<p><strong>ಚಿಕ್ಕಬಳ್ಳಾಪುರ:</strong> ಕೇಂದ್ರ ಸರ್ಕಾರವು ಇಂಧನ ಬೆಲೆ ಹೆಚ್ಚಿಸಿರುವುದನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಯುವ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾಯಿತು. ಬಿಬಿ ರಸ್ತೆಯಲ್ಲಿ ರ್ಯಾಲಿ ನಡೆಸಿದ ಪಕ್ಷದ ಕಾರ್ಯಕರ್ತರು ಶಿಡ್ಲಘಟ್ಟ ವೃತ್ತದಲ್ಲಿ ಸಮಾವೇಶಗೊಂಡರು. ಮಾನವ ಸರಪಳಿ ನಿರ್ಮಿಸಿದರು.</p>.<p>ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ₹ 50 ಹೆಚ್ಚಿಸುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಖಂಡಿಸುತ್ತದೆ. ಈ ಬೆಲೆ ಏರಿಕೆಗಳು ಈಗಾಗಲೇ ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಸಾಮಾನ್ಯ ಜನರು, ರೈತರು, ದಿನಗೂಲಿ ಕಾರ್ಮಿಕರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಭಾರಿ ಹೊರೆಯಾಗಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕುಬೇರ್ ಅಚ್ಚು ಮಾತನಾಡಿ, ‘ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಬೆಲೆ ₹ 550 ಇತ್ತು. ಆದರೆ ಈಗ ಬೆಲೆ ಹೆಚ್ಚಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಹೊರೆಯೂ ಕೇಂದ್ರ ಸರ್ಕಾರದಿಂದಲೇ ಆಗುತ್ತಿದೆ ಎಂದರು.</p>.<p>ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಜನಾಕ್ರೋಶ ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ ಅವರು ಕೇಂದ್ರ ಬಿಜೆಪಿ ವಿರುದ್ಧ ಜನಾಕ್ರೋಶ ವ್ಯಕ್ತಪಡಿಸಬೇಕಾಗಿದೆ. ಬಿಜೆಪಿಯಲ್ಲಿ ನಾನೇ ದೊಡ್ಡ ನಾಯಕ ಎಂದು ವಿಜಯೇಂದ್ರ ಬಿಂಬಿಸಿಕೊಳ್ಳಬೇಕಾಗಿದೆ. ಆ ಕಾರಣದಿಂದ ಅವರ ತಂಡವು ಜನಾಕ್ರೋಶ ಸಭೆ ನಡೆಸುತ್ತಿದೆ. ಅವರ ಅಸ್ತಿತ್ವ ಉಳಿಸಿಕೊಳ್ಳಲು ಯಾತ್ರೆ ಮಾಡುತ್ತಿದ್ದಾರೆ ಎಂದರು.</p>.<p>ರಾಜ್ಯ ಕಾಂಗ್ರೆಸ್ ವಿರುದ್ಧ ಬೆರಳು ತೋರುವ ನೈತಿಕತೆಯೇ ಬಿಜೆಪಿಗೆ ಇಲ್ಲ. ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಸುಳ್ಳು ಹೇಳುತ್ತಿದ್ದರು. ಆದರೆ ಯಾವ ಯೋಜನೆಗಳೂ ನಿಲ್ಲದ ಕಾರಣ ಬಿಜೆಪಿಗೆ ದಿಕ್ಕು ತೋಚದಂತೆ ಆಗಿದೆ ಎಂದು ಟೀಕಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೇಶವರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವ ಭರಸವೆಗಳನ್ನೂ ಈಡೇರಿಸಿಲ್ಲ ಎಂದು ಕಿಡಿಕಾರಿದರು.</p>.<p>ರಾಜ್ಯ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ಅಡುಗೆ ಅನಿಲ ದರ ಹೆಚ್ಚು ಮಾಡುತ್ತದೆ. ನಾವು ನೀಡುತ್ತಿರುವ ಜಿಎಸ್ಟಿ ಪಾಲನ್ನೂ ಕೇಂದ್ರ ಸರ್ಕಾರವು ಸರಿಯಾಗಿ ನೀಡುತ್ತಿಲ್ಲ ಎಂದರು.</p>.<p>ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ರಮೇಶ್, ಜಿ.ಪಂ ಮಾಜಿ ಸದಸ್ಯ ಕೆ.ಎಂ.ಮುನೇಗೌಡ, ಯುವ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಕೇಂದ್ರ ಸರ್ಕಾರವು ಇಂಧನ ಬೆಲೆ ಹೆಚ್ಚಿಸಿರುವುದನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಯುವ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾಯಿತು. ಬಿಬಿ ರಸ್ತೆಯಲ್ಲಿ ರ್ಯಾಲಿ ನಡೆಸಿದ ಪಕ್ಷದ ಕಾರ್ಯಕರ್ತರು ಶಿಡ್ಲಘಟ್ಟ ವೃತ್ತದಲ್ಲಿ ಸಮಾವೇಶಗೊಂಡರು. ಮಾನವ ಸರಪಳಿ ನಿರ್ಮಿಸಿದರು.</p>.<p>ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ₹ 50 ಹೆಚ್ಚಿಸುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಖಂಡಿಸುತ್ತದೆ. ಈ ಬೆಲೆ ಏರಿಕೆಗಳು ಈಗಾಗಲೇ ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಸಾಮಾನ್ಯ ಜನರು, ರೈತರು, ದಿನಗೂಲಿ ಕಾರ್ಮಿಕರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಭಾರಿ ಹೊರೆಯಾಗಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕುಬೇರ್ ಅಚ್ಚು ಮಾತನಾಡಿ, ‘ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಬೆಲೆ ₹ 550 ಇತ್ತು. ಆದರೆ ಈಗ ಬೆಲೆ ಹೆಚ್ಚಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಹೊರೆಯೂ ಕೇಂದ್ರ ಸರ್ಕಾರದಿಂದಲೇ ಆಗುತ್ತಿದೆ ಎಂದರು.</p>.<p>ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಜನಾಕ್ರೋಶ ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ ಅವರು ಕೇಂದ್ರ ಬಿಜೆಪಿ ವಿರುದ್ಧ ಜನಾಕ್ರೋಶ ವ್ಯಕ್ತಪಡಿಸಬೇಕಾಗಿದೆ. ಬಿಜೆಪಿಯಲ್ಲಿ ನಾನೇ ದೊಡ್ಡ ನಾಯಕ ಎಂದು ವಿಜಯೇಂದ್ರ ಬಿಂಬಿಸಿಕೊಳ್ಳಬೇಕಾಗಿದೆ. ಆ ಕಾರಣದಿಂದ ಅವರ ತಂಡವು ಜನಾಕ್ರೋಶ ಸಭೆ ನಡೆಸುತ್ತಿದೆ. ಅವರ ಅಸ್ತಿತ್ವ ಉಳಿಸಿಕೊಳ್ಳಲು ಯಾತ್ರೆ ಮಾಡುತ್ತಿದ್ದಾರೆ ಎಂದರು.</p>.<p>ರಾಜ್ಯ ಕಾಂಗ್ರೆಸ್ ವಿರುದ್ಧ ಬೆರಳು ತೋರುವ ನೈತಿಕತೆಯೇ ಬಿಜೆಪಿಗೆ ಇಲ್ಲ. ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಸುಳ್ಳು ಹೇಳುತ್ತಿದ್ದರು. ಆದರೆ ಯಾವ ಯೋಜನೆಗಳೂ ನಿಲ್ಲದ ಕಾರಣ ಬಿಜೆಪಿಗೆ ದಿಕ್ಕು ತೋಚದಂತೆ ಆಗಿದೆ ಎಂದು ಟೀಕಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೇಶವರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವ ಭರಸವೆಗಳನ್ನೂ ಈಡೇರಿಸಿಲ್ಲ ಎಂದು ಕಿಡಿಕಾರಿದರು.</p>.<p>ರಾಜ್ಯ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ಅಡುಗೆ ಅನಿಲ ದರ ಹೆಚ್ಚು ಮಾಡುತ್ತದೆ. ನಾವು ನೀಡುತ್ತಿರುವ ಜಿಎಸ್ಟಿ ಪಾಲನ್ನೂ ಕೇಂದ್ರ ಸರ್ಕಾರವು ಸರಿಯಾಗಿ ನೀಡುತ್ತಿಲ್ಲ ಎಂದರು.</p>.<p>ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ರಮೇಶ್, ಜಿ.ಪಂ ಮಾಜಿ ಸದಸ್ಯ ಕೆ.ಎಂ.ಮುನೇಗೌಡ, ಯುವ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>