<p><strong>ಚಿಕ್ಕಬಳ್ಳಾಪುರ:</strong> ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿ ಬ್ಯಾಂಕ್ಗಳ ಮೂಲಕ ಅನುಷ್ಠಾನವಾಗಲಿರುವ ಸಾಲ ಸೌಲಭ್ಯಗಳ ಹಣ ಬಿಡುಗಡೆ ಪ್ರಕ್ರಿಯೆಯಲ್ಲಿ ವಿಳಂಬ ಮತ್ತು ನಿರ್ಲಕ್ಷ ಧೋರಣೆ ತೋರಿರುವುದನ್ನು ಸಹಿಸುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರ ಪ್ರದೇಶದ ಬೀದಿಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ‘ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆ’ಯಡಿ ಸಾಲ ಸೌಲಭ್ಯ ನೀಡುವ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ ಒಟ್ಟು 4,973 ಅರ್ಜಿಗಳನ್ನು ಮಂಜೂರಾತಿ ನೀಡಲಾಗಿದೆ. ಈ ಪೈಕಿ 4,762 ಫಲಾನುಭವಿಗಳಿಗೆ ಬ್ಯಾಂಕುಗಳಿಂದ ಹಣ ಬಿಡುಗಡೆಯಾಗಿದೆ ಎಂದರು.</p>.<p>ಬಾಕಿ 211 ಅರ್ಜಿಗಳಿಗೆ ಬ್ಯಾಂಕ್ಗಳಲ್ಲಿ ಎಲ್ಲಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಹಣ ಬಿಡುಗಡೆಯನ್ನು ಮಾತ್ರ ಬಾಕಿ ಇಟ್ಟಿರುವುದು ಸರಿಯಲ್ಲ. ಈ ಧೋರಣೆ ಜಿಲ್ಲೆಯ ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಯಾವುದೇ ಅರ್ಜಿದಾರರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ. ಮುಂದಿನ ದಿನಗಳಲ್ಲಿ ಇಂತಹ ನಿರ್ಲಕ್ಷಕ್ಕೆ ಆಸ್ಪದ ನೀಡಬಾರದು ಎಂದು ಎಚ್ಚರಿಸಿದರು.</p>.<p>ಆತ್ಮ ನಿರ್ಭರ ಯೋಜನೆಯಡಿ ಪ್ರಸ್ತುತ ಪ್ರಾಥಮಿಕ ಕಿರು ಸಾಲದ ಮೊತ್ತವನ್ನು ಸರ್ಕಾರ ₹ 10 ಸಾವಿರದಿಂದ ₹ 15 ಸಾವಿರಕ್ಕೆ ಹೆಚ್ಚಿಸಿದೆ. ಪ್ರಾಥಮಿಕ ಹಂತದ ಕಿರು ಸಾಲಕ್ಕೆ ಒಟ್ಟು 5,456 ಅರ್ಜಿಗಳನ್ನು ಸ್ವೀಕರಿಸಿ 4,762 ಫಲಾನುಭವಿಗಳಿಗೆ ₹ 499 ಲಕ್ಷಗಳ ಸಾಲ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.</p>.<p>ಮೊದಲ ಹಂತದಲ್ಲಿ ಪಡೆದ ಸಾಲವನ್ನು ತೀರಿಸಿದ ಬೀದಿಬದಿ ವ್ಯಾಪಾರಸ್ಥರಿಗೆ ದ್ವಿತೀಯ ಹಂತದಲ್ಲಿ 1,791 ಫಲಾನುಭವಿಗಳಿಗೆ ₹ 25 ಸಾವಿರಗಳಂತೆ ಒಟ್ಟು ₹ 373 ಲಕ್ಷಗಳ ಸಾಲ ಸೌಲಭ್ಯ ನೀಡಲಾಗಿದೆ. 3ನೇ ಹಂತದಲ್ಲಿ 634 ಫಲಾನುಭವಿಗಳಿಗೆ ತಲಾ ₹ 50,000ಗಳಂತೆ ಒಟ್ಟು 316 ಲಕ್ಷ ಸಾಲ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯು ಬೀದಿ ಬದಿ ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಅಭಿವೃದ್ಧಿಗೊಳ್ಳಲು ಬಹಳ ಸಹಕಾರಿ. ಹಣ ಬಿಡುಗಡೆಗೆ ಬಾಕಿ ಇರುವ 211 ಅರ್ಜಿಗಳನ್ನು ಒಂದು ವಾರದಲ್ಲಿ ವಿಲೇವಾರಿ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತಿಕ್ ಪಾಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ವೆಂಕಟೇಶರೆಡ್ಡಿ, ಕೌಶಲಾಭಿವೃದ್ಧಿ ಅಧಿಕಾರಿ ಎಂ.ಪ್ರಸಾದ್, ಅಭಿಯಾನ ವ್ಯವಸ್ಥಾಪಕ ವೆಂಕಟಾಚಲಪತಿ ಹಾಗೂ ಜಿಲ್ಲೆಯ ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-16-748636328</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿ ಬ್ಯಾಂಕ್ಗಳ ಮೂಲಕ ಅನುಷ್ಠಾನವಾಗಲಿರುವ ಸಾಲ ಸೌಲಭ್ಯಗಳ ಹಣ ಬಿಡುಗಡೆ ಪ್ರಕ್ರಿಯೆಯಲ್ಲಿ ವಿಳಂಬ ಮತ್ತು ನಿರ್ಲಕ್ಷ ಧೋರಣೆ ತೋರಿರುವುದನ್ನು ಸಹಿಸುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರ ಪ್ರದೇಶದ ಬೀದಿಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ‘ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆ’ಯಡಿ ಸಾಲ ಸೌಲಭ್ಯ ನೀಡುವ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ ಒಟ್ಟು 4,973 ಅರ್ಜಿಗಳನ್ನು ಮಂಜೂರಾತಿ ನೀಡಲಾಗಿದೆ. ಈ ಪೈಕಿ 4,762 ಫಲಾನುಭವಿಗಳಿಗೆ ಬ್ಯಾಂಕುಗಳಿಂದ ಹಣ ಬಿಡುಗಡೆಯಾಗಿದೆ ಎಂದರು.</p>.<p>ಬಾಕಿ 211 ಅರ್ಜಿಗಳಿಗೆ ಬ್ಯಾಂಕ್ಗಳಲ್ಲಿ ಎಲ್ಲಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಹಣ ಬಿಡುಗಡೆಯನ್ನು ಮಾತ್ರ ಬಾಕಿ ಇಟ್ಟಿರುವುದು ಸರಿಯಲ್ಲ. ಈ ಧೋರಣೆ ಜಿಲ್ಲೆಯ ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಯಾವುದೇ ಅರ್ಜಿದಾರರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ. ಮುಂದಿನ ದಿನಗಳಲ್ಲಿ ಇಂತಹ ನಿರ್ಲಕ್ಷಕ್ಕೆ ಆಸ್ಪದ ನೀಡಬಾರದು ಎಂದು ಎಚ್ಚರಿಸಿದರು.</p>.<p>ಆತ್ಮ ನಿರ್ಭರ ಯೋಜನೆಯಡಿ ಪ್ರಸ್ತುತ ಪ್ರಾಥಮಿಕ ಕಿರು ಸಾಲದ ಮೊತ್ತವನ್ನು ಸರ್ಕಾರ ₹ 10 ಸಾವಿರದಿಂದ ₹ 15 ಸಾವಿರಕ್ಕೆ ಹೆಚ್ಚಿಸಿದೆ. ಪ್ರಾಥಮಿಕ ಹಂತದ ಕಿರು ಸಾಲಕ್ಕೆ ಒಟ್ಟು 5,456 ಅರ್ಜಿಗಳನ್ನು ಸ್ವೀಕರಿಸಿ 4,762 ಫಲಾನುಭವಿಗಳಿಗೆ ₹ 499 ಲಕ್ಷಗಳ ಸಾಲ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.</p>.<p>ಮೊದಲ ಹಂತದಲ್ಲಿ ಪಡೆದ ಸಾಲವನ್ನು ತೀರಿಸಿದ ಬೀದಿಬದಿ ವ್ಯಾಪಾರಸ್ಥರಿಗೆ ದ್ವಿತೀಯ ಹಂತದಲ್ಲಿ 1,791 ಫಲಾನುಭವಿಗಳಿಗೆ ₹ 25 ಸಾವಿರಗಳಂತೆ ಒಟ್ಟು ₹ 373 ಲಕ್ಷಗಳ ಸಾಲ ಸೌಲಭ್ಯ ನೀಡಲಾಗಿದೆ. 3ನೇ ಹಂತದಲ್ಲಿ 634 ಫಲಾನುಭವಿಗಳಿಗೆ ತಲಾ ₹ 50,000ಗಳಂತೆ ಒಟ್ಟು 316 ಲಕ್ಷ ಸಾಲ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯು ಬೀದಿ ಬದಿ ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಅಭಿವೃದ್ಧಿಗೊಳ್ಳಲು ಬಹಳ ಸಹಕಾರಿ. ಹಣ ಬಿಡುಗಡೆಗೆ ಬಾಕಿ ಇರುವ 211 ಅರ್ಜಿಗಳನ್ನು ಒಂದು ವಾರದಲ್ಲಿ ವಿಲೇವಾರಿ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತಿಕ್ ಪಾಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ವೆಂಕಟೇಶರೆಡ್ಡಿ, ಕೌಶಲಾಭಿವೃದ್ಧಿ ಅಧಿಕಾರಿ ಎಂ.ಪ್ರಸಾದ್, ಅಭಿಯಾನ ವ್ಯವಸ್ಥಾಪಕ ವೆಂಕಟಾಚಲಪತಿ ಹಾಗೂ ಜಿಲ್ಲೆಯ ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-16-748636328</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>