<p><strong>ಚಿಕ್ಕಬಳ್ಳಾಪುರ</strong>: ಕೈಗಾರಿಕೆಗಳಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಮಿ ಸ್ವಾಧೀನ ವಿರೋಧಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ 45 ದಿನ ತಲುಪಿದೆ.</p><p>ಬುಧವಾರ ಜಿಲ್ಲಾಡಳಿತ ಭವನಕ್ಕೆ ರಾಸುಗಳನ್ನು ನುಗ್ಗಿಸಲು ರೈತರು ಮುಂದಾದರು. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ, ಜಟಾಪಟಿ ನಡೆಯಿತು.</p><p>ರೈತ ಭರತ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆ ದಾಖಲಿಸಲಾಗಿದೆ. ಬ್ಯಾರಿಕೇಡ್ ಕಿತ್ತು ಎಸೆದು ಜಿಲ್ಲಾಡಳಿತ ಭವನ ಪ್ರವೇಶಿಸಲು ರೈತರು ಮುಂದಾದರು. </p><p>ಭವನದ ಮುಂಭಾಗದ ಗೇಟ್ ಮುಚ್ಚಲಾಗಿದೆ.</p><p>ಜಿಲ್ಲಾಡಳಿತ ಭವನದೊಳಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ಅವರು ಸಭೆಗೆ ಬರುವ ಸಮಯದಲ್ಲಿಯೇ ಇಷ್ಟೆಲ್ಲಾ ಬೆಳವಣಿಗೆಗಳು ನಡೆದಿವೆ.</p><p>ಎಸ್ಪಿ, ಎಎಸ್ ಪಿ, ಡಿವೈಎಸ್ ಪಿ ಸೇರಿದಂತೆ ಅಪಾರ ಸಂಖ್ಯೆಯ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. </p><p>45 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸ್ಥಳಕ್ಕೆ ಭೇಟಿ ನೀಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. </p><p>ಕೆಡಿಪಿ ಸಭೆ ನಡೆಸಿ ಸಚಿವರು ಹೊರ ಬರುವುದನ್ನು ರೈತರು ಕಾಯುತ್ತಿದ್ದು ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಕೈಗಾರಿಕೆಗಳಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಮಿ ಸ್ವಾಧೀನ ವಿರೋಧಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ 45 ದಿನ ತಲುಪಿದೆ.</p><p>ಬುಧವಾರ ಜಿಲ್ಲಾಡಳಿತ ಭವನಕ್ಕೆ ರಾಸುಗಳನ್ನು ನುಗ್ಗಿಸಲು ರೈತರು ಮುಂದಾದರು. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ, ಜಟಾಪಟಿ ನಡೆಯಿತು.</p><p>ರೈತ ಭರತ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆ ದಾಖಲಿಸಲಾಗಿದೆ. ಬ್ಯಾರಿಕೇಡ್ ಕಿತ್ತು ಎಸೆದು ಜಿಲ್ಲಾಡಳಿತ ಭವನ ಪ್ರವೇಶಿಸಲು ರೈತರು ಮುಂದಾದರು. </p><p>ಭವನದ ಮುಂಭಾಗದ ಗೇಟ್ ಮುಚ್ಚಲಾಗಿದೆ.</p><p>ಜಿಲ್ಲಾಡಳಿತ ಭವನದೊಳಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ಅವರು ಸಭೆಗೆ ಬರುವ ಸಮಯದಲ್ಲಿಯೇ ಇಷ್ಟೆಲ್ಲಾ ಬೆಳವಣಿಗೆಗಳು ನಡೆದಿವೆ.</p><p>ಎಸ್ಪಿ, ಎಎಸ್ ಪಿ, ಡಿವೈಎಸ್ ಪಿ ಸೇರಿದಂತೆ ಅಪಾರ ಸಂಖ್ಯೆಯ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. </p><p>45 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸ್ಥಳಕ್ಕೆ ಭೇಟಿ ನೀಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. </p><p>ಕೆಡಿಪಿ ಸಭೆ ನಡೆಸಿ ಸಚಿವರು ಹೊರ ಬರುವುದನ್ನು ರೈತರು ಕಾಯುತ್ತಿದ್ದು ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>