<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ಒಕ್ಕಲಿಗರ ಸಂಘದಿಂದ ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು.</p>.<p>ಒಕ್ಕಲಿಗ ಸಮಾಜದ ಒಗ್ಗಟ್ಟಿಗೆ ಸಾಕ್ಷಿಯಾದ ಈ ಕಾರ್ಯಕ್ರಮದಲ್ಲಿ ರಾಜಕೀಯ ನಾಯಕರು ಪಕ್ಷಾತೀತವಾಗಿ ವೇದಿಕೆ ಹಂಚಿಕೊಂಡಿದ್ದರು. ರಾಜಕೀಯ ಎದುರಾಳಿಗಳಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಸಂಸದ ಡಾ.ಕೆ.ಸುಧಾಕರ್ ಬಹಳ ದಿನಗಳ ನಂತರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.</p>.<p>ಸಚಿವ ಡಾ. ಎಂ.ಸಿ. ಸುಧಾಕರ್ ಮಾತನಾಡಿ, ‘ನಮ್ಮ ಸಮಾಜದ ಹಿರಿಯರ ದೂರದೃಷ್ಟಿಯ ಫಲದಿಂದ ಚಿಕ್ಕಬಳ್ಳಾಪುರ ನಗರದ ಪ್ರಮುಖ ಸ್ಥಳದಲ್ಲಿ ಈ ನಿವೇಶನ ದೊರೆತಿದೆ. ಭವ್ಯ ಭವನ ಮತ್ತು ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಿದೆ’ ಎಂದರು.</p>.<p>‘ಒಕ್ಕಲಿಗರು ಒಕ್ಕಲುತನ ಮಾಡಿಕೊಂಡು ಜೀವನ ನಡೆಸುತ್ತಿರುವ ಸಮುದಾಯ. ಶೈಕ್ಷಣಿಕ ಪ್ರಗತಿ ಸಾಧಿಸುವ ಜೊತೆಗೆ ವ್ಯಾಪಾರ ಉದ್ದಿಮೆಗಳಲ್ಲಿಯೂ ತೊಡಗಿಸಿಕೊಂಡಿದ್ದೇವೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಸಮುದಾಯವರಿಗೆ ಒಳ್ಳೆಯದಾಗಬೇಕು’ ಎಂದು ಹೇಳಿದರು.</p>.<p>‘ನಮ್ಮ ಸಮುದಾಯದ ಆದಿಚುಂಚನಗಿರಿ ಮಠವು ಆರೋಗ್ಯ, ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ. ಇತರೆ ಸಮುದಾಯಗಳಿಗೂ ನೆರವಾಗುತ್ತಿದೆ’ ಎಂದರು.</p>.<p>ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತ ಸಂಪತ್ತನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವ ಸಂಘಗಳ ಪೈಕಿ ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರು ಸಂಘಗಳು ಮೊದಲ ಸಾಲಿನಲ್ಲಿ ಇವೆ ಎಂದರು.</p>.<p>ಒಕ್ಕಲಿಗರ ಸಂಘ ಇಷ್ಟು ಗಟ್ಟಿಯಾಗಿ ಉಳಿದು ಬೆಳೆಯಲು ಕೆ.ಬಿ.ಪಿಳ್ಳಪ್ಪ ಮತ್ತು ಡಿ ಹೊಸೂರು ಚಡ್ಡಿ ಪಿಳ್ಳಪ್ಪ ಕಾರಣ. 80 ವರ್ಷ ಇತಿಹಾಸವಿರುವ ಒಕ್ಕಲಿಗರ ಸಂಘದ ಕಲ್ಯಾಣ ಮಂಟಪ ಮತ್ತು ಈ ವಾಣಿಜ್ಯ ಕಟ್ಟಡದ ಜಾಗವನ್ನು ದಾನವಾಗಿ ನೀಡಿ ಉಳಿಸಿಕೊಂಡು ಬಂದಿರುವ ಕೀರ್ತಿ ನಾರಾಯಣಪ್ಪ ಮತ್ತು ಪೊಲೀಸ್ ದೊಡ್ಡಪ್ಪ ಅವರದ್ದು ಎಂದರು.</p>.<p>ಮಣ್ಣಿನ ವಾಸನೆ ಜೊತೆ ಬೆಳೆಯುತ್ತಿರುವ ಸಮುದಾಯಕ್ಕೆ ಕ್ಷಮಿಸುವ ಗುಣವೂ ಇದೆ. ಮತ್ತೊಬ್ಬರಿಗೆ ಅನ್ನ ನೀಡಿ ಕಾಪಾಡುವ ಗುಣ ಇದೆ. ಇಂತಹ ಸಮುದಾಯದಲ್ಲಿ ಹುಟ್ಟಿ ರಾಜಕಾರಣಿಗಳಾಗಿ ಜಿಲ್ಲೆಯನ್ನು ಆಳುತ್ತಿರುವ ಡಾ.ಎಂ.ಸಿ.ಸುಧಾಕರ್ ಮತ್ತು ಡಾ.ಕೆ.ಸುಧಾಕರ್ ಇಡೀ ಜಿಲ್ಲೆಗೆ ಬೆಳಕು ನೀಡುತಿದ್ದಾರೆ ಎಂದು ಪ್ರಶಂಸಿಸಿದರು.</p>.<p>ಮಂಗಳಾನಂದನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಒಕ್ಕಲಿಗರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುನಿಯಪ್ಪ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಳ್ಳಿ ರಮೇಶ್, ನಿರ್ದೇಶಕ ಡಾ.ರಮೇಶ್, ಕೆ.ವಿ.ನಾಗರಾಜ್ ಹಾಗೂ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-18-777773707</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ಒಕ್ಕಲಿಗರ ಸಂಘದಿಂದ ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು.</p>.<p>ಒಕ್ಕಲಿಗ ಸಮಾಜದ ಒಗ್ಗಟ್ಟಿಗೆ ಸಾಕ್ಷಿಯಾದ ಈ ಕಾರ್ಯಕ್ರಮದಲ್ಲಿ ರಾಜಕೀಯ ನಾಯಕರು ಪಕ್ಷಾತೀತವಾಗಿ ವೇದಿಕೆ ಹಂಚಿಕೊಂಡಿದ್ದರು. ರಾಜಕೀಯ ಎದುರಾಳಿಗಳಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಸಂಸದ ಡಾ.ಕೆ.ಸುಧಾಕರ್ ಬಹಳ ದಿನಗಳ ನಂತರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.</p>.<p>ಸಚಿವ ಡಾ. ಎಂ.ಸಿ. ಸುಧಾಕರ್ ಮಾತನಾಡಿ, ‘ನಮ್ಮ ಸಮಾಜದ ಹಿರಿಯರ ದೂರದೃಷ್ಟಿಯ ಫಲದಿಂದ ಚಿಕ್ಕಬಳ್ಳಾಪುರ ನಗರದ ಪ್ರಮುಖ ಸ್ಥಳದಲ್ಲಿ ಈ ನಿವೇಶನ ದೊರೆತಿದೆ. ಭವ್ಯ ಭವನ ಮತ್ತು ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಿದೆ’ ಎಂದರು.</p>.<p>‘ಒಕ್ಕಲಿಗರು ಒಕ್ಕಲುತನ ಮಾಡಿಕೊಂಡು ಜೀವನ ನಡೆಸುತ್ತಿರುವ ಸಮುದಾಯ. ಶೈಕ್ಷಣಿಕ ಪ್ರಗತಿ ಸಾಧಿಸುವ ಜೊತೆಗೆ ವ್ಯಾಪಾರ ಉದ್ದಿಮೆಗಳಲ್ಲಿಯೂ ತೊಡಗಿಸಿಕೊಂಡಿದ್ದೇವೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಸಮುದಾಯವರಿಗೆ ಒಳ್ಳೆಯದಾಗಬೇಕು’ ಎಂದು ಹೇಳಿದರು.</p>.<p>‘ನಮ್ಮ ಸಮುದಾಯದ ಆದಿಚುಂಚನಗಿರಿ ಮಠವು ಆರೋಗ್ಯ, ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ. ಇತರೆ ಸಮುದಾಯಗಳಿಗೂ ನೆರವಾಗುತ್ತಿದೆ’ ಎಂದರು.</p>.<p>ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತ ಸಂಪತ್ತನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವ ಸಂಘಗಳ ಪೈಕಿ ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರು ಸಂಘಗಳು ಮೊದಲ ಸಾಲಿನಲ್ಲಿ ಇವೆ ಎಂದರು.</p>.<p>ಒಕ್ಕಲಿಗರ ಸಂಘ ಇಷ್ಟು ಗಟ್ಟಿಯಾಗಿ ಉಳಿದು ಬೆಳೆಯಲು ಕೆ.ಬಿ.ಪಿಳ್ಳಪ್ಪ ಮತ್ತು ಡಿ ಹೊಸೂರು ಚಡ್ಡಿ ಪಿಳ್ಳಪ್ಪ ಕಾರಣ. 80 ವರ್ಷ ಇತಿಹಾಸವಿರುವ ಒಕ್ಕಲಿಗರ ಸಂಘದ ಕಲ್ಯಾಣ ಮಂಟಪ ಮತ್ತು ಈ ವಾಣಿಜ್ಯ ಕಟ್ಟಡದ ಜಾಗವನ್ನು ದಾನವಾಗಿ ನೀಡಿ ಉಳಿಸಿಕೊಂಡು ಬಂದಿರುವ ಕೀರ್ತಿ ನಾರಾಯಣಪ್ಪ ಮತ್ತು ಪೊಲೀಸ್ ದೊಡ್ಡಪ್ಪ ಅವರದ್ದು ಎಂದರು.</p>.<p>ಮಣ್ಣಿನ ವಾಸನೆ ಜೊತೆ ಬೆಳೆಯುತ್ತಿರುವ ಸಮುದಾಯಕ್ಕೆ ಕ್ಷಮಿಸುವ ಗುಣವೂ ಇದೆ. ಮತ್ತೊಬ್ಬರಿಗೆ ಅನ್ನ ನೀಡಿ ಕಾಪಾಡುವ ಗುಣ ಇದೆ. ಇಂತಹ ಸಮುದಾಯದಲ್ಲಿ ಹುಟ್ಟಿ ರಾಜಕಾರಣಿಗಳಾಗಿ ಜಿಲ್ಲೆಯನ್ನು ಆಳುತ್ತಿರುವ ಡಾ.ಎಂ.ಸಿ.ಸುಧಾಕರ್ ಮತ್ತು ಡಾ.ಕೆ.ಸುಧಾಕರ್ ಇಡೀ ಜಿಲ್ಲೆಗೆ ಬೆಳಕು ನೀಡುತಿದ್ದಾರೆ ಎಂದು ಪ್ರಶಂಸಿಸಿದರು.</p>.<p>ಮಂಗಳಾನಂದನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಒಕ್ಕಲಿಗರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುನಿಯಪ್ಪ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಳ್ಳಿ ರಮೇಶ್, ನಿರ್ದೇಶಕ ಡಾ.ರಮೇಶ್, ಕೆ.ವಿ.ನಾಗರಾಜ್ ಹಾಗೂ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-18-777773707</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>