<p><strong>ಚಿಕ್ಕಬಳ್ಳಾಪುರ</strong>: ರಾಜಧಾನಿ ಬೆಂಗಳೂರಿಗೆ ಸಮೀಪವಿರುವ ಚಿಕ್ಕಬಳ್ಳಾಪುರವು ಜಿಲ್ಲೆಯಾಗಿ 18 ವರ್ಷ ಪೂರ್ಣವಾಗಿದೆ. ಆದರೆ ವಿಪರ್ಯಾಸ ಎಂದರೆ ಇಂದಿಗೂ ಜಿಲ್ಲೆಯ ಅರ್ಧದಷ್ಟು ಗ್ರಾಮೀಣ ರಸ್ತೆಗಳು ಡಾಂಬರು ಕಂಡಿಲ್ಲ. ಮಳೆಗಾಲ ಶುರುವಾಗುವುದರಿಂದ ಈ ಮಣ್ಣಿನ ರಸ್ತೆಗಳಲ್ಲಿ ಸುಗಮ ವಾಹನ ಅಂತೂ ಸಂಚಾರ ಕನಸಿನ ಮಾತಾಗಿದೆ.</p>.<p>ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ನೀಡಿರುವ ಅಂಕಿ ಅಂಶಗಳು ಜಿಲ್ಲೆಯ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅವ್ಯವಸ್ಥೆಯನ್ನು ತೆರೆದಿಟ್ಟಿವೆ. ಜಿಲ್ಲೆಯ ಒಟ್ಟು ಗ್ರಾಮೀಣ ರಸ್ತೆಗಳ ಪೈಕಿ ಅರ್ಧದಷ್ಟು ರಸ್ತೆಗಳು ಅಭಿವೃದ್ಧಿ ಕಾಣದೆ ಮಣ್ಣಿನ ರಸ್ತೆಗಳಾಗಿ ದಶಕಗಳಿಂದ ಉಳಿದಿವೆ.</p>.<p>ಜಿಲ್ಲೆಯಲ್ಲಿ ಡಿಆರ್ಆರ್ಪಿ ಪಟ್ಟಿಯಂತೆ ಒಟ್ಟು 4,388.40 ಕಿ.ಮೀ ಉದ್ದದ ಗ್ರಾಮೀಣ ರಸ್ತೆಗಳು ಇವೆ. ಆ ಪೈಕಿ 1,947 ಕಿ.ಮೀ ಉದ್ದದ ರಸ್ತೆಗಳು ಮಾತ್ರ ಡಾಂಬರು ರಸ್ತೆಗಳಾಗಿದ್ದರೆ ಉಳಿದ 398.28 ಕಿ.ಮೀ ಜಲ್ಲಿ ರಸ್ತೆಗಳಾಗಿವೆ.</p>.<p>2,042.75 ಕಿ.ಮೀ ಉದ್ದದ ರಸ್ತೆಗಳು ಮಣ್ಣಿನ ರಸ್ತೆಗಳಾಗಿವೆ. ಹೀಗೆ ಗ್ರಾಮೀಣ ಜನರ ಸುಗಮ ಸಂಚಾರಕ್ಕೆ ರಸ್ತೆಗಳು ಯೋಗ್ಯವಿಲ್ಲದೇ ಜನರು ನಗರ, ಪಟ್ಟಣಗಳಿಗೆ ಹೋಗಿ ಬರಲು ನರಕಯಾತನೆ ಅನುಭವಿಸುವಂತಾಗಿದೆ.</p>.<p>ಯಾವುದೇ ಹಳ್ಳಿ, ನಗರ, ಪಟ್ಟಣ ಅಭಿವೃದ್ಧಿ ಆಗಬೇಕಾದರೆ ಸಂಪರ್ಕ ಸಾಧಿಸುವ ರಸ್ತೆಗಳ ಅಭಿವೃದ್ಧಿ ಬಹಳ ಮುಖ್ಯ. ಆದರೆ ಜಿಲ್ಲೆಯಾಗಿ ಇನ್ನೂ ಅರ್ಧದಷ್ಟು ಗ್ರಾಮೀಣ ರಸ್ತೆಗಳು ಮಣ್ಣಿನವಾಗಿವೆ.</p>.<p>ಈ ಪರಿಣಾಮ ಆಸ್ಪತ್ರೆ, ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರ ಪಾಡು ಹೇಳ ತೀರದಾಗಿದೆ.</p>.<p>ಜಿಲ್ಲೆಯ ನಗರ , ಪಟ್ಟಣಗಳಿಗೆ ಹೊಂದಿಕೊಂಡಿರುವ ಗ್ರಾಮಗಳ ರಸ್ತೆಗಳು ಸ್ವಲ್ಪ ಸುಧಾರಿಸಿವೆ. ಉಳಿದಂತೆ ತಾಲ್ಲೂಕು ಕೇಂದ್ರಗಳಿಂದ 40, 50 ಕಿ.ಮೀ ದೂರದಲ್ಲಿರುವ ಗ್ರಾಮೀಣ ಭಾಗದ ಕುಗ್ರಾಮಗಳಿಗೆ ಇಂದಿಗೂ ರಸ್ತೆ ಇಲ್ಲ.</p>.<p>ಜಿಲ್ಲೆಯಲ್ಲಿ ತಮ್ಮ ಗ್ರಾಮಗಳಿಗೆ ಸೂಕ್ತ ರಸ್ತೆ ನಿರ್ಮಿಸಿ, ಡಾಂಬರು ಹಾಕಿಸಿ, ರಸ್ತೆ ಗುಂಡಿಗಳನ್ನು ಮುಚ್ಚಿ ಎಂದು ತಾಲ್ಲೂಕು ಆಡಳಿತಕ್ಕೆ, ಚುನಾಯಿತ ಜನಪ್ರತಿನಿಧಿಗಳಿಗೆ ಭೇಟಿ ಮಾಡಿ ನಾಗರಿಕರು ಅಹವಾಲು ಸಲ್ಲಿಸುತ್ತಲೇ ಇದ್ದಾರೆ. ಆದರೆ ಪರಿಸ್ಥಿತಿಗಳು ಮಾತ್ರ ಸುಧಾರಿಸುತ್ತಿಲ್ಲ.</p>.<p>ಜಿಲ್ಲೆಯಲ್ಲಿ ಸದ್ಯ ಬೇಸಿಗೆ ಮುಗಿಯುವ ಹಂತದಲ್ಲಿದೆ. ಮಳೆಗಾಲ ಶುರುವಾಗಲು ಕೆಲವೇ ದಿನಗಳು ಬಾಕಿ ಇವೆ. ಮಳೆಗಾಲ ಆರಂಭವಾದರೂ ಆರೇಳು ತಿಂಗಳ ಕಾಲ ಈ ರಸ್ತೆಗಳಲ್ಲಿ ಓಡಾಡುವುದು ಸವಾಲಿನ ಕೆಲಸ.</p>.<p>ಗ್ರಾಮೀಣ ಭಾಗದಲ್ಲಿ ಡಾಂಬರ್ ಕಾಣದ ಈ ರಸ್ತೆಗಳು ಮಳೆಗಾಲದಲ್ಲಿ ಸಂಪೂರ್ಣ ಕೆಸರುಗದ್ದೆಗಳಾಗುತ್ತವೆ. ಈ ರಸ್ತೆಗಳಲ್ಲಿ ವಾಹನಗಳು, ಜನರು ಸಂಚರಿಸುವುದು ಕಷ್ಟ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-16-1583163519</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ರಾಜಧಾನಿ ಬೆಂಗಳೂರಿಗೆ ಸಮೀಪವಿರುವ ಚಿಕ್ಕಬಳ್ಳಾಪುರವು ಜಿಲ್ಲೆಯಾಗಿ 18 ವರ್ಷ ಪೂರ್ಣವಾಗಿದೆ. ಆದರೆ ವಿಪರ್ಯಾಸ ಎಂದರೆ ಇಂದಿಗೂ ಜಿಲ್ಲೆಯ ಅರ್ಧದಷ್ಟು ಗ್ರಾಮೀಣ ರಸ್ತೆಗಳು ಡಾಂಬರು ಕಂಡಿಲ್ಲ. ಮಳೆಗಾಲ ಶುರುವಾಗುವುದರಿಂದ ಈ ಮಣ್ಣಿನ ರಸ್ತೆಗಳಲ್ಲಿ ಸುಗಮ ವಾಹನ ಅಂತೂ ಸಂಚಾರ ಕನಸಿನ ಮಾತಾಗಿದೆ.</p>.<p>ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ನೀಡಿರುವ ಅಂಕಿ ಅಂಶಗಳು ಜಿಲ್ಲೆಯ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅವ್ಯವಸ್ಥೆಯನ್ನು ತೆರೆದಿಟ್ಟಿವೆ. ಜಿಲ್ಲೆಯ ಒಟ್ಟು ಗ್ರಾಮೀಣ ರಸ್ತೆಗಳ ಪೈಕಿ ಅರ್ಧದಷ್ಟು ರಸ್ತೆಗಳು ಅಭಿವೃದ್ಧಿ ಕಾಣದೆ ಮಣ್ಣಿನ ರಸ್ತೆಗಳಾಗಿ ದಶಕಗಳಿಂದ ಉಳಿದಿವೆ.</p>.<p>ಜಿಲ್ಲೆಯಲ್ಲಿ ಡಿಆರ್ಆರ್ಪಿ ಪಟ್ಟಿಯಂತೆ ಒಟ್ಟು 4,388.40 ಕಿ.ಮೀ ಉದ್ದದ ಗ್ರಾಮೀಣ ರಸ್ತೆಗಳು ಇವೆ. ಆ ಪೈಕಿ 1,947 ಕಿ.ಮೀ ಉದ್ದದ ರಸ್ತೆಗಳು ಮಾತ್ರ ಡಾಂಬರು ರಸ್ತೆಗಳಾಗಿದ್ದರೆ ಉಳಿದ 398.28 ಕಿ.ಮೀ ಜಲ್ಲಿ ರಸ್ತೆಗಳಾಗಿವೆ.</p>.<p>2,042.75 ಕಿ.ಮೀ ಉದ್ದದ ರಸ್ತೆಗಳು ಮಣ್ಣಿನ ರಸ್ತೆಗಳಾಗಿವೆ. ಹೀಗೆ ಗ್ರಾಮೀಣ ಜನರ ಸುಗಮ ಸಂಚಾರಕ್ಕೆ ರಸ್ತೆಗಳು ಯೋಗ್ಯವಿಲ್ಲದೇ ಜನರು ನಗರ, ಪಟ್ಟಣಗಳಿಗೆ ಹೋಗಿ ಬರಲು ನರಕಯಾತನೆ ಅನುಭವಿಸುವಂತಾಗಿದೆ.</p>.<p>ಯಾವುದೇ ಹಳ್ಳಿ, ನಗರ, ಪಟ್ಟಣ ಅಭಿವೃದ್ಧಿ ಆಗಬೇಕಾದರೆ ಸಂಪರ್ಕ ಸಾಧಿಸುವ ರಸ್ತೆಗಳ ಅಭಿವೃದ್ಧಿ ಬಹಳ ಮುಖ್ಯ. ಆದರೆ ಜಿಲ್ಲೆಯಾಗಿ ಇನ್ನೂ ಅರ್ಧದಷ್ಟು ಗ್ರಾಮೀಣ ರಸ್ತೆಗಳು ಮಣ್ಣಿನವಾಗಿವೆ.</p>.<p>ಈ ಪರಿಣಾಮ ಆಸ್ಪತ್ರೆ, ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರ ಪಾಡು ಹೇಳ ತೀರದಾಗಿದೆ.</p>.<p>ಜಿಲ್ಲೆಯ ನಗರ , ಪಟ್ಟಣಗಳಿಗೆ ಹೊಂದಿಕೊಂಡಿರುವ ಗ್ರಾಮಗಳ ರಸ್ತೆಗಳು ಸ್ವಲ್ಪ ಸುಧಾರಿಸಿವೆ. ಉಳಿದಂತೆ ತಾಲ್ಲೂಕು ಕೇಂದ್ರಗಳಿಂದ 40, 50 ಕಿ.ಮೀ ದೂರದಲ್ಲಿರುವ ಗ್ರಾಮೀಣ ಭಾಗದ ಕುಗ್ರಾಮಗಳಿಗೆ ಇಂದಿಗೂ ರಸ್ತೆ ಇಲ್ಲ.</p>.<p>ಜಿಲ್ಲೆಯಲ್ಲಿ ತಮ್ಮ ಗ್ರಾಮಗಳಿಗೆ ಸೂಕ್ತ ರಸ್ತೆ ನಿರ್ಮಿಸಿ, ಡಾಂಬರು ಹಾಕಿಸಿ, ರಸ್ತೆ ಗುಂಡಿಗಳನ್ನು ಮುಚ್ಚಿ ಎಂದು ತಾಲ್ಲೂಕು ಆಡಳಿತಕ್ಕೆ, ಚುನಾಯಿತ ಜನಪ್ರತಿನಿಧಿಗಳಿಗೆ ಭೇಟಿ ಮಾಡಿ ನಾಗರಿಕರು ಅಹವಾಲು ಸಲ್ಲಿಸುತ್ತಲೇ ಇದ್ದಾರೆ. ಆದರೆ ಪರಿಸ್ಥಿತಿಗಳು ಮಾತ್ರ ಸುಧಾರಿಸುತ್ತಿಲ್ಲ.</p>.<p>ಜಿಲ್ಲೆಯಲ್ಲಿ ಸದ್ಯ ಬೇಸಿಗೆ ಮುಗಿಯುವ ಹಂತದಲ್ಲಿದೆ. ಮಳೆಗಾಲ ಶುರುವಾಗಲು ಕೆಲವೇ ದಿನಗಳು ಬಾಕಿ ಇವೆ. ಮಳೆಗಾಲ ಆರಂಭವಾದರೂ ಆರೇಳು ತಿಂಗಳ ಕಾಲ ಈ ರಸ್ತೆಗಳಲ್ಲಿ ಓಡಾಡುವುದು ಸವಾಲಿನ ಕೆಲಸ.</p>.<p>ಗ್ರಾಮೀಣ ಭಾಗದಲ್ಲಿ ಡಾಂಬರ್ ಕಾಣದ ಈ ರಸ್ತೆಗಳು ಮಳೆಗಾಲದಲ್ಲಿ ಸಂಪೂರ್ಣ ಕೆಸರುಗದ್ದೆಗಳಾಗುತ್ತವೆ. ಈ ರಸ್ತೆಗಳಲ್ಲಿ ವಾಹನಗಳು, ಜನರು ಸಂಚರಿಸುವುದು ಕಷ್ಟ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-16-1583163519</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>