<p>ಚಿಕ್ಕಬಳ್ಳಾಪುರ: ನಗರ ಹೊರವಲಯದ ಅಗಲಗುರ್ಕಿ ಕೈಗಾರಿಕಾ ಪ್ರದೇಶದ ಟೈಟಾನ್ ಕಂಪನಿಯ ಎಸ್ಟಿಪಿ ಘಟಕದಲ್ಲಿ ಸ್ವಚ್ಛತಾ ಕಾರ್ಯ ನಡೆಸುವಾಗ ಉಸಿರುಗಟ್ಟಿ ಮೂವರು ಕಾರ್ಮಿಕರು ಭಾನುವಾರ ಅಸ್ವಸ್ಥರಾಗಿದ್ದಾರೆ.</p>.<p>ಚಿಕ್ಕಬಳ್ಳಾಪುರ ತಾಲ್ಲೂಕಿನ ಕವರನಹಳ್ಳಿಯ ಜಯಪ್ರಕಾಶ್, ಶಿಡ್ಲಘಟ್ಟದ ಮದನ್ ಮತ್ತು ಗುಡಿಬಂಡೆಯ ನವೀನ್ ಅಸ್ವಸ್ಥ ಕಾರ್ಮಿಕರು. ಇವರು ಈ ಹಿಂದಿನಿಂದಲೂ ಈ ಘಟಕದ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದರು.</p>.<p>ಭಾನುವಾರ ಸ್ವಚ್ಛತೆಗೆ ಮುಂದಾಗಿದ್ದು, ಘಟಕದೊಳಗೆ ಇಳಿದಿದ್ದಾರೆ. ಈ ವೇಳೆ ಆಮ್ಲಜನಕದ ಕೊರತೆ ಉಂಟಾಗಿದೆ. ಉಸಿರಾಟದ ಸಮಸ್ಯೆಗೆ ಸಿಲುಕಿದ್ದಾರೆ. ತಕ್ಷಣವೇ ಅವರನ್ನು ಘಟಕದಿಂದ ಮೇಲೆತ್ತಲಾಯಿತು.</p>.<p>ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಂದಿ ಗಿರಿಧಾಮ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-16-1770237196</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ನಗರ ಹೊರವಲಯದ ಅಗಲಗುರ್ಕಿ ಕೈಗಾರಿಕಾ ಪ್ರದೇಶದ ಟೈಟಾನ್ ಕಂಪನಿಯ ಎಸ್ಟಿಪಿ ಘಟಕದಲ್ಲಿ ಸ್ವಚ್ಛತಾ ಕಾರ್ಯ ನಡೆಸುವಾಗ ಉಸಿರುಗಟ್ಟಿ ಮೂವರು ಕಾರ್ಮಿಕರು ಭಾನುವಾರ ಅಸ್ವಸ್ಥರಾಗಿದ್ದಾರೆ.</p>.<p>ಚಿಕ್ಕಬಳ್ಳಾಪುರ ತಾಲ್ಲೂಕಿನ ಕವರನಹಳ್ಳಿಯ ಜಯಪ್ರಕಾಶ್, ಶಿಡ್ಲಘಟ್ಟದ ಮದನ್ ಮತ್ತು ಗುಡಿಬಂಡೆಯ ನವೀನ್ ಅಸ್ವಸ್ಥ ಕಾರ್ಮಿಕರು. ಇವರು ಈ ಹಿಂದಿನಿಂದಲೂ ಈ ಘಟಕದ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದರು.</p>.<p>ಭಾನುವಾರ ಸ್ವಚ್ಛತೆಗೆ ಮುಂದಾಗಿದ್ದು, ಘಟಕದೊಳಗೆ ಇಳಿದಿದ್ದಾರೆ. ಈ ವೇಳೆ ಆಮ್ಲಜನಕದ ಕೊರತೆ ಉಂಟಾಗಿದೆ. ಉಸಿರಾಟದ ಸಮಸ್ಯೆಗೆ ಸಿಲುಕಿದ್ದಾರೆ. ತಕ್ಷಣವೇ ಅವರನ್ನು ಘಟಕದಿಂದ ಮೇಲೆತ್ತಲಾಯಿತು.</p>.<p>ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಂದಿ ಗಿರಿಧಾಮ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-16-1770237196</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>