<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.</p>.<p>ಪೆರೇಸಂದ್ರ ಕ್ಷೇತ್ರಕ್ಕೆ ಕೆ.ವಿ.ನಾಗರಾಜ್, ಮಂಚೇನಹಳ್ಳಿ ಕ್ಷೇತ್ರಕ್ಕೆ ಶ್ರೀನಾಥ್ ಬಾಬು<br>ಚಿಕ್ಕಬಳ್ಳಾಪುರ ಮಹಿಳಾ ಕ್ಷೇತ್ರಕ್ಕೆ ಸುನಂದಮ್ಮ ಮತ್ತು ಗುಡಿಬಂಡೆ ಕ್ಷೇತ್ರದಿಂದ ಭೈರರೆಡ್ಡಿ ಎನ್ಡಿಎ ಅಭ್ಯರ್ಥಿಗಳಾಗಿದ್ದಾರೆ.</p>.<p>ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಚಿಮುಲ್) ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪೆರೇಸಂದ್ರ ಕ್ಷೇತ್ರದಿಂದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಹಿರಿಯ ಸಹಕಾರ ಧುರೀಣ ಹಾಗೂ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ. ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಪೆರೇಸಂದ್ರ ಕ್ಷೇತ್ರದಲ್ಲಿ ಸಂಸದ ಡಾ. ಕೆ. ಸುಧಾಕರ್ ಅವರ ಸಂಬಂಧಿಕ ಗರಗಿರೆಡ್ಡಿ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಒಕ್ಕೂಟದ ಹಿತದೃಷ್ಟಿಯಿಂದ ಅನುಭವಿ ನಾಯಕ ಕೆ.ವಿ. ನಾಗರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ.</p>.<p>ಈ ಹಿನ್ನೆಲೆಯಲ್ಲಿ, ಅಸಮಾಧಾನಗೊಂಡಿರುವ ಗರಗಿರೆಡ್ಡಿ ಅವರಿಗೆ ಮುಂದಿನ ದಿನಗಳಲ್ಲಿ ನಾಮನಿರ್ದೇಶಿತ ನಿರ್ದೇಶಕ ಸ್ಥಾನ ನೀಡಿ, ಒಕ್ಕೂಟದ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ಸಂಸದರು ನೀಡಿದ್ದಾರೆ ಎನ್ನುವ ಮಾತುಗಳಿವೆ.</p>.<p>ಮತ್ತೊಬ್ಬ ಹಿರಿಯ ಮುಖಂಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮರಳಕುಂಟೆ ಕೃಷ್ಣಮೂರ್ತಿ ಅವರಿಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸೂಕ್ತ ಸ್ಥಾನಮಾನ ಕೊಡಿಸುವ ಭರವಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಆ ಮೂಲಕ ಕ್ಷೇತ್ರದಲ್ಲಿ ಉಂಟಾಗಬಹುದಾಗಿದ್ದ ಬಂಡಾಯದ ಶಮನಕ್ಕೆ ಸಂಸದರು ಮುಂದಾಗಿದ್ದಾರೆ.</p>.<p>ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆಯಲ್ಲಿ ನಂದಿ ಕ್ಷೇತ್ರದಲ್ಲಿ ಬಿಜೆಪಿಯ ಕೆಲವು ಸ್ಥಳೀಯ ಮುಖಂಡರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.</p>.<p>ಎನ್ಡಿಎ ವರಿಷ್ಠರ ನಿರ್ಧಾರಕ್ಕೆ ವ್ಯತಿರಿಕ್ತವಾಗಿ ನಡೆಯುವವರ ಬಗ್ಗೆ ಸಂಸದರು ತೀವ್ರ ಬೇಸರ ವ್ಯಕ್ತಪಡಿಸಿದ್ದು ಮೈತ್ರಿಕೂಟದ ಶಿಸ್ತನ್ನು ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದ್ದಾರೆ. </p>.<p><strong>ಪೆರೇಸಂದ್ರದಿಂದ ಕೆ.ವಿ.ನಾಗರಾಜ್ ಕಣಕ್ಕೆ ಅಸಮಾಧಾನ ತಣಿಸಲು ಮುಂದಾದ ಸುಧಾಕರ್ ಕಾವೇರುತ್ತಿದೆ ಚಿಮುಲ್ ಚುನಾವಣೆ</strong> </p>.<p><strong>ವಿಭಜನೆಯ ಕ್ರೆಡಿಟ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ‘ಚಿಮುಲ್’ ಒಕ್ಕೂಟವನ್ನು ತರುವಲ್ಲಿ ಸಂಸದ ಡಾ. ಕೆ. ಸುಧಾಕರ್ ಹೋರಾಟ ನಡೆಸಿದ್ದರು. ಈ ವಿಚಾರವನ್ನು ಮತದಾರರ ಮುಂದೆ ಕೊಂಡೊಯ್ಯಲು ಎನ್ಡಿಎ ಮೈತ್ರಿಕೂಟ ನಿರ್ಧರಿಸಿದೆ.</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.</p>.<p>ಪೆರೇಸಂದ್ರ ಕ್ಷೇತ್ರಕ್ಕೆ ಕೆ.ವಿ.ನಾಗರಾಜ್, ಮಂಚೇನಹಳ್ಳಿ ಕ್ಷೇತ್ರಕ್ಕೆ ಶ್ರೀನಾಥ್ ಬಾಬು<br>ಚಿಕ್ಕಬಳ್ಳಾಪುರ ಮಹಿಳಾ ಕ್ಷೇತ್ರಕ್ಕೆ ಸುನಂದಮ್ಮ ಮತ್ತು ಗುಡಿಬಂಡೆ ಕ್ಷೇತ್ರದಿಂದ ಭೈರರೆಡ್ಡಿ ಎನ್ಡಿಎ ಅಭ್ಯರ್ಥಿಗಳಾಗಿದ್ದಾರೆ.</p>.<p>ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಚಿಮುಲ್) ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪೆರೇಸಂದ್ರ ಕ್ಷೇತ್ರದಿಂದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಹಿರಿಯ ಸಹಕಾರ ಧುರೀಣ ಹಾಗೂ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ. ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಪೆರೇಸಂದ್ರ ಕ್ಷೇತ್ರದಲ್ಲಿ ಸಂಸದ ಡಾ. ಕೆ. ಸುಧಾಕರ್ ಅವರ ಸಂಬಂಧಿಕ ಗರಗಿರೆಡ್ಡಿ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಒಕ್ಕೂಟದ ಹಿತದೃಷ್ಟಿಯಿಂದ ಅನುಭವಿ ನಾಯಕ ಕೆ.ವಿ. ನಾಗರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ.</p>.<p>ಈ ಹಿನ್ನೆಲೆಯಲ್ಲಿ, ಅಸಮಾಧಾನಗೊಂಡಿರುವ ಗರಗಿರೆಡ್ಡಿ ಅವರಿಗೆ ಮುಂದಿನ ದಿನಗಳಲ್ಲಿ ನಾಮನಿರ್ದೇಶಿತ ನಿರ್ದೇಶಕ ಸ್ಥಾನ ನೀಡಿ, ಒಕ್ಕೂಟದ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ಸಂಸದರು ನೀಡಿದ್ದಾರೆ ಎನ್ನುವ ಮಾತುಗಳಿವೆ.</p>.<p>ಮತ್ತೊಬ್ಬ ಹಿರಿಯ ಮುಖಂಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮರಳಕುಂಟೆ ಕೃಷ್ಣಮೂರ್ತಿ ಅವರಿಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸೂಕ್ತ ಸ್ಥಾನಮಾನ ಕೊಡಿಸುವ ಭರವಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಆ ಮೂಲಕ ಕ್ಷೇತ್ರದಲ್ಲಿ ಉಂಟಾಗಬಹುದಾಗಿದ್ದ ಬಂಡಾಯದ ಶಮನಕ್ಕೆ ಸಂಸದರು ಮುಂದಾಗಿದ್ದಾರೆ.</p>.<p>ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆಯಲ್ಲಿ ನಂದಿ ಕ್ಷೇತ್ರದಲ್ಲಿ ಬಿಜೆಪಿಯ ಕೆಲವು ಸ್ಥಳೀಯ ಮುಖಂಡರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.</p>.<p>ಎನ್ಡಿಎ ವರಿಷ್ಠರ ನಿರ್ಧಾರಕ್ಕೆ ವ್ಯತಿರಿಕ್ತವಾಗಿ ನಡೆಯುವವರ ಬಗ್ಗೆ ಸಂಸದರು ತೀವ್ರ ಬೇಸರ ವ್ಯಕ್ತಪಡಿಸಿದ್ದು ಮೈತ್ರಿಕೂಟದ ಶಿಸ್ತನ್ನು ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದ್ದಾರೆ. </p>.<p><strong>ಪೆರೇಸಂದ್ರದಿಂದ ಕೆ.ವಿ.ನಾಗರಾಜ್ ಕಣಕ್ಕೆ ಅಸಮಾಧಾನ ತಣಿಸಲು ಮುಂದಾದ ಸುಧಾಕರ್ ಕಾವೇರುತ್ತಿದೆ ಚಿಮುಲ್ ಚುನಾವಣೆ</strong> </p>.<p><strong>ವಿಭಜನೆಯ ಕ್ರೆಡಿಟ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ‘ಚಿಮುಲ್’ ಒಕ್ಕೂಟವನ್ನು ತರುವಲ್ಲಿ ಸಂಸದ ಡಾ. ಕೆ. ಸುಧಾಕರ್ ಹೋರಾಟ ನಡೆಸಿದ್ದರು. ಈ ವಿಚಾರವನ್ನು ಮತದಾರರ ಮುಂದೆ ಕೊಂಡೊಯ್ಯಲು ಎನ್ಡಿಎ ಮೈತ್ರಿಕೂಟ ನಿರ್ಧರಿಸಿದೆ.</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>