<p><strong>ಚಿಕ್ಕಬಳ್ಳಾಪುರ</strong>: ‘ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಕ್ಷೇತ್ರದ ಅಭಿವೃದ್ಧಿ ಚಿಂತನೆ ಇಲ್ಲ. ಚಿಲ್ಲರೆ ರಾಜಕೀಯ ರೂಢಿಸಿಕೊಂಡಿದ್ದಾರೆ’ ಎಂದು ನಗರಸಭೆ ಸದಸ್ಯೆ ಸ್ವಾತಿ ಅವರ ಪತಿ ಮಂಜುನಾಥ್ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘22ನೇ ವಾರ್ಡ್ ವ್ಯಾಪ್ತಿಯ ವಿನಾಯಕನಗರದ ಮುಖ್ಯ ರಸ್ತೆ ಹಾಳಾಗಿದೆ. ನಾಗರಿಕರಿಗೆ ಸಮಸ್ಯೆ ಆಗುತ್ತಿದೆ. ಅಭಿವೃದ್ಧಿಗೆ ಕ್ರಮವಹಿಸಬೇಕು ಎಂದು ನಗರಸಭೆಗೆ ಮನವಿ ಮಾಡಿದ್ದೆವು. ಆ ಪ್ರಕಾರ ಕಾಮಗಾರಿ ಮಂಜೂರಾಗಿ ₹ 16 ಲಕ್ಷ ವೆಚ್ಚದ ಟೆಂಡರ್ ಆಗಿತ್ತು. ಕಾಮಗಾರಿ ನಡೆಯುತ್ತಿರುವಾಗಲೇ ಪ್ರದೀಪ್ ಈಶ್ವರ್ ಕಾಮಗಾರಿ ರದ್ದುಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಸಕರು ಮತ್ತು ಅವರ ಬೆಂಬಲಿಗರು ಅಧಿಕಾರಿಗಳ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ಇವರು ಮಾತೆತ್ತಿದರೆ ನಾನು ದೊಡ್ಡ ಮಟ್ಟದವನು ಎಂದು ಹೇಳಿಕೊಳ್ಳುತ್ತಾರೆ. ಆದರೆ ಚಿಲ್ಲರೆ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.</p>.<p>ಯಾವುದೇ ರೈತರು ಸಹ ರಸ್ತೆ ಕಾಮಗಾರಿ ವಿಚಾರವಾಗಿ ದೂರು ನೀಡಿಲ್ಲ. ರೈತರೇ ಮುಂದೆ ನಿಂತು ಕಾಮಗಾರಿ ಮಾಡಿಸುತ್ತಿದ್ದಾರೆ. ಆದರೆ ಶಾಸಕರ ಸೂಚನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾಮಗಾರಿ ರದ್ದು ಮಾಡಿದ್ದಾರೆ ಎಂದರು.</p>.<p>ಶಾಸಕರಾಗಿ ಎರಡೂವರೆ ವರ್ಷವಾದರೂ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. 22ನೇ ವಾರ್ಡ್ಗೆ ಭೇಟಿ ನೀಡಿದ ವೇಳೆ ರಾಜಕಾಲುವೆ ನಿರ್ಮಿಸುವೆ ಎಂದು ಭರವಸೆ ನೀಡಿದ್ದರು. ಆ ಭರವಸೆ ನೀಡಿ ಆರು ತಿಂಗಳಾದರೂ ಕಾಮಗಾರಿ ಆರಂಭವಾಗಿಲ್ಲ ಎಂದರು.</p>.<p>ಶಾಸಕರ ಸಹೋದರನ ಮನೆಯ ಬಳಿ ನಗರಸಭೆ ಹಣದಲ್ಲಿ ಎರಡು ಕೊಳವೆ ಬಾವಿ ಕೊರೆಯಲಾಗಿದೆ. ಅಲ್ಲಿ ನೀರಿನ ಸಮಸ್ಯೆ ಇಲ್ಲದಿದ್ದರೂ ಎರಡು ಕೊಳವೆ ಬಾವಿ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು. </p>.<p>22ನೇ ವಾರ್ಡ್ನಲ್ಲಿ ಅಭಿವೃದ್ಧಿ ವಿಚಾರವಾಗಿ ಅಡ್ಡಿಗಳನ್ನು ಮಾಡಲಾಗುತ್ತಿದೆ. ಇದು ರಾಜಕೀಯ ಪ್ರೇರಿತ ಎಂದರು. </p>.<p>ನಗರಸಭೆ ಸದಸ್ಯೆ ಸ್ವಾತಿ, ಕಾರ್ಮಿಕ ಸಂಘಟನೆ ಮುಖಂಡ ಮೂರ್ತಿ ಜಿ.ಬಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಬಿ.ವಿ ಆನಂದ್, ಮಂಜುನಾಥ್, ಮುನಿರಾಜು, ಪಿಳ್ಳಪ್ಪಯ್ಯ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಕ್ಷೇತ್ರದ ಅಭಿವೃದ್ಧಿ ಚಿಂತನೆ ಇಲ್ಲ. ಚಿಲ್ಲರೆ ರಾಜಕೀಯ ರೂಢಿಸಿಕೊಂಡಿದ್ದಾರೆ’ ಎಂದು ನಗರಸಭೆ ಸದಸ್ಯೆ ಸ್ವಾತಿ ಅವರ ಪತಿ ಮಂಜುನಾಥ್ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘22ನೇ ವಾರ್ಡ್ ವ್ಯಾಪ್ತಿಯ ವಿನಾಯಕನಗರದ ಮುಖ್ಯ ರಸ್ತೆ ಹಾಳಾಗಿದೆ. ನಾಗರಿಕರಿಗೆ ಸಮಸ್ಯೆ ಆಗುತ್ತಿದೆ. ಅಭಿವೃದ್ಧಿಗೆ ಕ್ರಮವಹಿಸಬೇಕು ಎಂದು ನಗರಸಭೆಗೆ ಮನವಿ ಮಾಡಿದ್ದೆವು. ಆ ಪ್ರಕಾರ ಕಾಮಗಾರಿ ಮಂಜೂರಾಗಿ ₹ 16 ಲಕ್ಷ ವೆಚ್ಚದ ಟೆಂಡರ್ ಆಗಿತ್ತು. ಕಾಮಗಾರಿ ನಡೆಯುತ್ತಿರುವಾಗಲೇ ಪ್ರದೀಪ್ ಈಶ್ವರ್ ಕಾಮಗಾರಿ ರದ್ದುಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಸಕರು ಮತ್ತು ಅವರ ಬೆಂಬಲಿಗರು ಅಧಿಕಾರಿಗಳ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ಇವರು ಮಾತೆತ್ತಿದರೆ ನಾನು ದೊಡ್ಡ ಮಟ್ಟದವನು ಎಂದು ಹೇಳಿಕೊಳ್ಳುತ್ತಾರೆ. ಆದರೆ ಚಿಲ್ಲರೆ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.</p>.<p>ಯಾವುದೇ ರೈತರು ಸಹ ರಸ್ತೆ ಕಾಮಗಾರಿ ವಿಚಾರವಾಗಿ ದೂರು ನೀಡಿಲ್ಲ. ರೈತರೇ ಮುಂದೆ ನಿಂತು ಕಾಮಗಾರಿ ಮಾಡಿಸುತ್ತಿದ್ದಾರೆ. ಆದರೆ ಶಾಸಕರ ಸೂಚನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾಮಗಾರಿ ರದ್ದು ಮಾಡಿದ್ದಾರೆ ಎಂದರು.</p>.<p>ಶಾಸಕರಾಗಿ ಎರಡೂವರೆ ವರ್ಷವಾದರೂ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. 22ನೇ ವಾರ್ಡ್ಗೆ ಭೇಟಿ ನೀಡಿದ ವೇಳೆ ರಾಜಕಾಲುವೆ ನಿರ್ಮಿಸುವೆ ಎಂದು ಭರವಸೆ ನೀಡಿದ್ದರು. ಆ ಭರವಸೆ ನೀಡಿ ಆರು ತಿಂಗಳಾದರೂ ಕಾಮಗಾರಿ ಆರಂಭವಾಗಿಲ್ಲ ಎಂದರು.</p>.<p>ಶಾಸಕರ ಸಹೋದರನ ಮನೆಯ ಬಳಿ ನಗರಸಭೆ ಹಣದಲ್ಲಿ ಎರಡು ಕೊಳವೆ ಬಾವಿ ಕೊರೆಯಲಾಗಿದೆ. ಅಲ್ಲಿ ನೀರಿನ ಸಮಸ್ಯೆ ಇಲ್ಲದಿದ್ದರೂ ಎರಡು ಕೊಳವೆ ಬಾವಿ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು. </p>.<p>22ನೇ ವಾರ್ಡ್ನಲ್ಲಿ ಅಭಿವೃದ್ಧಿ ವಿಚಾರವಾಗಿ ಅಡ್ಡಿಗಳನ್ನು ಮಾಡಲಾಗುತ್ತಿದೆ. ಇದು ರಾಜಕೀಯ ಪ್ರೇರಿತ ಎಂದರು. </p>.<p>ನಗರಸಭೆ ಸದಸ್ಯೆ ಸ್ವಾತಿ, ಕಾರ್ಮಿಕ ಸಂಘಟನೆ ಮುಖಂಡ ಮೂರ್ತಿ ಜಿ.ಬಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಬಿ.ವಿ ಆನಂದ್, ಮಂಜುನಾಥ್, ಮುನಿರಾಜು, ಪಿಳ್ಳಪ್ಪಯ್ಯ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>