<p><strong>ಚಿಕ್ಕಬಳ್ಳಾಪುರ:</strong> ನಗರದ ಕಂದವಾರ ಬಾಗಿಲ ಸಿವಿವಿ ಸರ್ಕಲ್ ಬಳಿಯ ಕಾಳಿಕಾಂಬ ಕಮಠೇಶ್ವರ ದೇವಾಲಯದ 11ನೇ ವರ್ಷದ ಹೂವಿನ ಕರಗ ಮಹೋತ್ಸವ ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆಯವರೆಗೆ ಅದ್ದೂರಿಯಾಗಿ ನಡೆಯಿತು.</p>.<p>ಕರಗದ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ದೇವಸ್ಥಾನದಲ್ಲಿ ಶನಿವಾರ ರಾತ್ರಿ ಕರಗದ ಪ್ರಯುಕ್ತ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು.</p>.<p>ವಾಪಸಂದ್ರದ ಎಂ.ಅಂಜಿತ್ ಕುಮಾರ್ ಕರಗದ ಪೂಜಾರಿಯಾಗಿದ್ದರು. ಅವರು ಹೂವಿನ ಕರಗ ಹೊತ್ತು ರಾತ್ರಿ 10ರ ಸುಮಾರಿಗೆ ಒಂದು ಕೈಯಲ್ಲಿ ಕತ್ತಿ ಮತ್ತೊಂದು ಕೈಯಲ್ಲಿ ಮಂತ್ರದಂಡ ಹಿಡಿದು ದೇವಾಲಯದ ಗರ್ಭಗುಡಿಯಿಂದ ಹೊರಕ್ಕೆ ಬರುತ್ತಿದ್ದಂತೆ ತಮಟೆ ವಾದನ, ಮಂಗಳ ವಾದ್ಯಗಳು ಮೊಳಗಿದವು.</p>.<p>ಮಲ್ಲಿಗೆ, ಕನಕಾಂಬರ ಹೂವುಗಳಿಂದ ಆಕರ್ಷಕವಾಗಿ ಕಂಗೊಳಿಸುತ್ತಿದ್ದ ‘ಕರಗ’ ಸೂಸುತ್ತಿದ್ದ ಮಲ್ಲಿಗೆಯ ಪರಿಮಳ ಕರಗದ ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಮನೆ ಮಾಡಿತ್ತು. ನಗರದ ವಿವಿಧೆಡೆ ಕರಗಧಾರಿಗಳ ಸ್ವಾಗತಕ್ಕೆ ಮನೆಗಳ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು.</p>.<p>ದೇವಾಲಯದ ಬಳಿ ನಿರ್ಮಿಸಿದ್ದ ವೇದಿಕೆಯಲ್ಲಿ ನಡೆದ ಕರಗದ ಪೂಜಾರಿ ನೃತ್ಯವನ್ನು ಅಪಾರ ಭಕ್ತರು ಕಣ್ತುಂಬಿಕೊಂಡರು.</p>.<p>ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಹಾಗೂ ಮುಖಂಡರು ಈ ವೇಳೆ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-16-35101168</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಗರದ ಕಂದವಾರ ಬಾಗಿಲ ಸಿವಿವಿ ಸರ್ಕಲ್ ಬಳಿಯ ಕಾಳಿಕಾಂಬ ಕಮಠೇಶ್ವರ ದೇವಾಲಯದ 11ನೇ ವರ್ಷದ ಹೂವಿನ ಕರಗ ಮಹೋತ್ಸವ ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆಯವರೆಗೆ ಅದ್ದೂರಿಯಾಗಿ ನಡೆಯಿತು.</p>.<p>ಕರಗದ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ದೇವಸ್ಥಾನದಲ್ಲಿ ಶನಿವಾರ ರಾತ್ರಿ ಕರಗದ ಪ್ರಯುಕ್ತ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು.</p>.<p>ವಾಪಸಂದ್ರದ ಎಂ.ಅಂಜಿತ್ ಕುಮಾರ್ ಕರಗದ ಪೂಜಾರಿಯಾಗಿದ್ದರು. ಅವರು ಹೂವಿನ ಕರಗ ಹೊತ್ತು ರಾತ್ರಿ 10ರ ಸುಮಾರಿಗೆ ಒಂದು ಕೈಯಲ್ಲಿ ಕತ್ತಿ ಮತ್ತೊಂದು ಕೈಯಲ್ಲಿ ಮಂತ್ರದಂಡ ಹಿಡಿದು ದೇವಾಲಯದ ಗರ್ಭಗುಡಿಯಿಂದ ಹೊರಕ್ಕೆ ಬರುತ್ತಿದ್ದಂತೆ ತಮಟೆ ವಾದನ, ಮಂಗಳ ವಾದ್ಯಗಳು ಮೊಳಗಿದವು.</p>.<p>ಮಲ್ಲಿಗೆ, ಕನಕಾಂಬರ ಹೂವುಗಳಿಂದ ಆಕರ್ಷಕವಾಗಿ ಕಂಗೊಳಿಸುತ್ತಿದ್ದ ‘ಕರಗ’ ಸೂಸುತ್ತಿದ್ದ ಮಲ್ಲಿಗೆಯ ಪರಿಮಳ ಕರಗದ ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಮನೆ ಮಾಡಿತ್ತು. ನಗರದ ವಿವಿಧೆಡೆ ಕರಗಧಾರಿಗಳ ಸ್ವಾಗತಕ್ಕೆ ಮನೆಗಳ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು.</p>.<p>ದೇವಾಲಯದ ಬಳಿ ನಿರ್ಮಿಸಿದ್ದ ವೇದಿಕೆಯಲ್ಲಿ ನಡೆದ ಕರಗದ ಪೂಜಾರಿ ನೃತ್ಯವನ್ನು ಅಪಾರ ಭಕ್ತರು ಕಣ್ತುಂಬಿಕೊಂಡರು.</p>.<p>ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಹಾಗೂ ಮುಖಂಡರು ಈ ವೇಳೆ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-16-35101168</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>