲಿ</span> ಕಲ್ಲು ಕ್ವಾರಿಯಲ್ಲಿ ಸಂಭವಿಸಿರುವ ಸ್ಪೋಟ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಿರುವುದಾಗಿ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಸ್ಫೋಟ ಸಂಭವಿಸಿದ ಕ್ವಾರಿಗೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಘಟನೆ ಸಂಭವಿಸುತ್ತಿದ್ದಂತೆಯೇ ಚಿಕ್ಕಬಳ್ಳಾಪುರದ ಹಿರೆನಾಗವೇಲಿ ಕ್ವಾರಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಸಚಿವರು ಪರಿಶೀಲಿಸಿದರು.</p>.<p>ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿಲು ತೀರ್ಮಾನಿಸಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.</p>.<p><a href="https://www.prajavani.net/karnataka-news/chikkaballapur-hirenagavalli-gelatin-explosion-driver-narrowly-escaped-807937.html" itemprop="url">ಚಿಕ್ಕಬಳ್ಳಾಪುರ ಸ್ಫೋಟದಲ್ಲಿ ಪವಾಡ ಸದೃಶವಾಗಿ ಬದುಕುಳಿದ ಚಾಲಕ ರಿಯಾಜ್ </a></p>.<p>ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸುತ್ತೇನೆ. ಈ ಪ್ರಕರಣದಲ್ಲಿ ನನ್ನ ಇಲಾಖೆಯಿಂದಲೇ ಕ್ರಮ ಆರಂಭಿಸುತ್ತೇನೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.</p>.<p><strong>ಮೃತರ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರ</strong></p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಲ್ಲು ಗಣಿಗಾರಿಕೆ ಬಗ್ಗೆ ಪ್ರತಿ ತಿಂಗಳು ಎಸ್ಪಿ ಅವರಿಗೆ ವರದಿ ನೀಡಲು ತಿಳಿಸಿದ್ದೇನೆ. ಸರ್ಕಾರದಿಂದ ಮೃತರ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಹೇಳಿದರು.</p>.<p>‘ಹುಣಸೋಡು ದುರಂತ ಬಳಿಕ ಸರ್ಕಾರ ಕಲ್ಲು ಗಣಿಗಾರಿಕೆ ಸಂಬಂಧ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಮೊದಲು ಮೂರು ತಿಂಗಳಿಗೊಮ್ಮೆ ಪರಿಶೀಲನೆ ನಡೆಸಲಾಗುತ್ತಿತ್ತು. ಈ ಘಟನೆ ಬಳಿಕ ಪ್ರತಿ ತಿಂಗಳು ಕ್ರಷರ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p><a href="https://www.prajavani.net/karnataka-news/quarry-blast-in-chikkaballapur-karnataka-cm-bs-yediyurappa-orders-probe-and-tells-strict-action-807947.html" itemprop="url">ಚಿಕ್ಕಬಳ್ಳಾಪುರ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ ಯಡಿಯೂರಪ್ಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆಯ <span class="css-901oao css-16my406 r-poiln3 r-bcqeeo r-qvutc0"> ಹಿರೇನಾಗವಲ್ಲಿ</span> ಕಲ್ಲು ಕ್ವಾರಿಯಲ್ಲಿ ಸಂಭವಿಸಿರುವ ಸ್ಪೋಟ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಿರುವುದಾಗಿ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಸ್ಫೋಟ ಸಂಭವಿಸಿದ ಕ್ವಾರಿಗೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಘಟನೆ ಸಂಭವಿಸುತ್ತಿದ್ದಂತೆಯೇ ಚಿಕ್ಕಬಳ್ಳಾಪುರದ ಹಿರೆನಾಗವೇಲಿ ಕ್ವಾರಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಸಚಿವರು ಪರಿಶೀಲಿಸಿದರು.</p>.<p>ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿಲು ತೀರ್ಮಾನಿಸಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.</p>.<p><a href="https://www.prajavani.net/karnataka-news/chikkaballapur-hirenagavalli-gelatin-explosion-driver-narrowly-escaped-807937.html" itemprop="url">ಚಿಕ್ಕಬಳ್ಳಾಪುರ ಸ್ಫೋಟದಲ್ಲಿ ಪವಾಡ ಸದೃಶವಾಗಿ ಬದುಕುಳಿದ ಚಾಲಕ ರಿಯಾಜ್ </a></p>.<p>ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸುತ್ತೇನೆ. ಈ ಪ್ರಕರಣದಲ್ಲಿ ನನ್ನ ಇಲಾಖೆಯಿಂದಲೇ ಕ್ರಮ ಆರಂಭಿಸುತ್ತೇನೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.</p>.<p><strong>ಮೃತರ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರ</strong></p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಲ್ಲು ಗಣಿಗಾರಿಕೆ ಬಗ್ಗೆ ಪ್ರತಿ ತಿಂಗಳು ಎಸ್ಪಿ ಅವರಿಗೆ ವರದಿ ನೀಡಲು ತಿಳಿಸಿದ್ದೇನೆ. ಸರ್ಕಾರದಿಂದ ಮೃತರ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಹೇಳಿದರು.</p>.<p>‘ಹುಣಸೋಡು ದುರಂತ ಬಳಿಕ ಸರ್ಕಾರ ಕಲ್ಲು ಗಣಿಗಾರಿಕೆ ಸಂಬಂಧ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಮೊದಲು ಮೂರು ತಿಂಗಳಿಗೊಮ್ಮೆ ಪರಿಶೀಲನೆ ನಡೆಸಲಾಗುತ್ತಿತ್ತು. ಈ ಘಟನೆ ಬಳಿಕ ಪ್ರತಿ ತಿಂಗಳು ಕ್ರಷರ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p><a href="https://www.prajavani.net/karnataka-news/quarry-blast-in-chikkaballapur-karnataka-cm-bs-yediyurappa-orders-probe-and-tells-strict-action-807947.html" itemprop="url">ಚಿಕ್ಕಬಳ್ಳಾಪುರ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ ಯಡಿಯೂರಪ್ಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>