‘ಈ ಕ್ವಾರಿಯನ್ನು ಫೆ.7ರಂದು ಮುಚ್ಚಿಸಲಾಗಿತ್ತು. ಅಂದಿನಿಂದ ಕ್ವಾರಿ ಚಾಲನೆಯಲ್ಲಿರಲಿಲ್ಲ. ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಆದರೆ 'ಭ್ರಮರವರ್ಷಿಣಿ' ಕ್ವಾರಿ ಮಾಲೀಕರು ಜಿಲೆಟಿನ್ಗಳನ್ನು ಎಲ್ಲಿಯೋ ಅಕ್ರಮವಾಗಿ ದಾಸ್ತಾನು ಮಾಡಿದ್ದಾರೆ. ಪೊಲೀಸ್ ಇಲಾಖೆ ಎರಡು ದಿನಗಳಿಂದ ಕ್ವಾರಿ ಬಳಿ ಪರಿಶೀಲನೆ ನಡೆಸಿದ್ದು, ಬಹುಶಃ ಇದಕ್ಕೆ ಹೆದರಿ ಅಕ್ರಮವಾಗಿ ಸಂಗ್ರಹಿಸಿದ್ದ ಜಿಲೆಟಿನ್ ಅನ್ನು ಗುಡಿಬಂಡೆ ತಾಲ್ಲೂಕಿನ ಕಾಡು ಪ್ರದೇಶದಲ್ಲಿ ಬಿಸಾಡಲು ಟಾಟಾ ಏಸ್ ಹಾಗೂ ಬೈಕ್ ಮೂಲಕ ಒಟ್ಟು 7 ಜನ ಬಂದಿದ್ದರು’ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.