<p>ಚಿಕ್ಕಬಳ್ಳಾಪುರ: ಇಲ್ಲಿನ ಒಕ್ಕಲಿಗರ ಸಂಘದಿಂದ ₹7.5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಕೆಂಪೇಗೌಡ ವಾಣಿಜ್ಯ ಸಂಕೀರ್ಣದ ಉದ್ಘಾಟನೆ 13ರಂದು ನಡೆಯಲಿದೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಂಕೀರ್ಣ ಉದ್ಘಾಟಿಸುವರು. ಸಮುದಾಯದವರಿಗೆ ಸಂಕೀರ್ಣದಲ್ಲಿನ ಮಳಿಗೆಗಳನ್ನು ಬಾಡಿಗೆಗೆ ನೀಡಲು ನಿರ್ಧರಿಸಲಾಗಿದೆ ಎಂದರು.</p>.<p>ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಸಂಸದ ಡಾ.ಕೆ.ಸುಧಾಕರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್.ಚನ್ನಕೃಷ್ಣಪ್ಪ ರೆಡ್ಡಿ, ಸಹ ಕಾರ್ಯದರ್ಶಿ ಎಂ.ಪ್ರಕಾಶ್, ಉಪಾಧ್ಯಕ್ಷ ಬಿ.ಎಂ.ರಾಮಸ್ವಾಮಿ, ಖಜಾಂಚಿ ಬಿ.ಕೆ.ಮಂಜುನಾಥ್, ಒಕ್ಕಲಿಗರ ಕಲ್ಯಾಣ ಮಂಟಪದ ಅಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ಬೈರೇಗೌಡ, ವಿದ್ಯಾರ್ಥಿ ನಿಲಯದ ಅಧ್ಯಕ್ಷ ನಾರಾಯಣಸ್ವಾಮಿ, ರಾಜಣ್ಣ, ಧನಂಜಯ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-16-1329243676</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಇಲ್ಲಿನ ಒಕ್ಕಲಿಗರ ಸಂಘದಿಂದ ₹7.5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಕೆಂಪೇಗೌಡ ವಾಣಿಜ್ಯ ಸಂಕೀರ್ಣದ ಉದ್ಘಾಟನೆ 13ರಂದು ನಡೆಯಲಿದೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಂಕೀರ್ಣ ಉದ್ಘಾಟಿಸುವರು. ಸಮುದಾಯದವರಿಗೆ ಸಂಕೀರ್ಣದಲ್ಲಿನ ಮಳಿಗೆಗಳನ್ನು ಬಾಡಿಗೆಗೆ ನೀಡಲು ನಿರ್ಧರಿಸಲಾಗಿದೆ ಎಂದರು.</p>.<p>ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಸಂಸದ ಡಾ.ಕೆ.ಸುಧಾಕರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್.ಚನ್ನಕೃಷ್ಣಪ್ಪ ರೆಡ್ಡಿ, ಸಹ ಕಾರ್ಯದರ್ಶಿ ಎಂ.ಪ್ರಕಾಶ್, ಉಪಾಧ್ಯಕ್ಷ ಬಿ.ಎಂ.ರಾಮಸ್ವಾಮಿ, ಖಜಾಂಚಿ ಬಿ.ಕೆ.ಮಂಜುನಾಥ್, ಒಕ್ಕಲಿಗರ ಕಲ್ಯಾಣ ಮಂಟಪದ ಅಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ಬೈರೇಗೌಡ, ವಿದ್ಯಾರ್ಥಿ ನಿಲಯದ ಅಧ್ಯಕ್ಷ ನಾರಾಯಣಸ್ವಾಮಿ, ರಾಜಣ್ಣ, ಧನಂಜಯ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-16-1329243676</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>