<p><strong>ಚಿಕ್ಕಬಳ್ಳಾಪುರ</strong>: ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಚಿಮುಲ್) ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಚುನಾವಣಾ ಕಣ ನಿಚ್ಚಳವಾಗಿದೆ. 13 ಸ್ಥಾನಗಳಿಗೆ ಒಟ್ಟು 28 ಅಭ್ಯರ್ಥಿಗಳು ಸೆಣಸಾಟ ನಡೆಸುವರು.</p><p>ಶನಿವಾರ ನಾಮಪತ್ರ ವಾಪಸ್ಗೆ ಅಂತಿಮ ದಿನವಾಗಿತ್ತು. 14 ಮಂದಿ ತಮ್ಮ ಉಮೇದುವಾರಿಕೆ ವಾಪಸ್ ಪಡೆದರು. ಒಟ್ಟು 43 ಮಂದಿ ನಾಮಪತ್ರ ಸಲ್ಲಿಸಿದ್ದು ಈ ಪೈಕಿ ಚೇಳೂರು ಕ್ಷೇತ್ರದ ಎನ್.ವಿ.ಶ್ರೀರಾಮರೆಡ್ಡಿ ನಾಮಪತ್ರ ತಿರಸ್ಕೃತವಾಗಿತ್ತು. </p><p>ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ಮಹಿಳಾ ಕ್ಷೇತ್ರದಲ್ಲಿ ಮಾತ್ರ ಮೂವರು ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಉಳಿದ 11 ಕ್ಷೇತ್ರಗಳಲ್ಲಿ ಇಬ್ಬರು ಅಭ್ಯರ್ಥಿಗಳ ನಡುವೆ ಸೆಣಸಾಟವಿದೆ.</p><p>ಈ ಮೂಲಕ ಜಿಲ್ಲೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಬೆಂಬಲಿತರು ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ಸೋಲು ಗೆಲುವಿಗೆ ಪೈಪೋಟಿ ನಡೆಯುವುದು ನಿಚ್ಚಳವಾಗಿದೆ.</p><p>ತೀವ್ರ ಚರ್ಚೆಗೆ ಕಾರಣವಾಗಿದ್ದ ಚಿಕ್ಕಬಳ್ಳಾಪುರ (ನಂದಿ) ಕ್ಷೇತ್ರದಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗುದ್ದ ಶಿವಾನಂದ್ ನಾಮಪತ್ರ ವಾಪಸ್ ಪಡೆದಿದ್ದಾರೆ. ಇಲ್ಲಿ ಕಾಂಗ್ರೆಸ್ ಮುಖಂಡರಾದ ಎನ್.ಸಿ.ವೆಂಕಟೇಶ್ ಮತ್ತು ಯಲುವಳ್ಳಿ ಎನ್.ರಮೇಶ್ ನಡುವೆ ಸ್ಪರ್ಧೆ ಇದೆ. ಈ ಮೂಲಕ ಒಂದೇ ಪಕ್ಷದಲ್ಲಿಯೇ ಬಣಗಳಾಗಿ ಸೆಣಸಾಟ ನಡೆಯುವುದು ನಿಚ್ಚಳವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಚಿಮುಲ್) ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಚುನಾವಣಾ ಕಣ ನಿಚ್ಚಳವಾಗಿದೆ. 13 ಸ್ಥಾನಗಳಿಗೆ ಒಟ್ಟು 28 ಅಭ್ಯರ್ಥಿಗಳು ಸೆಣಸಾಟ ನಡೆಸುವರು.</p><p>ಶನಿವಾರ ನಾಮಪತ್ರ ವಾಪಸ್ಗೆ ಅಂತಿಮ ದಿನವಾಗಿತ್ತು. 14 ಮಂದಿ ತಮ್ಮ ಉಮೇದುವಾರಿಕೆ ವಾಪಸ್ ಪಡೆದರು. ಒಟ್ಟು 43 ಮಂದಿ ನಾಮಪತ್ರ ಸಲ್ಲಿಸಿದ್ದು ಈ ಪೈಕಿ ಚೇಳೂರು ಕ್ಷೇತ್ರದ ಎನ್.ವಿ.ಶ್ರೀರಾಮರೆಡ್ಡಿ ನಾಮಪತ್ರ ತಿರಸ್ಕೃತವಾಗಿತ್ತು. </p><p>ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ಮಹಿಳಾ ಕ್ಷೇತ್ರದಲ್ಲಿ ಮಾತ್ರ ಮೂವರು ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಉಳಿದ 11 ಕ್ಷೇತ್ರಗಳಲ್ಲಿ ಇಬ್ಬರು ಅಭ್ಯರ್ಥಿಗಳ ನಡುವೆ ಸೆಣಸಾಟವಿದೆ.</p><p>ಈ ಮೂಲಕ ಜಿಲ್ಲೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಬೆಂಬಲಿತರು ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ಸೋಲು ಗೆಲುವಿಗೆ ಪೈಪೋಟಿ ನಡೆಯುವುದು ನಿಚ್ಚಳವಾಗಿದೆ.</p><p>ತೀವ್ರ ಚರ್ಚೆಗೆ ಕಾರಣವಾಗಿದ್ದ ಚಿಕ್ಕಬಳ್ಳಾಪುರ (ನಂದಿ) ಕ್ಷೇತ್ರದಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗುದ್ದ ಶಿವಾನಂದ್ ನಾಮಪತ್ರ ವಾಪಸ್ ಪಡೆದಿದ್ದಾರೆ. ಇಲ್ಲಿ ಕಾಂಗ್ರೆಸ್ ಮುಖಂಡರಾದ ಎನ್.ಸಿ.ವೆಂಕಟೇಶ್ ಮತ್ತು ಯಲುವಳ್ಳಿ ಎನ್.ರಮೇಶ್ ನಡುವೆ ಸ್ಪರ್ಧೆ ಇದೆ. ಈ ಮೂಲಕ ಒಂದೇ ಪಕ್ಷದಲ್ಲಿಯೇ ಬಣಗಳಾಗಿ ಸೆಣಸಾಟ ನಡೆಯುವುದು ನಿಚ್ಚಳವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>