<p>ಚಿಕ್ಕಬಳ್ಳಾಪುರ: ಸಂವಿಧಾನದತ್ತ ಹಕ್ಕುಗಳನ್ನು ಎಲ್ಲರೂ ಚಲಾಯಿಸುತ್ತೇವೆ ಆದರೆ ಕರ್ತವ್ಯಗಳನ್ನು ಮರೆತಿದ್ದೇವೆ ಎಂದು ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಜಿ. ಶಿವಶಂಕರೇಗೌಡ ಅವರು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಐದು ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮದ ಭಾಗವಾಗಿ ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಅವರ ಸ್ಮಾರಕದ ಬಳಿ ಗಿಡ ನೆಡುವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.</p>.<p>ಇಂದಿನ ಮತ್ತು ಮುಂದಿನ ಪೀಳಿಗೆಯ ಉಳಿವಿಗಾಗಿ ಪರಿಸರ ರಕ್ಷಿಸಿಕೊಳ್ಳುವುದು ಆದ್ಯ ಕರ್ತವ್ಯ. ಆ ನಿಟ್ಟಿನಲ್ಲಿ ನಾವೆಲ್ಲರೂ ಗಿಡಗಳನ್ನು ನೆಟ್ಟು ಪೋಷಿಸುವ ಅಗತ್ಯವಿದೆ. ಈ ಭಾಗವಾಗಿ ಚಿಕ್ಕಬಳ್ಳಾಪುರ ನ್ಯಾಯಾಂಗ ಮತ್ತು ಜಿಲ್ಲಾಡಳಿತ 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ತಿಳಿಸಿದರು.</p>.<p>ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ಅವರು ಮಾತನಾಡಿ, ರಾಜ್ಯದಲ್ಲಿ 5 ಕೋಟಿ ಗಿಡಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಧರೆ ಫೌಂಡೇಶನ್ ಜೊತೆ ಒಪ್ಪಂದ ಮಾಡಿಕೊಂಡಿದೆ ಎಂದರು.</p>.<p>ಈ ಭಾಗವಾಗಿ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆಯ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಏಪ್ರಿಲ್ನಲ್ಲಿ ಚಾಲನೆ ದೊರಕಿದೆ. ಮುಂದುವರೆದ ಭಾಗವಾಗಿ ಸರ್.ಎಂ.ವಿಶ್ವೇಶ್ವರಯ್ಯ ಅವರ ಸ್ಮಾರಕದ ಬಳಿ 5 ಗುಂಟೆ ಜಮೀನಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧೆಡೆ ಅನುಷ್ಠಾನವಾಗಿ ಒಟ್ಟು 5 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸುವ ಯೋಜಿತ ಗುರಿ ಹೊಂದಲಾಗಿದೆ ಎಂದು ಹೇಳಿದರು.</p>.<p>ಕೇವಲ ಗಿಡಗಳನ್ನು ನೆಟ್ಟು ಹೋಗುವುದರಿಂದ ಗಿಡ ಬೆಳೆಯುವುದಿಲ್ಲ. ಅವು ಬೆಳೆಯುವವರೆಗೆ ಕನಿಷ್ಠ 3 ವರ್ಷ ರಕ್ಷಣೆ ಮಾಡುವ ಅಗತ್ಯವಿದೆ. ಜಿಲ್ಲಾಡಳಿತ, ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಸಹಕಾರದಲ್ಲಿ ಜಿಲ್ಲೆಯಲ್ಲಿ 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ಈ ವರ್ಷ 5 ಲಕ್ಷ ಗಿಡಗಳನ್ನು ಮುಂಗಾರು ಮಳೆಯ ಅವಧಿಯಲ್ಲಿ ನೆಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಆ ಕಾರ್ಯಕ್ರಮದ ಜೊತೆಗೆ ಕಾನೂನು ಸೇವಾ ಪ್ರಾಧಿಕಾರದ ಜೊತೆಗೂಡಿ ಹೆಚ್ಚುವರಿಯಾಗಿ 5 ಲಕ್ಷ ಸಸಿಗಳನ್ನು ಬೆಳೆಸುವ ಅರ್ಥಪೂರ್ಣ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುವುದು ಎಂದರು.</p>.<p>ನೆಟ್ಟ ಗಿಡಗಳ ಪೈಕಿ ಶೇ 80 ರಷ್ಟು ಗಿಡಗಳನ್ನು ಉಳಿಸಿ ಬೆಳೆಸಲು ಪ್ರತಿ ತಿಂಗಳಿಗೆ ಒಮ್ಮೆ ಎಲ್ಲಾ ನೆಟ್ಟ ಸಸಿಗಳ ಮೌಲ್ಯಮಾಪನ ಮಾಡುವ ಮೂಲಕ ಈ ಮೌಲ್ಯಯುತವಾದ ಕಾರ್ಯಕ್ರಮ ಯಶಸ್ವಿಗೊಳಿಸಲಾಗುವುದು ಎಂದರು.</p>.<p>ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಮಾತನಾಡಿ, ಗಿಡ ನೆಟ್ಟು ಮರ ಬೆಳೆಸುವುದರಿಂದ ಬರಗಾಲ ತಪ್ಪಿಸಬಹುದು. ಮಳೆಯ ಪ್ರಮಾಣದಲ್ಲಿ ಸಮತೋಲನದ ಹಂಚಿಕೆಯನ್ನು ಕಾಪಾಡಿಕೊಳ್ಳಬಹುದು ಎಂದರು.</p>.<p>ನ್ಯಾಯಾಧೀಶರಾದ ಕಾಂತರಾಜ್, ಉಮೇಶ್, ಭಾರತಿ ಎಂ, ಬಿ.ಶಿಲ್ಪಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಸರ್.ಎಂ.ವಿಶ್ವೇಶ್ವರಯ್ಯ ರಾಷ್ಟ್ರೀಯ ಮೆಮೊರಿಯಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಮೋಕ್ಷಗುಂಡಂ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-16-738982506</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಸಂವಿಧಾನದತ್ತ ಹಕ್ಕುಗಳನ್ನು ಎಲ್ಲರೂ ಚಲಾಯಿಸುತ್ತೇವೆ ಆದರೆ ಕರ್ತವ್ಯಗಳನ್ನು ಮರೆತಿದ್ದೇವೆ ಎಂದು ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಜಿ. ಶಿವಶಂಕರೇಗೌಡ ಅವರು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಐದು ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮದ ಭಾಗವಾಗಿ ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಅವರ ಸ್ಮಾರಕದ ಬಳಿ ಗಿಡ ನೆಡುವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.</p>.<p>ಇಂದಿನ ಮತ್ತು ಮುಂದಿನ ಪೀಳಿಗೆಯ ಉಳಿವಿಗಾಗಿ ಪರಿಸರ ರಕ್ಷಿಸಿಕೊಳ್ಳುವುದು ಆದ್ಯ ಕರ್ತವ್ಯ. ಆ ನಿಟ್ಟಿನಲ್ಲಿ ನಾವೆಲ್ಲರೂ ಗಿಡಗಳನ್ನು ನೆಟ್ಟು ಪೋಷಿಸುವ ಅಗತ್ಯವಿದೆ. ಈ ಭಾಗವಾಗಿ ಚಿಕ್ಕಬಳ್ಳಾಪುರ ನ್ಯಾಯಾಂಗ ಮತ್ತು ಜಿಲ್ಲಾಡಳಿತ 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ತಿಳಿಸಿದರು.</p>.<p>ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ಅವರು ಮಾತನಾಡಿ, ರಾಜ್ಯದಲ್ಲಿ 5 ಕೋಟಿ ಗಿಡಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಧರೆ ಫೌಂಡೇಶನ್ ಜೊತೆ ಒಪ್ಪಂದ ಮಾಡಿಕೊಂಡಿದೆ ಎಂದರು.</p>.<p>ಈ ಭಾಗವಾಗಿ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆಯ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಏಪ್ರಿಲ್ನಲ್ಲಿ ಚಾಲನೆ ದೊರಕಿದೆ. ಮುಂದುವರೆದ ಭಾಗವಾಗಿ ಸರ್.ಎಂ.ವಿಶ್ವೇಶ್ವರಯ್ಯ ಅವರ ಸ್ಮಾರಕದ ಬಳಿ 5 ಗುಂಟೆ ಜಮೀನಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧೆಡೆ ಅನುಷ್ಠಾನವಾಗಿ ಒಟ್ಟು 5 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸುವ ಯೋಜಿತ ಗುರಿ ಹೊಂದಲಾಗಿದೆ ಎಂದು ಹೇಳಿದರು.</p>.<p>ಕೇವಲ ಗಿಡಗಳನ್ನು ನೆಟ್ಟು ಹೋಗುವುದರಿಂದ ಗಿಡ ಬೆಳೆಯುವುದಿಲ್ಲ. ಅವು ಬೆಳೆಯುವವರೆಗೆ ಕನಿಷ್ಠ 3 ವರ್ಷ ರಕ್ಷಣೆ ಮಾಡುವ ಅಗತ್ಯವಿದೆ. ಜಿಲ್ಲಾಡಳಿತ, ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಸಹಕಾರದಲ್ಲಿ ಜಿಲ್ಲೆಯಲ್ಲಿ 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ಈ ವರ್ಷ 5 ಲಕ್ಷ ಗಿಡಗಳನ್ನು ಮುಂಗಾರು ಮಳೆಯ ಅವಧಿಯಲ್ಲಿ ನೆಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಆ ಕಾರ್ಯಕ್ರಮದ ಜೊತೆಗೆ ಕಾನೂನು ಸೇವಾ ಪ್ರಾಧಿಕಾರದ ಜೊತೆಗೂಡಿ ಹೆಚ್ಚುವರಿಯಾಗಿ 5 ಲಕ್ಷ ಸಸಿಗಳನ್ನು ಬೆಳೆಸುವ ಅರ್ಥಪೂರ್ಣ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುವುದು ಎಂದರು.</p>.<p>ನೆಟ್ಟ ಗಿಡಗಳ ಪೈಕಿ ಶೇ 80 ರಷ್ಟು ಗಿಡಗಳನ್ನು ಉಳಿಸಿ ಬೆಳೆಸಲು ಪ್ರತಿ ತಿಂಗಳಿಗೆ ಒಮ್ಮೆ ಎಲ್ಲಾ ನೆಟ್ಟ ಸಸಿಗಳ ಮೌಲ್ಯಮಾಪನ ಮಾಡುವ ಮೂಲಕ ಈ ಮೌಲ್ಯಯುತವಾದ ಕಾರ್ಯಕ್ರಮ ಯಶಸ್ವಿಗೊಳಿಸಲಾಗುವುದು ಎಂದರು.</p>.<p>ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಮಾತನಾಡಿ, ಗಿಡ ನೆಟ್ಟು ಮರ ಬೆಳೆಸುವುದರಿಂದ ಬರಗಾಲ ತಪ್ಪಿಸಬಹುದು. ಮಳೆಯ ಪ್ರಮಾಣದಲ್ಲಿ ಸಮತೋಲನದ ಹಂಚಿಕೆಯನ್ನು ಕಾಪಾಡಿಕೊಳ್ಳಬಹುದು ಎಂದರು.</p>.<p>ನ್ಯಾಯಾಧೀಶರಾದ ಕಾಂತರಾಜ್, ಉಮೇಶ್, ಭಾರತಿ ಎಂ, ಬಿ.ಶಿಲ್ಪಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಸರ್.ಎಂ.ವಿಶ್ವೇಶ್ವರಯ್ಯ ರಾಷ್ಟ್ರೀಯ ಮೆಮೊರಿಯಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಮೋಕ್ಷಗುಂಡಂ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-16-738982506</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>