<p>ಚಿಕ್ಕಬಳ್ಳಾಪುರ: ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿ ಇದ್ದ ವೇಳೆ ಎಷ್ಟು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ರಾಜ್ಯದಲ್ಲಿ ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲವೇ? ಎಲ್ಲದರಲ್ಲಿಯೂ ರಾಜಕೀಯ ಹುಡುಕುವ ಕಾಂಗ್ರೆಸ್ನವರಿಗೆ ನಾಚಿಕೆ ಆಗಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಎಷ್ಟು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಕಾಂಗ್ರೆಸ್ನವರು ಕುರುಡರಿದ್ದಾರಾ. ಇದೇ ಮೊದಲ ಬಾರಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದೇ? ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದರು.</p>.<p>‘ನಮ್ಮ ಕಚೇರಿ, ಮನೆಗಳ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಇವರಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದು ವಿಷಾದದ ವಿಚಾರ. ಕೇಂದ್ರ ಸರ್ಕಾರ ತ್ವರಿತವಾಗಿ ಸಿಬಿಐ ತನಿಖೆಗೆ ಆದೇಶಿಸಿದೆ. ಈ ವಿಚಾರದಲ್ಲಿ ಸರ್ಕಾರವನ್ನು ದೂರುವುದು ಸಲ್ಲದು. ಆತಂಕದಲ್ಲಿರುವ ಮಕ್ಕಳ ಜೊತೆ ನೈತಿಕವಾಗಿ ನಿಲ್ಲಬೇಕು’ ಎಂದು ಹೇಳಿದರು.</p>.<p>ಕೋವಿಡ್ ಸಮಯದಲ್ಲಿ ನರೇಂದ್ರ ಮೋದಿ ಅವರು ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈಗ ಯುದ್ಧದ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ. ₹8 ಲಕ್ಷ ಕೋಟಿ ಕಚ್ಚಾ ತೈಲ ಅಮದು ಮಾಡಿಕೊಳ್ಳುತ್ತಿದ್ದೇವೆ. ಹೀಗಾಗಿ ಕಡಿಮೆ ಬಳಕೆ ಮಾಡಿ ಎನ್ನುವುದು ದೊಡ್ಡ ತಪ್ಪೇ ಎಂದರು.</p>.<p>ಅತಿ ಹೆಚ್ಚುವರಿ ಬಂಗಾರ ಖರೀದಿಸುವ ಎರಡನೇ ದೇಶ ಭಾರತ. 1 ವರ್ಷದಲ್ಲಿ ನಾಲ್ಕೂವರೆ ಕೋಟಿ ಜನರು ವಿದೇಶ ಪ್ರವಾಸ ಹೋಗಿದ್ದಾರೆ. ಹೀಗಾಗಿ ದೇಶ ಉಳಿಯಲಿ ಎಂದು ಮೋದಿ ಹೇಳಿದ್ದಾರೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-18-1373560322</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿ ಇದ್ದ ವೇಳೆ ಎಷ್ಟು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ರಾಜ್ಯದಲ್ಲಿ ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲವೇ? ಎಲ್ಲದರಲ್ಲಿಯೂ ರಾಜಕೀಯ ಹುಡುಕುವ ಕಾಂಗ್ರೆಸ್ನವರಿಗೆ ನಾಚಿಕೆ ಆಗಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಎಷ್ಟು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಕಾಂಗ್ರೆಸ್ನವರು ಕುರುಡರಿದ್ದಾರಾ. ಇದೇ ಮೊದಲ ಬಾರಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದೇ? ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದರು.</p>.<p>‘ನಮ್ಮ ಕಚೇರಿ, ಮನೆಗಳ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಇವರಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದು ವಿಷಾದದ ವಿಚಾರ. ಕೇಂದ್ರ ಸರ್ಕಾರ ತ್ವರಿತವಾಗಿ ಸಿಬಿಐ ತನಿಖೆಗೆ ಆದೇಶಿಸಿದೆ. ಈ ವಿಚಾರದಲ್ಲಿ ಸರ್ಕಾರವನ್ನು ದೂರುವುದು ಸಲ್ಲದು. ಆತಂಕದಲ್ಲಿರುವ ಮಕ್ಕಳ ಜೊತೆ ನೈತಿಕವಾಗಿ ನಿಲ್ಲಬೇಕು’ ಎಂದು ಹೇಳಿದರು.</p>.<p>ಕೋವಿಡ್ ಸಮಯದಲ್ಲಿ ನರೇಂದ್ರ ಮೋದಿ ಅವರು ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈಗ ಯುದ್ಧದ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ. ₹8 ಲಕ್ಷ ಕೋಟಿ ಕಚ್ಚಾ ತೈಲ ಅಮದು ಮಾಡಿಕೊಳ್ಳುತ್ತಿದ್ದೇವೆ. ಹೀಗಾಗಿ ಕಡಿಮೆ ಬಳಕೆ ಮಾಡಿ ಎನ್ನುವುದು ದೊಡ್ಡ ತಪ್ಪೇ ಎಂದರು.</p>.<p>ಅತಿ ಹೆಚ್ಚುವರಿ ಬಂಗಾರ ಖರೀದಿಸುವ ಎರಡನೇ ದೇಶ ಭಾರತ. 1 ವರ್ಷದಲ್ಲಿ ನಾಲ್ಕೂವರೆ ಕೋಟಿ ಜನರು ವಿದೇಶ ಪ್ರವಾಸ ಹೋಗಿದ್ದಾರೆ. ಹೀಗಾಗಿ ದೇಶ ಉಳಿಯಲಿ ಎಂದು ಮೋದಿ ಹೇಳಿದ್ದಾರೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-18-1373560322</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>