<p><strong>ಚಿಕ್ಕಬಳ್ಳಾಪುರ:</strong> ಎಸ್.ಎನ್.ಸುಬ್ಬಾರೆಡ್ಡಿ ಮೂರು ಬಾರಿ, ಪ್ರದೀಪ್ ಈಶ್ವರ್ ಮೊದಲ ಬಾರಿ ಶಾಸಕರಾಗಿದ್ದಾರೆ. ಸಚಿವ ಸ್ಥಾನದ ಬಗ್ಗೆ ಶಾಸಕರು ಬಯಕೆ ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ ಈ ವಿಚಾರವಾಗಿ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. </p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಮೊದಲ ಬಾರಿಗೆ ಆಯ್ಕೆ ಆದವರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡುತ್ತಿರಲಿಲ್ಲ. ಆದರೆ ಈಗ ಇಬ್ಬರಿಗೆ ಅವಕಾಶ ನೀಡಿದ್ದಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಇದೇ ರೀತಿಯಲ್ಲಿ ಆಗುತ್ತದೆ ಎಂದು ಹೇಳಲು <br>ಸಾಧ್ಯವಿಲ್ಲ ಎಂದರು.</p>.<p>ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯು ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಅವರ ಸರ್ವೋಚ್ಛ ಅಧಿಕಾರ. ಯಾರು ಸಚಿವರಾಗಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಸ್ಥಾನ ಕೇಳುವ ಹಕ್ಕು ಎಲ್ಲರಿಗೂ ಇರುತ್ತದೆ. ಪಕ್ಷದ ನಿರ್ಧಾರಕ್ಕೆ ನಾವು ಬದ್ಧ ಎಂದು <br>ಹೇಳಿದರು.</p>.<p>ಪಕ್ಷದ ಶಿಸ್ತಿಗೆ ಒಳಪಟ್ಟು ಕೆಲಸ ಮಾಡುತ್ತೇವೆ. ಗೊಂದಲಗಳನ್ನು ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿ ಅವರು ಆಗಾಗ್ಗೆ ಸಚಿವರನ್ನು ಕರೆದು ಕುಶಲೋಪರಿ ವಿಚಾರಿಸುವರು. ಸಂಪುಟ ವಿಸ್ತರಣೆ ವಿಚಾರದಲ್ಲಿ ನಮ್ಮನ್ನು ಕೇಳಿ ತೀರ್ಮಾನ ಮಾಡುವುದಿಲ್ಲ <br>ಎಂದರು.</p>.<p>ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಒಂದೇ ಕುಟುಂಬಕ್ಕೆ ಗಣಿಗಾರಿಕೆಗೆ 60 ಎಕರೆ ಜಮೀನು ಮಂಜೂರು ಮಾಡಿರುವ ವಿಚಾರದ ಬಗ್ಗೆ ಶಾಸಕ ಬಿ.ಎನ್.ರವಿಕುಮಾರ್ ಅವರು ಸದನದಲ್ಲಿ ಮತ್ತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ ಎಂದು ಹೇಳಿದರು.</p>.<p>ತಪ್ಪು ಮಾಹಿತಿ ನೀಡಿ ಭೂಮಿ ಪರಿವರ್ತನೆ ಮಾಡಿರುವ ಆರೋಪವಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದ್ದೇನೆ. ಲೋಪಗಳ ಬಗ್ಗೆ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.</p>.<blockquote>ಮೊದಲ ಬಾರಿಗೆ ಆಯ್ಕೆ ಆದವರಿಗೆ ಅವಕಾಶ ನೀಡುತ್ತಿರಲಿಲ್ಲ | ಸ್ಥಾನ ಕೇಳುವ ಹಕ್ಕು ಎಲ್ಲರಿಗೂ ಇದೆ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಎಸ್.ಎನ್.ಸುಬ್ಬಾರೆಡ್ಡಿ ಮೂರು ಬಾರಿ, ಪ್ರದೀಪ್ ಈಶ್ವರ್ ಮೊದಲ ಬಾರಿ ಶಾಸಕರಾಗಿದ್ದಾರೆ. ಸಚಿವ ಸ್ಥಾನದ ಬಗ್ಗೆ ಶಾಸಕರು ಬಯಕೆ ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ ಈ ವಿಚಾರವಾಗಿ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. </p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಮೊದಲ ಬಾರಿಗೆ ಆಯ್ಕೆ ಆದವರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡುತ್ತಿರಲಿಲ್ಲ. ಆದರೆ ಈಗ ಇಬ್ಬರಿಗೆ ಅವಕಾಶ ನೀಡಿದ್ದಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಇದೇ ರೀತಿಯಲ್ಲಿ ಆಗುತ್ತದೆ ಎಂದು ಹೇಳಲು <br>ಸಾಧ್ಯವಿಲ್ಲ ಎಂದರು.</p>.<p>ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯು ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಅವರ ಸರ್ವೋಚ್ಛ ಅಧಿಕಾರ. ಯಾರು ಸಚಿವರಾಗಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಸ್ಥಾನ ಕೇಳುವ ಹಕ್ಕು ಎಲ್ಲರಿಗೂ ಇರುತ್ತದೆ. ಪಕ್ಷದ ನಿರ್ಧಾರಕ್ಕೆ ನಾವು ಬದ್ಧ ಎಂದು <br>ಹೇಳಿದರು.</p>.<p>ಪಕ್ಷದ ಶಿಸ್ತಿಗೆ ಒಳಪಟ್ಟು ಕೆಲಸ ಮಾಡುತ್ತೇವೆ. ಗೊಂದಲಗಳನ್ನು ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿ ಅವರು ಆಗಾಗ್ಗೆ ಸಚಿವರನ್ನು ಕರೆದು ಕುಶಲೋಪರಿ ವಿಚಾರಿಸುವರು. ಸಂಪುಟ ವಿಸ್ತರಣೆ ವಿಚಾರದಲ್ಲಿ ನಮ್ಮನ್ನು ಕೇಳಿ ತೀರ್ಮಾನ ಮಾಡುವುದಿಲ್ಲ <br>ಎಂದರು.</p>.<p>ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಒಂದೇ ಕುಟುಂಬಕ್ಕೆ ಗಣಿಗಾರಿಕೆಗೆ 60 ಎಕರೆ ಜಮೀನು ಮಂಜೂರು ಮಾಡಿರುವ ವಿಚಾರದ ಬಗ್ಗೆ ಶಾಸಕ ಬಿ.ಎನ್.ರವಿಕುಮಾರ್ ಅವರು ಸದನದಲ್ಲಿ ಮತ್ತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ ಎಂದು ಹೇಳಿದರು.</p>.<p>ತಪ್ಪು ಮಾಹಿತಿ ನೀಡಿ ಭೂಮಿ ಪರಿವರ್ತನೆ ಮಾಡಿರುವ ಆರೋಪವಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದ್ದೇನೆ. ಲೋಪಗಳ ಬಗ್ಗೆ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.</p>.<blockquote>ಮೊದಲ ಬಾರಿಗೆ ಆಯ್ಕೆ ಆದವರಿಗೆ ಅವಕಾಶ ನೀಡುತ್ತಿರಲಿಲ್ಲ | ಸ್ಥಾನ ಕೇಳುವ ಹಕ್ಕು ಎಲ್ಲರಿಗೂ ಇದೆ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>