<p>ಚಿಕ್ಕಬಳ್ಳಾಪುರ: ಯುಗಾದಿ ಹಬ್ಬಕ್ಕೂ ಮತ್ತು ಜೂಜಾಟಕ್ಕೂ ಅವಿನಾಭಾವ ಸಂಬಂಧ. ಯುಗಾದಿಯ ದಿನ ಯಾವುದೇ ಅನುಮತಿ ಇಲ್ಲದಿದ್ದರೂ ಅಕ್ರಮವಾಗಿ ಜೂಜಾಟ ಜೋರಾಗಿಯೇ ನಡೆಯುತ್ತದೆ.</p>.<p>ಯುಗಾದಿ ದಿನ ಜೂಜಾಟ ಸಾಮಾನ್ಯ ಎನ್ನುವುದು ಗ್ರಾಮೀಣ ಭಾಗಗಳಲ್ಲಿ ಅಲಿಖಿತವಾದ ನಿಯಮ. ಹೀಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂಜಾಟಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 82 ಪ್ರಕರಣಗಳು ದಾಖಲಾಗಿವೆ. ಜೂಜಾಟದಲ್ಲಿ ತೊಡಗಿದ್ದ 475 ಮಂದಿ ಹಾಗೂ ₹ 5,90,860 ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಶುಕ್ರವಾರ ಜಿಲ್ಲೆಯಲ್ಲಿ 55 ಪ್ರಕರಣಗಳು ದಾಖಲಾಗಿದ್ದು 324 ಜನರನ್ನು ಬಂಧಿಸಲಾಗಿದೆ. ಒಟ್ಟು ₹ 4,10,267 ವಶಕ್ಕೆ ಪಡೆಯಲಾಗಿದೆ. ಶನಿವಾರವೂ ಈ ಜೂಜಿನ ಪ್ರಕರಣಗಳು ಜಿಲ್ಲೆಯಲ್ಲಿ ಮುಂದುವರಿದ್ದು 27 ಪ್ರಕರಣಗಳು ದಾಖಲಾಗಿವೆ. 151 ಜನರನ್ನು ಹಾಗೂ ₹ 1,79,960 ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಈ ಎರಡು ದಿನಗಳಲ್ಲಿ ಜಿಲ್ಲೆಯ ಎಲ್ಲ ಠಾಣೆಗಳಲ್ಲಿಯೂ ಜೂಜಾಟದ ಪ್ರಕರಣಗಳು ವರದಿಯಾಗಿವೆ. ಗೌರಿಬಿದನೂರು ಗ್ರಾಮಾಂತರ ಠಾಣೆ, ಬಾಗೇಪಲ್ಲಿ ಠಾಣೆಯಲ್ಲಿ ತಲಾ 15 ಪ್ರಕರಣಗಳು ದಾಖಲಾಗಿದ್ದು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ಈ ಠಾಣೆಗಳಲ್ಲಿ ದಾಖಲಾಗಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-18-317516830</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಯುಗಾದಿ ಹಬ್ಬಕ್ಕೂ ಮತ್ತು ಜೂಜಾಟಕ್ಕೂ ಅವಿನಾಭಾವ ಸಂಬಂಧ. ಯುಗಾದಿಯ ದಿನ ಯಾವುದೇ ಅನುಮತಿ ಇಲ್ಲದಿದ್ದರೂ ಅಕ್ರಮವಾಗಿ ಜೂಜಾಟ ಜೋರಾಗಿಯೇ ನಡೆಯುತ್ತದೆ.</p>.<p>ಯುಗಾದಿ ದಿನ ಜೂಜಾಟ ಸಾಮಾನ್ಯ ಎನ್ನುವುದು ಗ್ರಾಮೀಣ ಭಾಗಗಳಲ್ಲಿ ಅಲಿಖಿತವಾದ ನಿಯಮ. ಹೀಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂಜಾಟಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 82 ಪ್ರಕರಣಗಳು ದಾಖಲಾಗಿವೆ. ಜೂಜಾಟದಲ್ಲಿ ತೊಡಗಿದ್ದ 475 ಮಂದಿ ಹಾಗೂ ₹ 5,90,860 ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಶುಕ್ರವಾರ ಜಿಲ್ಲೆಯಲ್ಲಿ 55 ಪ್ರಕರಣಗಳು ದಾಖಲಾಗಿದ್ದು 324 ಜನರನ್ನು ಬಂಧಿಸಲಾಗಿದೆ. ಒಟ್ಟು ₹ 4,10,267 ವಶಕ್ಕೆ ಪಡೆಯಲಾಗಿದೆ. ಶನಿವಾರವೂ ಈ ಜೂಜಿನ ಪ್ರಕರಣಗಳು ಜಿಲ್ಲೆಯಲ್ಲಿ ಮುಂದುವರಿದ್ದು 27 ಪ್ರಕರಣಗಳು ದಾಖಲಾಗಿವೆ. 151 ಜನರನ್ನು ಹಾಗೂ ₹ 1,79,960 ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಈ ಎರಡು ದಿನಗಳಲ್ಲಿ ಜಿಲ್ಲೆಯ ಎಲ್ಲ ಠಾಣೆಗಳಲ್ಲಿಯೂ ಜೂಜಾಟದ ಪ್ರಕರಣಗಳು ವರದಿಯಾಗಿವೆ. ಗೌರಿಬಿದನೂರು ಗ್ರಾಮಾಂತರ ಠಾಣೆ, ಬಾಗೇಪಲ್ಲಿ ಠಾಣೆಯಲ್ಲಿ ತಲಾ 15 ಪ್ರಕರಣಗಳು ದಾಖಲಾಗಿದ್ದು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ಈ ಠಾಣೆಗಳಲ್ಲಿ ದಾಖಲಾಗಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-18-317516830</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>