<p>ಚೇಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ.ಜಿ.ವಿ.ಶ್ರೀರಾಮರೆಡ್ಡಿ ಅವರ 4ನೇ ವರ್ಷದ ಸ್ಮರಣೆ ಅಂಗವಾಗಿ ಬುಧವಾರ ಚೇಳೂರು ಪಟ್ಟಣದಲ್ಲಿ ಸಿಪಿಎಂ ಮುಖಂಡರು ಹಾಗೂ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸಿದರು.</p>.<p>ಎಂ.ಜಿ. ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀರಾಮರೆಡ್ಡಿ ಅವರ ಬೃಹತ್ ಬ್ಯಾನರ್ ಹಾಗೂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.</p>.<p>ಗೊಲ್ಲಪಲ್ಲಿ ಮಂಜುನಾಥ ಮಾತನಾಡಿ, ‘ಜಿ.ವಿ. ಶ್ರೀರಾಮರೆಡ್ಡಿ ಈ ಭಾಗದ ಶೋಷಿತರ ಮತ್ತು ರೈತರ ಧ್ವನಿಯಾಗಿದ್ದರು. ಅವರ ಹೋರಾಟದ ಹಾದಿ ನಮಗೆಲ್ಲರಿಗೂ ದಾರಿದೀಪ. ತಾಲ್ಲೂಕಿನ ಬಡವರ ಹಿತ ಕಾಯಲು ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವು ಸಾಗಬೇಕಿದೆ’ ಎಂದು ತಿಳಿಸಿದರು.</p>.<p>ಸಿಪಿಎಂ ತಾಲ್ಲೂಕು ಸಮಿತಿ ಕಾರ್ಯದರ್ಶಿ ಬೈರೆಡ್ಡಿ ಮಾತನಾಡಿ, ‘ಚೇಳೂರು ತಾಲ್ಲೂಕಾಗಿ ಘೋಷಣೆಯಾಗಿ ವರ್ಷಗಳು ಕಳೆದರೂ ಅಭಿವೃದ್ಧಿ ಮರೀಚಿಕೆಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಪದವಿ ಕಾಲೇಜು ಇಲ್ಲದೆ ಬಡ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶ್ರೀರಾಮರೆಡ್ಡಿ ಅವರ ಕನಸಿನಂತೆ ಈ ಸಮಸ್ಯೆಗಳ ವಿರುದ್ಧ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ಹಿರಿಯ ಕಲಾವಿದ ಸಿ.ಜೆ. ಶಿವಣ್ಣ ಮತ್ತು ಗೊಲ್ಲಪಲ್ಲಿ ಮಂಜುನಾಥ ಜಿ.ವಿ. ಶ್ರೀರಾಮರೆಡ್ಡಿ ಅವರ ಹೋರಾಟದ ಬದುಕಿನ ಕುರಿತಾದ ಕ್ರಾಂತಿಗೀತೆ ಹಾಡಿದರು.</p>.<p>ಸಿಪಿಎಂ ತಾಲ್ಲೂಕು ಸಮಿತಿ ಸದಸ್ಯ ಬೈರಾರೆಡ್ಡಿ ಎಂ.ಬಿ., ರಾಮಚಂದ್ರ ಬಿ., ಮುಖಂಡ ಜಹೀರ್ ಬೇಗ್, ಕೃಷ್ಣಪ್ಪ, ಉತ್ತಣ್ಣ, ನಾರಾಯಣಸ್ವಾಮಿ, ಫಾತಿಮಾ ಬಿ, ವೆಂಕಟರಮಣಪ್ಪ ವಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-16-613664547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೇಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ.ಜಿ.ವಿ.ಶ್ರೀರಾಮರೆಡ್ಡಿ ಅವರ 4ನೇ ವರ್ಷದ ಸ್ಮರಣೆ ಅಂಗವಾಗಿ ಬುಧವಾರ ಚೇಳೂರು ಪಟ್ಟಣದಲ್ಲಿ ಸಿಪಿಎಂ ಮುಖಂಡರು ಹಾಗೂ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸಿದರು.</p>.<p>ಎಂ.ಜಿ. ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀರಾಮರೆಡ್ಡಿ ಅವರ ಬೃಹತ್ ಬ್ಯಾನರ್ ಹಾಗೂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.</p>.<p>ಗೊಲ್ಲಪಲ್ಲಿ ಮಂಜುನಾಥ ಮಾತನಾಡಿ, ‘ಜಿ.ವಿ. ಶ್ರೀರಾಮರೆಡ್ಡಿ ಈ ಭಾಗದ ಶೋಷಿತರ ಮತ್ತು ರೈತರ ಧ್ವನಿಯಾಗಿದ್ದರು. ಅವರ ಹೋರಾಟದ ಹಾದಿ ನಮಗೆಲ್ಲರಿಗೂ ದಾರಿದೀಪ. ತಾಲ್ಲೂಕಿನ ಬಡವರ ಹಿತ ಕಾಯಲು ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವು ಸಾಗಬೇಕಿದೆ’ ಎಂದು ತಿಳಿಸಿದರು.</p>.<p>ಸಿಪಿಎಂ ತಾಲ್ಲೂಕು ಸಮಿತಿ ಕಾರ್ಯದರ್ಶಿ ಬೈರೆಡ್ಡಿ ಮಾತನಾಡಿ, ‘ಚೇಳೂರು ತಾಲ್ಲೂಕಾಗಿ ಘೋಷಣೆಯಾಗಿ ವರ್ಷಗಳು ಕಳೆದರೂ ಅಭಿವೃದ್ಧಿ ಮರೀಚಿಕೆಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಪದವಿ ಕಾಲೇಜು ಇಲ್ಲದೆ ಬಡ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶ್ರೀರಾಮರೆಡ್ಡಿ ಅವರ ಕನಸಿನಂತೆ ಈ ಸಮಸ್ಯೆಗಳ ವಿರುದ್ಧ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ಹಿರಿಯ ಕಲಾವಿದ ಸಿ.ಜೆ. ಶಿವಣ್ಣ ಮತ್ತು ಗೊಲ್ಲಪಲ್ಲಿ ಮಂಜುನಾಥ ಜಿ.ವಿ. ಶ್ರೀರಾಮರೆಡ್ಡಿ ಅವರ ಹೋರಾಟದ ಬದುಕಿನ ಕುರಿತಾದ ಕ್ರಾಂತಿಗೀತೆ ಹಾಡಿದರು.</p>.<p>ಸಿಪಿಎಂ ತಾಲ್ಲೂಕು ಸಮಿತಿ ಸದಸ್ಯ ಬೈರಾರೆಡ್ಡಿ ಎಂ.ಬಿ., ರಾಮಚಂದ್ರ ಬಿ., ಮುಖಂಡ ಜಹೀರ್ ಬೇಗ್, ಕೃಷ್ಣಪ್ಪ, ಉತ್ತಣ್ಣ, ನಾರಾಯಣಸ್ವಾಮಿ, ಫಾತಿಮಾ ಬಿ, ವೆಂಕಟರಮಣಪ್ಪ ವಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-16-613664547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>