<p><strong>ಚಿಕ್ಕಬಳ್ಳಾಪುರ:</strong> ಯುದ್ಧದಿಂದ ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಉಂಟಾಗಿರುವ ಅಸ್ಥಿರತೆಯು, ಜಿಲ್ಲೆಯಲ್ಲಿ ಗುಲಾಬಿ ಈರುಳ್ಳಿ ರಫ್ತು ವಹಿವಾಟಿನ ಮೇಲೆ ನೇರ ಪರಿಣಾಮ ಬೀರಿದೆ.</p>.<p>ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂದಾಜು ಐದು ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಈ ಗುಲಾಬಿ ಈರುಳ್ಳಿಯನ್ನು ಸ್ಥಳೀಯ ಬಳಕೆಗಿಂತಲೂ ರಫ್ತು ಉದ್ದೇಶಕ್ಕಾಗಿಯೇ ಬೆಳೆಯಲಾ ಗುತ್ತದೆ. ಬೆಂಗಳೂರು ಸುತ್ತಮುತ್ತ ಗುಲಾಬಿ ಈರುಳ್ಳಿ ಹೆಚ್ಚು ಬೆಳೆಯುವ ಕಾರಣ ‘ಬೆಂಗಳೂರು ಗುಲಾಬಿ ಈರುಳ್ಳಿ’ ಹೆಸರಿನಲ್ಲಿ ಇದು ಭೌಗೋಳಿಕ ಮಾನ್ಯತೆಯನ್ನು ಪಡೆದಿದೆ.</p>.<p>ಚಿಕ್ಕಬಳ್ಳಾಪುರ ಗುಲಾಬಿ ಈರುಳ್ಳಿ ಮಲೇಷ್ಯಾ, ಬಾಂಗ್ಲಾದೇಶ ಬಿಟ್ಟರೆ ಪಶ್ಚಿಮ ಏಷ್ಯಾ ದೇಶಗಳಿಗೆ ರಫ್ತಾಗುತ್ತದೆ. ಯುದ್ಧದಿಂದಾಗಿ ರಫ್ತು ಸಂಪೂರ್ಣವಾಗಿ ಸ್ಥಗಿತಗೊಂಡಿದೆ.</p>.<p>ಸ್ಥಳೀಯ ಮಾರುಕಟ್ಟೆಯಲ್ಲಿ ₹100 ರಿಂದ ₹150ಕ್ಕೆ ಮಾರಾಟವಾಗುತ್ತಿದ್ದಒಂದು ಕೆ.ಜಿ ಈರುಳ್ಳಿ ಬೆಲೆ, ಈಗ ₹8ರಿಂದ ₹10ಕ್ಕೆ ಕುಸಿದಿದೆ. 50 ಕೆ.ಜಿಯ ಮೂಟೆ ಗುಲಾಬಿ ಈರುಳ್ಳಿಯನ್ನು ₹300ರಿಂದ ₹400ಕ್ಕೂ ಖರೀದಿ ಮಾಡುವವರೂ ಇಲ್ಲದಂತಾಗಿದೆ. ಈ ಹಿಂದೆ ಮೂಟೆ ದರ ₹6 ಸಾವಿರದಿಂದ ₹8 ಸಾವಿರದವರೆಗೂ ಇತ್ತು.</p>.<p>ಔಷಧ ಗುಣಗಳಿಂದಾಗಿ ಗುಲಾಬಿ ಈರುಳ್ಳಿಗೆ ವಿದೇಶದಲ್ಲಿ ಭಾರಿ ಬೇಡಿಕೆ ಇದೆ. ಸ್ಥಳೀಯ ಮಾರುಕಟ್ಟೆಯಲ್ಲಿ ಗುಲಾಬಿ ಈರುಳ್ಳಿಯನ್ನು ಕೇಳುವವರು ಇಲ್ಲದಂತಾಗಿದೆ. ಮನೆಗೆ ಬಳಸುವುದಕ್ಕಿಂತ ಹೆಚ್ಚಾಗಿ ಹೋಟೆಲ್, ಮದುವೆ, ಶುಭ ಕಾರ್ಯಗಳ ಅಡುಗೆಯಲ್ಲಿ ಈ ಈರುಳ್ಳಿ ಬಳಕೆ ಹೆಚ್ಚು. ಅಡುಗೆ ಅನಿಲ ಕೊರತೆಯಿಂದ ಹೋಟೆಲ್ ಬಾಗಿಲು ಮುಚ್ಚಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲೂ ಬೇಡಿಕೆ ಕಳೆದುಕೊಂಡಿದೆ.</p>.<p>ಈ ಭಾಗದಲ್ಲಿ ಈರುಳ್ಳಿ ನಿರ್ಜಲೀಕರಣ ಮತ್ತು ಸಂಸ್ಕರಣಾ ಘಟಕಗಳು ಇಲ್ಲದ ಕಾರಣ ರೈತರು ದಾಸ್ತಾನು ಮಾಡಲು ಸಾಧ್ಯವಿಲ್ಲ. ಬೆಳೆದ ಬೆಳೆಯನ್ನು ಜಮೀನಿನಲ್ಲೇ ಬಿಡುವ ಸ್ಥಿತಿಯನ್ನು ರೈತರು ಎದುರಿಸುತ್ತಿದ್ದಾರೆ.</p>.<p>ಗುಲಾಬಿ ಈರುಳ್ಳಿ ಸ್ಥಳೀಯ ಮಾರುಕಟ್ಟೆಗಿಂತ ವಿದೇಶಿ ಮಾರುಕಟ್ಟೆಯನ್ನು ಹೆಚ್ಚಾಗಿ ಅವಲಂಬಿಸಿದೆ. ಸರ್ಕಾರ ಇದನ್ನು ಮೂರು ಅಥವಾ ನಾಲ್ಕು ತಿಂಗಳು ಸಂರಕ್ಷಿಸಿಡಲು ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು. ಕನಿಷ್ಠ ದರವನ್ನು ನಿಗದಿಪಡಿಸಬೇಕು ಎಂದು ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿ ಗಂಗಾಭವಾನಿ ಎಫ್.ಪಿ.ಒ ಅಧ್ಯಕ್ಷ ವಿಜಯಭಾವರೆಡ್ಡಿ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-51-1505043535</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಯುದ್ಧದಿಂದ ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಉಂಟಾಗಿರುವ ಅಸ್ಥಿರತೆಯು, ಜಿಲ್ಲೆಯಲ್ಲಿ ಗುಲಾಬಿ ಈರುಳ್ಳಿ ರಫ್ತು ವಹಿವಾಟಿನ ಮೇಲೆ ನೇರ ಪರಿಣಾಮ ಬೀರಿದೆ.</p>.<p>ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂದಾಜು ಐದು ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಈ ಗುಲಾಬಿ ಈರುಳ್ಳಿಯನ್ನು ಸ್ಥಳೀಯ ಬಳಕೆಗಿಂತಲೂ ರಫ್ತು ಉದ್ದೇಶಕ್ಕಾಗಿಯೇ ಬೆಳೆಯಲಾ ಗುತ್ತದೆ. ಬೆಂಗಳೂರು ಸುತ್ತಮುತ್ತ ಗುಲಾಬಿ ಈರುಳ್ಳಿ ಹೆಚ್ಚು ಬೆಳೆಯುವ ಕಾರಣ ‘ಬೆಂಗಳೂರು ಗುಲಾಬಿ ಈರುಳ್ಳಿ’ ಹೆಸರಿನಲ್ಲಿ ಇದು ಭೌಗೋಳಿಕ ಮಾನ್ಯತೆಯನ್ನು ಪಡೆದಿದೆ.</p>.<p>ಚಿಕ್ಕಬಳ್ಳಾಪುರ ಗುಲಾಬಿ ಈರುಳ್ಳಿ ಮಲೇಷ್ಯಾ, ಬಾಂಗ್ಲಾದೇಶ ಬಿಟ್ಟರೆ ಪಶ್ಚಿಮ ಏಷ್ಯಾ ದೇಶಗಳಿಗೆ ರಫ್ತಾಗುತ್ತದೆ. ಯುದ್ಧದಿಂದಾಗಿ ರಫ್ತು ಸಂಪೂರ್ಣವಾಗಿ ಸ್ಥಗಿತಗೊಂಡಿದೆ.</p>.<p>ಸ್ಥಳೀಯ ಮಾರುಕಟ್ಟೆಯಲ್ಲಿ ₹100 ರಿಂದ ₹150ಕ್ಕೆ ಮಾರಾಟವಾಗುತ್ತಿದ್ದಒಂದು ಕೆ.ಜಿ ಈರುಳ್ಳಿ ಬೆಲೆ, ಈಗ ₹8ರಿಂದ ₹10ಕ್ಕೆ ಕುಸಿದಿದೆ. 50 ಕೆ.ಜಿಯ ಮೂಟೆ ಗುಲಾಬಿ ಈರುಳ್ಳಿಯನ್ನು ₹300ರಿಂದ ₹400ಕ್ಕೂ ಖರೀದಿ ಮಾಡುವವರೂ ಇಲ್ಲದಂತಾಗಿದೆ. ಈ ಹಿಂದೆ ಮೂಟೆ ದರ ₹6 ಸಾವಿರದಿಂದ ₹8 ಸಾವಿರದವರೆಗೂ ಇತ್ತು.</p>.<p>ಔಷಧ ಗುಣಗಳಿಂದಾಗಿ ಗುಲಾಬಿ ಈರುಳ್ಳಿಗೆ ವಿದೇಶದಲ್ಲಿ ಭಾರಿ ಬೇಡಿಕೆ ಇದೆ. ಸ್ಥಳೀಯ ಮಾರುಕಟ್ಟೆಯಲ್ಲಿ ಗುಲಾಬಿ ಈರುಳ್ಳಿಯನ್ನು ಕೇಳುವವರು ಇಲ್ಲದಂತಾಗಿದೆ. ಮನೆಗೆ ಬಳಸುವುದಕ್ಕಿಂತ ಹೆಚ್ಚಾಗಿ ಹೋಟೆಲ್, ಮದುವೆ, ಶುಭ ಕಾರ್ಯಗಳ ಅಡುಗೆಯಲ್ಲಿ ಈ ಈರುಳ್ಳಿ ಬಳಕೆ ಹೆಚ್ಚು. ಅಡುಗೆ ಅನಿಲ ಕೊರತೆಯಿಂದ ಹೋಟೆಲ್ ಬಾಗಿಲು ಮುಚ್ಚಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲೂ ಬೇಡಿಕೆ ಕಳೆದುಕೊಂಡಿದೆ.</p>.<p>ಈ ಭಾಗದಲ್ಲಿ ಈರುಳ್ಳಿ ನಿರ್ಜಲೀಕರಣ ಮತ್ತು ಸಂಸ್ಕರಣಾ ಘಟಕಗಳು ಇಲ್ಲದ ಕಾರಣ ರೈತರು ದಾಸ್ತಾನು ಮಾಡಲು ಸಾಧ್ಯವಿಲ್ಲ. ಬೆಳೆದ ಬೆಳೆಯನ್ನು ಜಮೀನಿನಲ್ಲೇ ಬಿಡುವ ಸ್ಥಿತಿಯನ್ನು ರೈತರು ಎದುರಿಸುತ್ತಿದ್ದಾರೆ.</p>.<p>ಗುಲಾಬಿ ಈರುಳ್ಳಿ ಸ್ಥಳೀಯ ಮಾರುಕಟ್ಟೆಗಿಂತ ವಿದೇಶಿ ಮಾರುಕಟ್ಟೆಯನ್ನು ಹೆಚ್ಚಾಗಿ ಅವಲಂಬಿಸಿದೆ. ಸರ್ಕಾರ ಇದನ್ನು ಮೂರು ಅಥವಾ ನಾಲ್ಕು ತಿಂಗಳು ಸಂರಕ್ಷಿಸಿಡಲು ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು. ಕನಿಷ್ಠ ದರವನ್ನು ನಿಗದಿಪಡಿಸಬೇಕು ಎಂದು ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿ ಗಂಗಾಭವಾನಿ ಎಫ್.ಪಿ.ಒ ಅಧ್ಯಕ್ಷ ವಿಜಯಭಾವರೆಡ್ಡಿ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-51-1505043535</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>