<p><strong>ಚಿಕ್ಕಬಳ್ಳಾಪುರ</strong>: ‘ಕೊರೊನಾ ಸಂದರ್ಭದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಕೋಚಿಮುಲ್) ₹ 30 ಕೋಟಿ ನಷ್ಟ ಅನುಭವಿಸಿತ್ತು. ಈಗ ಆ ನಷ್ಟವನ್ನು ಭರ್ತಿ ಮಾಡಿಕೊಂಡು ₹ 4 ಕೋಟಿ ಲಾಭಗಳಿಸಿದೆ’ ಎಂದು ಕೋಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್ ತಿಳಿಸಿದರು.</p>.<p>ನಗರದ ಕೋಚಿಮುಲ್ ಶಿಬಿರ ಕಚೇರಿಯಲ್ಲಿರಾಸು ವಿಮೆ ಪರಿಹಾರ ಹಾಗೂ ಡೇರಿ ಕಟ್ಟಡಕ್ಕೆ ಅನುದಾನದ ಚೆಕ್ ವಿತರಿಸಿ ಅವರು ಮಾತನಾಡಿದರು.</p>.<p>ಕೊರೊನಾ ಸಂದರ್ಭದಲ್ಲಿ ರೈತರಿಗೆ ನಿಗದಿತ ಅವಧಿಯಲ್ಲಿಯೇ ಹಾಲಿನ ಬಟವಾಡೆ ಹಣ ನೀಡಲಾಗಿದೆ ಎಂದರು.</p>.<p>ಸರ್ಕಾರ ಹಾಲಿನ ದರವನ್ನು ಹೆಚ್ಚಿಸಿ ನಾಲ್ಕು ವರ್ಷವಾಗಿದೆ. ಪ್ರತಿ ವರ್ಷ ಹಾಲಿನ ದರ ಹೆಚ್ಚಿಸಬೇಕು. ದರ ಹೆಚ್ಚಿಸಿದರೆ ರೈತರು ಮತ್ತು ಹೈನುಗಾರರು ಉಳಿಯಲು ಸಾಧ್ಯ. ಆದರೆ ಸರ್ಕಾರ ಬಿಬಿಎಂಪಿ ಚುನಾವಣೆಯ ದೃಷ್ಟಿಯಿಂದ ಹಾಲಿನ ದರ ಹೆಚ್ಚಿಸುತ್ತಿಲ್ಲ ಎಂದು ದೂರಿದರು.</p>.<p>ಪಶು ಆಹಾರದ ಬೆಲೆ ಗಣನೀಯವಾಗಿ ಹೆಚ್ಚಿದೆ. ಕೂಲಿ ಕಾರ್ಮಿಕರ ಕೂಲಿ ಹೆಚ್ಚಿದೆ. ಇಂತಹ ಸನ್ನಿವೇಶದಲ್ಲಿ ಖರ್ಚು ವೆಚ್ಚ ಕಳೆದು ಹಾಲು ಉತ್ಪಾದಕರಿಗೆ ಗೊಬ್ಬರ ಮಾತ್ರ ಉಳಿಯುತ್ತಿದೆ. ಆದ್ದರಿಂದಹಾಲಿನ ಬೆಲೆ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತೇವೆ ಎಂದರು.</p>.<p>ನಮಗೆ ಮತ ಬರುವುದಿಲ್ಲ ಎನ್ನುವ ಕಾರಣದಿಂದ ಸರ್ಕಾರ ಹಾಲಿನ ದರ ಹೆಚ್ಚಳಕ್ಕೆ ಮುಂದಾಗುತ್ತಿದೆ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿರುವುದನ್ನು ಗಮನಿಸಬೇಕು ಎಂದರು.</p>.<p>ದೊರೆಯದ ಪ್ರೋತ್ಸಾಹಧನ: ಗಡಿಭಾಗದ ಜಿಲ್ಲೆಗಳಲ್ಲಿ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಿರುತ್ತದೆ. ಸರ್ಕಾರವು ಪ್ರೋತ್ಸಾಹ ಧನ ಪಡೆಯಬೇಕಾದರೆ ಹಾಲಿನ ಗುಣಮಟ್ಟ ಹೆಚ್ಚಿರಬೇಕು. ಆದರೆ ಇಲ್ಲಿನ ವಾತಾವರಣಕ್ಕೆ ಪ್ಯಾಟ್ ಬರುವುದಿಲ್ಲ. ಇದರಿಂದ ಶೇ 70ರಷ್ಟು ಹೈನುಗಾರರು ಪ್ರೋತ್ಸಾಹ ಧನದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.</p>.<p>ಒಕ್ಕೂಟವು ರಾಸುಗಳಿಗೆ ವಿಮೆ ಮಾಡಿಸುತ್ತಿದೆ. ರೈತರಿಂದ ಇದಕ್ಕೆ ಹಣ ಪಡೆಯುವುದಿಲ್ಲ. ಉತ್ಪಾದಕರ ಮಕ್ಕಳಿಗೆ ಬೆಂಗಳೂರಿನಲ್ಲಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗಿದೆ. ವಿದ್ಯಾರ್ಥಿ ವೇತನ ನೀಡುತ್ತಿದ್ದೇವೆ. ಡೇರಿ ಕಟ್ಟಡಗಳ ನಿರ್ಮಾಣಕ್ಕೆ ಒಕ್ಕೂಟವು ಉಚಿತವಾಗಿ ₹ 7.5 ಲಕ್ಷ ಹಣ ನೀಡುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಕೊರೊನಾ ಸಂದರ್ಭದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಕೋಚಿಮುಲ್) ₹ 30 ಕೋಟಿ ನಷ್ಟ ಅನುಭವಿಸಿತ್ತು. ಈಗ ಆ ನಷ್ಟವನ್ನು ಭರ್ತಿ ಮಾಡಿಕೊಂಡು ₹ 4 ಕೋಟಿ ಲಾಭಗಳಿಸಿದೆ’ ಎಂದು ಕೋಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್ ತಿಳಿಸಿದರು.</p>.<p>ನಗರದ ಕೋಚಿಮುಲ್ ಶಿಬಿರ ಕಚೇರಿಯಲ್ಲಿರಾಸು ವಿಮೆ ಪರಿಹಾರ ಹಾಗೂ ಡೇರಿ ಕಟ್ಟಡಕ್ಕೆ ಅನುದಾನದ ಚೆಕ್ ವಿತರಿಸಿ ಅವರು ಮಾತನಾಡಿದರು.</p>.<p>ಕೊರೊನಾ ಸಂದರ್ಭದಲ್ಲಿ ರೈತರಿಗೆ ನಿಗದಿತ ಅವಧಿಯಲ್ಲಿಯೇ ಹಾಲಿನ ಬಟವಾಡೆ ಹಣ ನೀಡಲಾಗಿದೆ ಎಂದರು.</p>.<p>ಸರ್ಕಾರ ಹಾಲಿನ ದರವನ್ನು ಹೆಚ್ಚಿಸಿ ನಾಲ್ಕು ವರ್ಷವಾಗಿದೆ. ಪ್ರತಿ ವರ್ಷ ಹಾಲಿನ ದರ ಹೆಚ್ಚಿಸಬೇಕು. ದರ ಹೆಚ್ಚಿಸಿದರೆ ರೈತರು ಮತ್ತು ಹೈನುಗಾರರು ಉಳಿಯಲು ಸಾಧ್ಯ. ಆದರೆ ಸರ್ಕಾರ ಬಿಬಿಎಂಪಿ ಚುನಾವಣೆಯ ದೃಷ್ಟಿಯಿಂದ ಹಾಲಿನ ದರ ಹೆಚ್ಚಿಸುತ್ತಿಲ್ಲ ಎಂದು ದೂರಿದರು.</p>.<p>ಪಶು ಆಹಾರದ ಬೆಲೆ ಗಣನೀಯವಾಗಿ ಹೆಚ್ಚಿದೆ. ಕೂಲಿ ಕಾರ್ಮಿಕರ ಕೂಲಿ ಹೆಚ್ಚಿದೆ. ಇಂತಹ ಸನ್ನಿವೇಶದಲ್ಲಿ ಖರ್ಚು ವೆಚ್ಚ ಕಳೆದು ಹಾಲು ಉತ್ಪಾದಕರಿಗೆ ಗೊಬ್ಬರ ಮಾತ್ರ ಉಳಿಯುತ್ತಿದೆ. ಆದ್ದರಿಂದಹಾಲಿನ ಬೆಲೆ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತೇವೆ ಎಂದರು.</p>.<p>ನಮಗೆ ಮತ ಬರುವುದಿಲ್ಲ ಎನ್ನುವ ಕಾರಣದಿಂದ ಸರ್ಕಾರ ಹಾಲಿನ ದರ ಹೆಚ್ಚಳಕ್ಕೆ ಮುಂದಾಗುತ್ತಿದೆ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿರುವುದನ್ನು ಗಮನಿಸಬೇಕು ಎಂದರು.</p>.<p>ದೊರೆಯದ ಪ್ರೋತ್ಸಾಹಧನ: ಗಡಿಭಾಗದ ಜಿಲ್ಲೆಗಳಲ್ಲಿ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಿರುತ್ತದೆ. ಸರ್ಕಾರವು ಪ್ರೋತ್ಸಾಹ ಧನ ಪಡೆಯಬೇಕಾದರೆ ಹಾಲಿನ ಗುಣಮಟ್ಟ ಹೆಚ್ಚಿರಬೇಕು. ಆದರೆ ಇಲ್ಲಿನ ವಾತಾವರಣಕ್ಕೆ ಪ್ಯಾಟ್ ಬರುವುದಿಲ್ಲ. ಇದರಿಂದ ಶೇ 70ರಷ್ಟು ಹೈನುಗಾರರು ಪ್ರೋತ್ಸಾಹ ಧನದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.</p>.<p>ಒಕ್ಕೂಟವು ರಾಸುಗಳಿಗೆ ವಿಮೆ ಮಾಡಿಸುತ್ತಿದೆ. ರೈತರಿಂದ ಇದಕ್ಕೆ ಹಣ ಪಡೆಯುವುದಿಲ್ಲ. ಉತ್ಪಾದಕರ ಮಕ್ಕಳಿಗೆ ಬೆಂಗಳೂರಿನಲ್ಲಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗಿದೆ. ವಿದ್ಯಾರ್ಥಿ ವೇತನ ನೀಡುತ್ತಿದ್ದೇವೆ. ಡೇರಿ ಕಟ್ಟಡಗಳ ನಿರ್ಮಾಣಕ್ಕೆ ಒಕ್ಕೂಟವು ಉಚಿತವಾಗಿ ₹ 7.5 ಲಕ್ಷ ಹಣ ನೀಡುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>