<p><strong>ಚಿಕ್ಕಬಳ್ಳಾಪುರ:</strong> ವಾರ್ಷಿಕ ₹1.20 ಲಕ್ಷ ಆದಾಯ ಮೀರಿರುವ ಕುಟುಂಬಗಳ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆಹಾರ ಇಲಾಖೆ 13,215 ಕುಟುಂಬಗಳ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಲು ಮುಂದಾಗಿದೆ.</p>.<p>ಕೇಂದ್ರ ಸರ್ಕಾರದ ಆದೇಶದ ಅನ್ವಯ ಜಿಲ್ಲೆಯ ಆಹಾರ ಮತ್ತು ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ 6,523 ಅನರ್ಹ ಬಿಪಿಎಲ್ ಚೀಟಿಗಳನ್ನು ರದ್ದುಗೊಳಿಸಿದೆ.</p>.<p>ಜಿಲ್ಲೆಯಲ್ಲಿ ಕೇಂದ್ರ ಸರ್ಕಾರವು ಒಟ್ಟು 13,215 ಬಿಪಿಎಲ್ ಕಾರ್ಡ್ದಾರರ ಕುಟುಂಬಗಳನ್ನು ಗುರುತಿಸಿ ಆ ಪಡಿತರ ಚೀಟಿಗಳನ್ನು ರದ್ದುಗೊಳಿಸುವಂತೆ ಪಟ್ಟಿ ಸಮೇತ ಆಹಾರ ಇಲಾಖೆಗೆ ನಿರ್ದೇಶನ ನೀಡಿದೆ. ಅದರಂತೆ ಇಲ್ಲಿವರೆಗೂ ಜಿಲ್ಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಪಡಿತರ ಅಂಗಡಿಗಳ ಮೂಲಕ 6,523 ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದ್ದಾರೆ. ಇನ್ನೂ 6,692 ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲು ಬಾಕಿ ಇದೆ.</p>.<p><strong>ಜಿಲ್ಲೆಯಲ್ಲಿ 3,29 ಲಕ್ಷ ಪಡಿತರ ಚೀಟಿ:</strong> ಜಿಲ್ಲೆಯಲ್ಲಿ ಒಟ್ಟು 27,815 ಅಂತ್ಯೋದಯ, 2,74,709 ಬಿಪಿಎಲ್ ಹಾಗೂ 27,107 ಎಪಿಎಲ್ ಕಾರ್ಡ್ಗಳು ಸೇರಿ ಒಟ್ಟು 3,29,631 ಕಾರ್ಡ್ಗಳು ಇವೆ. 11,06,891 ಮಂದಿ ಫಲಾನುಭವಿಗಳು ಇದ್ದಾರೆ.</p>.<p><strong>2.74 ಲಕ್ಷ ಬಿಪಿಎಲ್ ಕಾರ್ಡ್ಗಳು:</strong> ಜಿಲ್ಲೆಯಲ್ಲಿ ಒಟ್ಟು 2,74,709 ಬಿಪಿಎಲ್ ಪಡಿತರ ಚೀಟಿಗಳು ಇವೆ. ಅದರ ಒಟ್ಟು ಫಲಾನುಭವಿಗಳು 9,11,487 ಮಂದಿ ಇದ್ದಾರೆ. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ ಇರುವ ಪ್ರತಿ ಕುಟುಂಬದ ಸದಸ್ಯನಿಗೆ ತಲಾ 5 ಕೆಜಿ ಅಕ್ಕಿ ವಿತರಿಸುತ್ತಿದೆ. ಇದೀಗ ಕೇಂದ್ರ ಸರ್ಕಾರವೇ ಜಿಲ್ಲೆಯಲ್ಲಿ ಒಟ್ಟು 13,215 ಅರ್ನಹ ಬಿಪಿಎಲ್ ಕಾರ್ಡ್ಗಳನ್ನು ಗುರುತಿಸಿ ಅವುಗಳ ರದ್ದಿತಿಗೆ ಮುಂದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ವಾರ್ಷಿಕ ₹1.20 ಲಕ್ಷ ಆದಾಯ ಮೀರಿರುವ ಕುಟುಂಬಗಳ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆಹಾರ ಇಲಾಖೆ 13,215 ಕುಟುಂಬಗಳ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಲು ಮುಂದಾಗಿದೆ.</p>.<p>ಕೇಂದ್ರ ಸರ್ಕಾರದ ಆದೇಶದ ಅನ್ವಯ ಜಿಲ್ಲೆಯ ಆಹಾರ ಮತ್ತು ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ 6,523 ಅನರ್ಹ ಬಿಪಿಎಲ್ ಚೀಟಿಗಳನ್ನು ರದ್ದುಗೊಳಿಸಿದೆ.</p>.<p>ಜಿಲ್ಲೆಯಲ್ಲಿ ಕೇಂದ್ರ ಸರ್ಕಾರವು ಒಟ್ಟು 13,215 ಬಿಪಿಎಲ್ ಕಾರ್ಡ್ದಾರರ ಕುಟುಂಬಗಳನ್ನು ಗುರುತಿಸಿ ಆ ಪಡಿತರ ಚೀಟಿಗಳನ್ನು ರದ್ದುಗೊಳಿಸುವಂತೆ ಪಟ್ಟಿ ಸಮೇತ ಆಹಾರ ಇಲಾಖೆಗೆ ನಿರ್ದೇಶನ ನೀಡಿದೆ. ಅದರಂತೆ ಇಲ್ಲಿವರೆಗೂ ಜಿಲ್ಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಪಡಿತರ ಅಂಗಡಿಗಳ ಮೂಲಕ 6,523 ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದ್ದಾರೆ. ಇನ್ನೂ 6,692 ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲು ಬಾಕಿ ಇದೆ.</p>.<p><strong>ಜಿಲ್ಲೆಯಲ್ಲಿ 3,29 ಲಕ್ಷ ಪಡಿತರ ಚೀಟಿ:</strong> ಜಿಲ್ಲೆಯಲ್ಲಿ ಒಟ್ಟು 27,815 ಅಂತ್ಯೋದಯ, 2,74,709 ಬಿಪಿಎಲ್ ಹಾಗೂ 27,107 ಎಪಿಎಲ್ ಕಾರ್ಡ್ಗಳು ಸೇರಿ ಒಟ್ಟು 3,29,631 ಕಾರ್ಡ್ಗಳು ಇವೆ. 11,06,891 ಮಂದಿ ಫಲಾನುಭವಿಗಳು ಇದ್ದಾರೆ.</p>.<p><strong>2.74 ಲಕ್ಷ ಬಿಪಿಎಲ್ ಕಾರ್ಡ್ಗಳು:</strong> ಜಿಲ್ಲೆಯಲ್ಲಿ ಒಟ್ಟು 2,74,709 ಬಿಪಿಎಲ್ ಪಡಿತರ ಚೀಟಿಗಳು ಇವೆ. ಅದರ ಒಟ್ಟು ಫಲಾನುಭವಿಗಳು 9,11,487 ಮಂದಿ ಇದ್ದಾರೆ. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ ಇರುವ ಪ್ರತಿ ಕುಟುಂಬದ ಸದಸ್ಯನಿಗೆ ತಲಾ 5 ಕೆಜಿ ಅಕ್ಕಿ ವಿತರಿಸುತ್ತಿದೆ. ಇದೀಗ ಕೇಂದ್ರ ಸರ್ಕಾರವೇ ಜಿಲ್ಲೆಯಲ್ಲಿ ಒಟ್ಟು 13,215 ಅರ್ನಹ ಬಿಪಿಎಲ್ ಕಾರ್ಡ್ಗಳನ್ನು ಗುರುತಿಸಿ ಅವುಗಳ ರದ್ದಿತಿಗೆ ಮುಂದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>