<p>ಚಿಕ್ಕಬಳ್ಳಾಪುರ: ಬೀದಿನಾಯಿಗಳ ಹಾವಳಿ ನಿಯಂತ್ರಿಸಬೇಕಿದೆ. ಮಾಂಸ ಮಾರಾಟದ ಅಂಗಡಿಗಳಲ್ಲಿನ ತ್ಯಾಜ್ಯವನ್ನು ಸೂಕ್ತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ನಿಗಾ ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹಾವು ಮತ್ತು ನಾಯಿ ಕಡಿತ ನಿಯಂತ್ರಣ ಕುರಿತ ಅಂತರ್ ಇಲಾಖಾ ಸಮನ್ವಯ ಸಭೆಯಲ್ಲಿ ಮಾತನಾಡಿದರು.</p>.<p>ಚಿಕನ್ ಮತ್ತು ಮಟನ್ ಮಾರಾಟ ಮಳಿಗೆಗಳ ಬಳಿ ಮಾಂಸ ಕತ್ತರಿಸುವ ವೇಳೆ ನಿರುಪಯುಕ್ತ ಮಾಂಸ ಮತ್ತು ತ್ಯಾಜ್ಯವನ್ನು ರಸ್ತೆಗೆ ಎಸೆಯಲಾಗುತ್ತಿದೆ. ಈ ತ್ಯಾಜ್ಯ ತಿನ್ನಲು ಬರುವ ಬೀದಿನಾಯಿಗಳಿಂದ ಹೆಚ್ಚಿನ ನಾಯಿ ಕಡಿತಗಳಾಗುತ್ತಿರುವುದು ಆತಂಕಕಾರಿ ಎಂದರು.</p>.<p>ಇಂತಹ ಪ್ರಸಂಗಗಳನ್ನು ಸಂಪೂರ್ಣವಾಗಿ ತಡೆಯಬೇಕು. ಸ್ಥಳೀಯಾಡಳಿತ ಸಂಸ್ಥೆಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಅಂತಹ ಮಾಂಸ ಮಾರಾಟಗಾರರಿಗೆ ಎಚ್ಚರಿಕೆ ನೀಡಬೇಕು. ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಸಮರ್ಪಕ ವಿಲೆವಾರಿಗೆ ಅರಿವು ಮೂಡಿಸಬೇಕು. ಪರವಾನಗಿ ಪಡೆಯದೆ ಮಾಂಸ ಮಾರಾಟಗಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.</p>.<p>ನಾಯಿ ಕಚ್ಚುವಿಕೆಯು ರೇಬಿಸ್ ಸೋಂಕು ಹರಡಬಹುದು. ಇದು ಮಾರಣಾಂತಿಕ ಕಾಯಿಲೆ. ಯಾವುದೇ ವ್ಯಕ್ತಿ ನಾಯಿ ಕಡಿತಕ್ಕೆ ಒಳಗಾದ ತಕ್ಷಣ ವೈದ್ಯಕೀಯ ಸಹಾಯ ಪಡೆಯುವುದು ಅಗತ್ಯ. ವಿಶೇಷವಾಗಿ ಸಾಕು ಪ್ರಾಣಿಗಳಿಗೆ ಲಸಿಕೆ ಮಾಡಿಸಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲೆಯಲ್ಲಿ 2025ರಲ್ಲಿ 12,663 ಜನರಿಗೆ ನಾಯಿ ಕಚ್ಚಿದೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇದೇ ವರ್ಷ 944 ಮಂದಿಗೆ ಹಾವು ಕಡಿದಿವೆ. ಅವರಲ್ಲಿ 7 ಜನರು ನಿಧನರಾಗಿದ್ದಾರೆ. 2026ರ ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 5,717 ಜನರಿಗೆ ನಾಯಿ ಕಡಿತದಿವೆ. ಎಲ್ಲರಿಗೂ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರುಮಾಡಲಾಗಿದೆ ಎಂದರು.</p>.<p>2026ರ ಆರಂಭದಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 292 ಮಂದಿ ಹಾವು ಕಡಿತಕ್ಕೆ ಒಳಗಾಗಿದ್ದು ಮೂವರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ನಾಯಿ ಮತ್ತು ಹಾವಿನ ಕಡಿತದಿಂದ ಸಾವು ಉಂಟಾಗಬಾರದು. ಆದ್ದರಿಂದ ತಡೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.</p>.<p>ರೇಬಿಸ್ ವೈರಾಣುವಿನಿಂದ ಹರಡುವ ಸೋಂಕು. ಸೋಂಕಿರುವ ಪ್ರಾಣಿಗಳ ಜೊಲ್ಲಿನ ಸಂಪರ್ಕ, ಚರ್ಮ ನೆಕ್ಕುವಿಕೆ, ಪರಚುವುದು ಮತ್ತು ಕಡಿತದಿಂದ ಹರಡುತ್ತದೆ. ಸೋಂಕು ತಡೆಯಲು ತಕ್ಷಣವೇ ಹತ್ತಿರದ ಆಸ್ಪತ್ರೆಯಲ್ಲಿ ವೈದ್ಯರ ಸಲಹೆಯಂತೆ ನಿಗದಿತ ರೇಬಿಸ್ ವಿರುದ್ಧದ ಲಸಿಕೆ ಚುಚ್ಚುಮದ್ದನ್ನು ತೆಗೆದುಕೊಳ್ಳಬೇಕು. ಗಾಯಗಳ ಒಳಗೆ ಮತ್ತು ಸುತ್ತಲೂ ರೇಬಿಸ್ ಇಮ್ಯುನೋಗ್ಲೋಬುಲಿನ್ ಅಥವಾ ಆ್ಯಂಟಿ ರೇಬಿಸ್ ಸೀರಂ ಚುಚ್ಚುಮದ್ದು ತೆಗೆದುಕೊಳ್ಳಬೇಕು. ಸಾಕು ನಾಯಿಗಳಿಗೆ ತಪ್ಪದೆ ಚುಚ್ಚುಮದ್ದು ಹಾಕಿಸಬೇಕು ಎಂದು ತಿಳಿಸಿದರು.</p>.<p>ಹಾವುಗಳು ವಿಷಕಾರಿ ಮತ್ತು ವಿಷರಹಿತ ಎರಡೂ ಆಗಿರುತ್ತವೆ. ಹಾವು ಕಚ್ಚಿದ ಸಂದರ್ಭಗಳಲ್ಲಿ ಹೆದರದೆ ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಎಡಭಾಗಕ್ಕೆ ಮಲಗಿಸಿ ಕಚ್ಚಿದ ಭಾಗವನ್ನು ಅಲುಗಾಡದಂತೆ ನೋಡಿಕೊಳ್ಳಬೇಕು. ಹಾವು ಕಚ್ಚಿದ ದೇಹದ ಭಾಗದಲ್ಲಿರುವ ಪಾದರಕ್ಷೆ, ಕಾಲುಂಗುರ, ಬೆಲ್ಡ್ ಆಭರಣಗಳು, ವಾಚ್, ಬಿಗಿಯಾದ ಬಟ್ಟೆಯನ್ನು ಕಳಚಿ ಆಂಬುಲೆನ್ಸ್ ಅಥವಾ ಇನ್ನಿತರ ವಾಹನದಲ್ಲಿ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದರು.</p>.<p>ಈ ಬಗ್ಗೆ ಶಾಲಾ, ಕಾಲೇಜು, ಗ್ರಾಮ ಪಂಚಾಯಿತಿ, ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ನಾಯಿ ಮತ್ತು ಹಾವು ಕಡಿತ ಕಡಿಮೆ ಮಾಡಲು ಕ್ರಮ ವಹಿಸಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಈ ವೇಳೆ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.</p>.<p>ಡಾ.ಕೃಷ್ಣಪ್ರಸಾದ್, ಡಾ.ಜಿ.ವಿ ಸಂತೋಷ್ ಬಾಬು, ಡಾ. ಪ್ರಕಾಶ್, ಡಾ.ಚಂದ್ರಶೇಖರ್ ರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><strong>25 ಜನ ಸಾವು</strong></p><p>2023ರಲ್ಲಿ ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿ ತಾಲ್ಲೂಕಿನಲ್ಲಿ ತಲಾ ಒಬ್ಬರು ಹಾವು ಕಡಿತಕ್ಕೆ ಮೃತಪಟ್ಟಿದ್ದಾರೆ. 2024ರಲ್ಲಿ<br>ಬಾಗೇಪಲ್ಲಿಯಲ್ಲಿ ಇಬ್ಬರು, ಗುಡಿಬಂಡೆ ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. 2025ರಲ್ಲಿ ಗೌರಿಬಿದನೂರು ತಾಲ್ಲೂಕಿನಲ್ಲಿ ಐದು, ಶಿಡ್ಲಘಟ್ಟ ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿ ತಲಾ ಒಬ್ಬರು ಹಾವು ಕಡಿತಕ್ಕೆ ಮೃತಪಟ್ಟಿದ್ದಾರೆ. 2026ರಲ್ಲಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಇಬ್ಬರು ಮತ್ತು ಗೌರಿಬಿದನೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ.</p><p>ರೇಬಿಸ್ ರೋಗದಿಂದ 2022ರಲ್ಲಿ ಬಾಗೇಪಲ್ಲಿಯಲ್ಲಿ ಇಬ್ಬರು, ಗೌರಿಬಿದನೂರಿನಲ್ಲಿ ಒಬ್ಬರು, 23ರಲ್ಲಿ ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು ತಾಲ್ಲೂಕಿನಲ್ಲಿ ತಲಾ ಒಬ್ಬರು, 2024ರಲ್ಲಿ ಚಿಕ್ಕಬಳ್ಳಾಪುರದಲ್ಲಿ ಒಬ್ಬರು ರೇಬಿಸ್ನಿಂದ ಮೃತಪಟ್ಟಿದ್ದಾರೆ. 2025ರಲ್ಲಿ ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ತಲಾ<br>ಒಬ್ಬರು ರೇಬಿಸ್ ರೋಗದಿಂದ<br>ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಬೀದಿನಾಯಿಗಳ ಹಾವಳಿ ನಿಯಂತ್ರಿಸಬೇಕಿದೆ. ಮಾಂಸ ಮಾರಾಟದ ಅಂಗಡಿಗಳಲ್ಲಿನ ತ್ಯಾಜ್ಯವನ್ನು ಸೂಕ್ತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ನಿಗಾ ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹಾವು ಮತ್ತು ನಾಯಿ ಕಡಿತ ನಿಯಂತ್ರಣ ಕುರಿತ ಅಂತರ್ ಇಲಾಖಾ ಸಮನ್ವಯ ಸಭೆಯಲ್ಲಿ ಮಾತನಾಡಿದರು.</p>.<p>ಚಿಕನ್ ಮತ್ತು ಮಟನ್ ಮಾರಾಟ ಮಳಿಗೆಗಳ ಬಳಿ ಮಾಂಸ ಕತ್ತರಿಸುವ ವೇಳೆ ನಿರುಪಯುಕ್ತ ಮಾಂಸ ಮತ್ತು ತ್ಯಾಜ್ಯವನ್ನು ರಸ್ತೆಗೆ ಎಸೆಯಲಾಗುತ್ತಿದೆ. ಈ ತ್ಯಾಜ್ಯ ತಿನ್ನಲು ಬರುವ ಬೀದಿನಾಯಿಗಳಿಂದ ಹೆಚ್ಚಿನ ನಾಯಿ ಕಡಿತಗಳಾಗುತ್ತಿರುವುದು ಆತಂಕಕಾರಿ ಎಂದರು.</p>.<p>ಇಂತಹ ಪ್ರಸಂಗಗಳನ್ನು ಸಂಪೂರ್ಣವಾಗಿ ತಡೆಯಬೇಕು. ಸ್ಥಳೀಯಾಡಳಿತ ಸಂಸ್ಥೆಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಅಂತಹ ಮಾಂಸ ಮಾರಾಟಗಾರರಿಗೆ ಎಚ್ಚರಿಕೆ ನೀಡಬೇಕು. ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಸಮರ್ಪಕ ವಿಲೆವಾರಿಗೆ ಅರಿವು ಮೂಡಿಸಬೇಕು. ಪರವಾನಗಿ ಪಡೆಯದೆ ಮಾಂಸ ಮಾರಾಟಗಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.</p>.<p>ನಾಯಿ ಕಚ್ಚುವಿಕೆಯು ರೇಬಿಸ್ ಸೋಂಕು ಹರಡಬಹುದು. ಇದು ಮಾರಣಾಂತಿಕ ಕಾಯಿಲೆ. ಯಾವುದೇ ವ್ಯಕ್ತಿ ನಾಯಿ ಕಡಿತಕ್ಕೆ ಒಳಗಾದ ತಕ್ಷಣ ವೈದ್ಯಕೀಯ ಸಹಾಯ ಪಡೆಯುವುದು ಅಗತ್ಯ. ವಿಶೇಷವಾಗಿ ಸಾಕು ಪ್ರಾಣಿಗಳಿಗೆ ಲಸಿಕೆ ಮಾಡಿಸಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲೆಯಲ್ಲಿ 2025ರಲ್ಲಿ 12,663 ಜನರಿಗೆ ನಾಯಿ ಕಚ್ಚಿದೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇದೇ ವರ್ಷ 944 ಮಂದಿಗೆ ಹಾವು ಕಡಿದಿವೆ. ಅವರಲ್ಲಿ 7 ಜನರು ನಿಧನರಾಗಿದ್ದಾರೆ. 2026ರ ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 5,717 ಜನರಿಗೆ ನಾಯಿ ಕಡಿತದಿವೆ. ಎಲ್ಲರಿಗೂ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರುಮಾಡಲಾಗಿದೆ ಎಂದರು.</p>.<p>2026ರ ಆರಂಭದಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 292 ಮಂದಿ ಹಾವು ಕಡಿತಕ್ಕೆ ಒಳಗಾಗಿದ್ದು ಮೂವರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ನಾಯಿ ಮತ್ತು ಹಾವಿನ ಕಡಿತದಿಂದ ಸಾವು ಉಂಟಾಗಬಾರದು. ಆದ್ದರಿಂದ ತಡೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.</p>.<p>ರೇಬಿಸ್ ವೈರಾಣುವಿನಿಂದ ಹರಡುವ ಸೋಂಕು. ಸೋಂಕಿರುವ ಪ್ರಾಣಿಗಳ ಜೊಲ್ಲಿನ ಸಂಪರ್ಕ, ಚರ್ಮ ನೆಕ್ಕುವಿಕೆ, ಪರಚುವುದು ಮತ್ತು ಕಡಿತದಿಂದ ಹರಡುತ್ತದೆ. ಸೋಂಕು ತಡೆಯಲು ತಕ್ಷಣವೇ ಹತ್ತಿರದ ಆಸ್ಪತ್ರೆಯಲ್ಲಿ ವೈದ್ಯರ ಸಲಹೆಯಂತೆ ನಿಗದಿತ ರೇಬಿಸ್ ವಿರುದ್ಧದ ಲಸಿಕೆ ಚುಚ್ಚುಮದ್ದನ್ನು ತೆಗೆದುಕೊಳ್ಳಬೇಕು. ಗಾಯಗಳ ಒಳಗೆ ಮತ್ತು ಸುತ್ತಲೂ ರೇಬಿಸ್ ಇಮ್ಯುನೋಗ್ಲೋಬುಲಿನ್ ಅಥವಾ ಆ್ಯಂಟಿ ರೇಬಿಸ್ ಸೀರಂ ಚುಚ್ಚುಮದ್ದು ತೆಗೆದುಕೊಳ್ಳಬೇಕು. ಸಾಕು ನಾಯಿಗಳಿಗೆ ತಪ್ಪದೆ ಚುಚ್ಚುಮದ್ದು ಹಾಕಿಸಬೇಕು ಎಂದು ತಿಳಿಸಿದರು.</p>.<p>ಹಾವುಗಳು ವಿಷಕಾರಿ ಮತ್ತು ವಿಷರಹಿತ ಎರಡೂ ಆಗಿರುತ್ತವೆ. ಹಾವು ಕಚ್ಚಿದ ಸಂದರ್ಭಗಳಲ್ಲಿ ಹೆದರದೆ ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಎಡಭಾಗಕ್ಕೆ ಮಲಗಿಸಿ ಕಚ್ಚಿದ ಭಾಗವನ್ನು ಅಲುಗಾಡದಂತೆ ನೋಡಿಕೊಳ್ಳಬೇಕು. ಹಾವು ಕಚ್ಚಿದ ದೇಹದ ಭಾಗದಲ್ಲಿರುವ ಪಾದರಕ್ಷೆ, ಕಾಲುಂಗುರ, ಬೆಲ್ಡ್ ಆಭರಣಗಳು, ವಾಚ್, ಬಿಗಿಯಾದ ಬಟ್ಟೆಯನ್ನು ಕಳಚಿ ಆಂಬುಲೆನ್ಸ್ ಅಥವಾ ಇನ್ನಿತರ ವಾಹನದಲ್ಲಿ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದರು.</p>.<p>ಈ ಬಗ್ಗೆ ಶಾಲಾ, ಕಾಲೇಜು, ಗ್ರಾಮ ಪಂಚಾಯಿತಿ, ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ನಾಯಿ ಮತ್ತು ಹಾವು ಕಡಿತ ಕಡಿಮೆ ಮಾಡಲು ಕ್ರಮ ವಹಿಸಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಈ ವೇಳೆ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.</p>.<p>ಡಾ.ಕೃಷ್ಣಪ್ರಸಾದ್, ಡಾ.ಜಿ.ವಿ ಸಂತೋಷ್ ಬಾಬು, ಡಾ. ಪ್ರಕಾಶ್, ಡಾ.ಚಂದ್ರಶೇಖರ್ ರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><strong>25 ಜನ ಸಾವು</strong></p><p>2023ರಲ್ಲಿ ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿ ತಾಲ್ಲೂಕಿನಲ್ಲಿ ತಲಾ ಒಬ್ಬರು ಹಾವು ಕಡಿತಕ್ಕೆ ಮೃತಪಟ್ಟಿದ್ದಾರೆ. 2024ರಲ್ಲಿ<br>ಬಾಗೇಪಲ್ಲಿಯಲ್ಲಿ ಇಬ್ಬರು, ಗುಡಿಬಂಡೆ ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. 2025ರಲ್ಲಿ ಗೌರಿಬಿದನೂರು ತಾಲ್ಲೂಕಿನಲ್ಲಿ ಐದು, ಶಿಡ್ಲಘಟ್ಟ ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿ ತಲಾ ಒಬ್ಬರು ಹಾವು ಕಡಿತಕ್ಕೆ ಮೃತಪಟ್ಟಿದ್ದಾರೆ. 2026ರಲ್ಲಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಇಬ್ಬರು ಮತ್ತು ಗೌರಿಬಿದನೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ.</p><p>ರೇಬಿಸ್ ರೋಗದಿಂದ 2022ರಲ್ಲಿ ಬಾಗೇಪಲ್ಲಿಯಲ್ಲಿ ಇಬ್ಬರು, ಗೌರಿಬಿದನೂರಿನಲ್ಲಿ ಒಬ್ಬರು, 23ರಲ್ಲಿ ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು ತಾಲ್ಲೂಕಿನಲ್ಲಿ ತಲಾ ಒಬ್ಬರು, 2024ರಲ್ಲಿ ಚಿಕ್ಕಬಳ್ಳಾಪುರದಲ್ಲಿ ಒಬ್ಬರು ರೇಬಿಸ್ನಿಂದ ಮೃತಪಟ್ಟಿದ್ದಾರೆ. 2025ರಲ್ಲಿ ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ತಲಾ<br>ಒಬ್ಬರು ರೇಬಿಸ್ ರೋಗದಿಂದ<br>ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>