<p><strong>ಚಿಕ್ಕಬಳ್ಳಾಪುರ</strong>: ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮುನೇಗೌಡ ಟೀಕೆಗೆ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ‘ಡಾ.ಕೆ.ಸುಧಾಕರ್ ಶಾಸಕ ಮತ್ತು ಸಚಿವರಾಗಿದ್ದ ವೇಳೆ ಹಲವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದರು ಮುನೇಗೌಡ ಆರೋಪಿಸಿದ್ದಾರೆ. ನಮ್ಮ ನಾಯಕ ಸುಧಾಕರ್ ಅವರು ಈ ಕೆಲಸ ಮಾಡಿಸಿಲ್ಲ’ ಎಂದರು. ಕೆಲವು ಮುಖಂಡರು ವೈಯಕ್ತಿಕ ಕಾರಣದಿಂದ ಈ ಕೆಲಸ ಮಾಡಿಸಿರಬಹುದು. ನಮ್ಮ ನಾಯಕರು ಪ್ರಕರಣಗಳನ್ನು ದಾಖಲಿಸಿಲ್ಲ ಎಂದು ಹೇಳಿದರು.</p>.<p>ಪೆರೇಸಂದ್ರ ಕಾರ್ಯಕ್ರಮದಲ್ಲಿ ಡಾ.ಕೆ.ಸುಧಾಕರ್ ಅವರ ಬಗ್ಗೆ ಮುನೇಗೌಡ ಕೆಟ್ಟದಾಗಿ ಮಾತನಾಡಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 70 ವರ್ಷದಲ್ಲಿ ಆಗದ ಕೆಲಸಗಳನ್ನು 10 ವರ್ಷದಲ್ಲಿ ಸುಧಾಕರ್ ಅವರು ಮಾಡಿಸಿದ್ದಾರೆ ಎಂದರು.</p>.<p>ವೈದ್ಯಕೀಯ ಶಿಕ್ಷಣ ಕಾಲೇಜು, ಪ್ರತಿ ಹೋಬಳಿ ಕೇಂದ್ರದಲ್ಲಿ ಉತ್ತಮ ಆಸ್ಪತ್ರೆ, ಗೌರಿಬಿದನೂರು ರಸ್ತೆ ಅಭಿವೃದ್ಧಿ ಸೇರಿದಂತೆ ಸುಮಾರು ₹ 5 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇದು ಮುನೇಗೌಡ ಅವರಿಗೆ ಗೊತ್ತಿಲ್ಲವೇ ಎಂದರು.</p>.<p>ಬಚ್ಚೇಗೌಡ ಅವರು ಶಾಸಕರಾಗಿದ್ದ ವೇಳೆ ಇವರನ್ನು ಜಿ.ಪಂ ಅಧ್ಯಕ್ಷರನ್ನಾಗಿ ಮಾಡಿದರು. ಮುನೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ತಕ್ಷಣ ಬಚ್ಚೇಗೌಡರ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದರು. ಆದರೆ ಈಗ ಮತ್ತೆ ಅವರ ಕಾಲು ಹಿಡಿದಿದ್ದಾರೆ ಎಂದರು.</p>.<p>ಪ್ರದೀಪ್ ಈಶ್ವರ್ಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಸೇರಿದರು. ಬಿಜೆಪಿಗೆ ಬಂದು ನಮ್ಮಲ್ಲಿಯೂ ಎರಡು ಬಣಗಳನ್ನು ಮಾಡಿದರು. ಈಗ ಕಾಂಗ್ರೆಸ್ಗೆ ಕಾಲಿಟ್ಟ ಸ್ವಲ್ಪ ದಿನದಲ್ಲಿಯೇ ಅಲ್ಲಿಯೂ ಎರಡು ಬಣ ಮಾಡಿದ್ದಾರೆ ಎಂದು ಹೇಳಿದರು.</p>.<p>ಮುನೇಗೌಡ ದಿಬ್ಬೂರು ವಿಎಸ್ಎಸ್ಎನ್ ಅಧ್ಯಕ್ಷರಾಗಿದ್ದಾರೆ. ಕಚೇರಿಯ ಬೀಗ ಮುರಿದು ತಮಗೆ ಬೇಕಾದ ರೀತಿಯಲ್ಲಿ ರೆಜುಲೂಷನ್ ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ ನಾವು ದೂರು ನೀಡಿದರೆ ಗ್ರಾಮಾಂತರ ಠಾಣೆಯ ಪಿಎಸ್ಐ ಪ್ರಕರಣ ದಾಖಲಿಸಲಿಲ್ಲ. ನಾವು ಮೇಲಧಿಕಾರಿಗಳ ಬಳಿಗೆ ಹೋದ ನಂತರ ದೂರು ಪಡೆದರು ಎಂದು ಹೇಳಿದರು.</p>.<p>ಮುನೇಗೌಡ ಯಾವ ಪಕ್ಷಕ್ಕೆ ಹೋದರೂ ಆ ಪಕ್ಷದ ಅಭ್ಯರ್ಥಿಗಳು ಸೋಲುತ್ತಾರೆ. ಪ್ರದೀಪ್ ಈಶ್ವರ್ ಜೊತೆಯಲ್ಲಿಯೂ ಹೆಚ್ಚು ದಿನ ಇರುವುದಿಲ್ಲ ಎಂದರು. </p>.<p>ಟಿಎಪಿಸಿಎಂಎಸ್ ಅಧ್ಯಕ್ಷ ಆವುಲಕೊಂಡರಾಯಪ್ಪ ಮಾತನಾಡಿ, ಮುನೇಗೌಡ ತಮ್ಮ ವರ್ತನೆ ಬದಲಿಸಿಕೊಳ್ಳದಿದ್ದರೆ ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದರು.</p>.<p>ಮುಖಂಡರಾದ ಲಿಂಗಾರೆಡ್ಡಿ, ಕಾಳೇಗೌಡ, ಪ್ರಸಾದ್, ಸುದರ್ಶನ ರೆಡ್ಡಿ, ರಾಮಸ್ವಾಮಿ, ಮುರುಳಿ ಮತ್ತಿತರರು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮುನೇಗೌಡ ಟೀಕೆಗೆ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ‘ಡಾ.ಕೆ.ಸುಧಾಕರ್ ಶಾಸಕ ಮತ್ತು ಸಚಿವರಾಗಿದ್ದ ವೇಳೆ ಹಲವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದರು ಮುನೇಗೌಡ ಆರೋಪಿಸಿದ್ದಾರೆ. ನಮ್ಮ ನಾಯಕ ಸುಧಾಕರ್ ಅವರು ಈ ಕೆಲಸ ಮಾಡಿಸಿಲ್ಲ’ ಎಂದರು. ಕೆಲವು ಮುಖಂಡರು ವೈಯಕ್ತಿಕ ಕಾರಣದಿಂದ ಈ ಕೆಲಸ ಮಾಡಿಸಿರಬಹುದು. ನಮ್ಮ ನಾಯಕರು ಪ್ರಕರಣಗಳನ್ನು ದಾಖಲಿಸಿಲ್ಲ ಎಂದು ಹೇಳಿದರು.</p>.<p>ಪೆರೇಸಂದ್ರ ಕಾರ್ಯಕ್ರಮದಲ್ಲಿ ಡಾ.ಕೆ.ಸುಧಾಕರ್ ಅವರ ಬಗ್ಗೆ ಮುನೇಗೌಡ ಕೆಟ್ಟದಾಗಿ ಮಾತನಾಡಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 70 ವರ್ಷದಲ್ಲಿ ಆಗದ ಕೆಲಸಗಳನ್ನು 10 ವರ್ಷದಲ್ಲಿ ಸುಧಾಕರ್ ಅವರು ಮಾಡಿಸಿದ್ದಾರೆ ಎಂದರು.</p>.<p>ವೈದ್ಯಕೀಯ ಶಿಕ್ಷಣ ಕಾಲೇಜು, ಪ್ರತಿ ಹೋಬಳಿ ಕೇಂದ್ರದಲ್ಲಿ ಉತ್ತಮ ಆಸ್ಪತ್ರೆ, ಗೌರಿಬಿದನೂರು ರಸ್ತೆ ಅಭಿವೃದ್ಧಿ ಸೇರಿದಂತೆ ಸುಮಾರು ₹ 5 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇದು ಮುನೇಗೌಡ ಅವರಿಗೆ ಗೊತ್ತಿಲ್ಲವೇ ಎಂದರು.</p>.<p>ಬಚ್ಚೇಗೌಡ ಅವರು ಶಾಸಕರಾಗಿದ್ದ ವೇಳೆ ಇವರನ್ನು ಜಿ.ಪಂ ಅಧ್ಯಕ್ಷರನ್ನಾಗಿ ಮಾಡಿದರು. ಮುನೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ತಕ್ಷಣ ಬಚ್ಚೇಗೌಡರ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದರು. ಆದರೆ ಈಗ ಮತ್ತೆ ಅವರ ಕಾಲು ಹಿಡಿದಿದ್ದಾರೆ ಎಂದರು.</p>.<p>ಪ್ರದೀಪ್ ಈಶ್ವರ್ಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಸೇರಿದರು. ಬಿಜೆಪಿಗೆ ಬಂದು ನಮ್ಮಲ್ಲಿಯೂ ಎರಡು ಬಣಗಳನ್ನು ಮಾಡಿದರು. ಈಗ ಕಾಂಗ್ರೆಸ್ಗೆ ಕಾಲಿಟ್ಟ ಸ್ವಲ್ಪ ದಿನದಲ್ಲಿಯೇ ಅಲ್ಲಿಯೂ ಎರಡು ಬಣ ಮಾಡಿದ್ದಾರೆ ಎಂದು ಹೇಳಿದರು.</p>.<p>ಮುನೇಗೌಡ ದಿಬ್ಬೂರು ವಿಎಸ್ಎಸ್ಎನ್ ಅಧ್ಯಕ್ಷರಾಗಿದ್ದಾರೆ. ಕಚೇರಿಯ ಬೀಗ ಮುರಿದು ತಮಗೆ ಬೇಕಾದ ರೀತಿಯಲ್ಲಿ ರೆಜುಲೂಷನ್ ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ ನಾವು ದೂರು ನೀಡಿದರೆ ಗ್ರಾಮಾಂತರ ಠಾಣೆಯ ಪಿಎಸ್ಐ ಪ್ರಕರಣ ದಾಖಲಿಸಲಿಲ್ಲ. ನಾವು ಮೇಲಧಿಕಾರಿಗಳ ಬಳಿಗೆ ಹೋದ ನಂತರ ದೂರು ಪಡೆದರು ಎಂದು ಹೇಳಿದರು.</p>.<p>ಮುನೇಗೌಡ ಯಾವ ಪಕ್ಷಕ್ಕೆ ಹೋದರೂ ಆ ಪಕ್ಷದ ಅಭ್ಯರ್ಥಿಗಳು ಸೋಲುತ್ತಾರೆ. ಪ್ರದೀಪ್ ಈಶ್ವರ್ ಜೊತೆಯಲ್ಲಿಯೂ ಹೆಚ್ಚು ದಿನ ಇರುವುದಿಲ್ಲ ಎಂದರು. </p>.<p>ಟಿಎಪಿಸಿಎಂಎಸ್ ಅಧ್ಯಕ್ಷ ಆವುಲಕೊಂಡರಾಯಪ್ಪ ಮಾತನಾಡಿ, ಮುನೇಗೌಡ ತಮ್ಮ ವರ್ತನೆ ಬದಲಿಸಿಕೊಳ್ಳದಿದ್ದರೆ ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದರು.</p>.<p>ಮುಖಂಡರಾದ ಲಿಂಗಾರೆಡ್ಡಿ, ಕಾಳೇಗೌಡ, ಪ್ರಸಾದ್, ಸುದರ್ಶನ ರೆಡ್ಡಿ, ರಾಮಸ್ವಾಮಿ, ಮುರುಳಿ ಮತ್ತಿತರರು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>