<p><strong>ಚಿಕ್ಕಬಳ್ಳಾಪುರ:</strong> ಬೆಂಬಲ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಜಿಲ್ಲೆಯ ರೈತರಿಂದ ಫೆ.16 ರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ರೈತರು ತಮ್ಮ ತಾಲ್ಲೂಕು ರಾಗಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದು ಎಂದು ಜಿಲ್ಲಾಧಿಕಾರಿ ಜಿ ಪ್ರಭು ಮನವಿ ಮಾಡಿದರು.</p>.<p>ವರದಹಳ್ಳಿಯ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ ಸುಧಾಕರ್ ಸಮ್ಮುಖದಲ್ಲಿ ಸೋಮವಾರ ವರದಹಳ್ಳಿಯ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಕನಿಷ್ಠ ಬೆಂಬಲ ಯೋಜನೆಯಡಿ ಜಿಲ್ಲೆಯಲ್ಲಿ 1,57,428 ಕ್ವಿಂಟಲ್ ರಾಗಿ ಮಾರಾಟ ಮಾಡಲು 7,392 ರೈತರು ನೋಂದಣಿ ಮಾಡಿಕೊಂಡಿದ್ದಾರೆ. 6 ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.</p>.<p>ರಾಗಿ ಖರೀದಿಸಲು ಸಕಲ ಸಿದ್ಧತೆಗಳನ್ನು ಜಿಲ್ಲಾಡಳಿತ ಸಮರ್ಪಕವಾಗಿ ಮಾಡಿಕೊಂಡಿದೆ. ರಾಗಿ ಖರೀದಿ ವೇಳೆ ಯಾವುದೇ ತಾಂತ್ರಿಕ ಅಡೆತಡೆಗಳು ಉದ್ಭವವಾಗದಂತೆ ವ್ಯವಸ್ಥೆ ಮಾಡಲಾಗಿದೆ. ಕೇಂದ್ರಗಳಲ್ಲಿ ಅಗತ್ಯ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸದರಿ ಕೇಂದ್ರಗಳಲ್ಲಿಯೇ ರೈತರ ಅನುಕೂಲಕ್ಕಾಗಿ ಈ ಬಾರಿ ಕ್ಯಾಂಟೀನ್ ವ್ಯವಸ್ಥೆ ವಿಶ್ರಾಂತಿಗೃಹ ವ್ಯವಸ್ಥೆ ಕಲ್ಪಿಸಿದ್ದು ಸೂಕ್ತ ಆಸನ ವ್ಯವಸ್ಥೆಗಳನ್ನು ಮಾಡಲಾಗಿದೆ. ತೂಕ ಮತ್ತು ಅಳತೆಗಾಗಿ ಮಾಪನ ಯಂತ್ರಗಳನ್ನು ವ್ಯವಸ್ಥೆ ಮಾಡಲಾಗಿದೆ. ರಾಗಿ ಖರೀದಿಗೆ ಅತ್ಯಗತ್ಯವಾಗಿ ಬೇಕಾಗಿರುವ ಗೋಣಿಚೀಲದ ದಾಸ್ತಾನು ಜಿಲ್ಲೆಯಲ್ಲಿ ಸಾಕಷ್ಟಿದೆ ಎಂದು ಮಾಹಿತಿ ನೀಡಿದರು.</p>.<p>ರಾಗಿ ಖರೀದಿ ಕೇಂದ್ರಗಳಲ್ಲಿ ರೈತರ ಸಮಕ್ಷಮದಲ್ಲಿಯೇ ರಾಗಿಯನ್ನು ತೂಕ ಮಾಡಿ ಪಡೆಯಲಾಗುತ್ತದೆ. ಯಾವುದೇ ರೈತರಿಗೆ ತಮ್ಮ ರಾಗಿಯನ್ನು ಬೇರೆ ಕಡೆ ತೂಕ ಮಾಡಲು ಇಚ್ಛೆಪಟ್ಟರೆ ಅಂತಹವರ ಅನುಕೂಲಕ್ಕಾಗಿಯೇ ಜಿಲ್ಲೆಯಲ್ಲಿ ನೋಂದಾಯಿತವಾಗಿರುವ ಅಧಿಕೃತ 14 ವೇ ಬ್ರಿಡ್ಜ್ ಗಳನ್ನು ಈ ವರ್ಷ ಗುರುತಿಸಲಾಗಿದೆ. ಸದರಿ ವೇ ಬ್ರಿಡ್ಜ್ ಗಳಲ್ಲಿ ರಾಗಿ ತೂಕ ಮಾಡಿಸಿಕೊಂಡು ಖಾತ್ರಿ ಪಡೆಯಬಹುದು ಎಂದು ಹೇಳಿದರು.</p>.<p>ಈಗಾಗಲೇ ದಿನಾಂಕವಾರು ವೇಳಾಪಟ್ಟಿಯಂತೆ ರಾಗಿ ಖರೀದಿಸಲು ರೈತರಿಗೆ ಟೋಕನ್ ನೀಡಲಾಗಿದೆ. ರೈತರು ಆತಂಕಕ್ಕೆ ಒಳಗಾಗದೆ ಜಿಲ್ಲಾಡಳಿತ ತೆರೆದಿರುವ ರಾಗಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದು ಎಂದು ಮನವಿ ಮಾಡಿದರು.</p>.<p>ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ನಾಗರಾಜ ಕೆಳಗಿನಮನಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ್, ಆಹಾರ ನಿರೀಕ್ಷಕ ರಾಮಕೃಷ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಬೆಂಬಲ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಜಿಲ್ಲೆಯ ರೈತರಿಂದ ಫೆ.16 ರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ರೈತರು ತಮ್ಮ ತಾಲ್ಲೂಕು ರಾಗಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದು ಎಂದು ಜಿಲ್ಲಾಧಿಕಾರಿ ಜಿ ಪ್ರಭು ಮನವಿ ಮಾಡಿದರು.</p>.<p>ವರದಹಳ್ಳಿಯ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ ಸುಧಾಕರ್ ಸಮ್ಮುಖದಲ್ಲಿ ಸೋಮವಾರ ವರದಹಳ್ಳಿಯ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಕನಿಷ್ಠ ಬೆಂಬಲ ಯೋಜನೆಯಡಿ ಜಿಲ್ಲೆಯಲ್ಲಿ 1,57,428 ಕ್ವಿಂಟಲ್ ರಾಗಿ ಮಾರಾಟ ಮಾಡಲು 7,392 ರೈತರು ನೋಂದಣಿ ಮಾಡಿಕೊಂಡಿದ್ದಾರೆ. 6 ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.</p>.<p>ರಾಗಿ ಖರೀದಿಸಲು ಸಕಲ ಸಿದ್ಧತೆಗಳನ್ನು ಜಿಲ್ಲಾಡಳಿತ ಸಮರ್ಪಕವಾಗಿ ಮಾಡಿಕೊಂಡಿದೆ. ರಾಗಿ ಖರೀದಿ ವೇಳೆ ಯಾವುದೇ ತಾಂತ್ರಿಕ ಅಡೆತಡೆಗಳು ಉದ್ಭವವಾಗದಂತೆ ವ್ಯವಸ್ಥೆ ಮಾಡಲಾಗಿದೆ. ಕೇಂದ್ರಗಳಲ್ಲಿ ಅಗತ್ಯ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸದರಿ ಕೇಂದ್ರಗಳಲ್ಲಿಯೇ ರೈತರ ಅನುಕೂಲಕ್ಕಾಗಿ ಈ ಬಾರಿ ಕ್ಯಾಂಟೀನ್ ವ್ಯವಸ್ಥೆ ವಿಶ್ರಾಂತಿಗೃಹ ವ್ಯವಸ್ಥೆ ಕಲ್ಪಿಸಿದ್ದು ಸೂಕ್ತ ಆಸನ ವ್ಯವಸ್ಥೆಗಳನ್ನು ಮಾಡಲಾಗಿದೆ. ತೂಕ ಮತ್ತು ಅಳತೆಗಾಗಿ ಮಾಪನ ಯಂತ್ರಗಳನ್ನು ವ್ಯವಸ್ಥೆ ಮಾಡಲಾಗಿದೆ. ರಾಗಿ ಖರೀದಿಗೆ ಅತ್ಯಗತ್ಯವಾಗಿ ಬೇಕಾಗಿರುವ ಗೋಣಿಚೀಲದ ದಾಸ್ತಾನು ಜಿಲ್ಲೆಯಲ್ಲಿ ಸಾಕಷ್ಟಿದೆ ಎಂದು ಮಾಹಿತಿ ನೀಡಿದರು.</p>.<p>ರಾಗಿ ಖರೀದಿ ಕೇಂದ್ರಗಳಲ್ಲಿ ರೈತರ ಸಮಕ್ಷಮದಲ್ಲಿಯೇ ರಾಗಿಯನ್ನು ತೂಕ ಮಾಡಿ ಪಡೆಯಲಾಗುತ್ತದೆ. ಯಾವುದೇ ರೈತರಿಗೆ ತಮ್ಮ ರಾಗಿಯನ್ನು ಬೇರೆ ಕಡೆ ತೂಕ ಮಾಡಲು ಇಚ್ಛೆಪಟ್ಟರೆ ಅಂತಹವರ ಅನುಕೂಲಕ್ಕಾಗಿಯೇ ಜಿಲ್ಲೆಯಲ್ಲಿ ನೋಂದಾಯಿತವಾಗಿರುವ ಅಧಿಕೃತ 14 ವೇ ಬ್ರಿಡ್ಜ್ ಗಳನ್ನು ಈ ವರ್ಷ ಗುರುತಿಸಲಾಗಿದೆ. ಸದರಿ ವೇ ಬ್ರಿಡ್ಜ್ ಗಳಲ್ಲಿ ರಾಗಿ ತೂಕ ಮಾಡಿಸಿಕೊಂಡು ಖಾತ್ರಿ ಪಡೆಯಬಹುದು ಎಂದು ಹೇಳಿದರು.</p>.<p>ಈಗಾಗಲೇ ದಿನಾಂಕವಾರು ವೇಳಾಪಟ್ಟಿಯಂತೆ ರಾಗಿ ಖರೀದಿಸಲು ರೈತರಿಗೆ ಟೋಕನ್ ನೀಡಲಾಗಿದೆ. ರೈತರು ಆತಂಕಕ್ಕೆ ಒಳಗಾಗದೆ ಜಿಲ್ಲಾಡಳಿತ ತೆರೆದಿರುವ ರಾಗಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದು ಎಂದು ಮನವಿ ಮಾಡಿದರು.</p>.<p>ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ನಾಗರಾಜ ಕೆಳಗಿನಮನಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ್, ಆಹಾರ ನಿರೀಕ್ಷಕ ರಾಮಕೃಷ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>