<p>ಚಿಕ್ಕಬಳ್ಳಾಪುರ: ದೇಶದ ಮೊಟ್ಟಮೊದಲ ಡಿಜಿಟಲ್ ಜನಗಣತಿಗೆ ಏ.1 ರಂದು ಜಿಲ್ಲೆಯಲ್ಲಿ ಚಾಲನೆಯಾಗಲಿದೆ. ಜೆಲ್ಲೆಯ ಸಾರ್ವಜನಿಕರು ಗಣತಿ ಕಾರ್ಯಕ್ಕೆ ಸಹಕರಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಮನವಿ ಮಾಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.</p>.<p>2026-27ನೇ ಸಾಲಿನ ಜನಗಣತಿ ಕಾರ್ಯವು ಜಿಲ್ಲೆಯಲ್ಲಿ ಏ.1 ರಿಂದ ಆರಂಭವಾಗಿ ಮೇ 15 ರವರೆಗೆ ನಡೆಯಲಿದೆ. ಈ ಕಾರ್ಯಕ್ಕೆ 2,533 ಜನಗಣತಿದಾರರನ್ನು 422 ಮೇಲ್ವಿಚಾರಕರನ್ನು ನೇಮಿಸಲಾಗಿದೆ. 150 ರಿಂದ 200 ಮನೆಗಳನ್ನು ಒಳಗೊಳ್ಳುವಂತೆ ಒಟ್ಟು ಜಿಲ್ಲೆಯಲ್ಲಿ 3,121 ಬ್ಲಾಕ್ಗಳನ್ನು ಮಾಡಲಾಗಿದೆ ಎಂದು ಹೇಳಿದರು.</p>.<p>ಒಂದು ಬ್ಲಾಕ್ನಲ್ಲಿ 700 ರಿಂದ 800 ಜನರು ಇರಲಿದ್ದಾರೆ. ಜನಗಣತಿಗಾಗಿ ಒಟ್ಟು ಜಿಲ್ಲೆಯಲ್ಲಿ 16 ಚಾರ್ಜ್ ಗಳನ್ನು ಮಾಡಿ 16 ಅಧಿಕಾರಿಗಳನ್ನು ನೇಮಿಸಲಾಗಿದೆ. ಜನಗಣತಿಗೆ ನಿಯೋಜಿಸಿರುವ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.</p>.<p>ಶಿಕ್ಷಕರು, ಉಪನ್ಯಾಸಕರನ್ನು ಜನಗಣತಿ ಕಾರ್ಯಕ್ಕೆ ಹಾಗೂ ಮೇಲ್ವಿಚಾರಣೆ ಕಾರ್ಯಕ್ಕೆ ನಿಯೋಜಿಸಲಾಗುವುದು. 2 ಮಾಸ್ಟರ್ ತರಬೇತುದಾರರನ್ನು ಜನಗಣತಿ ನಿರ್ದೇಶನಾಲಯದಿಂದ ನೇಮಿಸಲಾಗಿದೆ. ಜಿಲ್ಲೆಯಲ್ಲಿ 50 ಫೀಲ್ಡ್ ಟ್ರೈನರ್ಗಳನ್ನು ನೇಮಿಸಲಾಗಿದೆ. ಇವರಿಗೆ ಜನಗಣತಿ ನಿರ್ದೇಶನಾಲಯದ ಅಧಿಕಾರಿಗಳಿಂದ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಜನಗಣತಿಯ ಮೊದಲನೇ ಹಂತವು ಪ್ರತಿ ಕುಟುಂಬ ರಚನೆ ಮತ್ತು ನಕ್ಷೆ ಒಳಗೊಂಡಿರುತ್ತದೆ. ಸರ್ಕಾರ ಸೂಚಿಸಿರುವಂತೆ ವಸತಿ ಗುಣಮಟ್ಟ, ಸೌಕರ್ಯಗಳು, ನೀರು, ವಿದ್ಯುತ್ ಮತ್ತು ಶೌಚಾಲಯ ವ್ಯವಸ್ಥೆ ಸೇರಿದಂತೆ ಇನ್ನಿತರ 34 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದರು.</p>.<p>ಇದು 2027ರ ಫೆಬ್ರುವರಿಯಿಂದ ನಡೆಯುವ ಎರಡನೇ ಹಂತದ ಜನಗಣತಿಗೆ ಅಡಿಪಾಯವಾಗಿರುತ್ತದೆ.ಜನಸಂಖ್ಯೆಯ ಮಾಹಿತಿಯನ್ನು ನಿರ್ದಿಷ್ಟವಾಗಿ ಗಣತಿ ಮಾಡುವುದರಿಂದ ಮೂಲ ಸೌಕರ್ಯ ಕಲ್ಪಿಸಲು ಅನುಕೂಲವಾಗುವ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಸಹಕಾರಿ ಎಂದು ವಿವರಿಸಿದರು.</p>.<p>ನೈಜ ಹಾಗೂ ನಿಖರ ಮಾಹಿತಿಯನ್ನು ನಾಗರಿಕರು ನೀಡಿ ಜನಗಣತಿ ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೋರಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-16-1946818235</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ದೇಶದ ಮೊಟ್ಟಮೊದಲ ಡಿಜಿಟಲ್ ಜನಗಣತಿಗೆ ಏ.1 ರಂದು ಜಿಲ್ಲೆಯಲ್ಲಿ ಚಾಲನೆಯಾಗಲಿದೆ. ಜೆಲ್ಲೆಯ ಸಾರ್ವಜನಿಕರು ಗಣತಿ ಕಾರ್ಯಕ್ಕೆ ಸಹಕರಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಮನವಿ ಮಾಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.</p>.<p>2026-27ನೇ ಸಾಲಿನ ಜನಗಣತಿ ಕಾರ್ಯವು ಜಿಲ್ಲೆಯಲ್ಲಿ ಏ.1 ರಿಂದ ಆರಂಭವಾಗಿ ಮೇ 15 ರವರೆಗೆ ನಡೆಯಲಿದೆ. ಈ ಕಾರ್ಯಕ್ಕೆ 2,533 ಜನಗಣತಿದಾರರನ್ನು 422 ಮೇಲ್ವಿಚಾರಕರನ್ನು ನೇಮಿಸಲಾಗಿದೆ. 150 ರಿಂದ 200 ಮನೆಗಳನ್ನು ಒಳಗೊಳ್ಳುವಂತೆ ಒಟ್ಟು ಜಿಲ್ಲೆಯಲ್ಲಿ 3,121 ಬ್ಲಾಕ್ಗಳನ್ನು ಮಾಡಲಾಗಿದೆ ಎಂದು ಹೇಳಿದರು.</p>.<p>ಒಂದು ಬ್ಲಾಕ್ನಲ್ಲಿ 700 ರಿಂದ 800 ಜನರು ಇರಲಿದ್ದಾರೆ. ಜನಗಣತಿಗಾಗಿ ಒಟ್ಟು ಜಿಲ್ಲೆಯಲ್ಲಿ 16 ಚಾರ್ಜ್ ಗಳನ್ನು ಮಾಡಿ 16 ಅಧಿಕಾರಿಗಳನ್ನು ನೇಮಿಸಲಾಗಿದೆ. ಜನಗಣತಿಗೆ ನಿಯೋಜಿಸಿರುವ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.</p>.<p>ಶಿಕ್ಷಕರು, ಉಪನ್ಯಾಸಕರನ್ನು ಜನಗಣತಿ ಕಾರ್ಯಕ್ಕೆ ಹಾಗೂ ಮೇಲ್ವಿಚಾರಣೆ ಕಾರ್ಯಕ್ಕೆ ನಿಯೋಜಿಸಲಾಗುವುದು. 2 ಮಾಸ್ಟರ್ ತರಬೇತುದಾರರನ್ನು ಜನಗಣತಿ ನಿರ್ದೇಶನಾಲಯದಿಂದ ನೇಮಿಸಲಾಗಿದೆ. ಜಿಲ್ಲೆಯಲ್ಲಿ 50 ಫೀಲ್ಡ್ ಟ್ರೈನರ್ಗಳನ್ನು ನೇಮಿಸಲಾಗಿದೆ. ಇವರಿಗೆ ಜನಗಣತಿ ನಿರ್ದೇಶನಾಲಯದ ಅಧಿಕಾರಿಗಳಿಂದ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಜನಗಣತಿಯ ಮೊದಲನೇ ಹಂತವು ಪ್ರತಿ ಕುಟುಂಬ ರಚನೆ ಮತ್ತು ನಕ್ಷೆ ಒಳಗೊಂಡಿರುತ್ತದೆ. ಸರ್ಕಾರ ಸೂಚಿಸಿರುವಂತೆ ವಸತಿ ಗುಣಮಟ್ಟ, ಸೌಕರ್ಯಗಳು, ನೀರು, ವಿದ್ಯುತ್ ಮತ್ತು ಶೌಚಾಲಯ ವ್ಯವಸ್ಥೆ ಸೇರಿದಂತೆ ಇನ್ನಿತರ 34 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದರು.</p>.<p>ಇದು 2027ರ ಫೆಬ್ರುವರಿಯಿಂದ ನಡೆಯುವ ಎರಡನೇ ಹಂತದ ಜನಗಣತಿಗೆ ಅಡಿಪಾಯವಾಗಿರುತ್ತದೆ.ಜನಸಂಖ್ಯೆಯ ಮಾಹಿತಿಯನ್ನು ನಿರ್ದಿಷ್ಟವಾಗಿ ಗಣತಿ ಮಾಡುವುದರಿಂದ ಮೂಲ ಸೌಕರ್ಯ ಕಲ್ಪಿಸಲು ಅನುಕೂಲವಾಗುವ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಸಹಕಾರಿ ಎಂದು ವಿವರಿಸಿದರು.</p>.<p>ನೈಜ ಹಾಗೂ ನಿಖರ ಮಾಹಿತಿಯನ್ನು ನಾಗರಿಕರು ನೀಡಿ ಜನಗಣತಿ ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೋರಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-16-1946818235</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>