ಸಿಐಡಿ ತನಿಖೆ ಕೇಳಿರಲಿಲ್ಲ: ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಯಾರೂ ಕೇಳಿಲಿಲ್ಲ. ಆದರೆ, ಶಿವಮೊಗ್ಗದ ಹುಣಸೋಡು ದುರಂತಕ್ಕೆ ಸಂಬಂಧಿಸಿ ಇದುವರೆಗೆ ಯಾವುದೇ ತನಿಖೆಗೆ ನಡೆದಿಲ್ಲ. ಯಾವ ಅಧಿಕಾರಿಗಳನ್ನು ಅಮಾನತುಗೊಳಿಸಿಲ್ಲ. ಆದರೆ, ನಮ್ಮಲ್ಲಿ ಯಾರನ್ನು ರಕ್ಷಣೆ ಮಾಡೋ ಪ್ರಶ್ನೆಯೇ ಇಲ್ಲ. ಕಾನೂನಾತ್ಮಕವಾಗಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಉದ್ದೇಶದಿಂದ ಗೃಹ ಸಚಿವರೊಂದಿಗೆ ಚರ್ಚಿಸಿ ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಹೇಳಿದರು.