<p>ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ರೈತರು ಕೆಐಎಡಿಬಿ ಭೂ ಸ್ವಾಧೀನದ ವಿರುದ್ಧ ಜಿಲ್ಲಾಡಳಿತ ಭವನದ ಎದುರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಭಾನುವಾರ 64 ದಿನ ಪೂರ್ಣಗೊಳಿಸಿದೆ.</p>.<p>ಕೈಗಾರಿಕೆಗಳಿಗೆ ಕೃಷಿ ಭೂಮಿ ಸ್ವಾಧೀನ ಕೈ ಬಿಡುವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ರೈತರು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ.</p>.<p>ನಗರದ ಹೊರ ವಲಯದ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೂಮಿ ಕಳೆದುಕೊಳ್ಳುವ ರೈತ ಕುಟುಂಬಗಳು ಭೇಟಿ ಮಾಡಿದವು.</p>.<p>‘ಕುಟುಂಬಗಳಿಗೆ ಭೂಮಿಯೊಂದೇ ಆಧಾರ. ಆದ್ದರಿಂದ ನಮ್ಮ ಭೂಮಿ ನಮಗೆ ಉಳಿಸಿಕೊಡಿ’ ಎಂದು ಭಕ್ತರಹಳ್ಳಿ ಬೈರೇಗೌಡ ನೇತೃತ್ವದಲ್ಲಿ ತೆರಳಿದ್ದ ರೈತ ಕುಟುಂಬಗಳು ಮನವಿ ಮಾಡಿದವು.</p>.<p>ಭೂ ಸ್ವಾಧೀನದ ಹಿಂದೆ ಷಡ್ಯಂತ್ರ ಇದೆ. ಬಡ ರೈತರ ಭೂಮಿ ಕಬಳಕೆ ಮಾಡಲಾಗುತ್ತಿದೆ. 800ಕ್ಕೂ ಹೆಚ್ಚು ರೈತರು ಭೂ ಸ್ವಾಧೀನಕ್ಕೆ ಒಪ್ಪದೆ ಇದ್ದರೂ ಸರ್ಕಾರ ಬಲವಂತದಿಂದ ಭೂ ಸ್ವಾಧೀನ ಪ್ರಕ್ರಿಯೆಗಳನ್ನು ಆರಂಭಿಸಿದೆ ಎಂದು ಅಳಲು ತೋಡಿಕೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-18-456093002</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ರೈತರು ಕೆಐಎಡಿಬಿ ಭೂ ಸ್ವಾಧೀನದ ವಿರುದ್ಧ ಜಿಲ್ಲಾಡಳಿತ ಭವನದ ಎದುರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಭಾನುವಾರ 64 ದಿನ ಪೂರ್ಣಗೊಳಿಸಿದೆ.</p>.<p>ಕೈಗಾರಿಕೆಗಳಿಗೆ ಕೃಷಿ ಭೂಮಿ ಸ್ವಾಧೀನ ಕೈ ಬಿಡುವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ರೈತರು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ.</p>.<p>ನಗರದ ಹೊರ ವಲಯದ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೂಮಿ ಕಳೆದುಕೊಳ್ಳುವ ರೈತ ಕುಟುಂಬಗಳು ಭೇಟಿ ಮಾಡಿದವು.</p>.<p>‘ಕುಟುಂಬಗಳಿಗೆ ಭೂಮಿಯೊಂದೇ ಆಧಾರ. ಆದ್ದರಿಂದ ನಮ್ಮ ಭೂಮಿ ನಮಗೆ ಉಳಿಸಿಕೊಡಿ’ ಎಂದು ಭಕ್ತರಹಳ್ಳಿ ಬೈರೇಗೌಡ ನೇತೃತ್ವದಲ್ಲಿ ತೆರಳಿದ್ದ ರೈತ ಕುಟುಂಬಗಳು ಮನವಿ ಮಾಡಿದವು.</p>.<p>ಭೂ ಸ್ವಾಧೀನದ ಹಿಂದೆ ಷಡ್ಯಂತ್ರ ಇದೆ. ಬಡ ರೈತರ ಭೂಮಿ ಕಬಳಕೆ ಮಾಡಲಾಗುತ್ತಿದೆ. 800ಕ್ಕೂ ಹೆಚ್ಚು ರೈತರು ಭೂ ಸ್ವಾಧೀನಕ್ಕೆ ಒಪ್ಪದೆ ಇದ್ದರೂ ಸರ್ಕಾರ ಬಲವಂತದಿಂದ ಭೂ ಸ್ವಾಧೀನ ಪ್ರಕ್ರಿಯೆಗಳನ್ನು ಆರಂಭಿಸಿದೆ ಎಂದು ಅಳಲು ತೋಡಿಕೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-18-456093002</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>