<p>ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಅವರ ಆಸಕ್ತಿಯ ಫಲವಾಗಿ ನಡೆದ ಕಲ್ಯಾಣಿ ಸ್ವಚ್ಛತಾ ಅಭಿಯಾನ ಪೂರ್ಣವಾಗಿದೆ.</p>.<p>ಮಾ.23ರಂದು ಜಿಲ್ಲೆಯಲ್ಲಿ ಈ ಅಭಿಯಾನ ನಡೆದಿತ್ತು. ಮಳೆಗಾಲ ಪ್ರಾರಂಭಕ್ಕೂ ಮುನ್ನ ಜಿಲ್ಲೆಯಲ್ಲಿರುವ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿನ ಪುರಾತನ ಕಲ್ಯಾಣಿಗಳನ್ನು ಗುರುತಿಸಿ ಅವುಗಳನ್ನು ಸ್ವಚ್ಛ ಮಾಡುವ ಸಲುವಾಗಿ ಯೋಜನೆಯನ್ನು ಜಿಲ್ಲಾ ಪಂಚಾಯಿತಿ ರೂಪಿಸಿತ್ತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಜಿಲ್ಲೆಯಲ್ಲಿ 137 ಕಲ್ಯಾಣಿಗಳನ್ನು ಗುರುತಿಸಲಾಗಿತ್ತು.</p>.<p>ನಂತರ ಅವುಗಳನ್ನು ಸ್ವಚ್ಛತೆ ಮಾಡುವ ಉದ್ದೇಶದಿಂದ ಐತಿಹಾಸಿಕ ಕಲ್ಯಾಣಿಗಳ ಸ್ವಚ್ಛತೆ, ಜಲ ಸಂರಕ್ಷಣೆಗೆ ಆದ್ಯತೆಗೆ ವಿಶೇಷ ಆಂದೋಲನವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಡೆಸಲಾಗಿತ್ತು.</p>.<p>ಈಗ ಜಿಲ್ಲೆಯಾದ್ಯಂತ 83 ಕಲ್ಯಾಣಿಗಳನ್ನು ವಿಶೇಷ ಆಂದೋಲನ, ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಗಿದೆ. 53 ಕಲ್ಯಾಣಿಗಳನ್ನು ಹಿಂದಿನ ವರ್ಷ ಸ್ವಚ್ಛಗೊಳಿಸಲಾಗಿತ್ತು. ಇಲ್ಲಿಯವರೆಗೆ ಜಿಲ್ಲೆಯಾದ್ಯಂತ 136 ಕಲ್ಯಾಣಿಗಳು ಸ್ವಚ್ಛವಾಗಿವೆ.</p>.<p>ಉಳಿದಂತೆ ಚಿಂತಾಮಣಿ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದು ಕಲ್ಯಾಣಿಯನ್ನು ಜೂ.9ರಂದು ಸ್ವಚ್ಛಗೊಳಿಸಲು ತೀರ್ಮಾನಿಸಲಾಗಿದೆ.</p>.<p>ಈ ಸ್ವಚ್ಛತಾ ಅಭಿಯಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಸಹ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-16-1958732136</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಅವರ ಆಸಕ್ತಿಯ ಫಲವಾಗಿ ನಡೆದ ಕಲ್ಯಾಣಿ ಸ್ವಚ್ಛತಾ ಅಭಿಯಾನ ಪೂರ್ಣವಾಗಿದೆ.</p>.<p>ಮಾ.23ರಂದು ಜಿಲ್ಲೆಯಲ್ಲಿ ಈ ಅಭಿಯಾನ ನಡೆದಿತ್ತು. ಮಳೆಗಾಲ ಪ್ರಾರಂಭಕ್ಕೂ ಮುನ್ನ ಜಿಲ್ಲೆಯಲ್ಲಿರುವ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿನ ಪುರಾತನ ಕಲ್ಯಾಣಿಗಳನ್ನು ಗುರುತಿಸಿ ಅವುಗಳನ್ನು ಸ್ವಚ್ಛ ಮಾಡುವ ಸಲುವಾಗಿ ಯೋಜನೆಯನ್ನು ಜಿಲ್ಲಾ ಪಂಚಾಯಿತಿ ರೂಪಿಸಿತ್ತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಜಿಲ್ಲೆಯಲ್ಲಿ 137 ಕಲ್ಯಾಣಿಗಳನ್ನು ಗುರುತಿಸಲಾಗಿತ್ತು.</p>.<p>ನಂತರ ಅವುಗಳನ್ನು ಸ್ವಚ್ಛತೆ ಮಾಡುವ ಉದ್ದೇಶದಿಂದ ಐತಿಹಾಸಿಕ ಕಲ್ಯಾಣಿಗಳ ಸ್ವಚ್ಛತೆ, ಜಲ ಸಂರಕ್ಷಣೆಗೆ ಆದ್ಯತೆಗೆ ವಿಶೇಷ ಆಂದೋಲನವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಡೆಸಲಾಗಿತ್ತು.</p>.<p>ಈಗ ಜಿಲ್ಲೆಯಾದ್ಯಂತ 83 ಕಲ್ಯಾಣಿಗಳನ್ನು ವಿಶೇಷ ಆಂದೋಲನ, ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಗಿದೆ. 53 ಕಲ್ಯಾಣಿಗಳನ್ನು ಹಿಂದಿನ ವರ್ಷ ಸ್ವಚ್ಛಗೊಳಿಸಲಾಗಿತ್ತು. ಇಲ್ಲಿಯವರೆಗೆ ಜಿಲ್ಲೆಯಾದ್ಯಂತ 136 ಕಲ್ಯಾಣಿಗಳು ಸ್ವಚ್ಛವಾಗಿವೆ.</p>.<p>ಉಳಿದಂತೆ ಚಿಂತಾಮಣಿ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದು ಕಲ್ಯಾಣಿಯನ್ನು ಜೂ.9ರಂದು ಸ್ವಚ್ಛಗೊಳಿಸಲು ತೀರ್ಮಾನಿಸಲಾಗಿದೆ.</p>.<p>ಈ ಸ್ವಚ್ಛತಾ ಅಭಿಯಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಸಹ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-16-1958732136</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>