<p>ಚಿಕ್ಕಬಳ್ಳಾಪುರ: 2026-27ನೇ ಸಾಲಿನ ಜಿಲ್ಲಾ ಕರಡು ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ. ಈ ಕರಡಿನಲ್ಲಿ ₹ 5 ಸಾವಿರ ಕೋಟಿ ಅನುದಾನಕ್ಕೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ.</p>.<p>ವಿಶೇಷವಾಗಿ ಶಿಕ್ಷಣ, ಸಮಾಜ ಕಲ್ಯಾಣ, ಉನ್ನತ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಲೋಕೋಪಯೋಗಿ, ಸಣ್ಣ ನೀರಾವರಿ, ಇಂಧನ ಇಲಾಖೆಗಳಿಗೆ ಸಂಬಂಧಿಸಿದಂತೆ ಹೆಚ್ಚು ಅನುದಾನದ ಬೇಡಿಕೆ ಇದೆ.</p>.<p>ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ನೇತೃತ್ವದಲ್ಲಿ ಪ್ರತಿ ವರ್ಷವೂ ಪ್ರತಿಯೊಂದು ಜಿಲ್ಲೆಯಲ್ಲಿಯೂ ‘ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ’ ತಯಾರಿಸಲಾಗುತ್ತದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ, ರಸ್ತೆ, ನೀರು, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಮೂಲಸೌಕರ್ಯಗಳು ಈ ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಡುತ್ತವೆ.</p>.<p>ಪ್ರತಿಯೊಂದು ಇಲಾಖೆಗಳಿಗೆ ಭೌತಿಕ ಗುರಿಗಳು ಮತ್ತು ಅನುದಾನದ ಬೇಡಿಕೆಯ ಅಂಕಿ ಅಂಶಗಳನ್ನು ಈ ವರದಿ ಹೊಂದಿರುತ್ತದೆ. ಆ ವರ್ಷ ಜಿಲ್ಲೆಯಲ್ಲಿ ಕೈಗೊಳ್ಳುವ ಪ್ರಮುಖ ಚಟುವಟಿಕೆಗಳು (ಕಾಮಗಾರಿ) ಈ ಕರಡು ಯೋಜನೆಯಲ್ಲಿ ಇರುತ್ತವೆ. ನಮ್ಮ ಇಲಾಖೆಗೆ ಇಂತಿಷ್ಟು ಹಣ ಅಗತ್ಯವಿದೆ, ಇಂತಹ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಈ ಕರಡು ಅಭಿವೃದ್ಧಿ ಯೋಜನೆಯನ್ನು ಸಲ್ಲಿಸಲಾಗುತ್ತದೆ.</p>.<p>ಒಟ್ಟು 37 ಇಲಾಖೆಗಳ ಭೌತಿಕ ಗುರಿ ಮತ್ತು ಅನುದಾನದ ಬೇಡಿಕೆ ಕರಡು ಪಟ್ಟಿಯಲ್ಲಿವೆ. ಹೀಗೆ ಸಲ್ಲಿಕೆಯಾಗಿರುವ ₹ 5,008 ಕೋಟಿ ಅನುದಾನ ಬೇಡಿಕೆಯ ಕರಡಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಪಿಎಸ್ ಅನುದಾನವೂ ಇದೆ.</p>.<p>ಅಲ್ಪಸಂಖ್ಯಾತರ ಕಲ್ಯಾಣಕ್ಕೆ 179 ಕೋಟಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ₹ 179 ಕೋಟಿ ಮೀಸಲಿಡಲಾಗಿದೆ. ₹ 10 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆ, ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳ ವೆಚ್ಚ ಮತ್ತು ದುರಸ್ತಿಗೆ ₹ 3.20 ಕೋಟಿಗೆ ಮೀಸಲಿಡಲಾಗಿದೆ. ಇವು ಅಲ್ಪಸಂಖ್ಯಾತ ಇಲಾಖೆಯ ಪ್ರಮುಖ ಕಾರ್ಯಕ್ರಮಗಳಾಗಿವೆ. ಅಲ್ಪಸಂಖ್ಯಾತರು ಹೆಚ್ಚಿರುವ ಚಿಂತಾಮಣಿ ವಿಧಾನಸಭಾ ಕ್ಷೇತ್ರಕ್ಕೆ ಈ ಇಲಾಖೆಯ ಹಣವನ್ನು ಹೆಚ್ಚು ವ್ಯಯಿಸಲು ಯೋಜಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-16-123827991</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: 2026-27ನೇ ಸಾಲಿನ ಜಿಲ್ಲಾ ಕರಡು ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ. ಈ ಕರಡಿನಲ್ಲಿ ₹ 5 ಸಾವಿರ ಕೋಟಿ ಅನುದಾನಕ್ಕೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ.</p>.<p>ವಿಶೇಷವಾಗಿ ಶಿಕ್ಷಣ, ಸಮಾಜ ಕಲ್ಯಾಣ, ಉನ್ನತ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಲೋಕೋಪಯೋಗಿ, ಸಣ್ಣ ನೀರಾವರಿ, ಇಂಧನ ಇಲಾಖೆಗಳಿಗೆ ಸಂಬಂಧಿಸಿದಂತೆ ಹೆಚ್ಚು ಅನುದಾನದ ಬೇಡಿಕೆ ಇದೆ.</p>.<p>ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ನೇತೃತ್ವದಲ್ಲಿ ಪ್ರತಿ ವರ್ಷವೂ ಪ್ರತಿಯೊಂದು ಜಿಲ್ಲೆಯಲ್ಲಿಯೂ ‘ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ’ ತಯಾರಿಸಲಾಗುತ್ತದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ, ರಸ್ತೆ, ನೀರು, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಮೂಲಸೌಕರ್ಯಗಳು ಈ ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಡುತ್ತವೆ.</p>.<p>ಪ್ರತಿಯೊಂದು ಇಲಾಖೆಗಳಿಗೆ ಭೌತಿಕ ಗುರಿಗಳು ಮತ್ತು ಅನುದಾನದ ಬೇಡಿಕೆಯ ಅಂಕಿ ಅಂಶಗಳನ್ನು ಈ ವರದಿ ಹೊಂದಿರುತ್ತದೆ. ಆ ವರ್ಷ ಜಿಲ್ಲೆಯಲ್ಲಿ ಕೈಗೊಳ್ಳುವ ಪ್ರಮುಖ ಚಟುವಟಿಕೆಗಳು (ಕಾಮಗಾರಿ) ಈ ಕರಡು ಯೋಜನೆಯಲ್ಲಿ ಇರುತ್ತವೆ. ನಮ್ಮ ಇಲಾಖೆಗೆ ಇಂತಿಷ್ಟು ಹಣ ಅಗತ್ಯವಿದೆ, ಇಂತಹ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಈ ಕರಡು ಅಭಿವೃದ್ಧಿ ಯೋಜನೆಯನ್ನು ಸಲ್ಲಿಸಲಾಗುತ್ತದೆ.</p>.<p>ಒಟ್ಟು 37 ಇಲಾಖೆಗಳ ಭೌತಿಕ ಗುರಿ ಮತ್ತು ಅನುದಾನದ ಬೇಡಿಕೆ ಕರಡು ಪಟ್ಟಿಯಲ್ಲಿವೆ. ಹೀಗೆ ಸಲ್ಲಿಕೆಯಾಗಿರುವ ₹ 5,008 ಕೋಟಿ ಅನುದಾನ ಬೇಡಿಕೆಯ ಕರಡಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಪಿಎಸ್ ಅನುದಾನವೂ ಇದೆ.</p>.<p>ಅಲ್ಪಸಂಖ್ಯಾತರ ಕಲ್ಯಾಣಕ್ಕೆ 179 ಕೋಟಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ₹ 179 ಕೋಟಿ ಮೀಸಲಿಡಲಾಗಿದೆ. ₹ 10 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆ, ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳ ವೆಚ್ಚ ಮತ್ತು ದುರಸ್ತಿಗೆ ₹ 3.20 ಕೋಟಿಗೆ ಮೀಸಲಿಡಲಾಗಿದೆ. ಇವು ಅಲ್ಪಸಂಖ್ಯಾತ ಇಲಾಖೆಯ ಪ್ರಮುಖ ಕಾರ್ಯಕ್ರಮಗಳಾಗಿವೆ. ಅಲ್ಪಸಂಖ್ಯಾತರು ಹೆಚ್ಚಿರುವ ಚಿಂತಾಮಣಿ ವಿಧಾನಸಭಾ ಕ್ಷೇತ್ರಕ್ಕೆ ಈ ಇಲಾಖೆಯ ಹಣವನ್ನು ಹೆಚ್ಚು ವ್ಯಯಿಸಲು ಯೋಜಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-16-123827991</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>