<p><strong>ಚಿಕ್ಕಬಳ್ಳಾಪುರ</strong>: ನಗರದ ಸರ್. ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 26 ಮತ್ತು 27 ರಂದು ಇಲಾಖೆಯಿಂದ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಎಂ. ಗಾಯತ್ರಿ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ತೋಟಗಾರಿಕೆ ಇಲಾಖೆ ಆಶ್ರಯದಲ್ಲಿ ಫಲಪುಷ್ಟ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಸಚಿವ ಡಾ. ಎಂ.ಸಿ. ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಪ್ರದರ್ಶನ ವೀಕ್ಷಿಸಲು ಉಚಿತ ಪ್ರವೇಶವಿದೆ ಎಂದು ಹೇಳಿದರು.</p>.<p>ಪ್ರಮುಖ ಆಕರ್ಷಣೆಗಳಾಗಿ ಹೂವುಗಳಿಂದ ಅಲಂಕರಿಸಿದ ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಬ್ಯಾಟ್ ಮತ್ತು ಬಾಲ್, ಸಾಲುಮರದ ತಿಮ್ಮಕ್ಕ ಅವರ ಪ್ರತಿಮೆ, ತೋಟಗಾರಿಕೆ ಪಿತಾಮಹ ಎಂ.ಎಚ್ ಮರೀಗೌಡರ ಪ್ರತಿಮೆ, ಹಸು-ಕರು ಪ್ರತಿಮೆ, ಜಿಲ್ಲೆಯ ರೈತ ಮಹಿಳೆಯರಿಂದ ತಯಾರಿಸಲ್ಪಡುವ ಹೂವಿನ ಜೋಡಣೆ ಕಲಾಕೃತಿ, ಹೂವುಗಳಿಂದ ಅಲಂಕರಿಸಿದ ಆಧುನಿಕ ಮಹಿಳೆ ಕಲಾಕೃತಿ, ಮಾದರಿ ಕೈತೋಟ, ಹಣ್ಣು ತರಕಾರಿಗಳಲ್ಲಿ ವಿವಿಧ ಕಲಾಕೃತಿಗಳ ಕೆತ್ತನೆಯ ಪ್ರದರ್ಶನ ಇರಲಿದೆ ಎಂದು ಹೇಳಿದರು.</p>.<p>ಫಲಪುಷ್ಪ ಪ್ರದರ್ಶನದಲ್ಲಿ ಹೂಗಳ ಅಲಂಕಾರಕ್ಕೆ ಜಿಲ್ಲೆಯ 20 ಮಹಿಳೆಯರಿಗೆ ಎರಡು ದಿನ ತರಬೇತಿ ಕೊಡಿಸಲಾಗಿದೆ. ಇವರು ಸಿದ್ಧತೆಗಳನ್ನು ನಡೆಸುವರು. ಎರಡು ದಿನ ನಡೆಯುವ ಈ ಪ್ರದರ್ಶನಕ್ಕೆ ಒಟ್ಟು ₹9 ಲಕ್ಷ ವೆಚ್ಚವಾಗಲಿದೆ ಎಂದು ಹೇಳಿದರು.</p>.<p>ಜಿಯೊ ಟ್ಯಾಗ್ ಆಗಿರುವ ಜಿಲ್ಲೆಯ ಗುಲಾಬಿ ಈರುಳ್ಳಿ, ದೇವನಹಳ್ಳಿ ಚಕ್ಕೊತ್ತ ಮತ್ತು ನೀಲಿ ದ್ರಾಕ್ಷಿಯ ಪ್ರದರ್ಶನ ಸಹ ಮಾಡಲಾಗುವುದು. ಹೊಸ ಹೊಸ ಬಗೆಯ ಹೂ ಬೇಸಾಯವು ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಪುಷ್ಪಗಳು ಹಾಗೂ ಔಷಧೀಯ ಸಸಿಗಳ ಪ್ರದರ್ಶನವೂ ಇಲ್ಲಿ ಇರಲಿದೆ. ಸಸ್ಯ ಸಂತೆ ಹೆಸರಿನಡಿ ತೋಟಗಾರಿಕೆ ಇಲಾಖೆಯಿಂದ ಸಸಿಗಳ ಮಾರಾಟ ಸಹ ನಡೆಯಲಿದೆ ಎಂದು ಮಾಹಿತಿ ನೀಡಿದರು.</p>.<p>ಇಲಾಖಾ ಯೋಜನೆಗಳ ಮಾಹಿತಿ ಪ್ರದರ್ಶನವೂ ನಡೆಯುತ್ತದೆ. ಜಿಲ್ಲೆಯ ರೈತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರದರ್ಶನಕ್ಕೆ ಭೇಟಿ ನೀಡಬೇಕು ಎಂದು ಕೋರಿದರು.</p>.<p>ತೋಟಗಾರಿಕೆ ಇಲಾಖೆ ಅಧಿಕಾರಿ ಸತೀಶ್ ಬಡಿಗೇರ್ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ನಗರದ ಸರ್. ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 26 ಮತ್ತು 27 ರಂದು ಇಲಾಖೆಯಿಂದ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಎಂ. ಗಾಯತ್ರಿ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ತೋಟಗಾರಿಕೆ ಇಲಾಖೆ ಆಶ್ರಯದಲ್ಲಿ ಫಲಪುಷ್ಟ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಸಚಿವ ಡಾ. ಎಂ.ಸಿ. ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಪ್ರದರ್ಶನ ವೀಕ್ಷಿಸಲು ಉಚಿತ ಪ್ರವೇಶವಿದೆ ಎಂದು ಹೇಳಿದರು.</p>.<p>ಪ್ರಮುಖ ಆಕರ್ಷಣೆಗಳಾಗಿ ಹೂವುಗಳಿಂದ ಅಲಂಕರಿಸಿದ ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಬ್ಯಾಟ್ ಮತ್ತು ಬಾಲ್, ಸಾಲುಮರದ ತಿಮ್ಮಕ್ಕ ಅವರ ಪ್ರತಿಮೆ, ತೋಟಗಾರಿಕೆ ಪಿತಾಮಹ ಎಂ.ಎಚ್ ಮರೀಗೌಡರ ಪ್ರತಿಮೆ, ಹಸು-ಕರು ಪ್ರತಿಮೆ, ಜಿಲ್ಲೆಯ ರೈತ ಮಹಿಳೆಯರಿಂದ ತಯಾರಿಸಲ್ಪಡುವ ಹೂವಿನ ಜೋಡಣೆ ಕಲಾಕೃತಿ, ಹೂವುಗಳಿಂದ ಅಲಂಕರಿಸಿದ ಆಧುನಿಕ ಮಹಿಳೆ ಕಲಾಕೃತಿ, ಮಾದರಿ ಕೈತೋಟ, ಹಣ್ಣು ತರಕಾರಿಗಳಲ್ಲಿ ವಿವಿಧ ಕಲಾಕೃತಿಗಳ ಕೆತ್ತನೆಯ ಪ್ರದರ್ಶನ ಇರಲಿದೆ ಎಂದು ಹೇಳಿದರು.</p>.<p>ಫಲಪುಷ್ಪ ಪ್ರದರ್ಶನದಲ್ಲಿ ಹೂಗಳ ಅಲಂಕಾರಕ್ಕೆ ಜಿಲ್ಲೆಯ 20 ಮಹಿಳೆಯರಿಗೆ ಎರಡು ದಿನ ತರಬೇತಿ ಕೊಡಿಸಲಾಗಿದೆ. ಇವರು ಸಿದ್ಧತೆಗಳನ್ನು ನಡೆಸುವರು. ಎರಡು ದಿನ ನಡೆಯುವ ಈ ಪ್ರದರ್ಶನಕ್ಕೆ ಒಟ್ಟು ₹9 ಲಕ್ಷ ವೆಚ್ಚವಾಗಲಿದೆ ಎಂದು ಹೇಳಿದರು.</p>.<p>ಜಿಯೊ ಟ್ಯಾಗ್ ಆಗಿರುವ ಜಿಲ್ಲೆಯ ಗುಲಾಬಿ ಈರುಳ್ಳಿ, ದೇವನಹಳ್ಳಿ ಚಕ್ಕೊತ್ತ ಮತ್ತು ನೀಲಿ ದ್ರಾಕ್ಷಿಯ ಪ್ರದರ್ಶನ ಸಹ ಮಾಡಲಾಗುವುದು. ಹೊಸ ಹೊಸ ಬಗೆಯ ಹೂ ಬೇಸಾಯವು ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಪುಷ್ಪಗಳು ಹಾಗೂ ಔಷಧೀಯ ಸಸಿಗಳ ಪ್ರದರ್ಶನವೂ ಇಲ್ಲಿ ಇರಲಿದೆ. ಸಸ್ಯ ಸಂತೆ ಹೆಸರಿನಡಿ ತೋಟಗಾರಿಕೆ ಇಲಾಖೆಯಿಂದ ಸಸಿಗಳ ಮಾರಾಟ ಸಹ ನಡೆಯಲಿದೆ ಎಂದು ಮಾಹಿತಿ ನೀಡಿದರು.</p>.<p>ಇಲಾಖಾ ಯೋಜನೆಗಳ ಮಾಹಿತಿ ಪ್ರದರ್ಶನವೂ ನಡೆಯುತ್ತದೆ. ಜಿಲ್ಲೆಯ ರೈತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರದರ್ಶನಕ್ಕೆ ಭೇಟಿ ನೀಡಬೇಕು ಎಂದು ಕೋರಿದರು.</p>.<p>ತೋಟಗಾರಿಕೆ ಇಲಾಖೆ ಅಧಿಕಾರಿ ಸತೀಶ್ ಬಡಿಗೇರ್ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>