<p><strong>ಚಿಕ್ಕಬಳ್ಳಾಪುರ:</strong> ಶಿಕ್ಷಕ ವೃತ್ತಿ ಭಾಗ್ಯವಂತರ ಕೆಲಸ. ಶಿಕ್ಷಕ ಸಮುದಾಯದವರು ಎಲ್ಲ ಕ್ಷೇತ್ರಗಳನ್ನು ಬೆಳೆಸುವ ಗಾರುಡಿಗರು ಎಂದು ಬೆಂಗಳೂರು ಉತ್ತರ ವಿವಿ ಕುಲಪತಿ ಬಿ.ಕೆ.ರವಿ ಹೇಳಿದರು.</p>.<p>ನಗರ ಹೊರವಲಯದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಂಗಳವಾರ ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಎನ್.ಲೋಕನಾಥ್ ಅವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.</p>.<p>ಶಿಕ್ಷಕ ವೃತ್ತಿ ಎಂಬುದು ಸಾಮಾಜಿಕ ಬದಲಾವಣೆ ತರುವ ಹುದ್ದೆ. ಶಿಕ್ಷಕನಿಗೆ ನಿವೃತ್ತಿ ಇರುವುದಿಲ್ಲ. ಲೋಕನಾಥ್ ಇದೇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ 31 ವರ್ಷ ಕೆಲಸ ಮಾಡಿದರು. ನಂತರ ಮೌಲ್ಯಮಾಪನ ಕುಲಸಚಿವರಾಗಿ ಸಾರ್ಥಕ ಕೆಲಸ ಮಾಡಿದ್ದಾರೆ ಎಂದರು.</p>.<p>ಎನ್.ಲೋಕನಾಥ್ ಮಾತನಾಡಿ, ಶಿಕ್ಷಕ, ಸಾಹಿತಿ, ಪತ್ರಕರ್ತ, ಹೋರಾಟಗಾರರಿಗೆ ನಿವೃತ್ತಿ ಇರುವುದಿಲ್ಲ ಎಂದರು. ತಮ್ಮ ಕೆಲಸದ ಹಾದಿಯನ್ನು ನೆನಪಿಸಿಕೊಂಡರು.</p>.<p>ಕಸಾಪ ಜಿಲ್ಲಾ ಅಧ್ಯಕ್ಷ ಪ್ರೊ. ಕೋಡಿರಂಗಪ್ಪ, ಬಿ.ಜಿ.ಎಸ್. ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಎನ್. ಶಿವರಾಮರೆಡ್ಡಿ, ಕಾಲೇಜಿನ ಪ್ರಾಂಶುಪಾಲ ಜಿ.ಪಿ.ಬಾಹುಬಲಿ, ಪ್ರಾಧ್ಯಾಪಕ ಶಂಕರ್, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-16-1466810826</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಶಿಕ್ಷಕ ವೃತ್ತಿ ಭಾಗ್ಯವಂತರ ಕೆಲಸ. ಶಿಕ್ಷಕ ಸಮುದಾಯದವರು ಎಲ್ಲ ಕ್ಷೇತ್ರಗಳನ್ನು ಬೆಳೆಸುವ ಗಾರುಡಿಗರು ಎಂದು ಬೆಂಗಳೂರು ಉತ್ತರ ವಿವಿ ಕುಲಪತಿ ಬಿ.ಕೆ.ರವಿ ಹೇಳಿದರು.</p>.<p>ನಗರ ಹೊರವಲಯದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಂಗಳವಾರ ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಎನ್.ಲೋಕನಾಥ್ ಅವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.</p>.<p>ಶಿಕ್ಷಕ ವೃತ್ತಿ ಎಂಬುದು ಸಾಮಾಜಿಕ ಬದಲಾವಣೆ ತರುವ ಹುದ್ದೆ. ಶಿಕ್ಷಕನಿಗೆ ನಿವೃತ್ತಿ ಇರುವುದಿಲ್ಲ. ಲೋಕನಾಥ್ ಇದೇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ 31 ವರ್ಷ ಕೆಲಸ ಮಾಡಿದರು. ನಂತರ ಮೌಲ್ಯಮಾಪನ ಕುಲಸಚಿವರಾಗಿ ಸಾರ್ಥಕ ಕೆಲಸ ಮಾಡಿದ್ದಾರೆ ಎಂದರು.</p>.<p>ಎನ್.ಲೋಕನಾಥ್ ಮಾತನಾಡಿ, ಶಿಕ್ಷಕ, ಸಾಹಿತಿ, ಪತ್ರಕರ್ತ, ಹೋರಾಟಗಾರರಿಗೆ ನಿವೃತ್ತಿ ಇರುವುದಿಲ್ಲ ಎಂದರು. ತಮ್ಮ ಕೆಲಸದ ಹಾದಿಯನ್ನು ನೆನಪಿಸಿಕೊಂಡರು.</p>.<p>ಕಸಾಪ ಜಿಲ್ಲಾ ಅಧ್ಯಕ್ಷ ಪ್ರೊ. ಕೋಡಿರಂಗಪ್ಪ, ಬಿ.ಜಿ.ಎಸ್. ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಎನ್. ಶಿವರಾಮರೆಡ್ಡಿ, ಕಾಲೇಜಿನ ಪ್ರಾಂಶುಪಾಲ ಜಿ.ಪಿ.ಬಾಹುಬಲಿ, ಪ್ರಾಧ್ಯಾಪಕ ಶಂಕರ್, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-16-1466810826</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>