<p><strong>ಚಿಕ್ಕಬಳ್ಳಾಪುರ:</strong> ನಗರ ಹೊರವಲಯದ ಆದಿಚುಂಚನಗಿರಿ ಶಾಖಾ ಮಠದ ಆವರಣದ ವೀರಾಂಜನೇಯ ದೇಗುಲದ ಬಳಿ ಭಾನುವಾರ ಕಡಲೆಕಾಯಿ ಪರಿಷೆ ಮತ್ತು ರಥೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ರಥೋತ್ಸವದಲ್ಲಿ ಚಿಕ್ಕಬಳ್ಳಾಪುರ ನಗರ, ಜಡಲತಿಮ್ಮನಹಳ್ಳಿ, ಚೊಕ್ಕನಹಳ್ಳಿ, ಕೊತ್ತನೂರು, ಚದುಲಪುರ, ಅರಸನಹಳ್ಳಿ, ನಂದಿಕ್ರಾಸ್, ಎಲುವಳ್ಳಿ ಮತ್ತಿತರ ಗ್ರಾಮಗಳ ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು.</p>.<p>ಉತ್ಸವದ ಅಂಗವಾಗಿ ದೇವಾಲಯಲ್ಲಿನ ಪ್ರಸನ್ನ ಮಹಾಗಣಪತಿ, ಕೋದಂಡರಾಮ ಹಾಗೂ ಆಂಜನೇಯ ದೇವರ ಮೂರ್ತಿಗಳಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆಯಿಂದಲೇ ಅಭಿಷೇಕ, ಹೋಮ, ಮಹಾಮಂಗಳಾರತಿ ಒಳಗೊಂಡಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.</p>.<p>ಜಡಲತಿಮ್ಮನಹಳ್ಳಿಯಿಂದ ಆಂಜನೇಯ ಸ್ವಾಮಿ ಉತ್ಸವ ಮೂರ್ತಿಯನ್ನು ಪೂರ್ಣಕುಂಭದೊಂದಿಗೆ ಮೆರವಣಿಗೆಯಲ್ಲಿ ತರಲಾಯಿತು. ಡೊಳ್ಳುಕುಣಿತ, ಚಂಡೆ ಸೇರಿದಂತೆ ವಿವಿಧ ಕಲಾಪ್ರಕಾರಗಳು ಮೆರವಣಿಗೆಗೆ ಮೆರುಗು ತುಂಬಿದ್ದವು.</p>.<p>ದೇವಾಲಯದ ಬಳಿಗೆ ಬಂದ ವೀರಾಂಜನೇಯ ಮೂರ್ತಿಯನ್ನು ರಥದಲ್ಲಿ ಕೂರಿಸಲಾಯಿತು. ಈ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಶಾಖಾಮಠದ ಮಂಗಳನಂದನಾಥ ಸ್ವಾಮೀಜಿ ಹಾಗೂ ವಿವಿಧ ಮಠಾಧೀಶರು ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. </p>.<p>ಜಯಘೋಷದೊಂದಿಗೆ ಭಕ್ತರು ದೇವಾಲಯದ ಆವರಣದಿಂದ ಮಠದ ಆವರಣದವರೆಗೂ ರಥವನ್ನು ಎಳೆದರು. ಕಡಲೆ ಕಾಯಿ ಪರಿಷೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಕಡಲೆ ಕಾಯಿಗಳನ್ನು ಭಕ್ತರಿಗೆ ಹಂಚಿದರು. ಪ್ರಸಾದ ರೂಪದ ಕಡಲೆ ಕಾಯಿಯನ್ನು ಪಡೆಯಲು ಹೆಚ್ಚಿನ ಜನರು ಬಂದಿದ್ದರು. ಮಜ್ಜಿಗೆ, ಪಾನಕ ವಿತರಿಸಲಾಯಿತು.</p>.<p>ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ, ರಾಜಕೀಯ ಮುಖಂಡರು, ಗಣ್ಯರು, ಭಕ್ತರು ಸೇರಿದಂತೆ ವಿವಿಧ ವಲಯಗಳ ಜನರು ವೀರಾಂಜನೇಯಸ್ವಾಮಿ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಗರ ಹೊರವಲಯದ ಆದಿಚುಂಚನಗಿರಿ ಶಾಖಾ ಮಠದ ಆವರಣದ ವೀರಾಂಜನೇಯ ದೇಗುಲದ ಬಳಿ ಭಾನುವಾರ ಕಡಲೆಕಾಯಿ ಪರಿಷೆ ಮತ್ತು ರಥೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ರಥೋತ್ಸವದಲ್ಲಿ ಚಿಕ್ಕಬಳ್ಳಾಪುರ ನಗರ, ಜಡಲತಿಮ್ಮನಹಳ್ಳಿ, ಚೊಕ್ಕನಹಳ್ಳಿ, ಕೊತ್ತನೂರು, ಚದುಲಪುರ, ಅರಸನಹಳ್ಳಿ, ನಂದಿಕ್ರಾಸ್, ಎಲುವಳ್ಳಿ ಮತ್ತಿತರ ಗ್ರಾಮಗಳ ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು.</p>.<p>ಉತ್ಸವದ ಅಂಗವಾಗಿ ದೇವಾಲಯಲ್ಲಿನ ಪ್ರಸನ್ನ ಮಹಾಗಣಪತಿ, ಕೋದಂಡರಾಮ ಹಾಗೂ ಆಂಜನೇಯ ದೇವರ ಮೂರ್ತಿಗಳಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆಯಿಂದಲೇ ಅಭಿಷೇಕ, ಹೋಮ, ಮಹಾಮಂಗಳಾರತಿ ಒಳಗೊಂಡಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.</p>.<p>ಜಡಲತಿಮ್ಮನಹಳ್ಳಿಯಿಂದ ಆಂಜನೇಯ ಸ್ವಾಮಿ ಉತ್ಸವ ಮೂರ್ತಿಯನ್ನು ಪೂರ್ಣಕುಂಭದೊಂದಿಗೆ ಮೆರವಣಿಗೆಯಲ್ಲಿ ತರಲಾಯಿತು. ಡೊಳ್ಳುಕುಣಿತ, ಚಂಡೆ ಸೇರಿದಂತೆ ವಿವಿಧ ಕಲಾಪ್ರಕಾರಗಳು ಮೆರವಣಿಗೆಗೆ ಮೆರುಗು ತುಂಬಿದ್ದವು.</p>.<p>ದೇವಾಲಯದ ಬಳಿಗೆ ಬಂದ ವೀರಾಂಜನೇಯ ಮೂರ್ತಿಯನ್ನು ರಥದಲ್ಲಿ ಕೂರಿಸಲಾಯಿತು. ಈ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಶಾಖಾಮಠದ ಮಂಗಳನಂದನಾಥ ಸ್ವಾಮೀಜಿ ಹಾಗೂ ವಿವಿಧ ಮಠಾಧೀಶರು ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. </p>.<p>ಜಯಘೋಷದೊಂದಿಗೆ ಭಕ್ತರು ದೇವಾಲಯದ ಆವರಣದಿಂದ ಮಠದ ಆವರಣದವರೆಗೂ ರಥವನ್ನು ಎಳೆದರು. ಕಡಲೆ ಕಾಯಿ ಪರಿಷೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಕಡಲೆ ಕಾಯಿಗಳನ್ನು ಭಕ್ತರಿಗೆ ಹಂಚಿದರು. ಪ್ರಸಾದ ರೂಪದ ಕಡಲೆ ಕಾಯಿಯನ್ನು ಪಡೆಯಲು ಹೆಚ್ಚಿನ ಜನರು ಬಂದಿದ್ದರು. ಮಜ್ಜಿಗೆ, ಪಾನಕ ವಿತರಿಸಲಾಯಿತು.</p>.<p>ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ, ರಾಜಕೀಯ ಮುಖಂಡರು, ಗಣ್ಯರು, ಭಕ್ತರು ಸೇರಿದಂತೆ ವಿವಿಧ ವಲಯಗಳ ಜನರು ವೀರಾಂಜನೇಯಸ್ವಾಮಿ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>