<p>ಚಿಕ್ಕಬಳ್ಳಾಪುರ: ಫಲವತ್ತಾದ ಕೃಷಿ ಜಮೀನುಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ವಶಕ್ಕೆ ಪಡೆಯುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡದೆ ಇದ್ದಲ್ಲಿ, 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವು ಬಲಿಯಾಗಲಿದೆ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.</p>.<p>ಕೈಗಾರಿಕೆಗಳ ಸ್ಥಾಪನೆಗಾಗಿ ಜಂಗಮಕೋಟೆ ವ್ಯಾಪ್ತಿಯ ಭೂ ಸ್ವಾಧೀನ ವಿರೋಧಿಸಿ ರೈತ ಸಂಘದಿಂದ ಜಿಲ್ಲಾಡಳಿತ ಭವನದ ಎದುರು ಕಳೆದ 16 ದಿನಗಳಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿಯಲ್ಲಿ ಮಾತನಾಡಿದರು.</p>.<p>ರಾಜ್ಯ ಸರ್ಕಾರವು ರೊಕ್ಕ ವಸೂಲಿ ಮಾಡಲೆಂದೇ ಕೆಐಡಿಬಿಗೆ ಜೀವ ತುಂಬಿದೆ. ಕೇವಲ ಹಣಕ್ಕಾಗಿ ರೈತರ ಜೀವನದೊಂದಿಗೆ ಚೆಲ್ಲಾಟವಾಡುವುದನ್ನು ಬಿಡಬೇಕು ಎಂದು ಕಿಡಿಕಾರಿದರು.</p>.<p>‘ತನ್ನ ಯೋಗ್ಯತೆ ಕಳೆದುಕೊಂಡಿರುವ ರಾಜ್ಯ ಸರ್ಕಾರವು ಹಗರಣಗಳಲ್ಲಿ ಸಿಲುಕಿದೆ. ಗ್ಯಾರಂಟಿಗಳ ನೆಪದಲ್ಲಿ ರಾಜ್ಯವನ್ನು ದಿವಾಳಿ ಮಾಡಿರುವ ಸರ್ಕಾರವು ಲಕ್ಷಾಂತರ ಕೋಟಿ ಸಾಲ ಮಾಡಿ ಬಜೆಟ್ ಮಂಡನೆ ಮಾಡಿದೆ. ಇದು ನಾಚಿಕೆಗೇಡಿನ ಸಂಗತಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕತೆ ಕಳೆದುಕೊಂಡಿದ್ದಾರೆ. ಅವರಿಗೆ ಗ್ಯಾರಂಟಿ ಇಲ್ಲ ಎಂಬ ಅತಂತ್ರ ಪರಿಸ್ಥಿತಿ ನಿರ್ಮಾಣ ಆಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಚಿಕ್ಕನಾಯಕನಹಳ್ಳಿಯ ಚಿಪ್ಪು ನೀಡಲಾಗುವುದು’ ಎಂದು ವ್ಯಂಗ್ಯವಾಡಿದರು.</p>.<p>ಮುಷದಿನ ಚುನಾವಣೆಯಲ್ಲಿ ಕಾಂಗ್ರೆಸ್ 50 ಸೀಟ್ ಗೆಲ್ಲಲು ಸಾಧ್ಯವಿಲ್ಲ. ರೈತರ ಪರ ನಿಲ್ಲದ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಚುನಾವಣೆಯಲ್ಲಿ ಮುಗ್ಗರಿಸಲಿದ್ದಾರೆ. ಕಷ್ಟಕ್ಕೆ ನೆರವಾಗದೆ ಬದುಕಿಗೆ ಆತಂಕ ತಂದಿರುವ ಕಾನೂನು ಧಿಮಾಕನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈಗಾಗಲೇ ಬೆಂಗಳೂರಿನಲ್ಲಿ ರೈತ ಮುಖಂಡರ ಸಭೆ ನಡೆದಿದ್ದು, ಶಿಡ್ಲಘಟ್ಟ ಭಾಗದಲ್ಲಿ ಭೂಮಿ ಕಸಿದುಕೊಳ್ಳಲು ಒಂದು ಹೆಜ್ಜೆ ಬಲತ್ಕಾರ ಇಟ್ಟರೆ ರಾಜ್ಯದ ಮೂಲೆ ಮೂಲೆಗಳಿಂದ ರೈತರು ಬರಲಿದ್ದಾರೆ. ರೈತರು ಭಯಪಡುವ ಅಗತ್ಯವಿಲ್ಲ. ಅವರ ತಾಕತ್ತು ನೋಡೇ ಬಿಡೋಣ ಎಂದು ಸವಾಲೆಸೆದರು.</p>.<p>ಭೂ ಸುಧಾರಣಾ ಕಾಯ್ದೆ, ಭೂಸ್ವಾಧೀನ ಕಾಯ್ದೆ ಸೇರಿ ರೈತ ವಿರೋಧಿ ಕಾಯ್ದೆಗಳು ರದ್ದಾಗಬೇಕು. ರಾಜ್ಯದಲ್ಲಿನ ರೈತರ ಏಳಿಗೆಗಾಗಿ ₹10 ಸಾವಿರ ಕೋಟಿ ನಿಧಿ ಮೀಸಲಿಡಬೇಕು. ಫಲವತ್ತಾದ ಭೂಮಿ ವಶಕ್ಕೆ ಪಡೆಯುವುದನ್ನು ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿ ಎಂದಿಗೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಬಿಡುವುದಿಲ್ಲ. ಅಹಿಂಸಾ ಚಳವಳಿ ಮುಂದುವರೆಯಲಿದೆ ಎಂದು ಹೇಳಿದರು.</p>.<p>ಮಾಜಿ ಶಾಸಕ ಎಂ. ರಾಜಣ್ಣ, ರೈತ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಸಿ.ಎಂ. ಬೈರೇಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ರಾಮನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಜಿಲ್ಲಾ ಕಾರ್ಯದರ್ಶಿ ಗೋಪಾಲ್, ರಾಜ್ಯ ಕಾರ್ಯದರ್ಶಿ ವೀರಭದ್ರಸ್ವಾಮಿ ಇದ್ದರು.</p>.<h2>ಭೂಮಿ ವರ್ಗೀಕರಣಕ್ಕೆ ಒತ್ತಾಯ</h2><p>ಪ್ರಸ್ತುತ ಜನಸಂಖ್ಯೆಯು ದಿನ ದಿನಕ್ಕೆ ಹೆಚ್ಚುತ್ತಲೇ ಇದೆ. ಕೇವಲ ಕೈಗಾರಿಕೆಗಳಿಗೆ ಆದ್ಯತೆ ನೀಡಿ ಏರುಪೇರಾದರೆ ಮಣ್ಣು ತಿನ್ನಲು ಸಾಧ್ಯವೇ ಎಂದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದರು. </p><p>ನಾಳಿನ ತಲೆಮಾರಿಗೆ ಕೃಷಿಭೂಮಿ ಜೋಪಾನ ಮಾಡಬೇಕಿದೆ. ಈ ನಿಟ್ಟಿನಲ್ಲಿ ಭೂಮಿ ವರ್ಗಿಕರಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.</p><p>ಕೃಷಿಗೆ ಯೋಗ್ಯವಾದ ಭೂಮಿಯನ್ನು ಎ ಗ್ರೇಡ್ ಎಂದು ವಿಂಗಡಿಸಿ, ಕೃಷಿಗಾಗಿ ಮಾತ್ರವೇ ಮೀಸಲಿಡಬೇಕು. ಅದಕ್ಕೆ ಯಾರೂ ಕೈಹಾಕದಂತೆ ಕಾಯ್ದೆ ಮಾಡಬೇಕು. ಹಾಗಾದಾಗ ನಾಳೆಯ ಜನಾಂಗಕ್ಕೆ ಅನ್ನ ಸಿಗಲಿದೆ. ಬಿ ಗ್ರೇಡ್ ಭೂಮಿಯನ್ನು ಕೃಷಿ ಹಾಗೂ ಅರಣ್ಯ ಇನ್ನಿತರ ಚಟುವಟಿಕೆಗಳಿಗೆ ಮೀಸಲಿಡಬೇಕು. ಸಿ ಮತ್ತು ಡಿ ವ್ಯಾಪ್ತಿ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳಬೇಕು. ಮೂರು ಹಂತದಲ್ಲಿ ಭೂಮಿಯನ್ನು ಗುರುತು ಮಾಡುವ ಕೆಲಸ ಆಗಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಫಲವತ್ತಾದ ಕೃಷಿ ಜಮೀನುಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ವಶಕ್ಕೆ ಪಡೆಯುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡದೆ ಇದ್ದಲ್ಲಿ, 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವು ಬಲಿಯಾಗಲಿದೆ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.</p>.<p>ಕೈಗಾರಿಕೆಗಳ ಸ್ಥಾಪನೆಗಾಗಿ ಜಂಗಮಕೋಟೆ ವ್ಯಾಪ್ತಿಯ ಭೂ ಸ್ವಾಧೀನ ವಿರೋಧಿಸಿ ರೈತ ಸಂಘದಿಂದ ಜಿಲ್ಲಾಡಳಿತ ಭವನದ ಎದುರು ಕಳೆದ 16 ದಿನಗಳಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿಯಲ್ಲಿ ಮಾತನಾಡಿದರು.</p>.<p>ರಾಜ್ಯ ಸರ್ಕಾರವು ರೊಕ್ಕ ವಸೂಲಿ ಮಾಡಲೆಂದೇ ಕೆಐಡಿಬಿಗೆ ಜೀವ ತುಂಬಿದೆ. ಕೇವಲ ಹಣಕ್ಕಾಗಿ ರೈತರ ಜೀವನದೊಂದಿಗೆ ಚೆಲ್ಲಾಟವಾಡುವುದನ್ನು ಬಿಡಬೇಕು ಎಂದು ಕಿಡಿಕಾರಿದರು.</p>.<p>‘ತನ್ನ ಯೋಗ್ಯತೆ ಕಳೆದುಕೊಂಡಿರುವ ರಾಜ್ಯ ಸರ್ಕಾರವು ಹಗರಣಗಳಲ್ಲಿ ಸಿಲುಕಿದೆ. ಗ್ಯಾರಂಟಿಗಳ ನೆಪದಲ್ಲಿ ರಾಜ್ಯವನ್ನು ದಿವಾಳಿ ಮಾಡಿರುವ ಸರ್ಕಾರವು ಲಕ್ಷಾಂತರ ಕೋಟಿ ಸಾಲ ಮಾಡಿ ಬಜೆಟ್ ಮಂಡನೆ ಮಾಡಿದೆ. ಇದು ನಾಚಿಕೆಗೇಡಿನ ಸಂಗತಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕತೆ ಕಳೆದುಕೊಂಡಿದ್ದಾರೆ. ಅವರಿಗೆ ಗ್ಯಾರಂಟಿ ಇಲ್ಲ ಎಂಬ ಅತಂತ್ರ ಪರಿಸ್ಥಿತಿ ನಿರ್ಮಾಣ ಆಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಚಿಕ್ಕನಾಯಕನಹಳ್ಳಿಯ ಚಿಪ್ಪು ನೀಡಲಾಗುವುದು’ ಎಂದು ವ್ಯಂಗ್ಯವಾಡಿದರು.</p>.<p>ಮುಷದಿನ ಚುನಾವಣೆಯಲ್ಲಿ ಕಾಂಗ್ರೆಸ್ 50 ಸೀಟ್ ಗೆಲ್ಲಲು ಸಾಧ್ಯವಿಲ್ಲ. ರೈತರ ಪರ ನಿಲ್ಲದ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಚುನಾವಣೆಯಲ್ಲಿ ಮುಗ್ಗರಿಸಲಿದ್ದಾರೆ. ಕಷ್ಟಕ್ಕೆ ನೆರವಾಗದೆ ಬದುಕಿಗೆ ಆತಂಕ ತಂದಿರುವ ಕಾನೂನು ಧಿಮಾಕನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈಗಾಗಲೇ ಬೆಂಗಳೂರಿನಲ್ಲಿ ರೈತ ಮುಖಂಡರ ಸಭೆ ನಡೆದಿದ್ದು, ಶಿಡ್ಲಘಟ್ಟ ಭಾಗದಲ್ಲಿ ಭೂಮಿ ಕಸಿದುಕೊಳ್ಳಲು ಒಂದು ಹೆಜ್ಜೆ ಬಲತ್ಕಾರ ಇಟ್ಟರೆ ರಾಜ್ಯದ ಮೂಲೆ ಮೂಲೆಗಳಿಂದ ರೈತರು ಬರಲಿದ್ದಾರೆ. ರೈತರು ಭಯಪಡುವ ಅಗತ್ಯವಿಲ್ಲ. ಅವರ ತಾಕತ್ತು ನೋಡೇ ಬಿಡೋಣ ಎಂದು ಸವಾಲೆಸೆದರು.</p>.<p>ಭೂ ಸುಧಾರಣಾ ಕಾಯ್ದೆ, ಭೂಸ್ವಾಧೀನ ಕಾಯ್ದೆ ಸೇರಿ ರೈತ ವಿರೋಧಿ ಕಾಯ್ದೆಗಳು ರದ್ದಾಗಬೇಕು. ರಾಜ್ಯದಲ್ಲಿನ ರೈತರ ಏಳಿಗೆಗಾಗಿ ₹10 ಸಾವಿರ ಕೋಟಿ ನಿಧಿ ಮೀಸಲಿಡಬೇಕು. ಫಲವತ್ತಾದ ಭೂಮಿ ವಶಕ್ಕೆ ಪಡೆಯುವುದನ್ನು ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿ ಎಂದಿಗೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಬಿಡುವುದಿಲ್ಲ. ಅಹಿಂಸಾ ಚಳವಳಿ ಮುಂದುವರೆಯಲಿದೆ ಎಂದು ಹೇಳಿದರು.</p>.<p>ಮಾಜಿ ಶಾಸಕ ಎಂ. ರಾಜಣ್ಣ, ರೈತ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಸಿ.ಎಂ. ಬೈರೇಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ರಾಮನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಜಿಲ್ಲಾ ಕಾರ್ಯದರ್ಶಿ ಗೋಪಾಲ್, ರಾಜ್ಯ ಕಾರ್ಯದರ್ಶಿ ವೀರಭದ್ರಸ್ವಾಮಿ ಇದ್ದರು.</p>.<h2>ಭೂಮಿ ವರ್ಗೀಕರಣಕ್ಕೆ ಒತ್ತಾಯ</h2><p>ಪ್ರಸ್ತುತ ಜನಸಂಖ್ಯೆಯು ದಿನ ದಿನಕ್ಕೆ ಹೆಚ್ಚುತ್ತಲೇ ಇದೆ. ಕೇವಲ ಕೈಗಾರಿಕೆಗಳಿಗೆ ಆದ್ಯತೆ ನೀಡಿ ಏರುಪೇರಾದರೆ ಮಣ್ಣು ತಿನ್ನಲು ಸಾಧ್ಯವೇ ಎಂದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದರು. </p><p>ನಾಳಿನ ತಲೆಮಾರಿಗೆ ಕೃಷಿಭೂಮಿ ಜೋಪಾನ ಮಾಡಬೇಕಿದೆ. ಈ ನಿಟ್ಟಿನಲ್ಲಿ ಭೂಮಿ ವರ್ಗಿಕರಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.</p><p>ಕೃಷಿಗೆ ಯೋಗ್ಯವಾದ ಭೂಮಿಯನ್ನು ಎ ಗ್ರೇಡ್ ಎಂದು ವಿಂಗಡಿಸಿ, ಕೃಷಿಗಾಗಿ ಮಾತ್ರವೇ ಮೀಸಲಿಡಬೇಕು. ಅದಕ್ಕೆ ಯಾರೂ ಕೈಹಾಕದಂತೆ ಕಾಯ್ದೆ ಮಾಡಬೇಕು. ಹಾಗಾದಾಗ ನಾಳೆಯ ಜನಾಂಗಕ್ಕೆ ಅನ್ನ ಸಿಗಲಿದೆ. ಬಿ ಗ್ರೇಡ್ ಭೂಮಿಯನ್ನು ಕೃಷಿ ಹಾಗೂ ಅರಣ್ಯ ಇನ್ನಿತರ ಚಟುವಟಿಕೆಗಳಿಗೆ ಮೀಸಲಿಡಬೇಕು. ಸಿ ಮತ್ತು ಡಿ ವ್ಯಾಪ್ತಿ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳಬೇಕು. ಮೂರು ಹಂತದಲ್ಲಿ ಭೂಮಿಯನ್ನು ಗುರುತು ಮಾಡುವ ಕೆಲಸ ಆಗಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>