<p>ಚಿಕ್ಕಬಳ್ಳಾಪುರ: ನಗರದ ಎಸ್ಜೆಸಿ ತಾಂತ್ರಿಕ ವಿದ್ಯಾಲಯದಲ್ಲಿ ಏ.24 ಮತ್ತು 25ರಂದು 4ನೇ ವರ್ಷದ ಐಇಇಇ ನಾಲೆಡ್ಜ್ ಎಂಜಿನಿಯರಿಂಗ್ ಮತ್ತು ಕಮ್ಯುನಿಕೇಷನ್ ಸಿಸ್ಟಮ್ಸ್ (ಜ್ಞಾನ ಆಧಾರಿತ ಎಂಜಿನಿಯರಿಂಗ್ ಸಂವಹನ ವ್ಯವಸ್ಥೆಗಳು) ಎಂಬ ಅಂತರರಾಷ್ಟ್ರೀಯ ಸಮ್ಮೇಳನ ನಡೆಯಲಿದೆ ಎಂದು ಎಸ್ಜೆಸಿಐಟಿ ಪ್ರಾಂಶುಪಾಲ ಜಿ.ಟಿ ರಾಜು ತಿಳಿಸಿದರು.</p>.<p>ನಗರದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಾಲ್ಕನೇ ವರ್ಷದ ಸಮ್ಮೇಳನ. ಕೃತಕ ಬುದ್ಧಿಮತ್ತೆ (ಎಐ), ಯಂತ್ರಕಲಿಕೆ, ಡೇಟಾ ಮೈನಿಂಗ್, ಜ್ಞಾನ ಅನ್ವೇಷಣೆ, ವೈರ್ಲೆಸ್ ಕಮ್ಯುನಿಕೇಷನ್ ನೆಟ್ವರ್ಕಿಂಗ್ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯಲಿವೆ ಎಂದರು.</p>.<p>13 ದೇಶಗಳ 365 ಸಂಶೋಧನಾ ಪ್ರಬಂಧಗಳು ಮಂಡನೆ ಆಗಲಿವೆ. ಸಮ್ಮೇಳನದಲ್ಲಿ ಮಂಡಿಸಲು ಒಟ್ಟು 1,901 ಸಂಶೋಧನಾ ಪ್ರಬಂಧಗಳು ಬಂದಿದ್ದವು. ಈ ಪೈಕಿ 365 ಪ್ರಬಂಧಗಳು ಆಯ್ಕೆಯಾಗಿವೆ. ಈ ಪ್ರಬಂಧಗಳ ಮಂಡನೆಯ ನಂತರ ಚರ್ಚೆ, ಪರಿಣತರಿಂದ ಮೌಲ್ಯಮಾಪನ ಸಹ ನಡೆಯಲಿದೆ. ನಂತರ ಪ್ರಬಂಧಗಳು ಪ್ರಕಾಶನಗೊಳ್ಳುತ್ತವೆ ಎಂದು ವಿವರಿಸಿದರು.</p>.<p>ಕೃತಕಬುದ್ಧಿಮತ್ತೆ, ಯಂತ್ರಕಲಿಕೆಯ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳು ನಡೆಯುತ್ತಿವೆ. ಹೊಸ ಆಲೋಚನೆಗಳನ್ನು ಸಮ್ಮೇಳನದಲ್ಲಿ ಪ್ರಸ್ತುತಪಡಿಸಲಾಗುತ್ತದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಆಸಕ್ತ ಸಂಶೋಧನಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಿ ಚರ್ಚೆಯಲ್ಲಿಯೂ ಪಾಲ್ಗೊಳ್ಳಬಹುದು ಎಂದು ಹೇಳಿದರು.</p>.<p>ಈ ಅಂತರರಾಷ್ಟ್ರೀಯ ಸಮ್ಮೇಳನವನ್ನು 24ರಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸುವರು. ಭಾರತೀಯ ವಿಜ್ಞಾನ ಸಂಸ್ಥೆಯ ಹಿರಿಯ ವಿಜ್ಞಾನಿ ಯದತಿ ನರಹರಿ ಮುಖ್ಯಭಾಷಣ ಮಾಡುವರು. ಟಿಸಿಎಸ್ನ ಹಿರಿಯ ವಿಜ್ಞಾನಿ ಪ್ರಶಾಂತ್ ಮಿಶ್ರಾ, ವಿಟಿಯು ಸಿಂಡಿಕೇಟ್ ಸದಸ್ಯ ಮಂಜುನಾಥ್ ಬಚ್ಚೇಗೌಡ ಭಾಗಿಯಾಗುವರು ಎಂದರು.</p>.<p>ಇಂತಹ ಸಮ್ಮೇಳನಗಳ ಮೂಲಕ ಕೃಷಿ, ವೈದ್ಯಕೀಯ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕ್ರಮಗಳನ್ನು ಕಂಡುಕೊಳ್ಳಬಹುದು. ಇದಕ್ಕೆ ನಮ್ಮ ಕಾಲೇಜು ವೇದಿಕೆ ಒದಗಿಸಿಕೊಟ್ಟಿದೆ ಎಂದರು.</p>.<p>ಪ್ರಾಧ್ಯಾಪಕರಾದ ರಾಜಶೇಖರ್, ಮಂಜುನಾಥ್, ಪುಷ್ಪ, ಭಾನುಮತಿ ಎಸ್. ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-18-1491672828</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ನಗರದ ಎಸ್ಜೆಸಿ ತಾಂತ್ರಿಕ ವಿದ್ಯಾಲಯದಲ್ಲಿ ಏ.24 ಮತ್ತು 25ರಂದು 4ನೇ ವರ್ಷದ ಐಇಇಇ ನಾಲೆಡ್ಜ್ ಎಂಜಿನಿಯರಿಂಗ್ ಮತ್ತು ಕಮ್ಯುನಿಕೇಷನ್ ಸಿಸ್ಟಮ್ಸ್ (ಜ್ಞಾನ ಆಧಾರಿತ ಎಂಜಿನಿಯರಿಂಗ್ ಸಂವಹನ ವ್ಯವಸ್ಥೆಗಳು) ಎಂಬ ಅಂತರರಾಷ್ಟ್ರೀಯ ಸಮ್ಮೇಳನ ನಡೆಯಲಿದೆ ಎಂದು ಎಸ್ಜೆಸಿಐಟಿ ಪ್ರಾಂಶುಪಾಲ ಜಿ.ಟಿ ರಾಜು ತಿಳಿಸಿದರು.</p>.<p>ನಗರದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಾಲ್ಕನೇ ವರ್ಷದ ಸಮ್ಮೇಳನ. ಕೃತಕ ಬುದ್ಧಿಮತ್ತೆ (ಎಐ), ಯಂತ್ರಕಲಿಕೆ, ಡೇಟಾ ಮೈನಿಂಗ್, ಜ್ಞಾನ ಅನ್ವೇಷಣೆ, ವೈರ್ಲೆಸ್ ಕಮ್ಯುನಿಕೇಷನ್ ನೆಟ್ವರ್ಕಿಂಗ್ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯಲಿವೆ ಎಂದರು.</p>.<p>13 ದೇಶಗಳ 365 ಸಂಶೋಧನಾ ಪ್ರಬಂಧಗಳು ಮಂಡನೆ ಆಗಲಿವೆ. ಸಮ್ಮೇಳನದಲ್ಲಿ ಮಂಡಿಸಲು ಒಟ್ಟು 1,901 ಸಂಶೋಧನಾ ಪ್ರಬಂಧಗಳು ಬಂದಿದ್ದವು. ಈ ಪೈಕಿ 365 ಪ್ರಬಂಧಗಳು ಆಯ್ಕೆಯಾಗಿವೆ. ಈ ಪ್ರಬಂಧಗಳ ಮಂಡನೆಯ ನಂತರ ಚರ್ಚೆ, ಪರಿಣತರಿಂದ ಮೌಲ್ಯಮಾಪನ ಸಹ ನಡೆಯಲಿದೆ. ನಂತರ ಪ್ರಬಂಧಗಳು ಪ್ರಕಾಶನಗೊಳ್ಳುತ್ತವೆ ಎಂದು ವಿವರಿಸಿದರು.</p>.<p>ಕೃತಕಬುದ್ಧಿಮತ್ತೆ, ಯಂತ್ರಕಲಿಕೆಯ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳು ನಡೆಯುತ್ತಿವೆ. ಹೊಸ ಆಲೋಚನೆಗಳನ್ನು ಸಮ್ಮೇಳನದಲ್ಲಿ ಪ್ರಸ್ತುತಪಡಿಸಲಾಗುತ್ತದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಆಸಕ್ತ ಸಂಶೋಧನಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಿ ಚರ್ಚೆಯಲ್ಲಿಯೂ ಪಾಲ್ಗೊಳ್ಳಬಹುದು ಎಂದು ಹೇಳಿದರು.</p>.<p>ಈ ಅಂತರರಾಷ್ಟ್ರೀಯ ಸಮ್ಮೇಳನವನ್ನು 24ರಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸುವರು. ಭಾರತೀಯ ವಿಜ್ಞಾನ ಸಂಸ್ಥೆಯ ಹಿರಿಯ ವಿಜ್ಞಾನಿ ಯದತಿ ನರಹರಿ ಮುಖ್ಯಭಾಷಣ ಮಾಡುವರು. ಟಿಸಿಎಸ್ನ ಹಿರಿಯ ವಿಜ್ಞಾನಿ ಪ್ರಶಾಂತ್ ಮಿಶ್ರಾ, ವಿಟಿಯು ಸಿಂಡಿಕೇಟ್ ಸದಸ್ಯ ಮಂಜುನಾಥ್ ಬಚ್ಚೇಗೌಡ ಭಾಗಿಯಾಗುವರು ಎಂದರು.</p>.<p>ಇಂತಹ ಸಮ್ಮೇಳನಗಳ ಮೂಲಕ ಕೃಷಿ, ವೈದ್ಯಕೀಯ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕ್ರಮಗಳನ್ನು ಕಂಡುಕೊಳ್ಳಬಹುದು. ಇದಕ್ಕೆ ನಮ್ಮ ಕಾಲೇಜು ವೇದಿಕೆ ಒದಗಿಸಿಕೊಟ್ಟಿದೆ ಎಂದರು.</p>.<p>ಪ್ರಾಧ್ಯಾಪಕರಾದ ರಾಜಶೇಖರ್, ಮಂಜುನಾಥ್, ಪುಷ್ಪ, ಭಾನುಮತಿ ಎಸ್. ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-18-1491672828</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>