<p><strong>ಚಿಕ್ಕಬಳ್ಳಾಪುರ</strong>: ರಸಗೊಬ್ಬರ, ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಬೇಕು. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಗುರುವಾರ ಪ್ರತಿಭಟನೆ ನಡೆಯಿತು.</p>.<p>ರೈತರು ತಮಗೆ ಅಗತ್ಯವಾದ ರಸಗೊಬ್ಬರವನ್ನು ಕೇಳಿದಾಗ ವ್ಯಾಪಾರಿಗಳು ಆ ಗೊಬ್ಬರವನ್ನು ನೀಡಬೇಕು. ಆದರೆ ಅದಕ್ಕೆ ಬದಲಾಗಿ ಬೇರೆ ಗೊಬ್ಬರ ನೀಡುತ್ತಿದ್ದಾರೆ. ಜೊತೆಗೆ ಕೀಟನಾಶಕಗಳನ್ನು ಒತ್ತಾಯ ಮಾಡಿ ನೀಡುತ್ತಿದ್ದಾರೆ. ಇದು ನಿಲ್ಲಬೇಕು. ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪರಿಕರಗಳನ್ನು ಹಂಚಿಕೆ ಮಾಡಬೇಕು</p>.<p>ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ರೈತರು ದೇಶದ ಬೆನ್ನೆಲುಬು ಎಂದು ರಾಜಕೀಯ ಪಕ್ಷಗಳು ಮತ್ತು ನಾಯಕರು ಚುನಾವಣೆ ಪ್ರಚಾರದಲ್ಲಿ ಹೇಳುವರು. ಆದರೆ ಚುನಾವಣೆ ನಂತರ ರೈತರನ್ನು ನಿರ್ಲಕ್ಷಿಸುವರು.</p>.<p>ರಸಗೊಬ್ಬರ ಬೆಲೆ ಹೆಚ್ಚಳದಿಂದ ತೊಂದರೆಯಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ದಿನ ಬಳಕೆ ವಸ್ತುಗಳು ಕೂಡ ಬೆಲೆಗಳೂ ಹೆಚ್ಚಿವೆ. ಜನಸಾಮಾನ್ಯರ ಬದುಕು ಕಷ್ಟವಾಗಿದೆ ಎಂದು ದೂರಿದರು.</p>.<p>ಕೆಪಿಆರ್ಎಸ್ ಜಿಲ್ಲಾ ಗೌರವಾಧ್ಯಕ್ಷ ಬಿ.ಎನ್. ಮುನಿಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಚನ್ನರಾಯಪ್ಪ, ಪದಾಧಿಕಾರಿಗಳಾದ ಡಿ.ಟಿ. ಮುನಿಸ್ವಾಮಿ, ಡಿ.ಎನ್ ಬಾಬು, ನರಸಿಂಹರೆಡ್ಡಿ, ಎಂ. ರಾಮಕೃಷ್ಣಪ್ಪ, ವೆಂಕಟರಮಣಪ್ಪ, ರಮಣ, ಕೃಷ್ಣಪ್ಪ, ಶ್ರೀನಿವಾಸ ರೆಡ್ಡಿ ನಾರಾಯಣಪ್ಪ, ಕೇಶವಾರದ ಶ್ರೀನಿವಾಸ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-16-2137899532</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ರಸಗೊಬ್ಬರ, ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಬೇಕು. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಗುರುವಾರ ಪ್ರತಿಭಟನೆ ನಡೆಯಿತು.</p>.<p>ರೈತರು ತಮಗೆ ಅಗತ್ಯವಾದ ರಸಗೊಬ್ಬರವನ್ನು ಕೇಳಿದಾಗ ವ್ಯಾಪಾರಿಗಳು ಆ ಗೊಬ್ಬರವನ್ನು ನೀಡಬೇಕು. ಆದರೆ ಅದಕ್ಕೆ ಬದಲಾಗಿ ಬೇರೆ ಗೊಬ್ಬರ ನೀಡುತ್ತಿದ್ದಾರೆ. ಜೊತೆಗೆ ಕೀಟನಾಶಕಗಳನ್ನು ಒತ್ತಾಯ ಮಾಡಿ ನೀಡುತ್ತಿದ್ದಾರೆ. ಇದು ನಿಲ್ಲಬೇಕು. ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪರಿಕರಗಳನ್ನು ಹಂಚಿಕೆ ಮಾಡಬೇಕು</p>.<p>ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ರೈತರು ದೇಶದ ಬೆನ್ನೆಲುಬು ಎಂದು ರಾಜಕೀಯ ಪಕ್ಷಗಳು ಮತ್ತು ನಾಯಕರು ಚುನಾವಣೆ ಪ್ರಚಾರದಲ್ಲಿ ಹೇಳುವರು. ಆದರೆ ಚುನಾವಣೆ ನಂತರ ರೈತರನ್ನು ನಿರ್ಲಕ್ಷಿಸುವರು.</p>.<p>ರಸಗೊಬ್ಬರ ಬೆಲೆ ಹೆಚ್ಚಳದಿಂದ ತೊಂದರೆಯಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ದಿನ ಬಳಕೆ ವಸ್ತುಗಳು ಕೂಡ ಬೆಲೆಗಳೂ ಹೆಚ್ಚಿವೆ. ಜನಸಾಮಾನ್ಯರ ಬದುಕು ಕಷ್ಟವಾಗಿದೆ ಎಂದು ದೂರಿದರು.</p>.<p>ಕೆಪಿಆರ್ಎಸ್ ಜಿಲ್ಲಾ ಗೌರವಾಧ್ಯಕ್ಷ ಬಿ.ಎನ್. ಮುನಿಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಚನ್ನರಾಯಪ್ಪ, ಪದಾಧಿಕಾರಿಗಳಾದ ಡಿ.ಟಿ. ಮುನಿಸ್ವಾಮಿ, ಡಿ.ಎನ್ ಬಾಬು, ನರಸಿಂಹರೆಡ್ಡಿ, ಎಂ. ರಾಮಕೃಷ್ಣಪ್ಪ, ವೆಂಕಟರಮಣಪ್ಪ, ರಮಣ, ಕೃಷ್ಣಪ್ಪ, ಶ್ರೀನಿವಾಸ ರೆಡ್ಡಿ ನಾರಾಯಣಪ್ಪ, ಕೇಶವಾರದ ಶ್ರೀನಿವಾಸ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-16-2137899532</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>