<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ಮತ್ತು ಯಲಹಂಕ ನಡುವಿನ ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಪೂರ್ಣವಾಗಿದೆ. ಶನಿವಾರ ರೈಲ್ವೆ ಇಲಾಖೆಯ ಅಧಿಕಾರಿಗಳು ಈ ಮಾರ್ಗದಲ್ಲಿ ಪರೀಕ್ಷಾರ್ಥರೈಲು ಸಂಚಾರಕ್ಕೆ ಚಾಲನೆ ನೀಡಿದರು.</p>.<p>ಯಲಹಂಕದಿಂದ ಚಿಕ್ಕಬಳ್ಳಾಪುರಕ್ಕೆ ವಿದ್ಯುತ್ ರೈಲಿನಲ್ಲಿ ಅಧಿಕಾರಿಗಳು ಬಂದರು.</p>.<p>ರೈಲ್ವೆ ಇಲಾಖೆಯ ಮುಖ್ಯ ಸುರಕ್ಷಾ ಅಧಿಕಾರಿಗಳಾದ ಅಭಯ್ ಕುಮಾರ್ ರಾಯ್, ಶ್ಯಾಮ್ ಸಿಂಗ್ ಹಾಗೂ ರೈಲ್ವೆ ಅಧಿಕಾರಿಗಳು ಚಿಕ್ಕಬಳ್ಳಾಪುರಕ್ಕೆ ಬಂದರು. ಚಿಕ್ಕಬಳ್ಳಾಪುರ ನಿಲ್ದಾಣದಲ್ಲಿ ರೈಲಿಗೆ ಪೂಜೆ ಸಲ್ಲಿಸಿದರು.</p>.<p>ಚಿಕ್ಕಬಳ್ಳಾಪುರ–ಯಲಹಂಕ ಮಾರ್ಗದ ವಿದ್ಯುದ್ದೀಕರಣ ಪೂರ್ಣವಾಗಿದೆ. ಏನಾದರೂ ಸಮಸ್ಯೆಗಳು ಇವೆಯೇ ಎನ್ನುವ ಬಗ್ಗೆ ತಿಳಿಯಲು ಪರೀಕ್ಷಾರ್ಥ ರೈಲನ್ನು ಓಡಿಸಲಾಗಿದೆ. ನಿಗದಿತ ದಿನ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಅಧಿಕಾರಿಗಳು<br />ಹೇಳಿದರು.</p>.<p>ಈ ವೇಳೆ ಮಾತನಾಡಿದ ರೈಲ್ವೆ ಹೋರಾಟ ಸಮಿತಿ ಕಾರ್ಯದರ್ಶಿ ಸೈಯದ್ ಮಹಮ್ಮದ್,ಯಲಹಂಕದಿಂದ ಚಿಕ್ಕಬಳ್ಳಾಪುರದವರೆಗಿನ ಕಾಮಗಾರಿ ಪೂರ್ಣವಾಗಿದೆ. ಚಿಕ್ಕಬಳ್ಳಾಪುರದಿಂದ ಬಂಗಾರಪೇಟೆ ನಡುವಿನ ವಿದ್ಯುತ್ ಮಾರ್ಗದ ಕಾಮಗಾರಿ ಒಂದು ವರ್ಷದೊಳಗೆ ಪೂರ್ಣಗೊಳ್ಳಬೇಕು ಎಂದು ಹೇಳಿದರು.</p>.<p>ಗುವಾಹಟಿ, ತಿರುಪತಿ ಸೇರಿದಂತೆ ಬೇರೆ ಬೇರೆ ಕಡೆಗಳಿಗೂ ಇಲ್ಲಿಂದ ರೈಲು ಸಂಪರ್ಕ ಕಲ್ಪಿಸಬೇಕು. ಪುಟ್ಟಪರ್ತಿ ಮತ್ತು ಗೌರಿಬಿದನೂರು ರೈಲ್ವೆ ಮಾರ್ಗದ ಕಾಮಗಾರಿಯೂ ಆದಷ್ಟು ಬೇಗ ಪೂರ್ಣವಾಗಬೇಕು ಎಂದು ಹೇಳಿದರು.</p>.<p>ರೈಲ್ವೆ ಹೋರಾಟ ಸಮಿತಿಯನಳಿನಾಕ್ಷಿ, ಆರ್. ವೆಂಕಟಾಚಲ, ಮುನಿಕೃಷ್ಣಪ್ಪ, ಲೋಕೇಶ್ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ಮತ್ತು ಯಲಹಂಕ ನಡುವಿನ ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಪೂರ್ಣವಾಗಿದೆ. ಶನಿವಾರ ರೈಲ್ವೆ ಇಲಾಖೆಯ ಅಧಿಕಾರಿಗಳು ಈ ಮಾರ್ಗದಲ್ಲಿ ಪರೀಕ್ಷಾರ್ಥರೈಲು ಸಂಚಾರಕ್ಕೆ ಚಾಲನೆ ನೀಡಿದರು.</p>.<p>ಯಲಹಂಕದಿಂದ ಚಿಕ್ಕಬಳ್ಳಾಪುರಕ್ಕೆ ವಿದ್ಯುತ್ ರೈಲಿನಲ್ಲಿ ಅಧಿಕಾರಿಗಳು ಬಂದರು.</p>.<p>ರೈಲ್ವೆ ಇಲಾಖೆಯ ಮುಖ್ಯ ಸುರಕ್ಷಾ ಅಧಿಕಾರಿಗಳಾದ ಅಭಯ್ ಕುಮಾರ್ ರಾಯ್, ಶ್ಯಾಮ್ ಸಿಂಗ್ ಹಾಗೂ ರೈಲ್ವೆ ಅಧಿಕಾರಿಗಳು ಚಿಕ್ಕಬಳ್ಳಾಪುರಕ್ಕೆ ಬಂದರು. ಚಿಕ್ಕಬಳ್ಳಾಪುರ ನಿಲ್ದಾಣದಲ್ಲಿ ರೈಲಿಗೆ ಪೂಜೆ ಸಲ್ಲಿಸಿದರು.</p>.<p>ಚಿಕ್ಕಬಳ್ಳಾಪುರ–ಯಲಹಂಕ ಮಾರ್ಗದ ವಿದ್ಯುದ್ದೀಕರಣ ಪೂರ್ಣವಾಗಿದೆ. ಏನಾದರೂ ಸಮಸ್ಯೆಗಳು ಇವೆಯೇ ಎನ್ನುವ ಬಗ್ಗೆ ತಿಳಿಯಲು ಪರೀಕ್ಷಾರ್ಥ ರೈಲನ್ನು ಓಡಿಸಲಾಗಿದೆ. ನಿಗದಿತ ದಿನ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಅಧಿಕಾರಿಗಳು<br />ಹೇಳಿದರು.</p>.<p>ಈ ವೇಳೆ ಮಾತನಾಡಿದ ರೈಲ್ವೆ ಹೋರಾಟ ಸಮಿತಿ ಕಾರ್ಯದರ್ಶಿ ಸೈಯದ್ ಮಹಮ್ಮದ್,ಯಲಹಂಕದಿಂದ ಚಿಕ್ಕಬಳ್ಳಾಪುರದವರೆಗಿನ ಕಾಮಗಾರಿ ಪೂರ್ಣವಾಗಿದೆ. ಚಿಕ್ಕಬಳ್ಳಾಪುರದಿಂದ ಬಂಗಾರಪೇಟೆ ನಡುವಿನ ವಿದ್ಯುತ್ ಮಾರ್ಗದ ಕಾಮಗಾರಿ ಒಂದು ವರ್ಷದೊಳಗೆ ಪೂರ್ಣಗೊಳ್ಳಬೇಕು ಎಂದು ಹೇಳಿದರು.</p>.<p>ಗುವಾಹಟಿ, ತಿರುಪತಿ ಸೇರಿದಂತೆ ಬೇರೆ ಬೇರೆ ಕಡೆಗಳಿಗೂ ಇಲ್ಲಿಂದ ರೈಲು ಸಂಪರ್ಕ ಕಲ್ಪಿಸಬೇಕು. ಪುಟ್ಟಪರ್ತಿ ಮತ್ತು ಗೌರಿಬಿದನೂರು ರೈಲ್ವೆ ಮಾರ್ಗದ ಕಾಮಗಾರಿಯೂ ಆದಷ್ಟು ಬೇಗ ಪೂರ್ಣವಾಗಬೇಕು ಎಂದು ಹೇಳಿದರು.</p>.<p>ರೈಲ್ವೆ ಹೋರಾಟ ಸಮಿತಿಯನಳಿನಾಕ್ಷಿ, ಆರ್. ವೆಂಕಟಾಚಲ, ಮುನಿಕೃಷ್ಣಪ್ಪ, ಲೋಕೇಶ್ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>