<p><strong>ಚಿಕ್ಕಬಳ್ಳಾಪುರ</strong>: ಚಿಕ್ಕಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಭರ್ತಿಗೆ ಕಾಲಕೂಡುವ ಸ್ಥಿತಿ ಕಾಣುತ್ತಿಲ್ಲ. ಸದಸ್ಯರ ಪಟ್ಟಿಯ ರಾಜಕಾರಣದಿಂದ ಮತ್ತೆ ನನೆಗುದಿಗೆ ಬಿದ್ದಿದೆ. </p>.<p>ನಗರಸಭೆ ಪೌರಾಯುಕ್ತರ ಬಳಿಯೇ ನಗರಸಭೆ ಸ್ಥಾಯಿ ಸಮಿತಿ ಸದಸ್ಯರ ಮೂರು ಪಟ್ಟಿಗಳು ಇವೆ. ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರಿಗೆ ಈ ಮೂರು ಪಟ್ಟಿಗಳಲ್ಲಿ ಯಾವ ಪಟ್ಟಿಯನ್ನೂ ಕಳುಹಿಸಿಕೊಟ್ಟಿಲ್ಲ. ಸ್ಥಾಯಿ ಸಮಿತಿ ರಚನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಜಿಲ್ಲಾಧಿಕಾರಿ ಅವರಿಗೆ ಕಳುಹಿಸಬೇಕು.</p>.<p>ನಗರಸಭೆ ರಾಜಕೀಯವನ್ನು ನೋಡಿದರೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಭರ್ತಿಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಚಿಕ್ಕಬಳ್ಳಾಪುರ ನಗರಸಭೆ ಆಡಳಿತ ಮಂಡಳಿಯ ಅವಧಿ ಅಕ್ಟೋಬರ್ 31ಕ್ಕೆ ಅಂತ್ಯವಾಗಲಿದೆ. </p>.<p>ಜು.22ರಂದು ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಮತ್ತು ಪೌರಾಯುಕ್ತರ ಸಮ್ಮುಖದಲ್ಲಿ 11 ನಗರಸಭಾ ಸದಸ್ಯರ ಹೆಸರನ್ನು ಸ್ಥಾಯಿ ಸಮಿತಿಗೆ ಆಯ್ಕೆ ಮಾಡಲಾಗಿದೆ. ಎಲ್ಲ ಸದಸ್ಯರು ಒಪ್ಪಿ ಸರ್ವಾನುಮತದಿಂದ ತೀರ್ಮಾನಿಸಿದ್ದಾರೆ. ಈ ಆಯ್ಕೆಯಾದ ಸದಸ್ಯರನ್ನು ಪೌರಾಯುಕ್ತರು ಸಭೆ ಓದಿ, ಸಭೆಯಲ್ಲಿ ರೆಕಾರ್ಡ್ ಸಹ ಮಾಡಿದ್ದಾರೆ.</p>.<p>ಈ ನಡುವೆ ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಮತ್ತು ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಡಿ.ಎಸ್.ಆನಂದರೆಡ್ಡಿ ಬಾಬು ಸಹ ಸ್ಥಾಯಿ ಸಮಿತಿ ಸದಸ್ಯರ ಪಟ್ಟಿಯನ್ನು ಪೌರಾಯುಕ್ತರಿಗೆ ನೀಡಿದ್ದಾರೆ. ಈಗ ಪೌರಾಯುಕ್ತರ ಬಳಿ ಮೂರು ಪಟ್ಟಿಗಳು ಇವೆ. ಈ ವಿಚಾರವಾಗಿ ತೀವ್ರ ಹಗ್ಗಜಗ್ಗಾಟ ಸಹ ನಗರಸಭೆ ಅಂಗಳದಲ್ಲಿ ನಡೆಯುತ್ತಿದೆ. ಈ ಕಾರಣದಿಂದ ಪೌರಾಯುಕ್ತರು ಯಾವುದೇ ಪಟ್ಟಿಯನ್ನೂ ಜಿಲ್ಲಾಧಿಕಾರಿಗೆ ಕಳುಹಿಸಿಲ್ಲ.</p>.<p>ನಗರಸಭೆ ಸಾಮಾನ್ಯ ಸಭೆಯಲ್ಲಿ ಅನುಮೋದನೆಯಾಗಿರುವ ಸ್ಥಾಯಿ ಸಮಿತಿ ಸದಸ್ಯರ ಪಟ್ಟಿ ಮತ್ತು ಆ ನಂತರದ ಪಟ್ಟಿಗಳಲ್ಲಿ ಕಾಂಗ್ರೆಸ್ನ ಕೆಲವು ಸದಸ್ಯರು ಅದಲು ಬದಲಾಗಿವೆ. ಈ ವಿಚಾರವೂ ಸಹ ಜಟಾಪಟಿಗೆ ಕಾರಣವಾಗಿದೆ. </p>.<p>ನಗರಸಭೆ ಆಡಳಿತ ಮಂಡಳಿ ಅಧಿಕಾರಕ್ಕೆ ಕೇವಲ ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಇವೆ. ಇಂಥದ್ದರ ನಡುವೆಯೂ ರಾಜಕೀಯ ಹಗ್ಗಜಗ್ಗಾಟದಿಂದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಭರ್ತಿ ಆಗುತ್ತದೆಯೇ ಇಲ್ಲವೆ ಎನ್ನುವ ಕುತೂಹಲವಿದೆ.</p>.<p>2013ರಿಂದಲೂ ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನ ಖಾಲಿ ಇದೆ. ಈ ಹಿಂದೆ ನಡೆದ ನಗರಸಭೆಯ ಹಲವು ಸಾಮಾನ್ಯಸಭೆಗಳಲ್ಲಿ ಸ್ಥಾಯಿ ಸಮಿತಿ ರಚನೆಯ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಆದರೆ ಅಧ್ಯಕ್ಷ ಸ್ಥಾನ ಭರ್ತಿ ಮಾತ್ರ ಸಾಧ್ಯವಾಗಿಲ್ಲ.</p>.<p>ಸುಬ್ರಹ್ಮಣ್ಯಾಚಾರಿಗೆ ಪಟ್ಟ ಎಂದಿರುವ ಡಾ.ಕೆ.ಸುಧಾಕರ್: ಸ್ಥಾಯಿ ಸಮಿತಿ ರಚನೆ ವಿಚಾರವು ಆಡಳಿತ ಪಕ್ಷದ ಸದಸ್ಯರನ್ನು ಜಟಾಪಟಿಗೆ ಕಾರಣವಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಂಸದ ಡಾ.ಕೆ. ಸುಧಾಕರ್ ನಗರದ ತಮ್ಮ ನಿವಾಸದಲ್ಲಿ ಆಡಳಿತ ಪಕ್ಷದ ಸದಸ್ಯರ ಸಭೆ ನಡೆಸಿದ್ದರು. </p>.<p>ಈ ವೇಳೆ ಮಾಧ್ಯಮದವರು ಯಾರು ಅಧ್ಯಕ್ಷರಾಗುವರು ಎಂದಿದ್ದಕ್ಕೆ, ‘ಸುಬ್ರಹ್ಮಣ್ಯಾಚಾರಿ ಅವರನ್ನು ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ಒಮ್ಮತದಿಂದ ತೀರ್ಮಾನಿಸಲಾಗಿದೆ. ಎಲ್ಲರೂ ಒಮ್ಮತದಿಂದ ಈ ಬಗ್ಗೆ ನಿರ್ಧಾರ ಮಾಡಿದ್ದಾರೆ’ ಎಂದಿದ್ದರು. ಸುಬ್ರಹ್ಮಣ್ಯಾಚಾರಿಗೆ ಅಧ್ಯಕ್ಷ ಸ್ಥಾನ ದೊರೆಯುತ್ತದೆ ಎನ್ನುವ ಮಾತುಗಳು ಈ ಹಿಂದಿನಿಂದಲೂ ಕೇಳಿ ಬರುತ್ತಿವೆ. </p>.<p>ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರು, ಅಧ್ಯಕ್ಷರಿಗೆ ಸಮಾನ ಎನ್ನುವ ರೀತಿಯಲ್ಲಿಯೇ ಅಧಿಕಾರ ಹೊಂದಿರುವರು. </p>.<h2>ಸಾಮಾನ್ಯ ಸಭೆ ಪಟ್ಟಿಯೇ ಅಂತಿಮ</h2>.<p> ಸಾಮಾನ್ಯಸಭೆಯಲ್ಲಿ ದಾಖಲಿಸಿರುವ ಸ್ಥಾಯಿ ಸಮಿತಿ ಸದಸ್ಯರ ಪಟ್ಟಿಯೇ ಅಂತಿಮ. ಉಳಿದ ಪಟ್ಟಿಗಳ ಅಂಗೀಕಾರ ಸಾಧ್ಯವಿಲ್ಲ. ಇನ್ನೂ ಸಹ ಜಿಲ್ಲಾಧಿಕಾರಿ ಅವರಿಗೆ ಸದಸ್ಯರ ಪಟ್ಟಿಯನ್ನು ಶಿಫಾರಸು ಮಾಡಿಲ್ಲ. ಮನ್ಸೂರ್ ಅಲಿ ಪೌರಾಯುಕ್ತರು ಚಿಕ್ಕಬಳ್ಳಾಪುರ ನಗರಸಭೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಚಿಕ್ಕಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಭರ್ತಿಗೆ ಕಾಲಕೂಡುವ ಸ್ಥಿತಿ ಕಾಣುತ್ತಿಲ್ಲ. ಸದಸ್ಯರ ಪಟ್ಟಿಯ ರಾಜಕಾರಣದಿಂದ ಮತ್ತೆ ನನೆಗುದಿಗೆ ಬಿದ್ದಿದೆ. </p>.<p>ನಗರಸಭೆ ಪೌರಾಯುಕ್ತರ ಬಳಿಯೇ ನಗರಸಭೆ ಸ್ಥಾಯಿ ಸಮಿತಿ ಸದಸ್ಯರ ಮೂರು ಪಟ್ಟಿಗಳು ಇವೆ. ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರಿಗೆ ಈ ಮೂರು ಪಟ್ಟಿಗಳಲ್ಲಿ ಯಾವ ಪಟ್ಟಿಯನ್ನೂ ಕಳುಹಿಸಿಕೊಟ್ಟಿಲ್ಲ. ಸ್ಥಾಯಿ ಸಮಿತಿ ರಚನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಜಿಲ್ಲಾಧಿಕಾರಿ ಅವರಿಗೆ ಕಳುಹಿಸಬೇಕು.</p>.<p>ನಗರಸಭೆ ರಾಜಕೀಯವನ್ನು ನೋಡಿದರೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಭರ್ತಿಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಚಿಕ್ಕಬಳ್ಳಾಪುರ ನಗರಸಭೆ ಆಡಳಿತ ಮಂಡಳಿಯ ಅವಧಿ ಅಕ್ಟೋಬರ್ 31ಕ್ಕೆ ಅಂತ್ಯವಾಗಲಿದೆ. </p>.<p>ಜು.22ರಂದು ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಮತ್ತು ಪೌರಾಯುಕ್ತರ ಸಮ್ಮುಖದಲ್ಲಿ 11 ನಗರಸಭಾ ಸದಸ್ಯರ ಹೆಸರನ್ನು ಸ್ಥಾಯಿ ಸಮಿತಿಗೆ ಆಯ್ಕೆ ಮಾಡಲಾಗಿದೆ. ಎಲ್ಲ ಸದಸ್ಯರು ಒಪ್ಪಿ ಸರ್ವಾನುಮತದಿಂದ ತೀರ್ಮಾನಿಸಿದ್ದಾರೆ. ಈ ಆಯ್ಕೆಯಾದ ಸದಸ್ಯರನ್ನು ಪೌರಾಯುಕ್ತರು ಸಭೆ ಓದಿ, ಸಭೆಯಲ್ಲಿ ರೆಕಾರ್ಡ್ ಸಹ ಮಾಡಿದ್ದಾರೆ.</p>.<p>ಈ ನಡುವೆ ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಮತ್ತು ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಡಿ.ಎಸ್.ಆನಂದರೆಡ್ಡಿ ಬಾಬು ಸಹ ಸ್ಥಾಯಿ ಸಮಿತಿ ಸದಸ್ಯರ ಪಟ್ಟಿಯನ್ನು ಪೌರಾಯುಕ್ತರಿಗೆ ನೀಡಿದ್ದಾರೆ. ಈಗ ಪೌರಾಯುಕ್ತರ ಬಳಿ ಮೂರು ಪಟ್ಟಿಗಳು ಇವೆ. ಈ ವಿಚಾರವಾಗಿ ತೀವ್ರ ಹಗ್ಗಜಗ್ಗಾಟ ಸಹ ನಗರಸಭೆ ಅಂಗಳದಲ್ಲಿ ನಡೆಯುತ್ತಿದೆ. ಈ ಕಾರಣದಿಂದ ಪೌರಾಯುಕ್ತರು ಯಾವುದೇ ಪಟ್ಟಿಯನ್ನೂ ಜಿಲ್ಲಾಧಿಕಾರಿಗೆ ಕಳುಹಿಸಿಲ್ಲ.</p>.<p>ನಗರಸಭೆ ಸಾಮಾನ್ಯ ಸಭೆಯಲ್ಲಿ ಅನುಮೋದನೆಯಾಗಿರುವ ಸ್ಥಾಯಿ ಸಮಿತಿ ಸದಸ್ಯರ ಪಟ್ಟಿ ಮತ್ತು ಆ ನಂತರದ ಪಟ್ಟಿಗಳಲ್ಲಿ ಕಾಂಗ್ರೆಸ್ನ ಕೆಲವು ಸದಸ್ಯರು ಅದಲು ಬದಲಾಗಿವೆ. ಈ ವಿಚಾರವೂ ಸಹ ಜಟಾಪಟಿಗೆ ಕಾರಣವಾಗಿದೆ. </p>.<p>ನಗರಸಭೆ ಆಡಳಿತ ಮಂಡಳಿ ಅಧಿಕಾರಕ್ಕೆ ಕೇವಲ ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಇವೆ. ಇಂಥದ್ದರ ನಡುವೆಯೂ ರಾಜಕೀಯ ಹಗ್ಗಜಗ್ಗಾಟದಿಂದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಭರ್ತಿ ಆಗುತ್ತದೆಯೇ ಇಲ್ಲವೆ ಎನ್ನುವ ಕುತೂಹಲವಿದೆ.</p>.<p>2013ರಿಂದಲೂ ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನ ಖಾಲಿ ಇದೆ. ಈ ಹಿಂದೆ ನಡೆದ ನಗರಸಭೆಯ ಹಲವು ಸಾಮಾನ್ಯಸಭೆಗಳಲ್ಲಿ ಸ್ಥಾಯಿ ಸಮಿತಿ ರಚನೆಯ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಆದರೆ ಅಧ್ಯಕ್ಷ ಸ್ಥಾನ ಭರ್ತಿ ಮಾತ್ರ ಸಾಧ್ಯವಾಗಿಲ್ಲ.</p>.<p>ಸುಬ್ರಹ್ಮಣ್ಯಾಚಾರಿಗೆ ಪಟ್ಟ ಎಂದಿರುವ ಡಾ.ಕೆ.ಸುಧಾಕರ್: ಸ್ಥಾಯಿ ಸಮಿತಿ ರಚನೆ ವಿಚಾರವು ಆಡಳಿತ ಪಕ್ಷದ ಸದಸ್ಯರನ್ನು ಜಟಾಪಟಿಗೆ ಕಾರಣವಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಂಸದ ಡಾ.ಕೆ. ಸುಧಾಕರ್ ನಗರದ ತಮ್ಮ ನಿವಾಸದಲ್ಲಿ ಆಡಳಿತ ಪಕ್ಷದ ಸದಸ್ಯರ ಸಭೆ ನಡೆಸಿದ್ದರು. </p>.<p>ಈ ವೇಳೆ ಮಾಧ್ಯಮದವರು ಯಾರು ಅಧ್ಯಕ್ಷರಾಗುವರು ಎಂದಿದ್ದಕ್ಕೆ, ‘ಸುಬ್ರಹ್ಮಣ್ಯಾಚಾರಿ ಅವರನ್ನು ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ಒಮ್ಮತದಿಂದ ತೀರ್ಮಾನಿಸಲಾಗಿದೆ. ಎಲ್ಲರೂ ಒಮ್ಮತದಿಂದ ಈ ಬಗ್ಗೆ ನಿರ್ಧಾರ ಮಾಡಿದ್ದಾರೆ’ ಎಂದಿದ್ದರು. ಸುಬ್ರಹ್ಮಣ್ಯಾಚಾರಿಗೆ ಅಧ್ಯಕ್ಷ ಸ್ಥಾನ ದೊರೆಯುತ್ತದೆ ಎನ್ನುವ ಮಾತುಗಳು ಈ ಹಿಂದಿನಿಂದಲೂ ಕೇಳಿ ಬರುತ್ತಿವೆ. </p>.<p>ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರು, ಅಧ್ಯಕ್ಷರಿಗೆ ಸಮಾನ ಎನ್ನುವ ರೀತಿಯಲ್ಲಿಯೇ ಅಧಿಕಾರ ಹೊಂದಿರುವರು. </p>.<h2>ಸಾಮಾನ್ಯ ಸಭೆ ಪಟ್ಟಿಯೇ ಅಂತಿಮ</h2>.<p> ಸಾಮಾನ್ಯಸಭೆಯಲ್ಲಿ ದಾಖಲಿಸಿರುವ ಸ್ಥಾಯಿ ಸಮಿತಿ ಸದಸ್ಯರ ಪಟ್ಟಿಯೇ ಅಂತಿಮ. ಉಳಿದ ಪಟ್ಟಿಗಳ ಅಂಗೀಕಾರ ಸಾಧ್ಯವಿಲ್ಲ. ಇನ್ನೂ ಸಹ ಜಿಲ್ಲಾಧಿಕಾರಿ ಅವರಿಗೆ ಸದಸ್ಯರ ಪಟ್ಟಿಯನ್ನು ಶಿಫಾರಸು ಮಾಡಿಲ್ಲ. ಮನ್ಸೂರ್ ಅಲಿ ಪೌರಾಯುಕ್ತರು ಚಿಕ್ಕಬಳ್ಳಾಪುರ ನಗರಸಭೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>