<p>ಚಿಕ್ಕಬಳ್ಳಾಪುರ: ಪಶು ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ ಉಚಿತ ಸಹಾಯವಾಣಿ 1962ಕ್ಕೆ ರೈತರು ಕರೆ ಮಾಡಿ ಮನೆ ಬಾಗಿಲಿಗೆ ಪಶು ಆರೋಗ್ಯ ಸೇವೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಮನವಿ ಮಾಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಮತ್ತು ಸಂಚಾರಿ ಪಶುಚಿಕಿತ್ಸಾ ವಾಹನ ಘಟಕಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.</p>.<p>ಜಾನುವಾರುಗಳ ಹೆರಿಗೆ ಸಮಸ್ಯೆ, ಹೊಟ್ಟೆ ಉಬ್ಬರ, ಕಾಲುಮುರಿತ, ವಿಷ ಪ್ರಾಶನ, ಮೈ ಹೊರ ಬೀಳುವುದು ಸೇರಿದಂತೆ ಆರೋಗ್ಯ ಸಮಸ್ಯೆಗಳಿಗೆ ರೈತರು ಉಚಿತ ಸಹಾಯವಾಣಿಗೆ ಕರೆ ಮಾಡಿ ಚಿಕಿತ್ಸೆ ಪಡೆಯಬಹುದು. ತಜ್ಞ ವೈದ್ಯರು ಮನೆ ಬಾಗಿಲಿಗೆ ಸಂಚಾರಿ ವಾಹನದಲ್ಲಿ ಬಂದು ಚಿಕಿತ್ಸೆ ನೀಡಲಿದ್ದಾರೆ. ಈ ಕಾರ್ಯಕ್ಕಾಗಿ 8 ತಾಲ್ಲೂಕುಗಳಲ್ಲಿ 8 ಸಂಚಾರಿ ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದರು.</p>.<p>ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಹಂತದ ಲಸಿಕಾ ಅಭಿಯಾನ ಜಿಲ್ಲೆಯಲ್ಲಿ ಏ.23 ರಿಂದ ಮೇ 22ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿನ ದನ, ಎಮ್ಮೆಗಳಿಗೆ ರೈತರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕಾಲುಬಾಯಿ ರೋಗ ತಡೆಗಟ್ಟಬೇಕು ಎಂದು ಮನವಿ ಮಾಡಿದರು.</p>.<p>ಕಾಲುಬಾಯಿ ರೋಗವು ಸಾಂಕ್ರಾಮಿಕ ರೋಗವಾಗಿದೆ. ಬೇಗನೆ ಒಂದು ರಾಸುವಿನಿಂದ ಇನ್ನೊಂದಕ್ಕೆ ಗಾಳಿಯ ಮೂಲಕ ಹರಡುತ್ತದೆ. ಆದ್ದರಿಂದ ಪ್ರತಿ 6 ತಿಂಗಳಿಗೆ ಒಮ್ಮೆ ಲಸಿಕೆಯನ್ನು ಅನಿವಾರ್ಯವಾಗಿ ಹಾಕಲಾಗುತ್ತಿದೆ. ಈ ಬಗ್ಗೆ ಯಾವ ದಿನಾಂಕ, ಯಾವ ಗ್ರಾಮಗಳಿಗೆ ಲಸಿಕಾಕಾರರು ಬರಲಿದ್ದಾರೆ ಎಂಬುದನ್ನು ಡಂಗೂರು ಮೂಲಕ ಪ್ರಚಾರ ಮಾಡಲು ಹಾಗೂ ಹಾಲಿನ ಡೇರಿಗಳಲ್ಲಿ ರೈತರನ್ನು ಸಂಪರ್ಕಿಸಿ ಜಾಗೃತಿ ಮೂಡಿಸಲು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ರಂಗಪ್ಪ, ತಾಲ್ಲೂಕು ಪಶು ವೈದ್ಯಾಧಿಕಾರಿಗಳು, ಸಹಾಯಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-16-2105053990</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಪಶು ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ ಉಚಿತ ಸಹಾಯವಾಣಿ 1962ಕ್ಕೆ ರೈತರು ಕರೆ ಮಾಡಿ ಮನೆ ಬಾಗಿಲಿಗೆ ಪಶು ಆರೋಗ್ಯ ಸೇವೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಮನವಿ ಮಾಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಮತ್ತು ಸಂಚಾರಿ ಪಶುಚಿಕಿತ್ಸಾ ವಾಹನ ಘಟಕಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.</p>.<p>ಜಾನುವಾರುಗಳ ಹೆರಿಗೆ ಸಮಸ್ಯೆ, ಹೊಟ್ಟೆ ಉಬ್ಬರ, ಕಾಲುಮುರಿತ, ವಿಷ ಪ್ರಾಶನ, ಮೈ ಹೊರ ಬೀಳುವುದು ಸೇರಿದಂತೆ ಆರೋಗ್ಯ ಸಮಸ್ಯೆಗಳಿಗೆ ರೈತರು ಉಚಿತ ಸಹಾಯವಾಣಿಗೆ ಕರೆ ಮಾಡಿ ಚಿಕಿತ್ಸೆ ಪಡೆಯಬಹುದು. ತಜ್ಞ ವೈದ್ಯರು ಮನೆ ಬಾಗಿಲಿಗೆ ಸಂಚಾರಿ ವಾಹನದಲ್ಲಿ ಬಂದು ಚಿಕಿತ್ಸೆ ನೀಡಲಿದ್ದಾರೆ. ಈ ಕಾರ್ಯಕ್ಕಾಗಿ 8 ತಾಲ್ಲೂಕುಗಳಲ್ಲಿ 8 ಸಂಚಾರಿ ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದರು.</p>.<p>ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಹಂತದ ಲಸಿಕಾ ಅಭಿಯಾನ ಜಿಲ್ಲೆಯಲ್ಲಿ ಏ.23 ರಿಂದ ಮೇ 22ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿನ ದನ, ಎಮ್ಮೆಗಳಿಗೆ ರೈತರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕಾಲುಬಾಯಿ ರೋಗ ತಡೆಗಟ್ಟಬೇಕು ಎಂದು ಮನವಿ ಮಾಡಿದರು.</p>.<p>ಕಾಲುಬಾಯಿ ರೋಗವು ಸಾಂಕ್ರಾಮಿಕ ರೋಗವಾಗಿದೆ. ಬೇಗನೆ ಒಂದು ರಾಸುವಿನಿಂದ ಇನ್ನೊಂದಕ್ಕೆ ಗಾಳಿಯ ಮೂಲಕ ಹರಡುತ್ತದೆ. ಆದ್ದರಿಂದ ಪ್ರತಿ 6 ತಿಂಗಳಿಗೆ ಒಮ್ಮೆ ಲಸಿಕೆಯನ್ನು ಅನಿವಾರ್ಯವಾಗಿ ಹಾಕಲಾಗುತ್ತಿದೆ. ಈ ಬಗ್ಗೆ ಯಾವ ದಿನಾಂಕ, ಯಾವ ಗ್ರಾಮಗಳಿಗೆ ಲಸಿಕಾಕಾರರು ಬರಲಿದ್ದಾರೆ ಎಂಬುದನ್ನು ಡಂಗೂರು ಮೂಲಕ ಪ್ರಚಾರ ಮಾಡಲು ಹಾಗೂ ಹಾಲಿನ ಡೇರಿಗಳಲ್ಲಿ ರೈತರನ್ನು ಸಂಪರ್ಕಿಸಿ ಜಾಗೃತಿ ಮೂಡಿಸಲು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ರಂಗಪ್ಪ, ತಾಲ್ಲೂಕು ಪಶು ವೈದ್ಯಾಧಿಕಾರಿಗಳು, ಸಹಾಯಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-16-2105053990</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>