<p><strong>ಚಿಕ್ಕಬಳ್ಳಾಪುರ</strong>: ನಗರದ ಹೊರ ವಲಯದ ಅಣಕನೂರು ಬಳಿಯ ಜಿಲ್ಲಾ ಕಾರಾಗೃಹಕ್ಕೆ ಜಿಲ್ಲಾಧಿಕಾರಿ ಜಿ.ಪ್ರಭು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಾಗೂ ಅಧಿಕಾರಿಗಳು ಭೇಟಿ ನೀಡಿ ಕಾರಾಗೃಹದ ಭದ್ರತೆ ಬಗ್ಗೆ ಈಚೆಗೆ ಪರಿಶೀಲಿಸಿದರು.</p>.<p>ರಾಜ್ಯದ ಹಲವು ಕಾರಾಗೃಹಗಳಲ್ಲಿ ಬಂಧಿತರು ಅಕ್ರಮವಾಗಿ ಮೊಬೈಲ್ ಬಳಕೆ ಹಾಗೂ ಗಾಂಜಾ ಪೂರೈಕೆ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕಾರಾಗೃಹದಲ್ಲಿರುವ ಬಂಧಿಗಳ ಸಂಖ್ಯೆ, ಅವರಿಗೆ ದಿನನಿತ್ಯ ನೀಡುತ್ತಿರುವ ಊಟದ ಮೆನು, ಊಟಕ್ಕೆ ಬಳಸುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟ, ಕಾರಾಗೃಹಕ್ಕೆ ಬರುವ ಸಂದರ್ಶಕರ ಮಾಹಿತಿಯ ದಾಖಲಾತಿ ಪುಸ್ತಕಗಳನ್ನು ಪರಿಶೀಲಿಸಿದರು.</p>.<p>3 ತಿಂಗಳಿಗೊಮ್ಮೆ ಕಾರಾಗೃಹ ಸಂದರ್ಶಕ ಮಂಡಳಿ ಸಭೆ ನಡೆಸಿ, ಸದರಿ ಸಭೆಯ ನಡವಳಿಗಳನ್ನು ಇಲಾಖಾ ಮುಖ್ಯಸ್ಥರಿಗೆ ಒಪ್ಪಿಸಬೇಕು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾರಾಗೃಹ ಸಂದರ್ಶಕ ಮಂಡಳಿ ಸಭೆಯನ್ನು ನಡೆಸಿ, ಕಾರಾಗೃಹಗಳ ದೈನಂದಿನ ಆಡಳಿತ ಹಾಗೂ ಮೂಲ ಸೌಕರ್ಯಗಳ ಕುರಿತು ಚರ್ಚಿಸಿದರು.</p>.<p>ಡಿಎಚ್ಒ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ ಸೇರಿದಂತೆ ಹಲವು ಇಲಾಖೆಗಳ ಹಿರಿಯ ಅಧಿಕಾರಿಗಳ ತಂಡ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ದೈನಂದಿನ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಿದರು.</p>.<p>ಜಿಲ್ಲಾ ಕಾರಾಗೃಹ ಕಾರ್ಯಾಲಯದ ಅಧೀಕ್ಷಕ ವಿಜಯಕುಮಾರ್ ಹಾಗೂ ಇತರೆ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-16-1445250787</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ನಗರದ ಹೊರ ವಲಯದ ಅಣಕನೂರು ಬಳಿಯ ಜಿಲ್ಲಾ ಕಾರಾಗೃಹಕ್ಕೆ ಜಿಲ್ಲಾಧಿಕಾರಿ ಜಿ.ಪ್ರಭು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಾಗೂ ಅಧಿಕಾರಿಗಳು ಭೇಟಿ ನೀಡಿ ಕಾರಾಗೃಹದ ಭದ್ರತೆ ಬಗ್ಗೆ ಈಚೆಗೆ ಪರಿಶೀಲಿಸಿದರು.</p>.<p>ರಾಜ್ಯದ ಹಲವು ಕಾರಾಗೃಹಗಳಲ್ಲಿ ಬಂಧಿತರು ಅಕ್ರಮವಾಗಿ ಮೊಬೈಲ್ ಬಳಕೆ ಹಾಗೂ ಗಾಂಜಾ ಪೂರೈಕೆ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕಾರಾಗೃಹದಲ್ಲಿರುವ ಬಂಧಿಗಳ ಸಂಖ್ಯೆ, ಅವರಿಗೆ ದಿನನಿತ್ಯ ನೀಡುತ್ತಿರುವ ಊಟದ ಮೆನು, ಊಟಕ್ಕೆ ಬಳಸುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟ, ಕಾರಾಗೃಹಕ್ಕೆ ಬರುವ ಸಂದರ್ಶಕರ ಮಾಹಿತಿಯ ದಾಖಲಾತಿ ಪುಸ್ತಕಗಳನ್ನು ಪರಿಶೀಲಿಸಿದರು.</p>.<p>3 ತಿಂಗಳಿಗೊಮ್ಮೆ ಕಾರಾಗೃಹ ಸಂದರ್ಶಕ ಮಂಡಳಿ ಸಭೆ ನಡೆಸಿ, ಸದರಿ ಸಭೆಯ ನಡವಳಿಗಳನ್ನು ಇಲಾಖಾ ಮುಖ್ಯಸ್ಥರಿಗೆ ಒಪ್ಪಿಸಬೇಕು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾರಾಗೃಹ ಸಂದರ್ಶಕ ಮಂಡಳಿ ಸಭೆಯನ್ನು ನಡೆಸಿ, ಕಾರಾಗೃಹಗಳ ದೈನಂದಿನ ಆಡಳಿತ ಹಾಗೂ ಮೂಲ ಸೌಕರ್ಯಗಳ ಕುರಿತು ಚರ್ಚಿಸಿದರು.</p>.<p>ಡಿಎಚ್ಒ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ ಸೇರಿದಂತೆ ಹಲವು ಇಲಾಖೆಗಳ ಹಿರಿಯ ಅಧಿಕಾರಿಗಳ ತಂಡ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ದೈನಂದಿನ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಿದರು.</p>.<p>ಜಿಲ್ಲಾ ಕಾರಾಗೃಹ ಕಾರ್ಯಾಲಯದ ಅಧೀಕ್ಷಕ ವಿಜಯಕುಮಾರ್ ಹಾಗೂ ಇತರೆ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-16-1445250787</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>