<p><strong>ಚಿಕ್ಕಬಳ್ಳಾಪುರ</strong>: ಹಿಜಾಬ್ ಧರಿಸಿದ ಕಾರಣದಿಂದ ವಿದ್ಯಾರ್ಥಿನಿಗೆ ಯುಜಿ ಸಿಇಟಿಯ ಭೌತವಿಜ್ಞಾನ ಪರೀಕ್ಷೆ ನಿರಾಕರಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಇ–ಮೇಲ್ ಮೂಲಕ ದೂರು ನೀಡಿದ್ದಾರೆ.</p><p>ಚಿಕ್ಕಬಳ್ಳಾಪುರದ ಬಿಜಿಎಸ್ ವಿಜ್ಞಾನ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಗುರುವಾರ (ಏ.23) ಭೌತವಿಜ್ಞಾನ ಪರೀಕ್ಷೆ ಬರೆಯಲು ವಿದ್ಯಾರ್ಥಿನಿ ಅಝೀಜ್ ಝೈನಾಬ್ ಬಂದಿದ್ದಾರೆ. ಪರೀಕ್ಷಾ ಕೇಂದ್ರದ ಸಿಬ್ಬಂದಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಪರೀಕ್ಷೆ ಬರೆಯದೆ ವಿದ್ಯಾರ್ಥಿನಿ ವಾಪಸ್ಸಾಗಿದ್ದಾರೆ.</p><p>ಈ ಬಗ್ಗೆ ಕೆಇಎಗೆ ಇ–ಮೇಲ್ ಮೂಲಕ ದೂರು ನೀಡಿದ್ದಾರೆ. ಎಚ್ಚೆತ್ತ ಅಧಿಕಾರಿಗಳು ಪರೀಕ್ಷಾ ಕೇಂದ್ರದ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ದಾರೆ. ಅಂದು ಮಧ್ಯಾಹ್ನ ನಡೆದ ರಸಾಯನ ವಿಜ್ಞಾನ ಮತ್ತು ಮರುದಿನ (ಏ.24) ನಡೆದ ಗಣಿತ ಮತ್ತು ಜೀವ ವಿಜ್ಞಾನ ಪರೀಕ್ಷೆಯನ್ನು ವಿದ್ಯಾರ್ಥಿನಿ ಬರೆದಿದ್ದಾರೆ.</p><p>ಚಿಕ್ಕಬಳ್ಳಾಪುರ ತಾಲ್ಲೂಕಿನ ಬೀಡಗಾನಹಳ್ಳಿ ಬಳಿಯ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿಗೆ ಏ.23ರಂದು ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಸುಪ್ರೀತ್ ಅವರ ಜನಿವಾರ ಸಹ ಕತ್ತರಿಸಲಾಗಿತ್ತು. </p><p>ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಿ.ಪ್ರಭು, ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.</p><p>‘ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಜನಿವಾರ ತೆಗೆಸಿದ ಪ್ರಕರಣದ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರದ ಎರಡು ಪ್ರಕರಣಗಳ ಬಗ್ಗೆ ಇಲ್ಲಿನ ಜಿಲ್ಲಾಧಿಕಾರಿ ವರದಿ ನೀಡಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಬುಧವಾರ ಇಲ್ಲಿ ಸುದ್ದಿಗಾರರಿಗೆ ವಿವರಿಸಿದರು. </p><p>ಬೆಂಗಳೂರಿನ ಪ್ರಕರಣದಲ್ಲಿ ಪೋಷಕರು ದೂರು ನೀಡಿದ್ದಾರೆ. ಚಿಕ್ಕಬಳ್ಳಾಪುರದ ಎರಡು ಪ್ರಕರಣಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಜಿಲ್ಲಾಧಿಕಾರಿ ಅವರ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದರು.</p><p>‘ಬಿಜಿಎಸ್ನಲ್ಲಿ ಎರಡು ಪರೀಕ್ಷಾ ಕೇಂದ್ರಗಳು ಇದ್ದವು. ಒಂದು ಕೇಂದ್ರದ ಬಳಿ ತೆರಳಿದರೆ ಮತ್ತೊಂದು ಕೇಂದ್ರದತ್ತ ವಿದ್ಯಾರ್ಥಿನಿಯನ್ನು ಕಳುಹಿಸಿದ್ದಾರೆ. ಕೇಂದ್ರದ ಸಿಬ್ಬಂದಿ ಸರಿಯಾಗಿ ಮಾಹಿತಿ ನೀಡಿಲ್ಲ. ಹಿಜಾಬ್ ಸೇರಿದಂತೆ ಯಾವುದೇ ಆಚಾರ ವಿಚಾರಗಳು ಇದ್ದರೆ ತಪಾಸಣೆಗೆ ಒಳಗಾಗಲು ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ ಮುಂಚೆಯೇ ಬರಬೇಕು ಎಂದು ತಿಳಿಸಿದ್ದೆವು’ ಎಂದರು.</p><p>ರಾಜ್ಯದಲ್ಲಿ 745 ಸಿಇಟಿ ಪರೀಕ್ಷಾ ಕೇಂದ್ರಗಳಿದ್ದವು. ಈ ಕೇಂದ್ರಗಳನ್ನು ಹೊರತುಪಡಿಸಿ ಎಲ್ಲಿಯೂ ಇಂತಹ ವಿಕೃತ ಬೆಳವಣಿಗೆಗಳು ನಡೆದಿಲ್ಲ. ತಮಿಳುನಾಡಿನ ಚುನಾವಣೆ ಕಾರಣದಿಂದ ಸಿಇಟಿ ಪರೀಕ್ಷೆಯ ಮೇಲೆ ಕೆಲವು ಸಮಸ್ಯೆಗಳು ಆಗಿವೆ. ಪ್ರತಿ ವರ್ಷ ಸಿಇಟಿ ಪರೀಕ್ಷೆಗೆ ಗೃಹರಕ್ಷಕ ಸಿಬ್ಬಂದಿಯನ್ನು ನೇಮಿಸಿಕೊಳ್ಳುತ್ತಿದ್ದೆವು. ಅವರಿಗೆ ಮಾರ್ಗಸೂಚಿಗಳ ಬಗ್ಗೆ ತಿಳಿಸುತ್ತಿದ್ದೆವು. ಆದರೆ ಈ ಬಾರಿ ಆರು ಸಾವಿರ ಗೃಹ ರಕ್ಷಕದಳದ ಸಿಬ್ಬಂದಿ ತಮಿಳುನಾಡು ಚುನಾವಣೆಗೆ ತೆರಳಿದ್ದರು. ಆದ ಕಾರಣ ಪರೀಕ್ಷೆ ಸುಸೂತ್ರವಾಗಿ ನಡೆಸುವ ಜವಾಬ್ದಾರಿಯನ್ನು ಆಯಾ ಕಾಲೇಜುಗಳಿಗೆ ನೀಡಿದ್ದೆವು ಎಂದರು.</p><p>ಈ ಹಿಂದಿನ ವರ್ಷದಲ್ಲಿಯೂ ಜನಿವಾರ ತೆಗೆಸಿದ ವಿಚಾರವು ದೊಡ್ಡ ಸುದ್ದಿ ಆಯಿತು. ಕೆಇಎ ಈ ಬಗ್ಗೆ ಮಾರ್ಗಸೂಚಿಗಳನ್ನೂ ರೂಪಿಸಿದೆ. ಹೀಗಿದ್ದರೂ ಬಹಳಷ್ಟು ಜನರು ಅರಿವು ಇಲ್ಲದ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಮುಂದಿನ ವರ್ಷ ಮತ್ತಷ್ಟು ಬಿಗಿಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಹಿಜಾಬ್ ಧರಿಸಿದ ಕಾರಣದಿಂದ ವಿದ್ಯಾರ್ಥಿನಿಗೆ ಯುಜಿ ಸಿಇಟಿಯ ಭೌತವಿಜ್ಞಾನ ಪರೀಕ್ಷೆ ನಿರಾಕರಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಇ–ಮೇಲ್ ಮೂಲಕ ದೂರು ನೀಡಿದ್ದಾರೆ.</p><p>ಚಿಕ್ಕಬಳ್ಳಾಪುರದ ಬಿಜಿಎಸ್ ವಿಜ್ಞಾನ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಗುರುವಾರ (ಏ.23) ಭೌತವಿಜ್ಞಾನ ಪರೀಕ್ಷೆ ಬರೆಯಲು ವಿದ್ಯಾರ್ಥಿನಿ ಅಝೀಜ್ ಝೈನಾಬ್ ಬಂದಿದ್ದಾರೆ. ಪರೀಕ್ಷಾ ಕೇಂದ್ರದ ಸಿಬ್ಬಂದಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಪರೀಕ್ಷೆ ಬರೆಯದೆ ವಿದ್ಯಾರ್ಥಿನಿ ವಾಪಸ್ಸಾಗಿದ್ದಾರೆ.</p><p>ಈ ಬಗ್ಗೆ ಕೆಇಎಗೆ ಇ–ಮೇಲ್ ಮೂಲಕ ದೂರು ನೀಡಿದ್ದಾರೆ. ಎಚ್ಚೆತ್ತ ಅಧಿಕಾರಿಗಳು ಪರೀಕ್ಷಾ ಕೇಂದ್ರದ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ದಾರೆ. ಅಂದು ಮಧ್ಯಾಹ್ನ ನಡೆದ ರಸಾಯನ ವಿಜ್ಞಾನ ಮತ್ತು ಮರುದಿನ (ಏ.24) ನಡೆದ ಗಣಿತ ಮತ್ತು ಜೀವ ವಿಜ್ಞಾನ ಪರೀಕ್ಷೆಯನ್ನು ವಿದ್ಯಾರ್ಥಿನಿ ಬರೆದಿದ್ದಾರೆ.</p><p>ಚಿಕ್ಕಬಳ್ಳಾಪುರ ತಾಲ್ಲೂಕಿನ ಬೀಡಗಾನಹಳ್ಳಿ ಬಳಿಯ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿಗೆ ಏ.23ರಂದು ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಸುಪ್ರೀತ್ ಅವರ ಜನಿವಾರ ಸಹ ಕತ್ತರಿಸಲಾಗಿತ್ತು. </p><p>ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಿ.ಪ್ರಭು, ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.</p><p>‘ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಜನಿವಾರ ತೆಗೆಸಿದ ಪ್ರಕರಣದ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರದ ಎರಡು ಪ್ರಕರಣಗಳ ಬಗ್ಗೆ ಇಲ್ಲಿನ ಜಿಲ್ಲಾಧಿಕಾರಿ ವರದಿ ನೀಡಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಬುಧವಾರ ಇಲ್ಲಿ ಸುದ್ದಿಗಾರರಿಗೆ ವಿವರಿಸಿದರು. </p><p>ಬೆಂಗಳೂರಿನ ಪ್ರಕರಣದಲ್ಲಿ ಪೋಷಕರು ದೂರು ನೀಡಿದ್ದಾರೆ. ಚಿಕ್ಕಬಳ್ಳಾಪುರದ ಎರಡು ಪ್ರಕರಣಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಜಿಲ್ಲಾಧಿಕಾರಿ ಅವರ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದರು.</p><p>‘ಬಿಜಿಎಸ್ನಲ್ಲಿ ಎರಡು ಪರೀಕ್ಷಾ ಕೇಂದ್ರಗಳು ಇದ್ದವು. ಒಂದು ಕೇಂದ್ರದ ಬಳಿ ತೆರಳಿದರೆ ಮತ್ತೊಂದು ಕೇಂದ್ರದತ್ತ ವಿದ್ಯಾರ್ಥಿನಿಯನ್ನು ಕಳುಹಿಸಿದ್ದಾರೆ. ಕೇಂದ್ರದ ಸಿಬ್ಬಂದಿ ಸರಿಯಾಗಿ ಮಾಹಿತಿ ನೀಡಿಲ್ಲ. ಹಿಜಾಬ್ ಸೇರಿದಂತೆ ಯಾವುದೇ ಆಚಾರ ವಿಚಾರಗಳು ಇದ್ದರೆ ತಪಾಸಣೆಗೆ ಒಳಗಾಗಲು ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ ಮುಂಚೆಯೇ ಬರಬೇಕು ಎಂದು ತಿಳಿಸಿದ್ದೆವು’ ಎಂದರು.</p><p>ರಾಜ್ಯದಲ್ಲಿ 745 ಸಿಇಟಿ ಪರೀಕ್ಷಾ ಕೇಂದ್ರಗಳಿದ್ದವು. ಈ ಕೇಂದ್ರಗಳನ್ನು ಹೊರತುಪಡಿಸಿ ಎಲ್ಲಿಯೂ ಇಂತಹ ವಿಕೃತ ಬೆಳವಣಿಗೆಗಳು ನಡೆದಿಲ್ಲ. ತಮಿಳುನಾಡಿನ ಚುನಾವಣೆ ಕಾರಣದಿಂದ ಸಿಇಟಿ ಪರೀಕ್ಷೆಯ ಮೇಲೆ ಕೆಲವು ಸಮಸ್ಯೆಗಳು ಆಗಿವೆ. ಪ್ರತಿ ವರ್ಷ ಸಿಇಟಿ ಪರೀಕ್ಷೆಗೆ ಗೃಹರಕ್ಷಕ ಸಿಬ್ಬಂದಿಯನ್ನು ನೇಮಿಸಿಕೊಳ್ಳುತ್ತಿದ್ದೆವು. ಅವರಿಗೆ ಮಾರ್ಗಸೂಚಿಗಳ ಬಗ್ಗೆ ತಿಳಿಸುತ್ತಿದ್ದೆವು. ಆದರೆ ಈ ಬಾರಿ ಆರು ಸಾವಿರ ಗೃಹ ರಕ್ಷಕದಳದ ಸಿಬ್ಬಂದಿ ತಮಿಳುನಾಡು ಚುನಾವಣೆಗೆ ತೆರಳಿದ್ದರು. ಆದ ಕಾರಣ ಪರೀಕ್ಷೆ ಸುಸೂತ್ರವಾಗಿ ನಡೆಸುವ ಜವಾಬ್ದಾರಿಯನ್ನು ಆಯಾ ಕಾಲೇಜುಗಳಿಗೆ ನೀಡಿದ್ದೆವು ಎಂದರು.</p><p>ಈ ಹಿಂದಿನ ವರ್ಷದಲ್ಲಿಯೂ ಜನಿವಾರ ತೆಗೆಸಿದ ವಿಚಾರವು ದೊಡ್ಡ ಸುದ್ದಿ ಆಯಿತು. ಕೆಇಎ ಈ ಬಗ್ಗೆ ಮಾರ್ಗಸೂಚಿಗಳನ್ನೂ ರೂಪಿಸಿದೆ. ಹೀಗಿದ್ದರೂ ಬಹಳಷ್ಟು ಜನರು ಅರಿವು ಇಲ್ಲದ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಮುಂದಿನ ವರ್ಷ ಮತ್ತಷ್ಟು ಬಿಗಿಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>