<p><strong>ಚಿಂತಾಮಣಿ (ಚಿಕ್ಕಬಳ್ಳಾಪುರ):</strong> ನಗರದ ವೆಂಕಟಗಿರಿಕೋಟೆಯ ಮನೆಯ ಮಾಲೀಕರೊಬ್ಬರು ರಸ್ತೆ ಮ್ಯಾನ್ಹೋಲ್ಗೆ ಕಾರ್ಮಿಕನೊಬ್ಬನನ್ನು ಇಳಿಸಿ ಸ್ವಚ್ಛಗೊಳಿಸಿದ್ದಾರೆ. ಮನೆಯ ಮಾಲೀಕರ ವಿರುದ್ಧ ನಗರಸಭೆಯ ಅಧಿಕಾರಿಗಳು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.</p> <p>ವೆಂಕಟಗಿರಿಕೋಟೆಯ ನಿವಾಸಿ ಎಂ.ಸಲ್ಮಾ ಎಂಬುವವರ ಮನೆಯ ಶೌಚಗೃಹದಿಂದ ಒಳಚರಂಡಿಗೆ ಸಂಪರ್ಕ ಕಲ್ಪಿಸುವ ಪೈಪ್ಲೈನ್ ಕಟ್ಟಿಕೊಂಡಿತ್ತು. ಮ್ಯಾನ್ ಹೋಲ್ಗೆ ಕಾರ್ಮಿಕನನ್ನು ಇಳಿಸಿ ಸ್ವಚ್ಛಗೊಳಿಸಿದ್ದಾರೆ. ಸಾರ್ವಜನಿಕರೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದು ನಗರಸಭೆಗೆ ದೂರು ನೀಡಿದ್ದಾರೆ.</p> <p>ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಮಾಲೀಕರು ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಕಾರ್ಮಿಕನನ್ನು ಮ್ಯಾನ್ಹೋಲ್ಗೆ ಇಳಿಸಿರುವುದು ಸಾಬೀತಾಗಿದೆ ಎಂದು ನಗರಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.</p> <p>ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮದ ಪ್ರಕಾರ ಅಪರಾಧವಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ನಗರಸಭೆಯ ಕಿರಿಯ ಆರೋಗ್ಯಾಧಿಕಾರಿ ವಿಜಯಕುಮಾರ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ (ಚಿಕ್ಕಬಳ್ಳಾಪುರ):</strong> ನಗರದ ವೆಂಕಟಗಿರಿಕೋಟೆಯ ಮನೆಯ ಮಾಲೀಕರೊಬ್ಬರು ರಸ್ತೆ ಮ್ಯಾನ್ಹೋಲ್ಗೆ ಕಾರ್ಮಿಕನೊಬ್ಬನನ್ನು ಇಳಿಸಿ ಸ್ವಚ್ಛಗೊಳಿಸಿದ್ದಾರೆ. ಮನೆಯ ಮಾಲೀಕರ ವಿರುದ್ಧ ನಗರಸಭೆಯ ಅಧಿಕಾರಿಗಳು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.</p> <p>ವೆಂಕಟಗಿರಿಕೋಟೆಯ ನಿವಾಸಿ ಎಂ.ಸಲ್ಮಾ ಎಂಬುವವರ ಮನೆಯ ಶೌಚಗೃಹದಿಂದ ಒಳಚರಂಡಿಗೆ ಸಂಪರ್ಕ ಕಲ್ಪಿಸುವ ಪೈಪ್ಲೈನ್ ಕಟ್ಟಿಕೊಂಡಿತ್ತು. ಮ್ಯಾನ್ ಹೋಲ್ಗೆ ಕಾರ್ಮಿಕನನ್ನು ಇಳಿಸಿ ಸ್ವಚ್ಛಗೊಳಿಸಿದ್ದಾರೆ. ಸಾರ್ವಜನಿಕರೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದು ನಗರಸಭೆಗೆ ದೂರು ನೀಡಿದ್ದಾರೆ.</p> <p>ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಮಾಲೀಕರು ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಕಾರ್ಮಿಕನನ್ನು ಮ್ಯಾನ್ಹೋಲ್ಗೆ ಇಳಿಸಿರುವುದು ಸಾಬೀತಾಗಿದೆ ಎಂದು ನಗರಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.</p> <p>ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮದ ಪ್ರಕಾರ ಅಪರಾಧವಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ನಗರಸಭೆಯ ಕಿರಿಯ ಆರೋಗ್ಯಾಧಿಕಾರಿ ವಿಜಯಕುಮಾರ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>