<p><strong>ಚಿಕ್ಕಬಳ್ಳಾಪುರ</strong>: ವಿಶ್ವಹಾಲು ದಿನಾಚರಣೆ ಅಂಗವಾಗಿ ಸೋಮವಾರ ಇಲ್ಲಿನ ಜಿಲ್ಲಾ ಆಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಒಳರೋಗಿಗಳಿಗೆ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಚಿಮುಲ್)ದಿಂದ ಉಚಿತವಾಗಿ ಹಾಲು ವಿತರಿಸಲಾಯಿತು.</p>.<p>ಚಿಮುಲ್ ನಿರ್ದೇಶಕ ಎನ್.ಸಿ. ವೆಂಕಟೇಶ್ ಮಾತನಾಡಿ, ಚಿಮುಲ್ ರಚನೆಯಾದ ನಂತರ ಇದೇ ಮೊದಲ ಬಾರಿಗೆ ಒಳರೋಗಿಗಳಿಗೆ ವಿಶ್ವ ಹಾಲು ದಿನದ ಅಂಗವಾಗಿ ಹಾಲು ವಿತರಿಸಲಾಗಿದೆ. ಈ ಕೆಲಸ ಪ್ರತಿ ವರ್ಷವೂ ಮುಂದುವರಿಯಲಿದೆ ಎಂದು ಹೇಳಿದರು.</p>.<p>ಕೋಲಾರ–ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಪ್ರಥಮ ಅಧ್ಯಕ್ಷರಾಗಿದ್ದ ಪಿಳ್ಳಪ್ಪ ಅವರು ನಮ್ಮ ಎರಡೂ ಜಿಲ್ಲೆಗಳಲ್ಲಿ ಹೈನುಗಾರಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಸಿದರು. ಖಾಸಗಿ ಹಾಲಿನಲ್ಲಿ ರಾಸಾಯನಿಕರಗಳು ಮಿಶ್ರಣವಾಗುತ್ತಿವೆ. ನಂದಿನಿ ಹಾಲಿನಲ್ಲಿ ಗುಣಮಟ್ಟದ್ದಾಗಿದೆ. ಆದ್ದರಿಂದ ಹೊರ ರಾಜ್ಯಗಳಲ್ಲಿಯೂ ಬೇಡಿಕೆ ಇದೆ ಎಂದು ಹೇಳಿದರು.</p>.<p>ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಿರ್ದೇಶಕ ಕೆ.ವಿ.ನಾಗರಾಜ್ ನೇತೃತ್ವದಲ್ಲಿ ಹಾಲು ವಿತರಣೆ ನಡೆಯಿತು.</p>.<p>ಚಿಮುಲ್ ಉಪ ವ್ಯವಸ್ಥಾಪಕ ಮನೋರಂಜನ್ ರೆಡ್ಡಿ ಬಿ., ವಿಸ್ತರಣಾಧಿಕಾರಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-16-1207530511</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ವಿಶ್ವಹಾಲು ದಿನಾಚರಣೆ ಅಂಗವಾಗಿ ಸೋಮವಾರ ಇಲ್ಲಿನ ಜಿಲ್ಲಾ ಆಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಒಳರೋಗಿಗಳಿಗೆ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಚಿಮುಲ್)ದಿಂದ ಉಚಿತವಾಗಿ ಹಾಲು ವಿತರಿಸಲಾಯಿತು.</p>.<p>ಚಿಮುಲ್ ನಿರ್ದೇಶಕ ಎನ್.ಸಿ. ವೆಂಕಟೇಶ್ ಮಾತನಾಡಿ, ಚಿಮುಲ್ ರಚನೆಯಾದ ನಂತರ ಇದೇ ಮೊದಲ ಬಾರಿಗೆ ಒಳರೋಗಿಗಳಿಗೆ ವಿಶ್ವ ಹಾಲು ದಿನದ ಅಂಗವಾಗಿ ಹಾಲು ವಿತರಿಸಲಾಗಿದೆ. ಈ ಕೆಲಸ ಪ್ರತಿ ವರ್ಷವೂ ಮುಂದುವರಿಯಲಿದೆ ಎಂದು ಹೇಳಿದರು.</p>.<p>ಕೋಲಾರ–ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಪ್ರಥಮ ಅಧ್ಯಕ್ಷರಾಗಿದ್ದ ಪಿಳ್ಳಪ್ಪ ಅವರು ನಮ್ಮ ಎರಡೂ ಜಿಲ್ಲೆಗಳಲ್ಲಿ ಹೈನುಗಾರಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಸಿದರು. ಖಾಸಗಿ ಹಾಲಿನಲ್ಲಿ ರಾಸಾಯನಿಕರಗಳು ಮಿಶ್ರಣವಾಗುತ್ತಿವೆ. ನಂದಿನಿ ಹಾಲಿನಲ್ಲಿ ಗುಣಮಟ್ಟದ್ದಾಗಿದೆ. ಆದ್ದರಿಂದ ಹೊರ ರಾಜ್ಯಗಳಲ್ಲಿಯೂ ಬೇಡಿಕೆ ಇದೆ ಎಂದು ಹೇಳಿದರು.</p>.<p>ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಿರ್ದೇಶಕ ಕೆ.ವಿ.ನಾಗರಾಜ್ ನೇತೃತ್ವದಲ್ಲಿ ಹಾಲು ವಿತರಣೆ ನಡೆಯಿತು.</p>.<p>ಚಿಮುಲ್ ಉಪ ವ್ಯವಸ್ಥಾಪಕ ಮನೋರಂಜನ್ ರೆಡ್ಡಿ ಬಿ., ವಿಸ್ತರಣಾಧಿಕಾರಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-16-1207530511</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>