<p><strong>ಚಿಕ್ಕಬಳ್ಳಾಪುರ</strong>: ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರೇಸಂದ್ರ ಠಾಣೆ ಪೊಲೀಸರು ರಾಜಸ್ಥಾನದ 22 ವರ್ಷದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದವರನ್ನೂ ಸುಪರ್ದಿಗೆ ಪಡೆದಿದ್ದಾರೆ.</p>.<p>ತಾಲ್ಲೂಕಿನ ಕಮ್ಮಗುಟ್ಟಹಳ್ಳಿ ಕ್ರಾಸ್ ಬಳಿ ಏ.30ರಂದು ಮಮತಾ ಎಂಬುವವರ ಮಾಂಗಲ್ಯದ ಸರವನ್ನು ಇಬ್ಬರು ಕಿತ್ತುಕೊಂಡು ಹೋಗಿದ್ದರು. ಈ ಬಗ್ಗೆ ಮಮತಾ ಪೆರೇಸಂದ್ರ ಠಾಣೆಗೆ ದೂರು ನೀಡಿದ್ದರು.</p>.<p>ಖುದ್ದು ಎಸ್ಪಿ ಕುಶಾಲ್ ಚೌಕ್ಸೆ ಅವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಗುಡಿಬಂಡೆ ಸಿಪಿಐ ಮುನಿಕೃಷ್ಣ ಡಿ.ಎಚ್ ನೇತೃತ್ವದ ತಂಡವನ್ನು ತನಿಖೆಗೆ ರಚಿಸಿದ್ದರು. ತಂಡವು 300ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿತ್ತು.</p>.<p>ಕಳ್ಳರು ಈ ಹಿಂದೆ ಕೋಲಾರದಲ್ಲಿ ಬೈಕ್ ಕಳ್ಳತನ ಮಾಡಿದ್ದರು. ಆ ಬೈಕ್ ಬಳಸಿ ಸರಗಳ್ಳತನ ಮಾಡಿದ್ದರು. ತಮ್ಮ ಕಾರಿನಲ್ಲಿ ರಾಜಸ್ಥಾನಕ್ಕೆ ತೆರಳಿದ್ದರು. ಪೊಲೀಸರು ಜೈಪುರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಜೈಪುರ ಜಿಲ್ಲೆಯ ಅಕೀಪುರ ಅಂಚೆಯ ಹರ್ಮಾಡಾದ ಆಟಿಕೆಗಳ ವ್ಯಾಪಾರಿ ವಿಕ್ಕಿ ಬಗಾರಿಯಾ (22) ಬಂಧಿತ. ಕಾನೂನು ಸಂಘರ್ಷಕ್ಕೆ ಒಳಗಾದ ಒಬ್ಬ ಬಾಲಕಿ ಮತ್ತು ಬಾಲಕನನ್ನು ಪತ್ತೆ ಮಾಡಿದ ಪೊಲೀಸರು ಬಾಲ ನ್ಯಾಯ ಮಂಡಳಿ ಎದುರು ಹಾಜರುಪಡಿಸಿದ್ದಾರೆ.</p>.<p>ಆರೋಪಿಯಿಂದ ₹ 4.50 ಲಕ್ಷ ಮೌಲ್ಯದ 30 ಗ್ರಾಂ ತೂಕದ ಮಾಂಗಲ್ಯದ ಸರ, ಕೃತ್ಯಕ್ಕೆ ಬಳಸಿದ್ದ ಕಾರು, ಬೈಕ್ ವಶಕ್ಕೆ ಪಡೆಯಲಾಗಿದೆ.</p>.<p>ಪಿಎಸ್ಐ ಗುಣವತಿ, ರಮೇಶ್ ಕೆ., ಸಿಬ್ಬಂದಿ ಅರುಣ್, ಮಾರುತಿ, ಅನಸೂಯಮ್ಮ, ಮೋಹನ್ ಕುಮಾರ್, ಮಂಜುನಾಥ್, ಮಂಜುನಾಯ್ಡು, ಮುರುಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-16-1186764621</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರೇಸಂದ್ರ ಠಾಣೆ ಪೊಲೀಸರು ರಾಜಸ್ಥಾನದ 22 ವರ್ಷದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದವರನ್ನೂ ಸುಪರ್ದಿಗೆ ಪಡೆದಿದ್ದಾರೆ.</p>.<p>ತಾಲ್ಲೂಕಿನ ಕಮ್ಮಗುಟ್ಟಹಳ್ಳಿ ಕ್ರಾಸ್ ಬಳಿ ಏ.30ರಂದು ಮಮತಾ ಎಂಬುವವರ ಮಾಂಗಲ್ಯದ ಸರವನ್ನು ಇಬ್ಬರು ಕಿತ್ತುಕೊಂಡು ಹೋಗಿದ್ದರು. ಈ ಬಗ್ಗೆ ಮಮತಾ ಪೆರೇಸಂದ್ರ ಠಾಣೆಗೆ ದೂರು ನೀಡಿದ್ದರು.</p>.<p>ಖುದ್ದು ಎಸ್ಪಿ ಕುಶಾಲ್ ಚೌಕ್ಸೆ ಅವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಗುಡಿಬಂಡೆ ಸಿಪಿಐ ಮುನಿಕೃಷ್ಣ ಡಿ.ಎಚ್ ನೇತೃತ್ವದ ತಂಡವನ್ನು ತನಿಖೆಗೆ ರಚಿಸಿದ್ದರು. ತಂಡವು 300ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿತ್ತು.</p>.<p>ಕಳ್ಳರು ಈ ಹಿಂದೆ ಕೋಲಾರದಲ್ಲಿ ಬೈಕ್ ಕಳ್ಳತನ ಮಾಡಿದ್ದರು. ಆ ಬೈಕ್ ಬಳಸಿ ಸರಗಳ್ಳತನ ಮಾಡಿದ್ದರು. ತಮ್ಮ ಕಾರಿನಲ್ಲಿ ರಾಜಸ್ಥಾನಕ್ಕೆ ತೆರಳಿದ್ದರು. ಪೊಲೀಸರು ಜೈಪುರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಜೈಪುರ ಜಿಲ್ಲೆಯ ಅಕೀಪುರ ಅಂಚೆಯ ಹರ್ಮಾಡಾದ ಆಟಿಕೆಗಳ ವ್ಯಾಪಾರಿ ವಿಕ್ಕಿ ಬಗಾರಿಯಾ (22) ಬಂಧಿತ. ಕಾನೂನು ಸಂಘರ್ಷಕ್ಕೆ ಒಳಗಾದ ಒಬ್ಬ ಬಾಲಕಿ ಮತ್ತು ಬಾಲಕನನ್ನು ಪತ್ತೆ ಮಾಡಿದ ಪೊಲೀಸರು ಬಾಲ ನ್ಯಾಯ ಮಂಡಳಿ ಎದುರು ಹಾಜರುಪಡಿಸಿದ್ದಾರೆ.</p>.<p>ಆರೋಪಿಯಿಂದ ₹ 4.50 ಲಕ್ಷ ಮೌಲ್ಯದ 30 ಗ್ರಾಂ ತೂಕದ ಮಾಂಗಲ್ಯದ ಸರ, ಕೃತ್ಯಕ್ಕೆ ಬಳಸಿದ್ದ ಕಾರು, ಬೈಕ್ ವಶಕ್ಕೆ ಪಡೆಯಲಾಗಿದೆ.</p>.<p>ಪಿಎಸ್ಐ ಗುಣವತಿ, ರಮೇಶ್ ಕೆ., ಸಿಬ್ಬಂದಿ ಅರುಣ್, ಮಾರುತಿ, ಅನಸೂಯಮ್ಮ, ಮೋಹನ್ ಕುಮಾರ್, ಮಂಜುನಾಥ್, ಮಂಜುನಾಯ್ಡು, ಮುರುಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-16-1186764621</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>