<p><strong>ಚಿಕ್ಕಬಳ್ಳಾಪುರ</strong>: ಜಿಲ್ಲೆಯಲ್ಲಿ ಕೈಗಾರಿಕೀಕರಣದ ಪರ್ವ ದೊಡ್ಡ ಮಟ್ಟದಲ್ಲಿ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮತ್ತು ಸ್ಥಾಪನೆಗೆ ಸರ್ಕಾರ ಮುಂದಾಗಿದ್ದು 7,856.37 ಎಕರೆ ಭೂ ಪ್ರದೇಶಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. </p>.<p>ಅಲ್ಲದೆ 2,278.10 ಎಕರೆಯನ್ನು ಕರ್ನಾಟಕ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಸ್ವಾಧೀನಕ್ಕೆ ಪಡೆಯಲಾಗಿದ್ದು ಈ ಭೂ ಮಾಲೀಕರಿಗೆ ಪರಿಹಾರ ವಿತರಣೆ ಸಹ ಪ್ರಗತಿಯಲ್ಲಿದೆ.</p>.<p>ಹೀಗೆ ಅಂತಿಮ ಅಧಿಸೂಚನೆ ಮತ್ತು ಪ್ರಾಥಮಿಕ ಅಧಿಸೂಚನೆ ಸೇರಿ ಜಿಲ್ಲೆಯಲ್ಲಿ 10,134 ಎಕರೆಯು ಕೈಗಾರಿಕೀಕರಣದ ಹಂತದಲ್ಲಿ ಇವೆ. ಪ್ರಾಥಮಿಕ ಅಧಿಸೂಚನೆಯ ಹಂತದಲ್ಲಿರುವ ಈ ಯೋಜನೆಗಳು ಯಾವುದೇ ಅಡೆತಡೆಗಳು ಇಲ್ಲದೆ ಜಾರಿಯಾದರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗಳು ಆಗಲಿವೆ. ಆ ಮೂಲಕ ಉದ್ಯೋಗ ಸೃಷ್ಟಿಯಾಗಲಿದೆ ಎನ್ನುವ ಆಶಾವಾದ ಗರಿಗೆದರಿದೆ.</p>.<p>ಮುಂದಿನ ನಾಲ್ಕೈದು ವರ್ಷಗಳಲ್ಲಿ ಚಿಕ್ಕಬಳ್ಳಾಪುರವು ಕೈಗಾರಿಕೀಕರಣದ ವಿಚಾರದಲ್ಲಿ ಪ್ರಮುಖ ಪ್ರದೇಶವಾಗುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸುವರು.</p>.<p>ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಕೋಲಾರ, ಬೆಂಗಳೂರು ದಕ್ಷಿಣ (ರಾಮನಗರ) ಮತ್ತು ತುಮಕೂರು ಜಿಲ್ಲೆಯಲ್ಲಿ ಕೈಗಾರಿಕೀಕರಣವು ವೇಗವಾಗಿ ಬೆಳೆಯುತ್ತಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾತ್ರ ಇಲ್ಲಿಯವರೆಗೆ ಕೈಗಾರಿಕೀಕರಣ ಬೆಳವಣಿಗೆಗಳು ದೊಡ್ಡ ಮಟ್ಟದಲ್ಲಿ ಆಗಿರಲಿಲ್ಲ. </p>.<p>ಗೌರಿಬಿದನೂರು ತಾಲ್ಲೂಕಿನ ಕುಡುಮಲಕುಂಟೆಯಲ್ಲಿ ಮಾತ್ರ ಕೈಗಾರಿಕಾ ಪ್ರದೇಶವಿದೆ. ಕುಡುಮಲಕುಂಟೆ ಹೊರತುಪಡಿಸಿದರೆ ಜಿಲ್ಲೆಯ ಯಾವ ಭಾಗದಲ್ಲಿಯೂ ಕೈಗಾರಿಕೆಗಳಿಗೆ ವೇಗ ದೊರೆತಿರಲಿಲ್ಲ.</p>.<p>ಡಾ.ಎಂ.ಸಿ.ಸುಧಾಕರ್ ಚಿಂತಾಮಣಿ ಶಾಸಕರಾಗಿದ್ದ ವೇಳೆ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಶಂಕುಸ್ಥಾಪನೆ ನಡೆದಿತ್ತು. ಆ ನಂತರದ ದಿನಗಳಲ್ಲಿ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಯಿಂದ ಹಿನ್ನಡೆ ಆಯಿತು. ಈಗ ಮತ್ತೆ ಸ್ವಕ್ಷೇತ್ರದಲ್ಲಿ ಕೈಗಾರಿಕೆಗಳನ್ನು ಬೆಳೆಸುವ ದೊಡ್ಡ ಗುರಿಯನ್ನು ಸಚಿವರು ಹೊಂದಿದ್ದಾರೆ. </p>.<p>ಜಂಗಮಕೋಟೆ ಹಬ್: ಶಿಡ್ಲಘಟ್ಟ ತಾಲ್ಲೂಕಿನ ಜಂಗಮ ಕೋಟೆ ಹೋಬಳಿಯ ಸಂಜೀವಪುರ, ತೋಟ್ಲಗಾನಹಳ್ಳಿ, ಅರಿಕೆರೆ, ಬಸವಾಪಟ್ಟಣ, ಹೊಸಪೇಟೆ, ಚೊಕ್ಕೊಂಡನಹಳ್ಳಿ, ಯದ್ದಲತಿಪ್ಪೇನಹಳ್ಳಿ, ಕುಲುಮೆ ಹೊಸೂರು, ನಡಪಿನಾಯಕನಹಳ್ಳಿ, ತಾದೂರು, ಯಣ್ಣಂಗೂರು, ದೇವಗಾನಹಳ್ಳಿ, ಗೊಲ್ಲಹಳ್ಳಿ ಗ್ರಾಮಗಳ ಬಳಿ 2,823 ಎಕರೆಯಲ್ಲಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. </p>.<p>ಈ ಯೋಜನೆ ಕಾರ್ಯಗತವಾದರೆ ಶಿಡ್ಲಘಟ್ಟ ತಾಲ್ಲೂಕಿಗೆ ಬೃಹತ್ ಪ್ರಮಾಣದಲ್ಲಿ ಜಾರಿಯಾದ ಕೈಗಾರಿಕಾ ಯೋಜನೆ ಇದಾಗುತ್ತದೆ. ಜಂಗಮಕೋಟೆ ಹೋಬಳಿಯ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಮೀಪವಾಗುತ್ತದೆ. ಈ ಹೋಬಳಿಯ ಅಮರಾವತಿ ಬಳಿಯೇ ಬೆಂಗಳೂರು ಉತ್ತರ ವಿವಿ ಕ್ಯಾಂಪಸ್ ನಿರ್ಮಾಣಕ್ಕೆ ಶಂಕು ಸ್ಥಾಪನೆ ನಡೆದಿದೆ. ಈ ಎಲ್ಲ ಬೆಳವಣಿಗೆಗಳು ಕೃಷಿಯೇ ಪ್ರಧಾನವಾಗಿರುವ ಶಿಡ್ಲಘಟ್ಟ ತಾಲ್ಲೂಕಿನ ಆರ್ಥಿಕ ಬೆಳವಣಿಗೆಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ.</p>.<p>ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಬಾಗೇಪಲ್ಲಿಯಲ್ಲಿ ಈ ಹಿಂದೆ ಕೈಗಾರಿಕೀಕರಣಕ್ಕೆ ನಡೆದ ಪ್ರಯತ್ನಗಳು ವಿಫಲವಾಗಿವೆ. ನೆರೆಯ ಆಂಧ್ರಪ್ರದೇಶದಲ್ಲಿ ಕೊರಿಯಾ ದೇಶದ ಕಿಯಾ ಮೋಟರ್ಸ್ ಈಗಾಗಲೇ ದೊಡ್ಡ ಕೈಗಾರಿಕಾ ಘಟಕಗಳನ್ನು ಹೊಂದಿದೆ. ಅವರು ನೆರೆಯ ಬಾಗೇಪಲ್ಲಿಯಲ್ಲಿ ತಮ್ಮ ನೆಲೆ ವಿಸ್ತರಿಸಲು ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಸಹ ಮಾಡಿದ್ದರು. ಆದರೆ ಆ ಯಾವ ಯೋಜನೆಗಳು ಕಾರ್ಯರೂಪಕ್ಕೆ ಬರಲಿಲ್ಲ. </p>.<p>15 ವರ್ಷಗಳ ಹಿಂದೆ ಇಲ್ಲಿ ಕೈಗಾರಿಕೆಗಳಿಗಾಗಿ ಭೂಮಿ ಗುರುತಿಸಲಾಗಿತ್ತು. ಆದರೆ ಯೋಜನೆಗಳ ಕಾರ್ಯಗತವಾಗಿರಲಿಲ್ಲ. ಈಗ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಕೈಗಾರಿಕೀಕರಣಕ್ಕೆ ಮತ್ತೆ ಜಮೀನು ಗುರುತಿಸಲಾಗಿದೆ. ಕೊಂಡರೆಡ್ಡಿ ಪಲ್ಲಿ ಬಳಿ 684 ಎಕರೆ ಜಮೀನು ಗುರುತಿಸಲಾಗಿದೆ. </p>.<p>ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಗೌರಿಬಿದನೂರು ತಾಲ್ಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶ ಈಗಾಗಲೇ ಅಭಿವೃದ್ಧಿ ಹೊಂದಿದೆ. ಇಲ್ಲಿ 820 ಎಕರೆಯಲ್ಲಿ ಮೂರನೇ ಹಂತದ ಘಟಕ ವಿಸ್ತರಣೆಗೆ ಹೆಜ್ಜೆ ಇಡಲಾಗಿದೆ.</p>.<p>ಕೆಲವೇ ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೈಗಾರಿಕೆಗಳು ದೊಡ್ಡ ಮಟ್ಟದಲ್ಲಿ ಬೆಳೆಯಲಿವೆ ಎನ್ನುತ್ತಾರೆ ಕೈಗಾರಿಕಾ ಇಲಾಖೆ ಅಧಿಕಾರಿಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಜಿಲ್ಲೆಯಲ್ಲಿ ಕೈಗಾರಿಕೀಕರಣದ ಪರ್ವ ದೊಡ್ಡ ಮಟ್ಟದಲ್ಲಿ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮತ್ತು ಸ್ಥಾಪನೆಗೆ ಸರ್ಕಾರ ಮುಂದಾಗಿದ್ದು 7,856.37 ಎಕರೆ ಭೂ ಪ್ರದೇಶಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. </p>.<p>ಅಲ್ಲದೆ 2,278.10 ಎಕರೆಯನ್ನು ಕರ್ನಾಟಕ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಸ್ವಾಧೀನಕ್ಕೆ ಪಡೆಯಲಾಗಿದ್ದು ಈ ಭೂ ಮಾಲೀಕರಿಗೆ ಪರಿಹಾರ ವಿತರಣೆ ಸಹ ಪ್ರಗತಿಯಲ್ಲಿದೆ.</p>.<p>ಹೀಗೆ ಅಂತಿಮ ಅಧಿಸೂಚನೆ ಮತ್ತು ಪ್ರಾಥಮಿಕ ಅಧಿಸೂಚನೆ ಸೇರಿ ಜಿಲ್ಲೆಯಲ್ಲಿ 10,134 ಎಕರೆಯು ಕೈಗಾರಿಕೀಕರಣದ ಹಂತದಲ್ಲಿ ಇವೆ. ಪ್ರಾಥಮಿಕ ಅಧಿಸೂಚನೆಯ ಹಂತದಲ್ಲಿರುವ ಈ ಯೋಜನೆಗಳು ಯಾವುದೇ ಅಡೆತಡೆಗಳು ಇಲ್ಲದೆ ಜಾರಿಯಾದರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗಳು ಆಗಲಿವೆ. ಆ ಮೂಲಕ ಉದ್ಯೋಗ ಸೃಷ್ಟಿಯಾಗಲಿದೆ ಎನ್ನುವ ಆಶಾವಾದ ಗರಿಗೆದರಿದೆ.</p>.<p>ಮುಂದಿನ ನಾಲ್ಕೈದು ವರ್ಷಗಳಲ್ಲಿ ಚಿಕ್ಕಬಳ್ಳಾಪುರವು ಕೈಗಾರಿಕೀಕರಣದ ವಿಚಾರದಲ್ಲಿ ಪ್ರಮುಖ ಪ್ರದೇಶವಾಗುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸುವರು.</p>.<p>ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಕೋಲಾರ, ಬೆಂಗಳೂರು ದಕ್ಷಿಣ (ರಾಮನಗರ) ಮತ್ತು ತುಮಕೂರು ಜಿಲ್ಲೆಯಲ್ಲಿ ಕೈಗಾರಿಕೀಕರಣವು ವೇಗವಾಗಿ ಬೆಳೆಯುತ್ತಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾತ್ರ ಇಲ್ಲಿಯವರೆಗೆ ಕೈಗಾರಿಕೀಕರಣ ಬೆಳವಣಿಗೆಗಳು ದೊಡ್ಡ ಮಟ್ಟದಲ್ಲಿ ಆಗಿರಲಿಲ್ಲ. </p>.<p>ಗೌರಿಬಿದನೂರು ತಾಲ್ಲೂಕಿನ ಕುಡುಮಲಕುಂಟೆಯಲ್ಲಿ ಮಾತ್ರ ಕೈಗಾರಿಕಾ ಪ್ರದೇಶವಿದೆ. ಕುಡುಮಲಕುಂಟೆ ಹೊರತುಪಡಿಸಿದರೆ ಜಿಲ್ಲೆಯ ಯಾವ ಭಾಗದಲ್ಲಿಯೂ ಕೈಗಾರಿಕೆಗಳಿಗೆ ವೇಗ ದೊರೆತಿರಲಿಲ್ಲ.</p>.<p>ಡಾ.ಎಂ.ಸಿ.ಸುಧಾಕರ್ ಚಿಂತಾಮಣಿ ಶಾಸಕರಾಗಿದ್ದ ವೇಳೆ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಶಂಕುಸ್ಥಾಪನೆ ನಡೆದಿತ್ತು. ಆ ನಂತರದ ದಿನಗಳಲ್ಲಿ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಯಿಂದ ಹಿನ್ನಡೆ ಆಯಿತು. ಈಗ ಮತ್ತೆ ಸ್ವಕ್ಷೇತ್ರದಲ್ಲಿ ಕೈಗಾರಿಕೆಗಳನ್ನು ಬೆಳೆಸುವ ದೊಡ್ಡ ಗುರಿಯನ್ನು ಸಚಿವರು ಹೊಂದಿದ್ದಾರೆ. </p>.<p>ಜಂಗಮಕೋಟೆ ಹಬ್: ಶಿಡ್ಲಘಟ್ಟ ತಾಲ್ಲೂಕಿನ ಜಂಗಮ ಕೋಟೆ ಹೋಬಳಿಯ ಸಂಜೀವಪುರ, ತೋಟ್ಲಗಾನಹಳ್ಳಿ, ಅರಿಕೆರೆ, ಬಸವಾಪಟ್ಟಣ, ಹೊಸಪೇಟೆ, ಚೊಕ್ಕೊಂಡನಹಳ್ಳಿ, ಯದ್ದಲತಿಪ್ಪೇನಹಳ್ಳಿ, ಕುಲುಮೆ ಹೊಸೂರು, ನಡಪಿನಾಯಕನಹಳ್ಳಿ, ತಾದೂರು, ಯಣ್ಣಂಗೂರು, ದೇವಗಾನಹಳ್ಳಿ, ಗೊಲ್ಲಹಳ್ಳಿ ಗ್ರಾಮಗಳ ಬಳಿ 2,823 ಎಕರೆಯಲ್ಲಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. </p>.<p>ಈ ಯೋಜನೆ ಕಾರ್ಯಗತವಾದರೆ ಶಿಡ್ಲಘಟ್ಟ ತಾಲ್ಲೂಕಿಗೆ ಬೃಹತ್ ಪ್ರಮಾಣದಲ್ಲಿ ಜಾರಿಯಾದ ಕೈಗಾರಿಕಾ ಯೋಜನೆ ಇದಾಗುತ್ತದೆ. ಜಂಗಮಕೋಟೆ ಹೋಬಳಿಯ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಮೀಪವಾಗುತ್ತದೆ. ಈ ಹೋಬಳಿಯ ಅಮರಾವತಿ ಬಳಿಯೇ ಬೆಂಗಳೂರು ಉತ್ತರ ವಿವಿ ಕ್ಯಾಂಪಸ್ ನಿರ್ಮಾಣಕ್ಕೆ ಶಂಕು ಸ್ಥಾಪನೆ ನಡೆದಿದೆ. ಈ ಎಲ್ಲ ಬೆಳವಣಿಗೆಗಳು ಕೃಷಿಯೇ ಪ್ರಧಾನವಾಗಿರುವ ಶಿಡ್ಲಘಟ್ಟ ತಾಲ್ಲೂಕಿನ ಆರ್ಥಿಕ ಬೆಳವಣಿಗೆಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ.</p>.<p>ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಬಾಗೇಪಲ್ಲಿಯಲ್ಲಿ ಈ ಹಿಂದೆ ಕೈಗಾರಿಕೀಕರಣಕ್ಕೆ ನಡೆದ ಪ್ರಯತ್ನಗಳು ವಿಫಲವಾಗಿವೆ. ನೆರೆಯ ಆಂಧ್ರಪ್ರದೇಶದಲ್ಲಿ ಕೊರಿಯಾ ದೇಶದ ಕಿಯಾ ಮೋಟರ್ಸ್ ಈಗಾಗಲೇ ದೊಡ್ಡ ಕೈಗಾರಿಕಾ ಘಟಕಗಳನ್ನು ಹೊಂದಿದೆ. ಅವರು ನೆರೆಯ ಬಾಗೇಪಲ್ಲಿಯಲ್ಲಿ ತಮ್ಮ ನೆಲೆ ವಿಸ್ತರಿಸಲು ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಸಹ ಮಾಡಿದ್ದರು. ಆದರೆ ಆ ಯಾವ ಯೋಜನೆಗಳು ಕಾರ್ಯರೂಪಕ್ಕೆ ಬರಲಿಲ್ಲ. </p>.<p>15 ವರ್ಷಗಳ ಹಿಂದೆ ಇಲ್ಲಿ ಕೈಗಾರಿಕೆಗಳಿಗಾಗಿ ಭೂಮಿ ಗುರುತಿಸಲಾಗಿತ್ತು. ಆದರೆ ಯೋಜನೆಗಳ ಕಾರ್ಯಗತವಾಗಿರಲಿಲ್ಲ. ಈಗ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಕೈಗಾರಿಕೀಕರಣಕ್ಕೆ ಮತ್ತೆ ಜಮೀನು ಗುರುತಿಸಲಾಗಿದೆ. ಕೊಂಡರೆಡ್ಡಿ ಪಲ್ಲಿ ಬಳಿ 684 ಎಕರೆ ಜಮೀನು ಗುರುತಿಸಲಾಗಿದೆ. </p>.<p>ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಗೌರಿಬಿದನೂರು ತಾಲ್ಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶ ಈಗಾಗಲೇ ಅಭಿವೃದ್ಧಿ ಹೊಂದಿದೆ. ಇಲ್ಲಿ 820 ಎಕರೆಯಲ್ಲಿ ಮೂರನೇ ಹಂತದ ಘಟಕ ವಿಸ್ತರಣೆಗೆ ಹೆಜ್ಜೆ ಇಡಲಾಗಿದೆ.</p>.<p>ಕೆಲವೇ ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೈಗಾರಿಕೆಗಳು ದೊಡ್ಡ ಮಟ್ಟದಲ್ಲಿ ಬೆಳೆಯಲಿವೆ ಎನ್ನುತ್ತಾರೆ ಕೈಗಾರಿಕಾ ಇಲಾಖೆ ಅಧಿಕಾರಿಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>