<p><strong>ಗೌರಿಬಿದನೂರು:</strong> ಕೃಷಿ ಇಲಾಖೆಯಿಂದ ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ಪಿಂಜಾರಹಳ್ಳಿ ಗ್ರಾಮದ ರೈತ ಚನ್ನಪ್ಪ ಅವರ ಜಮೀನಿನಲ್ಲಿ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ತೊಗರಿ ಬೆಳೆ ಕ್ಷೇತ್ರೋತ್ಸವ ಶನಿವಾರ ನಡೆಯಿತು.</p>.<p>ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಪಾಪಿರೆಡ್ಡಿ ಮಾತನಾಡಿ, ತೊಗರಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.</p>.<p>ರೈತರು ಒಂದೇ ಬೆಳೆಯನ್ನು ಬೆಳೆಯುವ ಬದಲಾಗಿ ಸಮಗ್ರ ಕೃಷಿ ಪದ್ಧತಿ ಅಳವಡಿಸಬೇಕೆಂದು ಸಲಹೆ ನೀಡಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಮೋಹನ್ ಮಾತನಾಡಿ, ತೊಗರಿ ಬೆಳೆಯ ತಳಿಗಳಾದ ಬಿ.ಆರ್.ಜಿ 1, ಬಿ.ಆರ್.ಜಿ-2, ಬಿ.ಆರ್.ಜಿ 3, ಬಿ.ಆರ್.ಜಿ 4, ಬಿ.ಆರ್.ಜಿ 5 ಮತ್ತು ಎನ್.ಟಿ.ಎಲ್ 2 ತಳಿಗಳ ಬಗ್ಗೆ ಮಾಹಿತಿ ನೀಡಿದರು.</p>.<p>ರೈತ ಬೆಳಚಿಕ್ಕನಹಳ್ಳಿ ಗ್ರಾಮದ ಶ್ರೀರಾಮರೆಡ್ಡಿ ಮಾತನಾಡಿ, ರೈತರು ರಸಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರ ಬಳಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ರೈತರು ಕಚೇರಿಗಳಿಗೆ ಭೇಟಿ ನೀಡಿ ತಮಗೆ ಅವಶ್ಯವಿರುವ ಸವಲತ್ತು ಪಡೆದುಕೊಳ್ಳಬೇಕು ಎಂದರು.</p>.<p>ಆತ್ಮ ಯೋಜನೆಯ ಉಪಸಂಯೋಜನಾಧಿಕಾರಿ ಸತೀಶ್ ಮಾತನಾಡಿದರು. ಕೃಷಿ ಅಧಿಕಾರಿ ಭವ್ಯ, ಭೀಮೇಗೌಡ, ಜಗದಾಂಬ, ನಯಾಜ್ ಖಾನ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ಕೃಷಿ ಇಲಾಖೆಯಿಂದ ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ಪಿಂಜಾರಹಳ್ಳಿ ಗ್ರಾಮದ ರೈತ ಚನ್ನಪ್ಪ ಅವರ ಜಮೀನಿನಲ್ಲಿ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ತೊಗರಿ ಬೆಳೆ ಕ್ಷೇತ್ರೋತ್ಸವ ಶನಿವಾರ ನಡೆಯಿತು.</p>.<p>ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಪಾಪಿರೆಡ್ಡಿ ಮಾತನಾಡಿ, ತೊಗರಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.</p>.<p>ರೈತರು ಒಂದೇ ಬೆಳೆಯನ್ನು ಬೆಳೆಯುವ ಬದಲಾಗಿ ಸಮಗ್ರ ಕೃಷಿ ಪದ್ಧತಿ ಅಳವಡಿಸಬೇಕೆಂದು ಸಲಹೆ ನೀಡಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಮೋಹನ್ ಮಾತನಾಡಿ, ತೊಗರಿ ಬೆಳೆಯ ತಳಿಗಳಾದ ಬಿ.ಆರ್.ಜಿ 1, ಬಿ.ಆರ್.ಜಿ-2, ಬಿ.ಆರ್.ಜಿ 3, ಬಿ.ಆರ್.ಜಿ 4, ಬಿ.ಆರ್.ಜಿ 5 ಮತ್ತು ಎನ್.ಟಿ.ಎಲ್ 2 ತಳಿಗಳ ಬಗ್ಗೆ ಮಾಹಿತಿ ನೀಡಿದರು.</p>.<p>ರೈತ ಬೆಳಚಿಕ್ಕನಹಳ್ಳಿ ಗ್ರಾಮದ ಶ್ರೀರಾಮರೆಡ್ಡಿ ಮಾತನಾಡಿ, ರೈತರು ರಸಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರ ಬಳಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ರೈತರು ಕಚೇರಿಗಳಿಗೆ ಭೇಟಿ ನೀಡಿ ತಮಗೆ ಅವಶ್ಯವಿರುವ ಸವಲತ್ತು ಪಡೆದುಕೊಳ್ಳಬೇಕು ಎಂದರು.</p>.<p>ಆತ್ಮ ಯೋಜನೆಯ ಉಪಸಂಯೋಜನಾಧಿಕಾರಿ ಸತೀಶ್ ಮಾತನಾಡಿದರು. ಕೃಷಿ ಅಧಿಕಾರಿ ಭವ್ಯ, ಭೀಮೇಗೌಡ, ಜಗದಾಂಬ, ನಯಾಜ್ ಖಾನ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>