<p><strong>ಚಿಕ್ಕಬಳ್ಳಾಪುರ:</strong> ಎಚ್.ಡಿ.ದೇವೇಗೌಡ ಅಭಿಮಾನಿಗಳ ಬಳಗದಿಂದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಜನ್ಮದಿನದ ಅಂಗವಾಗಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಸುಲ್ತಾನ್ಪೇಟೆಯ ಸಾಯಿ ದ್ವಾರಕಮಾಯಿ ವೃದ್ಧಾಶ್ರಮದ ವೃದ್ಧರಿಗೆ ಸೋಮವಾರ ಹಣ್ಣು ಹಾಗೂ ಬ್ರೆಡ್ ವಿತರಿಸಲಾಯಿತು.</p>.<p>ವಕೀಲ ಮಟಮಪ್ಪ ಆರ್. ಮಾತನಾಡಿ, ದೇವೇಗೌಡರು ದೀನ ದಲಿತರು, ರೈತರು ಹಾಗೂ ಕಾರ್ಮಿಕರ ಪರ ಸದಾ ಧ್ವನಿ ಎತ್ತಿದವರು. ಅವರಿಗೆ ನ್ಯಾಯ ಸಿಗುವಂತೆ ಹೋರಾಟ ನಡೆಸಿದ್ದಾರೆ ಎಂದರು.</p>.<p>ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟ ಜಾತಿ, ಪಂಗಡದ ಸಮುದಾಯದ ಅನೇಕರು ಜನರನ್ನು ರಾಜಕೀಯವಾಗಿ ಬೆಳೆಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಬೆಳೆದ ಹಲವರು ಇಂದಿಗೆ ವಿವಿಧ ಪಕ್ಷಗಳಲ್ಲಿ ಪ್ರಮುಖ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.</p>.<p>ಅಂದರ್ಲಹಳ್ಳಿ ಶ್ರೀನಿವಾಸ್,ಜಾತವಾರಹೊಸಹಳ್ಳಿ ಜಗದೀಶ್,ತಮ್ಮನಾಯಕನಹಳ್ಳಿ ಕರಗರೆಡ್ಡಿ, ಅನಕನೂರು ರಾಜಣ್ಣ, ಗಂಗಾನಾರಾಯಣ, ನಂಜಾಪುರ ರಾಜಣ್ಣ, ಮಹೇಶ್, ಅಮರ್,ಉಪ್ಪರಹಳ್ಳಿ ಅನಿಲ್ ಮತ್ತಿತರರು ಪಾಲ್ಗೊಂಡಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-16-1224225255</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಎಚ್.ಡಿ.ದೇವೇಗೌಡ ಅಭಿಮಾನಿಗಳ ಬಳಗದಿಂದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಜನ್ಮದಿನದ ಅಂಗವಾಗಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಸುಲ್ತಾನ್ಪೇಟೆಯ ಸಾಯಿ ದ್ವಾರಕಮಾಯಿ ವೃದ್ಧಾಶ್ರಮದ ವೃದ್ಧರಿಗೆ ಸೋಮವಾರ ಹಣ್ಣು ಹಾಗೂ ಬ್ರೆಡ್ ವಿತರಿಸಲಾಯಿತು.</p>.<p>ವಕೀಲ ಮಟಮಪ್ಪ ಆರ್. ಮಾತನಾಡಿ, ದೇವೇಗೌಡರು ದೀನ ದಲಿತರು, ರೈತರು ಹಾಗೂ ಕಾರ್ಮಿಕರ ಪರ ಸದಾ ಧ್ವನಿ ಎತ್ತಿದವರು. ಅವರಿಗೆ ನ್ಯಾಯ ಸಿಗುವಂತೆ ಹೋರಾಟ ನಡೆಸಿದ್ದಾರೆ ಎಂದರು.</p>.<p>ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟ ಜಾತಿ, ಪಂಗಡದ ಸಮುದಾಯದ ಅನೇಕರು ಜನರನ್ನು ರಾಜಕೀಯವಾಗಿ ಬೆಳೆಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಬೆಳೆದ ಹಲವರು ಇಂದಿಗೆ ವಿವಿಧ ಪಕ್ಷಗಳಲ್ಲಿ ಪ್ರಮುಖ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.</p>.<p>ಅಂದರ್ಲಹಳ್ಳಿ ಶ್ರೀನಿವಾಸ್,ಜಾತವಾರಹೊಸಹಳ್ಳಿ ಜಗದೀಶ್,ತಮ್ಮನಾಯಕನಹಳ್ಳಿ ಕರಗರೆಡ್ಡಿ, ಅನಕನೂರು ರಾಜಣ್ಣ, ಗಂಗಾನಾರಾಯಣ, ನಂಜಾಪುರ ರಾಜಣ್ಣ, ಮಹೇಶ್, ಅಮರ್,ಉಪ್ಪರಹಳ್ಳಿ ಅನಿಲ್ ಮತ್ತಿತರರು ಪಾಲ್ಗೊಂಡಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-16-1224225255</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>