<p><strong>ಚಿಕ್ಕಬಳ್ಳಾಪುರ:</strong> ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಖೋಂಗ್ಡಪ್ ನಗರದ ‘ಸಖಿ’ ಕೇಂದ್ರದಲ್ಲಿರುವ ಅತ್ಯಾಚಾರದ ಸಂತ್ರಸ್ತೆಯನ್ನು ಬುಧವಾರ ಭೇಟಿ ಮಾಡಿ ಮಾಹಿತಿ ಪಡೆದರು. </p><p>ತಾಲ್ಲೂಕಿನ ಶ್ರೀನಿವಾಸ ಸಾಗರ ಬಳಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಬಿಡುತ್ತೇವೆ ಎಂದು ನಂಬಿಸಿ ಸಿಕಂದರ್ ಮತ್ತು ಜನಾರ್ದನಾಚಾರಿ ಎಂಬುವವರು ಅತ್ಯಾಚಾರ<br>ಎಸಗಿದ್ದರು.</p><p>ಈ ಪ್ರಕರಣದ ಸಂತ್ರಸ್ತ ಯುವತಿಯು ಸಖಿ ಕೇಂದ್ರದಲ್ಲಿ ಇದ್ದಾರೆ. ಬುಧವಾರ ಬೆಳಿಗ್ಗೆ ಕೇಂದ್ರಕ್ಕೆ ಭೇಟಿ ನೀಡಿದ ಡೆಲಿನಾ ಖೋಂಗ್ಡಪ್ ಮತ್ತು ಅವರ ತಂಡವು ಯುವತಿಯಿಂದ ಪ್ರತ್ಯೇಕವಾಗಿ ಮಾಹಿತಿ ಕಲೆ ಹಾಕಿತು. </p><p>‘ಡೆಲಿನಾ ಖೋಂಗ್ಡಪ್ ನೇತೃತ್ವದ ತಂಡವು ಯುವತಿಯಿಂದ ಪ್ರತ್ಯೇಕವಾಗಿ ಮಾಹಿತಿ ಕಲೆ ಹಾಕಿತು. ಈ ವೇಳೆ ಸ್ಥಳೀಯ ಅಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ. ಈ ಬಗ್ಗೆ ಶೀಘ್ರದಲ್ಲಿಯೇ ಆಯೋಗವು ಕ್ರಮವಹಿಸಲಿದೆ’ ಎಂದು ಸಖಿ ಕೇಂದ್ರದ ಸಿಬ್ಬಂದಿ ತಿಳಿಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಇದ್ದರು.</p><p>ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವು ರಾಜ್ಯದಾದ್ಯಂತ ಸದ್ದು ಮಾಡಿತ್ತು. ಪೊಲೀಸರು ಇಬ್ಬರು ಆರೋಪಿಗಳನ್ನು ಸಹ ಬಂಧಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಖೋಂಗ್ಡಪ್ ನಗರದ ‘ಸಖಿ’ ಕೇಂದ್ರದಲ್ಲಿರುವ ಅತ್ಯಾಚಾರದ ಸಂತ್ರಸ್ತೆಯನ್ನು ಬುಧವಾರ ಭೇಟಿ ಮಾಡಿ ಮಾಹಿತಿ ಪಡೆದರು. </p><p>ತಾಲ್ಲೂಕಿನ ಶ್ರೀನಿವಾಸ ಸಾಗರ ಬಳಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಬಿಡುತ್ತೇವೆ ಎಂದು ನಂಬಿಸಿ ಸಿಕಂದರ್ ಮತ್ತು ಜನಾರ್ದನಾಚಾರಿ ಎಂಬುವವರು ಅತ್ಯಾಚಾರ<br>ಎಸಗಿದ್ದರು.</p><p>ಈ ಪ್ರಕರಣದ ಸಂತ್ರಸ್ತ ಯುವತಿಯು ಸಖಿ ಕೇಂದ್ರದಲ್ಲಿ ಇದ್ದಾರೆ. ಬುಧವಾರ ಬೆಳಿಗ್ಗೆ ಕೇಂದ್ರಕ್ಕೆ ಭೇಟಿ ನೀಡಿದ ಡೆಲಿನಾ ಖೋಂಗ್ಡಪ್ ಮತ್ತು ಅವರ ತಂಡವು ಯುವತಿಯಿಂದ ಪ್ರತ್ಯೇಕವಾಗಿ ಮಾಹಿತಿ ಕಲೆ ಹಾಕಿತು. </p><p>‘ಡೆಲಿನಾ ಖೋಂಗ್ಡಪ್ ನೇತೃತ್ವದ ತಂಡವು ಯುವತಿಯಿಂದ ಪ್ರತ್ಯೇಕವಾಗಿ ಮಾಹಿತಿ ಕಲೆ ಹಾಕಿತು. ಈ ವೇಳೆ ಸ್ಥಳೀಯ ಅಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ. ಈ ಬಗ್ಗೆ ಶೀಘ್ರದಲ್ಲಿಯೇ ಆಯೋಗವು ಕ್ರಮವಹಿಸಲಿದೆ’ ಎಂದು ಸಖಿ ಕೇಂದ್ರದ ಸಿಬ್ಬಂದಿ ತಿಳಿಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಇದ್ದರು.</p><p>ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವು ರಾಜ್ಯದಾದ್ಯಂತ ಸದ್ದು ಮಾಡಿತ್ತು. ಪೊಲೀಸರು ಇಬ್ಬರು ಆರೋಪಿಗಳನ್ನು ಸಹ ಬಂಧಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>