<p><strong>ಚಿಕ್ಕಬಳ್ಳಾಪುರ:</strong> ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣವು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ತಣ್ಣಗಿದ್ದ ರಾಜಕಾರಣವನ್ನು ಈ ಪ್ರಕರಣವು ಕಾವೇರುವಂತೆ ಮಾಡಿದೆ. </p><p>ಸಂಸದ ಡಾ.ಕೆ.ಸುಧಾಕರ್ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಸಂಸದರು ಮೊದಲ ಆರೋಪಿಯಾಗಿದ್ದಾರೆ. ಚಿಕ್ಕಕಾಡಿಗೇನಹಳ್ಳಿ ನಾಗೇಶ್ ಎರಡನೇ ಮತ್ತು ಜಿ.ಪಂ ಲೆಕ್ಕಶಾಖೆಯ ಎಸ್ಡಿಎ ಮಂಜುನಾಥ್ ಮೂರನೇ ಆರೋಪಿ ಆಗಿದ್ದಾರೆ.</p><p>ಜಿಲ್ಲಾಡಳಿತ ಭವನದ ವಿದ್ಯಮಾನ: ಆತ್ಮಹತ್ಯೆ ಮಾಡಿಕೊಂಢ ಬಾಬು ನಗರದ 12ನೇ ವಾರ್ಡ್ನಲ್ಲಿ ವಾಸಿಸುತ್ತಿದ್ದರು. ಕಳೆದ ಐದು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ವಾಹನ ಚಾಲಕರಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು.</p><p>ಗುರುವಾರ ಬೆಳಿಗ್ಗೆ 5ರ ಸುಮಾರಿನಲ್ಲಿಯೇ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದರು. ಅವರ ಪತ್ನಿ 6 ಗಂಟೆ ಸುಮಾರಿಗೆ ಅವರಿಗೆ ಕರೆ ಮಾಡಿದರೂ ಸ್ವೀಕರಿಸಿಲ್ಲ. ತಕ್ಷಣ ಅವರ ಪತ್ನಿ ತಮ್ಮ ಭಾವ ಲೋಕೇಶ್ ಅವರಿಗೆ ಕರೆ ಮಾಡಿ ಈ ಬಗ್ಗೆ ತಿಳಿಸಿದ್ದಾರೆ. ಆಗ ಲೋಕೇಶ್, ಬಾಬುವನ್ನು ಹುಡುಕಿ ಬಂದಿದ್ದಾರೆ. ಅಷ್ಟರಲ್ಲಿ ಜಿ.ಪಂ ಕಚೇರಿಯ ಹಿಂಭಾಗದ ಹೊಂಗೆ ಮರಕ್ಕೆ ಬಾನು ನೇಣು ಹಾಕಿಕೊಂಡಿದ್ದಾರೆ.</p><p>ಈ ವಿಚಾರ ತಿಳಿಯುತ್ತಲೇ ಪೊಲೀಸರು, ಮಾಧ್ಯಮದವರು ಸೇರಿದಂತೆ ಜನರು ಜಿಲ್ಲಾಡಳಿತ ಭವನದ ಬಳಿ ದೊಡ್ಡ ಸಂಖ್ಯೆಯಲ್ಲಿಯೇ ಜಮಾಯಿಸಿದ್ದರು. ಬಾಬು ಬರೆದಿರುವ ಡೆತ್ನೋಟ್ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತು. </p><p>ಡೆತ್ನೋಟ್ನಲ್ಲಿ ಸಂಸದ ಡಾ.ಕೆ.ಸುಧಾಕರ್, ಅವರ ಬೆಂಬಲಿಗ ನಾಗೇಶ್ ಮತ್ತು ಮಂಜುನಾಥ್ ಹೆಸರು ಇತ್ತು. ಈ ವಿಚಾರ ಹರಡುತ್ತಲೇ ಪ್ರಕರಣವೂ ಚರ್ಚೆಗೆ ಒಳಗಾಯಿತು.</p><p>10ರ ಸುಮಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಶಿಡ್ಲಘಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಸುಧಾಕರ್ ಮತ್ತು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇತ್ತ ಬಿಜೆಪಿ ಮುಖಂಡರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಆರೋಪಗಳ ಸುರಿಮಳೆಗೈದರು.</p><p>ಚಿಕ್ಕಬಳ್ಳಾಪುರ ರಾಜಕೀಯದಲ್ಲಿ ಈ ಪ್ರಕರಣವು ಗಂಭೀರ ತಿರುವು ಪಡೆಯುವ ಲಕ್ಷಣಗಳೂ ಇವೆ. </p><p><strong>ಪೊಲೀಸರ ವಿರುದ್ಧ ಬಿಜೆಪಿ ಆರೋಪ</strong></p><p>ಮೃತರ ಪತ್ನಿ ದೂರು ನೀಡುವಾಗ ಪೊಲೀಸರು ಸುಧಾಕರ್ ಹೆಸರನ್ನು ಸೇರಿಸುವಂತೆ ಒತ್ತಡ ಹೇರಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಸಂಸದ ಡಾ.ಕೆ.ಸುಧಾಕರ್ ಅವರೇ ಗ್ರಾಮಾಂತರ ಠಾಣೆ ಪಿಎಸ್ಐ ವಿರುದ್ಧ ಈ ಆರೋಪ ಮಾಡಿದ್ದಾರೆ. </p><p><strong>ಪ್ರಾಧಿಕಾರದ ಮಾಜಿ ಅಧ್ಯಕ್ಷರ ಅಳಿಯ ನಾಗೇಶ್</strong></p><p>ಪ್ರಕರಣದಲ್ಲಿ ಚಿಕ್ಕಕಾಡಿಗೇನಹಳ್ಳಿ ನಾಗೇಶ್ ಎರಡನೇ ಆರೋಪಿ. ಮೃತರ ಪತ್ನಿ ನೀಡಿರುವ ದೂರಿನಲ್ಲಿ ನಾಗೇಶ್ ಪಾತ್ರದ ಬಗ್ಗೆ ವಿಸ್ತಾರವಾಗಿ ಉಲ್ಲೇಖಿಸಿದ್ದಾರೆ. ನಾಗೇಶ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರೂ ಆದ ಬಿಜೆಪಿ ಮುಖಂಡ ಕೃಷ್ಣಮೂರ್ತಿ ಅಳಿಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣವು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ತಣ್ಣಗಿದ್ದ ರಾಜಕಾರಣವನ್ನು ಈ ಪ್ರಕರಣವು ಕಾವೇರುವಂತೆ ಮಾಡಿದೆ. </p><p>ಸಂಸದ ಡಾ.ಕೆ.ಸುಧಾಕರ್ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಸಂಸದರು ಮೊದಲ ಆರೋಪಿಯಾಗಿದ್ದಾರೆ. ಚಿಕ್ಕಕಾಡಿಗೇನಹಳ್ಳಿ ನಾಗೇಶ್ ಎರಡನೇ ಮತ್ತು ಜಿ.ಪಂ ಲೆಕ್ಕಶಾಖೆಯ ಎಸ್ಡಿಎ ಮಂಜುನಾಥ್ ಮೂರನೇ ಆರೋಪಿ ಆಗಿದ್ದಾರೆ.</p><p>ಜಿಲ್ಲಾಡಳಿತ ಭವನದ ವಿದ್ಯಮಾನ: ಆತ್ಮಹತ್ಯೆ ಮಾಡಿಕೊಂಢ ಬಾಬು ನಗರದ 12ನೇ ವಾರ್ಡ್ನಲ್ಲಿ ವಾಸಿಸುತ್ತಿದ್ದರು. ಕಳೆದ ಐದು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ವಾಹನ ಚಾಲಕರಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು.</p><p>ಗುರುವಾರ ಬೆಳಿಗ್ಗೆ 5ರ ಸುಮಾರಿನಲ್ಲಿಯೇ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದರು. ಅವರ ಪತ್ನಿ 6 ಗಂಟೆ ಸುಮಾರಿಗೆ ಅವರಿಗೆ ಕರೆ ಮಾಡಿದರೂ ಸ್ವೀಕರಿಸಿಲ್ಲ. ತಕ್ಷಣ ಅವರ ಪತ್ನಿ ತಮ್ಮ ಭಾವ ಲೋಕೇಶ್ ಅವರಿಗೆ ಕರೆ ಮಾಡಿ ಈ ಬಗ್ಗೆ ತಿಳಿಸಿದ್ದಾರೆ. ಆಗ ಲೋಕೇಶ್, ಬಾಬುವನ್ನು ಹುಡುಕಿ ಬಂದಿದ್ದಾರೆ. ಅಷ್ಟರಲ್ಲಿ ಜಿ.ಪಂ ಕಚೇರಿಯ ಹಿಂಭಾಗದ ಹೊಂಗೆ ಮರಕ್ಕೆ ಬಾನು ನೇಣು ಹಾಕಿಕೊಂಡಿದ್ದಾರೆ.</p><p>ಈ ವಿಚಾರ ತಿಳಿಯುತ್ತಲೇ ಪೊಲೀಸರು, ಮಾಧ್ಯಮದವರು ಸೇರಿದಂತೆ ಜನರು ಜಿಲ್ಲಾಡಳಿತ ಭವನದ ಬಳಿ ದೊಡ್ಡ ಸಂಖ್ಯೆಯಲ್ಲಿಯೇ ಜಮಾಯಿಸಿದ್ದರು. ಬಾಬು ಬರೆದಿರುವ ಡೆತ್ನೋಟ್ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತು. </p><p>ಡೆತ್ನೋಟ್ನಲ್ಲಿ ಸಂಸದ ಡಾ.ಕೆ.ಸುಧಾಕರ್, ಅವರ ಬೆಂಬಲಿಗ ನಾಗೇಶ್ ಮತ್ತು ಮಂಜುನಾಥ್ ಹೆಸರು ಇತ್ತು. ಈ ವಿಚಾರ ಹರಡುತ್ತಲೇ ಪ್ರಕರಣವೂ ಚರ್ಚೆಗೆ ಒಳಗಾಯಿತು.</p><p>10ರ ಸುಮಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಶಿಡ್ಲಘಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಸುಧಾಕರ್ ಮತ್ತು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇತ್ತ ಬಿಜೆಪಿ ಮುಖಂಡರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಆರೋಪಗಳ ಸುರಿಮಳೆಗೈದರು.</p><p>ಚಿಕ್ಕಬಳ್ಳಾಪುರ ರಾಜಕೀಯದಲ್ಲಿ ಈ ಪ್ರಕರಣವು ಗಂಭೀರ ತಿರುವು ಪಡೆಯುವ ಲಕ್ಷಣಗಳೂ ಇವೆ. </p><p><strong>ಪೊಲೀಸರ ವಿರುದ್ಧ ಬಿಜೆಪಿ ಆರೋಪ</strong></p><p>ಮೃತರ ಪತ್ನಿ ದೂರು ನೀಡುವಾಗ ಪೊಲೀಸರು ಸುಧಾಕರ್ ಹೆಸರನ್ನು ಸೇರಿಸುವಂತೆ ಒತ್ತಡ ಹೇರಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಸಂಸದ ಡಾ.ಕೆ.ಸುಧಾಕರ್ ಅವರೇ ಗ್ರಾಮಾಂತರ ಠಾಣೆ ಪಿಎಸ್ಐ ವಿರುದ್ಧ ಈ ಆರೋಪ ಮಾಡಿದ್ದಾರೆ. </p><p><strong>ಪ್ರಾಧಿಕಾರದ ಮಾಜಿ ಅಧ್ಯಕ್ಷರ ಅಳಿಯ ನಾಗೇಶ್</strong></p><p>ಪ್ರಕರಣದಲ್ಲಿ ಚಿಕ್ಕಕಾಡಿಗೇನಹಳ್ಳಿ ನಾಗೇಶ್ ಎರಡನೇ ಆರೋಪಿ. ಮೃತರ ಪತ್ನಿ ನೀಡಿರುವ ದೂರಿನಲ್ಲಿ ನಾಗೇಶ್ ಪಾತ್ರದ ಬಗ್ಗೆ ವಿಸ್ತಾರವಾಗಿ ಉಲ್ಲೇಖಿಸಿದ್ದಾರೆ. ನಾಗೇಶ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರೂ ಆದ ಬಿಜೆಪಿ ಮುಖಂಡ ಕೃಷ್ಣಮೂರ್ತಿ ಅಳಿಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>