<p><strong>ಚಿಕ್ಕಬಳ್ಳಾಪುರ</strong>: ಜಿಲ್ಲೆಯ 53 ಕೇಂದ್ರಗಳಲ್ಲಿ ಬುಧವಾರ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಥಮ ಭಾಷೆ ಕನ್ನಡ ಪರೀಕ್ಷೆಯು ಯಾವುದೇ ಲೋಪಗಳು ಇಲ್ಲದಂತೆ ಸುಸೂತ್ರವಾಗಿ ನಡೆಯಿತು.</p><p>ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು 15,411 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 15,241 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 170 ವಿದ್ಯಾರ್ಥಿಗಳು ಗೈರಾಗಿದ್ದರು.</p><p>ಬಾಗೇಪಲ್ಲಿ ತಾಲ್ಲೂಕಿನಲ್ಲಿ ಪರೀಕ್ಷೆ ಬರೆಯಲು 2,327 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು 2,301 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 26 ವಿದ್ಯಾರ್ಥಿಗಳು ಗೈರಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ನೋಂದಣಿಯಾಗಿದ್ದ 2,862 ವಿದ್ಯಾರ್ಥಿಗಳ ಪೈಕಿ 2,841 ಮಂದಿ ಪರೀಕ್ಷೆ ಬರೆದರು. 21 ವಿದ್ಯಾರ್ಥಿಗಳು ಗೈರಾಗಿದ್ದರು.</p><p>ಚಿಂತಾಮಣಿ ತಾಲ್ಲೂಕಿನಲ್ಲಿ 3,522 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ 3,493 ಮಂದಿ ಪರೀಕ್ಷೆ ಬರೆದರೆ 29 ವಿದ್ಯಾರ್ಥಿಗಳು ಗೈರಾಗಿದ್ದರು. ಗೌರಿಬಿದನೂರು ತಾಲ್ಲೂಕಿನಲ್ಲಿ 3,415 ವಿದ್ಯಾರ್ಥಿಗಳ ಪೈಕಿ 3,350 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 65 ವಿದ್ಯಾರ್ಥಿಗಳು ಗೈರಾಗಿದ್ದರು.</p><p>ಗುಡಿಬಂಡೆ ತಾಲ್ಲೂಕಿನಲ್ಲಿ 655 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು 649 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ 6 ವಿದ್ಯಾರ್ಥಿಗಳು ಗೈರಾಗಿದ್ದರು. ಶಿಡ್ಲಘಟ್ಟ ತಾಲ್ಲೂಕಿನಲ್ಲಿ 2,630 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು 2,607 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 23 ವಿದ್ಯಾರ್ಥಿಗಳು<br>ಗೈರಾಗಿದ್ದರು.</p><p>ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಇಲಾಖೆ ಡಿಡಿಪಿಐ ರಮೇಶ್ ಹಾಗೂ ಅಧಿಕಾರಿಗಳು ಭೇಟಿ ನೀಡಿದರು.</p>.<blockquote>ಗೌರಿಬಿದನೂರು; 65 ವಿದ್ಯಾರ್ಥಿಗಳು ಗೈರು</blockquote>.<p>ಗೌರಿಬಿದನೂರು: ಕನ್ನಡ ಭಾಷಾ ಪರೀಕ್ಷೆಯೊಂದಿಗೆ ಬುಧವಾರ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಆರಂಭವಾಗಿದೆ. ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ 53 ಶಾಲೆಗಳಿಂದ 3,415 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು.</p><p>ಇದರಲ್ಲಿ 3,350 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ, 65 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದರು. ತಾಲ್ಲೂಕಿನಲ್ಲಿ ಒಟ್ಟು 13 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.</p><p>ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ದೃಷ್ಟಿಯಿಂದ 13 ಮುಖ್ಯ ಅಧೀಕ್ಷಕರು, 2 ಸಹಾಯಕ ಉಪ ಅಧೀಕ್ಷಕರು, 13 ಸಿಟ್ಟಿಂಗ್ ಸ್ಕ್ವಾಡ್, 13 ಕಸ್ಟೋಡಿಯನ್ ಅಧಿಕಾರಿಗಳು, 5 ಮಾರ್ಗ ಅಧಿಕಾರಿಗಳು, 26 ಮಂದಿ ಪೋಲಿಸ್ ಹಾಗೂ ಆಶಾ ಕಾರ್ಯಕರ್ತೆಯರನ್ನು<br>ನಿಯೋಜಿಸಲಾಗಿತ್ತು. </p><p>ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಮಾಡಲಾಗಿತ್ತು. ಕುಡಿಯುವ ನೀರಿನ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಮಾಡಲಾಗಿತ್ತು.</p><p>‘ಈ ಬಾರಿ ಉತ್ತಮ ಫಲಿತಾಂಶ ಬರಲು ಕ್ರಮ ಕೈಗೊಳ್ಳ ಲಾಗಿದೆ. ವಿಧ್ಯಾರ್ಥಿಗಳಿಗೆ ಭಾಷಾವಾರು ಪ್ರತ್ಯೇಕ ಬೋಧನ ನೀಡಲಾಗಿದೆ. ವಿದ್ಯಾರ್ಥಿಗಳು ಭಯ ಬಿಟ್ಟು ಪರೀಕ್ಷೆ ಬರೆಯಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗಂಗರೆಡ್ಡಿ ತಿಳಿಸಿದರು.</p><p>‘ಪರೀಕ್ಷಾ ಕೇಂದ್ರಗಳ ಕೋಠಡಿಗಳಲ್ಲಿ ಉತ್ತಮ ವ್ಯವಸ್ಥೆ ಮಾಡಲಾಗಿದೆ. ಕುಡಿಯಲು ನೀರು, ಪ್ರಥಮ ಚಿಕಿತ್ಸಾ ವೈದ್ಯ ಸೌಲಭ್ಯ ಒದಗಿಸಲಾಗಿದೆ. ಕನ್ನಡ ಪರೀಕ್ಷಾ ಪ್ರಶ್ನೆ ಪತ್ರಿಕೆ ಸುಲಭವಾಗಿತ್ತು’ ಎಂದು ಪರೀಕ್ಷೆ ಬರೆದ ವಿದ್ಯಾರ್ಥಿ ತಿಳಿಸಿದರು.</p>.<blockquote>ಚಿಂತಾಮಣಿಯಲ್ಲಿ ಪರೀಕ್ಷೆ ಸುಗಮ</blockquote>.<p>ಚಿಂತಾಮಣಿ: ಎಸ್ಎಸ್ಎಲ್ಸಿ ಪರೀಕ್ಷೆಯ ಬುಧವಾರದಿಂದ ಆರಂಭವಾಗಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದೆ ಸುಸೂತ್ರವಾಗಿ ನಡೆಯಿತು. </p><p>ನಗರದ ಎಲ್ಲ ಪರೀಕ್ಷಾ ಕೇಂದ್ರಗಳ ಮುಂದೆ ವಿದ್ಯಾರ್ಥಿಗಳು ಮೊದಲ ದಿನ ತಮ್ಮ ನೋಂದಣಿ ಸಂಖ್ಯೆ, ಪರೀಕ್ಷಾ ಕೊಠಡಿ ಹುಡುಕುವುದರಲ್ಲಿ ತೊಡಗಿದ್ದರು. </p><p>ತಾಲ್ಲೂಕಿನಲ್ಲಿ ಪ್ರಥಮ ಭಾಷೆಗೆ 3,522 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, 3,493 ವಿದ್ಯಾರ್ಥಿಗಳು ಹಾಜರಾಗಿ, 29 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.</p><p>ನಗರದ 5 ಮತ್ತು ಗ್ರಾಮೀಣ ಭಾಗಗಳ 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಸಂಬಂಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತನುಜಾ ತಿಳಿಸಿದರು. </p><p>ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರಗಳಿಗೆ ಅವಕಾಶವಿಲ್ಲದಂತೆ ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ವೆಬ್ಕಾಸ್ಟಿಂಗ್ ಮೂಲಕ ಬೆಂಗಳೂರಿನಿಂದಲೇ ಪರೀಕ್ಷಾ ಮಂಡಳಿಯ ಅಧಿಕಾರಿಗಳು ಎಲ್ಲ ಕೇಂದ್ರಗಳ ಮೇಲ್ವಿಚಾರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಜಿಲ್ಲೆಯ 53 ಕೇಂದ್ರಗಳಲ್ಲಿ ಬುಧವಾರ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಥಮ ಭಾಷೆ ಕನ್ನಡ ಪರೀಕ್ಷೆಯು ಯಾವುದೇ ಲೋಪಗಳು ಇಲ್ಲದಂತೆ ಸುಸೂತ್ರವಾಗಿ ನಡೆಯಿತು.</p><p>ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು 15,411 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 15,241 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 170 ವಿದ್ಯಾರ್ಥಿಗಳು ಗೈರಾಗಿದ್ದರು.</p><p>ಬಾಗೇಪಲ್ಲಿ ತಾಲ್ಲೂಕಿನಲ್ಲಿ ಪರೀಕ್ಷೆ ಬರೆಯಲು 2,327 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು 2,301 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 26 ವಿದ್ಯಾರ್ಥಿಗಳು ಗೈರಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ನೋಂದಣಿಯಾಗಿದ್ದ 2,862 ವಿದ್ಯಾರ್ಥಿಗಳ ಪೈಕಿ 2,841 ಮಂದಿ ಪರೀಕ್ಷೆ ಬರೆದರು. 21 ವಿದ್ಯಾರ್ಥಿಗಳು ಗೈರಾಗಿದ್ದರು.</p><p>ಚಿಂತಾಮಣಿ ತಾಲ್ಲೂಕಿನಲ್ಲಿ 3,522 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ 3,493 ಮಂದಿ ಪರೀಕ್ಷೆ ಬರೆದರೆ 29 ವಿದ್ಯಾರ್ಥಿಗಳು ಗೈರಾಗಿದ್ದರು. ಗೌರಿಬಿದನೂರು ತಾಲ್ಲೂಕಿನಲ್ಲಿ 3,415 ವಿದ್ಯಾರ್ಥಿಗಳ ಪೈಕಿ 3,350 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 65 ವಿದ್ಯಾರ್ಥಿಗಳು ಗೈರಾಗಿದ್ದರು.</p><p>ಗುಡಿಬಂಡೆ ತಾಲ್ಲೂಕಿನಲ್ಲಿ 655 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು 649 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ 6 ವಿದ್ಯಾರ್ಥಿಗಳು ಗೈರಾಗಿದ್ದರು. ಶಿಡ್ಲಘಟ್ಟ ತಾಲ್ಲೂಕಿನಲ್ಲಿ 2,630 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು 2,607 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 23 ವಿದ್ಯಾರ್ಥಿಗಳು<br>ಗೈರಾಗಿದ್ದರು.</p><p>ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಇಲಾಖೆ ಡಿಡಿಪಿಐ ರಮೇಶ್ ಹಾಗೂ ಅಧಿಕಾರಿಗಳು ಭೇಟಿ ನೀಡಿದರು.</p>.<blockquote>ಗೌರಿಬಿದನೂರು; 65 ವಿದ್ಯಾರ್ಥಿಗಳು ಗೈರು</blockquote>.<p>ಗೌರಿಬಿದನೂರು: ಕನ್ನಡ ಭಾಷಾ ಪರೀಕ್ಷೆಯೊಂದಿಗೆ ಬುಧವಾರ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಆರಂಭವಾಗಿದೆ. ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ 53 ಶಾಲೆಗಳಿಂದ 3,415 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು.</p><p>ಇದರಲ್ಲಿ 3,350 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ, 65 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದರು. ತಾಲ್ಲೂಕಿನಲ್ಲಿ ಒಟ್ಟು 13 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.</p><p>ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ದೃಷ್ಟಿಯಿಂದ 13 ಮುಖ್ಯ ಅಧೀಕ್ಷಕರು, 2 ಸಹಾಯಕ ಉಪ ಅಧೀಕ್ಷಕರು, 13 ಸಿಟ್ಟಿಂಗ್ ಸ್ಕ್ವಾಡ್, 13 ಕಸ್ಟೋಡಿಯನ್ ಅಧಿಕಾರಿಗಳು, 5 ಮಾರ್ಗ ಅಧಿಕಾರಿಗಳು, 26 ಮಂದಿ ಪೋಲಿಸ್ ಹಾಗೂ ಆಶಾ ಕಾರ್ಯಕರ್ತೆಯರನ್ನು<br>ನಿಯೋಜಿಸಲಾಗಿತ್ತು. </p><p>ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಮಾಡಲಾಗಿತ್ತು. ಕುಡಿಯುವ ನೀರಿನ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಮಾಡಲಾಗಿತ್ತು.</p><p>‘ಈ ಬಾರಿ ಉತ್ತಮ ಫಲಿತಾಂಶ ಬರಲು ಕ್ರಮ ಕೈಗೊಳ್ಳ ಲಾಗಿದೆ. ವಿಧ್ಯಾರ್ಥಿಗಳಿಗೆ ಭಾಷಾವಾರು ಪ್ರತ್ಯೇಕ ಬೋಧನ ನೀಡಲಾಗಿದೆ. ವಿದ್ಯಾರ್ಥಿಗಳು ಭಯ ಬಿಟ್ಟು ಪರೀಕ್ಷೆ ಬರೆಯಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗಂಗರೆಡ್ಡಿ ತಿಳಿಸಿದರು.</p><p>‘ಪರೀಕ್ಷಾ ಕೇಂದ್ರಗಳ ಕೋಠಡಿಗಳಲ್ಲಿ ಉತ್ತಮ ವ್ಯವಸ್ಥೆ ಮಾಡಲಾಗಿದೆ. ಕುಡಿಯಲು ನೀರು, ಪ್ರಥಮ ಚಿಕಿತ್ಸಾ ವೈದ್ಯ ಸೌಲಭ್ಯ ಒದಗಿಸಲಾಗಿದೆ. ಕನ್ನಡ ಪರೀಕ್ಷಾ ಪ್ರಶ್ನೆ ಪತ್ರಿಕೆ ಸುಲಭವಾಗಿತ್ತು’ ಎಂದು ಪರೀಕ್ಷೆ ಬರೆದ ವಿದ್ಯಾರ್ಥಿ ತಿಳಿಸಿದರು.</p>.<blockquote>ಚಿಂತಾಮಣಿಯಲ್ಲಿ ಪರೀಕ್ಷೆ ಸುಗಮ</blockquote>.<p>ಚಿಂತಾಮಣಿ: ಎಸ್ಎಸ್ಎಲ್ಸಿ ಪರೀಕ್ಷೆಯ ಬುಧವಾರದಿಂದ ಆರಂಭವಾಗಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದೆ ಸುಸೂತ್ರವಾಗಿ ನಡೆಯಿತು. </p><p>ನಗರದ ಎಲ್ಲ ಪರೀಕ್ಷಾ ಕೇಂದ್ರಗಳ ಮುಂದೆ ವಿದ್ಯಾರ್ಥಿಗಳು ಮೊದಲ ದಿನ ತಮ್ಮ ನೋಂದಣಿ ಸಂಖ್ಯೆ, ಪರೀಕ್ಷಾ ಕೊಠಡಿ ಹುಡುಕುವುದರಲ್ಲಿ ತೊಡಗಿದ್ದರು. </p><p>ತಾಲ್ಲೂಕಿನಲ್ಲಿ ಪ್ರಥಮ ಭಾಷೆಗೆ 3,522 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, 3,493 ವಿದ್ಯಾರ್ಥಿಗಳು ಹಾಜರಾಗಿ, 29 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.</p><p>ನಗರದ 5 ಮತ್ತು ಗ್ರಾಮೀಣ ಭಾಗಗಳ 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಸಂಬಂಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತನುಜಾ ತಿಳಿಸಿದರು. </p><p>ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರಗಳಿಗೆ ಅವಕಾಶವಿಲ್ಲದಂತೆ ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ವೆಬ್ಕಾಸ್ಟಿಂಗ್ ಮೂಲಕ ಬೆಂಗಳೂರಿನಿಂದಲೇ ಪರೀಕ್ಷಾ ಮಂಡಳಿಯ ಅಧಿಕಾರಿಗಳು ಎಲ್ಲ ಕೇಂದ್ರಗಳ ಮೇಲ್ವಿಚಾರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>